ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಭಾಷಣದ ವಿವರ ನೀಡಿದ ತಮಗೆ ಅನಂತ
ಧನ್ಯವಾದಗಳು,,,,,,ಮಲ್ಲಿಕಾರ್ಜುನ,,ಬನವಾಸಿ,,ಉತ್ತರ ಕನ್ನಡ
On 02-Dec-2016 10:09 PM, "Sameera samee" <[email protected]> wrote:

> 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ರಾಯಚೂರು
> ದಿನಾಂಕ : 2, 3 ಮತ್ತು 4 - ಡಿಸೆಂಬರ್ 2016
> ಸಮ್ಮೇಳನಾಧ್ಯಕ್ಷರ ಭಾಷಣ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ
> ಎಲ್ಲರಿಗೂ ನಮಸ್ಕಾರ,
> ಈ ಸಮ್ಮೇಳನವನ್ನು ಉದ್ಘಾಟಿಸಿದ ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ
> ಸಿದ್ದರಾಮಯ್ಯನವರೆ,                      ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ
> ಡಾ. ಮನು ಬಳಿಗಾರ್ ಅವರೆ, ಕಾರ್ಯಕಾರಿ ಸಮಿತಿ ಮತ್ತು ಸ್ವಾಗತ ಸಮಿತಿಯ ಸಮಸ್ತರೆ, ಇಲ್ಲಿ
> ನೆರೆದಿರುವ ಮನಸ್ಸಿನ ಮನುಷ್ಯಬಂಧುಗಳೆ-
> ರಾಯಚೂರಿನಲ್ಲಿ ನಡೆಯುತ್ತಿರುವ ಈ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ
> ಅಧ್ಯಕ್ಷನಾಗಿ                 ನನ್ನನ್ನು ಆಯ್ಕೆ ಮಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ
> ಮಾನ್ಯ ಅಧ್ಯಕ್ಷರು, ಪದಾಧಿಕಾರಿಗಳು,  ಜಿಲ್ಲಾಧ್ಯಕ್ಷರು, ಕಾರ್ಯಕಾರಿ ಸಮಿತಿಯ ಸಮಸ್ತರಿಗೆ
> ನಾನು ಆಭಾರಿಯಾಗಿದ್ದೇನೆ. ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆಂಬ ಮಾಹಿತಿ ಸಿಕ್ಕ ಕೂಡಲೇ ನನ್ನ
> ನೆನಪಿಗೆ ಬಂದವರು- ನನಗೆ ಅಕ್ಷರ ಕಲಿಸಿದ ಗುರುಗಳು ಮತ್ತು ಶಾಲೆಗೆ ಸೇರಿಸಿದ  ತಾಯಿ, ತಂದೆ
> ಆನಂತರ ನನ್ನನ್ನು ಬೆಳೆಸಿದ ಪ್ರಗತಿಪರ ಚಳವಳಿಗಳು, ಸಾರ್ವಜನಿಕ ಬದುಕಿನ ಬವಣೆಗಳ
> ಮುಖಾಮುಖಿಗೆ ಬೆನ್ನೆಲುಬಾಗಿ ನಿಂತ ಕುಟುಂಬವರ್ಗ ಮತ್ತು ಸ್ನೇಹಿತರು. ಒಂದೇ ವಾಕ್ಯದಲ್ಲಿ
> ಹೇಳುವುದಾದರೆ ‘ಸ್ನೇಹಿತರೇ ನನ್ನ ಸಂಪತ್ತು’. ಈ ಎಲ್ಲರಿಗೂ ನನ್ನ ಮೊದಲ ನಮನಗಳು.
> ನನ್ನ ಅಧಿಕೃತ ಭಾಷಣವನ್ನು ಒಂದು ಸಂಕಟದ ಸಂವೇದನೆಯೊಂದಿಗೆ ಆರಂಭಿಸುತ್ತೇನೆ. ಸಂವೇದನೆ ಎಂಬ
> ಪದದಲ್ಲೇ `ವೇದನೆ’ಯಿದೆ. ವೇದನೆ ಮತ್ತು ಸಂವೇದನೆ ಒಂದಾದ ಕಾಲಘಟ್ಟ ನಮ್ಮದು. ಅಷ್ಟೇಕೆ
> ವೇದನೆಯೇ ಸಂವೇದನೆಯಾಗುತ್ತಿರುವ ವೈರುಧ್ಯ ವಲಯವೂ ನಮ್ಮದು. ಅಂದು
> ಆಗಸ್ಟ್ 30-2015 ರ ಬೆಳಗ್ಗೆ. ಸಾಂಸ್ಕøತಿಕ ಲೋಕ ದಿಗ್ಭ್ರಮೆಗೊಂಡು ಮೂಕವಾದ ಮುಂಜಾವು.
> ಅದಕ್ಕೆ ಕಾರಣ ಎಂ.ಎಂ. ಕಲಬುರ್ಗಿಯವರ ಸಾವು.  ಕಲಬುರ್ಗಿಯವರನ್ನು ಕೊಂದ ಹಂತಕರನ್ನು ಶೀಘ್ರ
> ಪತ್ತೆ ಹಚ್ಚಿ ನಿಧಾನದ್ರೋಹದ ಕಳಂಕದಿಂದ ಮುಕ್ತವಾಗಬೇಕೆಂದು ಸರ್ಕಾರವನ್ನು
> ಒತ್ತಾಯಿಸುತ್ತೇನೆ. ಭಿನ್ನಾಭಿಪ್ರಾಯಗಳನ್ನು  ಬಲಿಪೀಠವಾಗಿಸಿದ ಆ ದಾರುಣದ ದಿನದ ನೆನಪು
> ನುಗ್ಗಿ ಬರುತ್ತಿರುವಾಗ ಎಂ.ಎಂ. ಕಲಬುರ್ಗಿಯವರ ಚೇತನಕ್ಕೆ ನನ್ನ ನಮನ ಸಲ್ಲಿಸಿ ಮಾತು
> ಮುಂದುವರೆಸುತ್ತೇನೆ.
> ನನ್ನ ಮುಂದೆ ಕುವೆಂಪು ಅವರ ಮಲೆನಾಡು ಇರಲಿಲ್ಲ. ಬೇಂದ್ರೆಯವರ ಸಾಧನಕೇರಿಯಿರಲಿಲ್ಲ.
> ಶಿವರಾಮಕಾರಂತರ ಕಡಲು ಇರಲಿಲ್ಲ. ಕೆ.ಎಸ್.ನ. ಅವರ ಮೈಸೂರು ಮಲ್ಲಿಗೆಯಿರಲಿಲ್ಲ. ಪು.ತಿ.ನ.
> ಅವರ ಮೇಲುಕೋಟೆಯಿರಲಿಲ್ಲ. ಬದುಕಿನ ಬೇಟೆಯಲ್ಲಿ ಬೆಳೆಯುತ್ತ ಬಂದ ಅನೇಕರಲ್ಲಿ ನಾನೂ ಒಬ್ಬ. ಈ
> `ಬೇಟೆ ಬದುಕಿನಲ್ಲಿ’ ಶ್ರೀಗಂಧದ ಮರಗಳಿರಲಿಲ್ಲ. ಜಾಲಿಯ ಮರಗಳಿದ್ದವು; ಜೊತೆಗೆ ಹೊಂಗೆ
> ಹುಣಸೆಮರಗಳಿದ್ದವು. ಕೋಗಿಲೆಯಿರಲಿಲ್ಲ ಕಾಗೆಗಳಿದ್ದವು, ಗುಬ್ಬಚ್ಚಿಗಳಿದ್ದವು. ಮುಗಿಲು
> ಮುನಿದು ಬಿರುಕುನೆಲದ ಕೆರೆಗಳಿದ್ದವು. ನಳನಳಿಸುತ್ತಲೇ ಕೂಳೆ ಹೊಲಗಳಾದ ಜಮೀನುಗಳಿದ್ದವು.
> ಹೆಡೆ ಎತ್ತಿದ ಹಾದಿಗಳಿದ್ದವು. ಹತ್ತಿರದಲ್ಲೇ ಊದುವ ಪ್ರೀತಿಪುಂಗಿಗಳಿದ್ದವು.  ಚಿತ್ತದಲ್ಲಿ
> ಬಿತ್ತಿ ಬೆಳೆಯುವ  ಭಾವನೆಗಳಿದ್ದವು. ಬರವಿಲ್ಲದ ಭೂಮಿಭಾವನೆಗಳಿಂದ ಬೆಳೆಯುತ್ತಲೇ ಚಿಂತನೆಯ
> ಚೌಕಬಾರದಲ್ಲಿ  ಕೊನೆಯ ಮನೆ ಸೇರಿ ಗೆಲ್ಲುವ ಆತ್ಮವಿಶ್ವಾಸವನ್ನು ಪಡೆದ ಬದುಕು ನನ್ನದು.
> ಇರುವಲ್ಲಿ ಮತ್ತು ಇರುವುದರಲ್ಲಿ ನಮ್ಮ ಸೃಜನಶೀಲತೆಯನ್ನು ಬೆಳೆಸಿಕೊಳ್ಳುವ ಸಂಕಲ್ಪ
> ನಮ್ಮದಾಗಬೇಕೆಂದು ನಂಬಿದವನು ನಾನು.  ಸೃಜನಶೀಲತೆಗೆ ಬಡವ-ಬಲ್ಲಿದ ಎಂಬ ಭೇದವಿಲ್ಲ.
> ಆದ್ದರಿಂದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ  ಅಧ್ಯಕ್ಷನಾಗಿರುವ ಈ ಸಂದರ್ಭದಲ್ಲಿ
> ನಾನು ಹೇಳುವುದಿಷ್ಟೆ: ಈ ಗೌರವ ನನ್ನಂತಹ ಅಸಂಖ್ಯಾತ ಆತ್ಮವಿಶ್ವಾಸಿಗಳಿಗೆ ಸಲ್ಲುವ
> ಗೌರವ ; ಇಲ್ಲಿ ಅಧ್ಯಕ್ಷನಾದವನು `ನಾನು’ `ಅಲ್ಲ-`ನಾವು’. ಈ ನಾವುಗಳ ಸಂಕೇತವಾಗಿ `ನಾನು’
> ಇಲ್ಲಿದ್ದೇನೆ; ನಾನು ಅಧ್ಯಕ್ಷನಾಗಿ ಇಲ್ಲಿರುವುದನ್ನು ಕಂಡು, ಕೇಳಿ ಸಂಭ್ರಮಿಸುವ ಸಮಸ್ತರೂ
> ಅಧ್ಯಕ್ಷರೇ ಎಂದು ಭಾವಿಸುತ್ತೇನೆ.
> ಹೈದರಾಬಾದ್ ಕರ್ನಾಟಕವೆಂದು ಕರೆಯಲ್ಪಡುತ್ತಿರುವ ಕರ್ನಾಟಕದ ಈ ವಲಯದ ರಾಯಚೂರಿಗೆ ವಿಶಿಷ್ಟ
> ಇತಿಹಾಸವಿದೆ. ಕ್ರಿ.ಪೂ. 300ರಲ್ಲಿ ಅಶೋಕನ ಆಳ್ವಿಕೆಗೆ ಒಳಪಟ್ಟಿತ್ತೆಂದು ಉಲ್ಲೇಖವುಳ್ಳ
> ಮಸ್ಕಿಶಾಸನವು ಅಶೋಕನನ್ನು ದೇವನಾಂಪ್ರಿಯ, ಪ್ರಿಯದರ್ಶಿ ಅಶೋಕ ಎಂದು ಕರೆದ ಆರಂಭಿಕ
> ದಾಖಲೆಯೆಂದು ಹೇಳಲಾಗುತ್ತಿದೆ. ಶಾಂತಿಪ್ರಿಯ ಅಶೋಕನ ಶಾಸನವುಳ್ಳ ರಾಯಚೂರು ಸರ್ವದರ್ಮ
> ಸಮನ್ವಯದ ನೆಲೆಯೂ ಆಗಿದೆ. ಕಲ್ಯಾಣ ಕ್ರಾಂತಿಯ ಸಂದೇಶವನ್ನು ಪ್ರಸಾರಗೊಳಿಸುವ ಕಾರ್ಯದಲ್ಲಿ
> ರಾಯಚೂರು ಜಿಲ್ಲೆಯ ಪಾತ್ರ ಪ್ರಮುಖವಾಗಿದೆ. ‘ಕಾಯಕವೇ ಕೈಲಾಸ’ವೆಂಬ ಮಾತನ್ನು ಮೊದಲು ಬಳಸಿದ
> ಆಯ್ದಕ್ಕಿ ಮಾರಯ್ಯ ಈ ಜಿಲ್ಲೆಯ ವಚನಕಾರ. ಸಾಹಿತ್ಯ, ಸಂಗೀತ, ಚಿತ್ರಕಲೆಯಲ್ಲಿ ಅಪೂರ್ವ
> ಸಾಧಕರನ್ನು ಪಡೆದ ರಾಯಚೂರಿನ ಸಾಧಕರ ಪಟ್ಟಿ ದೊಡ್ಡದು ಪ್ರಸಿದ್ಧಿಯೂ ದೊಡ್ಡದು. (ಹೀಗಾಗಿ
> ನಾನು ಹೆಸರುಗಳನ್ನು ಪಟ್ಟಿಮಾಡಿಲ್ಲ)
> ಹೈದರಾಬಾದ್ ಕರ್ನಾಟಕ ವಲಯವು ನಿಜಾಮರ ಆಳ್ವಿಕೆಯಲ್ಲಿದ್ದುದರಿಂದ ಇಲ್ಲಿ ಉರ್ದುವಿನ ಪ್ರಭಾವ
> ಸ್ವಾಭಾವಿಕವಾಗಿ ಹರಡಿಕೊಂಡಿದೆ. ಜೊತೆಗೆ ಗಡಿಭಾಗದ ಭಾಷೆಗಳ ಪ್ರಭಾವವೂ ಇದೆ. ಇದು ಹೋರಾಟಗಳ
> ಭೂವಲಯವೂ ಹೌದು. ನಿಜಾಮರ ವಿರುದ್ಧ ನಡೆದ ಕಾರ್ಯಾಚರಣೆಯಿಂದ 1948ರ ಸೆಪ್ಟಂಬರ್‍ನಲ್ಲಿ
> ಸ್ವತಂತ್ರವಾದ ಈ ಭೂಭಾಗದಲ್ಲಿ ರೈತ ಹೋರಾಟಗಳೂ ಇದ್ದವು. ನಿಜಾಮರ ದಮನದ ಜೊತೆಗೆ ರೈತ
> ಹೋರಾಟಗಳ ದಮನವೂ ನಡೆದ ವಿಪರ್ಯಾಸಕ್ಕೆ ತೆಲಂಗಾಣವನ್ನು ಒಳಗೊಂಡ ಈ ಭೂಭಾಗ ಸಾಕ್ಷಿಯಾದದ್ದು
> ಈಗ ಇತಿಹಾಸ. ಇಷ್ಟಾದರೂ ಇದು ಸೌಹಾರ್ದ ಸಂಸ್ಕøತಿಯ ಬೀಡು. ಸೂಫಿ ಸಂತರು ಮತ್ತು ತತ್ವ
> ಪದಕಾರರ ಪರಂಪರೆಯುಳ್ಳ ಭೂಮಿ. ಇಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನವು ಸೌಹಾರ್ದ
> ಸಂಸ್ಕøತಿಯ ವಿಸ್ತರಣೆಗೆ ಕಾರಣವಾಗಲಿ, ಎಂದು ಹಾರೈಸುತ್ತೇನೆ.
> ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಭಾಷಣವೆಂದರೆ ನೆರೆದ ಜನಕ್ಕೆ ಮತ್ತು ನಾಡಿಗೆ  ಕೊಡುವ
> ಸಂದೇಶವೆಂದು ತಿಳಿಯುತ್ತ ಬರಲಾಗಿದೆ. ಜನರು, ಸಾಹಿತಿಗಳ ಚರ್ಚೆ, ಚಿಂತನೆಗಳ ಮೂಲಕ ಬೌದ್ಧಿಕ
> ಬೆಳಕು ಪಡೆಯಲು ಬರುತ್ತಾರೆಂದೂ ಸಮ್ಮೇಳನದ ಚಿಂತನೆಗಳಿಂದ ಒಂದಿಷ್ಟು ಕಲಿಯುತ್ತಾರೆಂದೂ
> ಕಲಿಯಬೇಕೆಂದೂ ಆಶಿಸಲಾಗಿದೆ. ಇದು ನಿಜವಾದ ಆಶಯವೇ ಇರುಬಹುದು. ಆದರೆ ನನಗನ್ನಿಸುತ್ತದೆ:
> ಇಲ್ಲಿ ನೆರೆದಿರುವ ನೀವು ನಮ್ಮಿಂದ ಕಲಿಯುವುದಲ್ಲ. ವೇದಿಕೆಯ ಮೇಲಿರುವ ನಾವು ನಿಮ್ಮಿಂದ
> ಕಲಿಯಬೇಕು. ನೀವು  ನಮ್ಮನ್ನು ನೋಡುವುದು ಮುಖ್ಯವಲ್ಲ; ನಾವು ನಿಮ್ಮನ್ನು ನೋಡುವುದು ಮುಖ್ಯ.
> ನಾವು  ನಿಮ್ಮನ್ನು ನೋಡುತ್ತಲೇ ನೀವಾಗುವುದು, ನೀವು ನಮ್ಮನ್ನು ನೋಡುತ್ತಲೇ  ನಾವಾಗುವುದು,
> ಹೀಗೆ ಪರಸ್ಪರ ಪ್ರವೇಶ ಪ್ರಕ್ರಿಯೆಯಲ್ಲಿ ತೊಡಗುವುದು ಮುಖ್ಯವೆಂದು ನಾನು ತಿಳಿದಿದ್ದೇನೆ.
> ಕನ್ನಡದ ಹೆಸರಲ್ಲಿ, ಕರ್ನಾಟಕದ ಹೆಸರಲ್ಲಿ, ಸಾಹಿತ್ಯಾಸಕ್ತಿಯಲ್ಲಿ ಇಲ್ಲಿ ನೆರೆದಿರುವ ಈ
> ಬಹು ದೊಡ್ಡ ಸಮೂಹವು ವೇದಿಕೆಯಲ್ಲಿರುವವರಿಗೊಂದು ವಿವೇಕದ ಎಚ್ಚರ ಎಂದು ನಾನು
> ಭಾವಿಸುತ್ತೇನೆ. ಆದ್ದರಿಂದ ನಮ್ಮಿಂದ ನೀವು ಕಲಿಯುವುದೆಷ್ಟೆಂದು ಲೆಕ್ಕ ಹಾಕುವುದರ ಬದಲು
> ನಿಮ್ಮಿಂದ ನಾವು ಕಲಿಯುವುದು ಬಹಳಷ್ಟಿದೆ ಎಂದು ತಿಳಿಯಬೇಕಿದೆ. ಒಂದು ಸಮ್ಮೇಳನಕ್ಕೆ
> ಇಷ್ಟೊಂದು ಅಪಾರ  ಸಂಖ್ಯೆಯಲ್ಲಿ ಸೇರಿದ್ದಾರಲ್ಲ,  ಇವರ ವಿಶ್ವಾಸಾರ್ಹತೆಗೆ ಧಕ್ಕೆ ತರಬಾರದು
> ಎಂಬ  ಎಚ್ಚರ  ನಮಗಿರಬೇಕು; ಅಪಾರ ನಿರೀಕ್ಷೆಯಿಂದ ನೆರೆದವರಿಗೆ ನಿರಾಶೆಯಂಟು ಮಾಡದಿರಬೇಕೆಂಬ
> ಹೊಣೆಗಾರಿಕೆ ನಮ್ಮದಾಗಬೇಕು. ಈ ಸಂದರ್ಭದಲ್ಲಿ ರಷ್ಯಾದ ಚಿಂತಕ ಪ್ಲೆಖನೋವ್ ಹೇಳಿದ ಒಂದು
> ಅಭಿಪ್ರಾಯ ನೆನಪಿಗೆ ಬರುತ್ತಿದೆ: “ಕಲಾಕಾರರು ಜನಗಳಿಂದ ಗೌರವ ಮತ್ತು ಮನ್ನಣೆಗಳನ್ನು
> ಬಯಸುತ್ತಾರೆ. ಜನರು  ಕಲಾಕಾರರಿಂದ ಜವಾಬ್ದಾರಿಯನ್ನು ಬಯಸುತ್ತಾರೆ.”
> ಹೌದು; ಜನರು ನಮ್ಮಿಂದ ಜವಾಬ್ದಾರಿಯನ್ನು ಬಯಸುತ್ತಾರೆ. ಆದ್ದರಿಂದ ಸಾಂಸ್ಕøತಿಕ
> ಪ್ರತಿನಿಧಿಗಳೆಂಬ ಹಣೆಪಟ್ಟಿಯ ನಾವು ಆತ್ಮವಂಚನೆ ಮಾಡಿಕೊಳ್ಳಬಾರದು; ಜನರು ನಮ್ಮ
> ಮೇಲಿಟ್ಟಿರುವ  ವಿಶ್ವಾಸಕ್ಕೆ ವಂಚನೆ ಮಾಡಬಾರದು. ನಾವು ಜನಗಳಿಗೆ ಜವಾಬ್ದಾರರಾಗಬೇಕು. ಇದು
> ಈ ಸಮ್ಮೇಳನದಿಂದ ನಾವು ಕಲಿಯಬೇಕಾದ ಪ್ರಥಮ ಪಾಠ.
> ಏಕೀಕರಣ, ಪ್ರತ್ಯೇಕೀಕರಣ ಮತ್ತು ಪರಕೀಯತೆ
> ಕರ್ನಾಟಕದ ಏಕೀಕರಣವಾಗಿ 60 ವರ್ಷಗಳು ತುಂಬಿ ವಜ್ರ ಮಹೋತ್ಸವವನ್ನು ಆಚರಿಸುವ ಸಂಭ್ರಮದಲ್ಲಿ
> ಸಮ್ಮೇಳನ ನಡೆಯುತ್ತಿದೆ. ಸಹಜವಾಗಿಯೇ ಏಕೀಕರಣದ ಫಲಿತಗಳನ್ನು  ಕುರಿತ ಪ್ರಶ್ನೆ
> ಎದುರಾಗುತ್ತದೆ. ಕನ್ನಡ ಮಾತು  ಪ್ರಧಾನವಾಗಿರುವ ಪ್ರದೇಶಗಳೆಲ್ಲ ಒಂದಾಗಬೇಕೆಂಬ ಏಕೀಕರಣದ
> ಪ್ರಧಾನ ಆಶಯ ಬಹುಮಟ್ಟಿಗೆ ಈಡೇರಿದ್ದರೂ ಇನ್ನೂ ಕೆಲವು ಕನ್ನಡ ಮಾತಿನ ಪ್ರದೇಶಗಳು ಬೇರೆ
> ರಾಜ್ಯದಲ್ಲಿ ಉಳಿದಿವೆ. ಮಹಾರಾಷ್ಟ್ರ, ಕೇರಳ ಮತ್ತು ಕರ್ನಾಟಕದ ಗಡಿವಿವಾದ ಬಗೆಹರಿಸಲು
> ರಚಿತವಾದ ಮಹಾಜನ್  ಆಯೋಗದ ವರದಿಯು ಇನ್ನೂ ಅನುಷ್ಠಾನಗೊಂಡಿಲ್ಲ. ಕೇರಳದ ಕಾಸರಗೋಡು
> ಕರ್ನಾಟಕವಾಗಲಿಲ್ಲ.  ಆಂಧ್ರದಲ್ಲಿರುವ ಕನ್ನಡ ಪ್ರಧಾನ ಮಡಕಶಿರಾ ಕರ್ನಾಟಕಕ್ಕೆ ಸೇರಲಿಲ್ಲ.
> ತಮಿಳುನಾಡಿನಲ್ಲಿರುವ  ತಾಳವಾಡಿಫಿರ್ಕಾ, ಕೇರಳದಲ್ಲಿರುವ  ಕಾಸರಗೋಡು, ಹೊಸದುರ್ಗ.
> ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆ, ಮುಂತಾದ ಕನ್ನಡ ಪ್ರಧಾನ  ಪ್ರದೇಶಗಳು ನಮ್ಮ ನಾಡಿನ
> ಭಾಗವಾಗಿಲ್ಲ. ಅಷ್ಟೇಕೆ ಕರ್ನಾಟಕ ಸರ್ಕಾರವು ಹೊರ ರಾಜ್ಯದ ಕೆಲವು ಪ್ರದೇಶಗಳಿಗೆ  ನೀಡಿರುವ
> ಅಧಿಕೃತ ಗಡಿಗ್ರಾಮ ಮನ್ನಣೆಯು ರಾಯಚೂರು ಪಕ್ಕದ ಮೆಹಬೂಬುನಗರ ಜಿಲ್ಲೆಯ ಕೃಷ್ಣಾ, ಗುರ್ಜಾಲೆ,
> ತಂಗಡಗಿ, ಕುಸಮುರ್ತಿ,  ಹೈನಾಪುರ, ಜೆಗುಂಟಾ, ಶುಕ್ರಲಿಂಗದಹಳ್ಳಿ, ಖಾನಾಪುರ, ಕುನಸಿ,
> ಹಾಲಂಪಲ್ಲಿ, ಕೊತ್ತಪಲ್ಲಿ ಗುಡೆವೆಲ್ಲೂರ್, ಇಂದುಪುರ-ಎಂಬ  ಹದಿನೂರು ಗ್ರಾಮಗಳಿಗೆ
> ಲಭ್ಯವಾಗಿಲ್ಲ. ಗೋವಾದಲ್ಲಿರುವ ಕನ್ನಡಿಗರ ಬವಣೆ ಬತ್ತಿಲ್ಲ. ಕರ್ನಾಟಕದ ಒಳನಾಡಿನವರಿಗೆ
> ಸಿಗುವ ಶೈಕ್ಷಣಿಕ ಮತ್ತು ಔದ್ಯೋಗಿಕ ಸೌಲಭ್ಯಗಳು ಕನ್ನಡಮಾಧ್ಯಮದಲ್ಲೇ ವ್ಯಾಸಂಗ ಮಾಡಿದ
> ಹೊರನಾಡಿನ ಕನ್ನಡಿಗರಿಗೆ ಪೂರ್ಣಪ್ರಮಾಣದಲ್ಲಿ ಸಿಗುತ್ತಿಲ್ಲ, ಸಿಗಬೇಕು. ಕರ್ನಾಟಕವು ಇನ್ನೂ
> ಒಳನಾಡು, ಗಡಿನಾಡು ಮತ್ತು ಹೊರನಾಡು ಎಂಬ ವಿಂಗಡನೆಯ ವಿಷಾದವನ್ನು ಒಡಲುರಿಯಾಗಿ
> ಅನುಭವಿಸುತ್ತಿದೆ. ಇಂಥ ಒಡಲುರಿ ಇರಬಾರದೆಂದೇ  ಅಂದು  ಏಕೀಕರಣದ ಹೋರಾಟ ಹುಟ್ಟಿಕೊಂಡಿತ್ತು.
> ಧಾರವಾಡದಲ್ಲಿ  20.07.1890ರಲ್ಲಿ ಸ್ಥಾಪಿತವಾದ  ಕರ್ನಾಟಕ ವಿದ್ಯಾವರ್ಧಕ ಸಂಘದ
> `ವಾಗ್ಭೂಷಣ’ ಪತ್ರಿಕೆಯಲ್ಲಿ ಆಲೂರು ವೆಂಕಟರಾಯರು. “ಕರ್ನಾಟಕವು ಒಂದಾಗದಿದ್ದರೆ ಕರ್ನಾಟಕದ
> ಸ್ಥಿರ ಏಳಿಗೆಯು ಎಂದೆಂದಿಗೂ ಸಾಧ್ಯವಿಲ್ಲ” ಎಂದು ಬರೆದರು. 1917ರ ಜನವರಿ 7ರಂದು
> ವಿದ್ಯಾವರ್ಧಕ ಸಂಘದ  ವ್ಯವಸ್ಥಾಪಕ ಸಮಿತಿಯು ಒಂದು ಗೊತ್ತುವಳಿಯನ್ನು ಸ್ವೀಕರಿಸಿ ಏಕೀಕರಣದ
> ಆಶಯವನ್ನು ದಾಖಲಿಸಿತು. “ಬ್ರಿಟಿಷ್ ಅಧಿಕಾರಕ್ಕೆ ಒಳಗಾದ. ಎಲ್ಲ ಕನ್ನಡ ಊರು, ತಾಲ್ಲೂಕು
> ಮತ್ತು ಜಿಲ್ಲೆಗಳನ್ನು ಒಟ್ಟುಗೂಡಿಸಿ, ಒಂದು ರಾಜಕೀಯ ವಿಭಾಗವನ್ನಾಗಿ ಮಾಡಿ, ಅದನ್ನು
> ಕರ್ನಾಟಕವೆಂದು ಕರೆಯಬೇಕು” ಎಂದು ಈ ಗೊತ್ತುವಳಿಯು ಕರೆ ನೀಡಿತು. 1915ರಲ್ಲಿ ಸ್ಥಾಪಿತವಾದ
> ಕನ್ನಡ ಸಾಹಿತ್ಯ ಪರಿಷತ್ತು ಏಕೀಕರಣದ ಹೋರಾಟಕ್ಕೆ ಒತ್ತಾಸೆಯಾಗಿ ನಿಂತಿತು. 1916ರಲ್ಲಿ
> ಏಕೀಕರಣದ ಉದ್ದೇಶಕ್ಕಾಗಿಯೇ `ಕರ್ನಾಟಕ ಏಕೀಕರಣ ಸಭೆ’ ಎಂಬ  ಸಂಸ್ಥೆ ಸ್ಥಾಪನೆಯಾಯಿತು.
> ಆನಂತರದ ದಿನಗಳಲ್ಲಿ ಇದಕ್ಕೆ `ಕರ್ನಾಟಕ ಏಕೀಕರಣ ಸಂಘ’ ಎಂದು ಮರುನಾಮಕರಣ ಮಾಡಲಾಯಿತು. ಈ
> ಸಂಸ್ಥೆಯು ಏಕೀಕರಣದ ಉದ್ದೇಶಕ್ಕಾಗಿಯೇ 1926ರಿಂದ 1947ರೊಳಗೆ ಒಟ್ಟು 12 ಸಮ್ಮೇಳನಗಳನ್ನು
> ನಡೆಸಿತು. ನಮ್ಮ ದೇಶ ಸ್ವಾತಂತ್ರ್ಯಗಳಿಸಿದ ನಂತರವೂ ಏಕೀಕರಣದ ಹೋರಾಟ ಮತ್ತಷ್ಟು
> ಪ್ರಬಲಗೊಂಡಿತು. ವಿಶೇಷವೆಂದರೆ 1951ರಲ್ಲಿ ಕಮ್ಯುನಿಸ್ಟ್ ಪಕ್ಷವೂ ಏಕೀಕರಣಕ್ಕೆ ಬೆಂಬಲವಾಗಿ
> ನಿಂತಿತು. ಕಮ್ಯೂನಿಸ್ಟರು, ಸೋಷಲಿಸ್ಟರು ತಮ್ಮ ಸಮಾನತೆಯ ಆಶಯಗಳ ಮೂಲ ಆಶಯವನ್ನಿಟ್ಟುಕೊಂಡೇ
> ಏಕೀಕರಣದ ಅಗತ್ಯವನ್ನು ಪ್ರತಿಪಾದಿಸಿದರು. ಈ ನಡುವೆ 1952ರಲ್ಲಿ ಆಂದ್ರದ
> ಪೊಟ್ಟಿಶ್ರೀರಾಮುಲು ಅವರು ತೆಲುಗು ಮಾತಿನ ಪ್ರದೇಶಗಳ  ಏಕೀಕರಣಕ್ಕಾಗಿ  ಆಮರಣಾಂತ ಉಪವಾಸ
> ಆರಂಭಿಸಿದರು. 58 ದಿನಗಳ ಕಾಲ ಉಪವಾಸ ಸತ್ಯಾಗ್ರಹ ಮಾಡಿದ ಪೊಟ್ಟಿಶ್ರೀರಾಮುಲು ನಿಧನ ಹೊಂದಿ
> ಹುತಾತ್ಮರಾದರು. ಕನ್ನಡನಾಡಿನಲ್ಲಿ ಬಳ್ಳಾರಿಯ ರಂಜಾನ್ ಸಾಬ್  ಅವರು ಏಕೀಕರಣ ಹೋರಾಟದಲ್ಲಿ
> ಜೀವ ತೆತ್ತರು. ಈ ಜೀವ ಕನ್ನಡನಾಡಿನ ಜಾತ್ಯತೀತ ಮೌಲ್ಯದ ಒಂದು ಮಾದರಿಯಾಗಿ ಇಂದಿಗೂ
> ಸ್ಮರಣೀಯವಾಗಿದೆ.
> ಹೀಗೆ ಕನ್ನಡ ಮತ್ತು ತೆಲುಗು ಕೇಂದ್ರಿತ ಏಕೀಕರಣ ಹೋರಾಟಗಳ ಫಲವಾಗಿ ಕೇಂದ್ರ ಸರ್ಕಾರವು
> 1953ರಲ್ಲಿ ಫಜಲ್ ಆಲಿ ಅವರ  ನೇತೃತ್ವದಲ್ಲಿ ರಾಜ್ಯ ಪುನರ್‍ವಿಂಗಡನಾ ಆಯೋಗವನ್ನು ರಚಿಸಿತು.
> ಇದೇ ವರ್ಷ, ಪೊಟ್ಟಿ ಶ್ರೀರಾಮುಲು ಅವರ ಹೋರಾಟ ಮತ್ತು ಮರಣದ ಫಲವೆಂಬಂತೆ ತೆಲುಗು ಪ್ರಧಾನ
> ಪ್ರಾಂತ್ಯವಾಗಿ `ಆಂದ್ರಪ್ರದೇಶ’ ರಚನೆಯಾಯಿತು. ಮುಂದೆ ಫಜಲ್ ಆಲಿ ಆಯೋಗದ ಶಿಫಾರಿಸಿನಂತೆ
> ಭಾಷಾವಾರು ಪ್ರಾಂತ್ಯಗಳ ರಚನೆಯಾಗಿ 1.11.1956 ರಂದು `ವಿಶಾಲ ಮೈಸೂರು’ ಅಸ್ತಿತ್ವಕ್ಕೆ
> ಬಂದಿತು.  ಕನ್ನಡ ಮಾತು ಪ್ರಧಾನವಾದ ಕೇರಳದ ಕಾಸರಗೋಡು, ಹೊಸದುರ್ಗವನ್ನೂ ಒಳಗೊಂಡಂತೆ
> ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಲ್ಲಿರುವ ಕನ್ನಡಪ್ರಧಾನ  ಪ್ರದೇಶಗಳನ್ನು  ಒಳಗೊಳ್ಳದೆ
> `ವಿಶಾಲ ಮೈಸೂರು’ ಎಂಬ ಕನ್ನಡದ ಬಹುಪಾಲು ಪ್ರದೇಶದ ಏಕೀಕೃತ ರಾಜ್ಯ ಅಸ್ತಿತ್ವಕ್ಕೆ ಬಂದಿತು.
> ಆದರೆ `ಕರ್ನಾಟಕ’ ಎಂದು ಹೆಸರಿಡಲು 1973ರವರೆಗೆ ಕಾಯಬೇಕಾಯಿತು. ಅದರಲ್ಲೂ `ಮೈಸೂರು’
> ಹೆಸರಿನ ಪರವಾಗಿದ್ದ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ `ಕರ್ನಾಟಕ’   ಎಂದು
> ಹೆಸರಿಡಬೇಕಾಯಿತು. ಜನಾಭಿಪ್ರಾಯಕ್ಕೆ  ಮನ್ನಣೆಕೊಟ್ಟ ದೇವರಾಜ ಅರಸು  ತಮ್ಮ ಹಿಂದಿನ
> ಅಭಿಪ್ರಾಯವನ್ನು ಬದಿಗೊತ್ತಿ 1.11.1973 ರಂದು ಈ ‘ವಿಶಾಲ ಮೈಸೂರು’ ಬದಲು `ಕರ್ನಾಟಕ’ ಎಂದು
> ಹೆಸರು ಬದಲಾಯಿಸಿದ್ದು ಸಾಂಕೇತಿಕವಾಗಿ ಜನಾಭಿಪ್ರಾಯದ ವಿಜಯ. ಅರಸು ಅವರ ಪ್ರಜಾಸತಾತ್ಮಕ
> ನಿಲುವಿನ ಫಲ. ಅಂದು ಅರಸು ಅವರು ಕರ್ನಾಟಕದ ಜನಮಾನಸದ ಅಭಿನಂದನೆಗೆ ಪಾತ್ರರಾದರು. ಹಾಗೆ
> ನೋಡಿದರೆ ಕರ್ನಾಟಕದೊಳಗಿನ ವಿವಿಧ ಸಾಮಾಜಿಕ ಮತ್ತು ಭೌಗೋಳಿಕ ವಲಯಗಳನ್ನು ಒಳಗೊಳ್ಳುವಂತೆ
> ಪ್ರತಿನಿಧೀಕರಣದ ಪ್ರಕ್ರಿಯೆಗೆ ಕಾರಣರಾದ ಅರಸು  `ಸಾಮಾಜಿಕ ಏಕೀಕರಣ’ದ ರೂವಾರಿ ಎಂದರೂ
> ತಪ್ಪಾಗಲಾರದು. ಕರ್ನಾಟಕದ ವಿಧಾನ ಮಂಡಲದಲ್ಲಿ ವಿವಿಧ ಪ್ರದೇಶ, ವಿವಿಧ ಸಾಮಾಜಿಕ ಹಿನ್ನಲೆಯ
> ಸಂಕೇತಗಳು ಸಮಾವೇಶಗೊಳ್ಳುವಂತೆ ಮಾಡಿದ ಅರಸು ಅವರ `ಸಾಮಾಜಿಕ
> ಏಕೀಕರಣ’ದ                          ರಾಜಕಾರಣ ಅಸಾಧಾರಣ.
> ಆದರೆ ಆಮೇಲೆ ಏನಾಯಿತು? ಭಾಷೆ ಮತ್ತು ಭೂಗೋಳವನ್ನು ಬೆಸೆದ ಏಕೀಕರಣವು ಮಾನಸಿಕ ಏಕೀಕರಣಕ್ಕೆ
> ಕಾರಣವಾಯಿತೆ? ಏಕೀಕರಣದ ವಿಸ್ತರಣೆಗಾಗಿ ಭೂಗೋಳ ಪ್ರಜ್ಞೆಯೇ ಪ್ರಧಾನವಾಯಿತೆ?
> ಸ್ವಲ್ಪಮಟ್ಟಿಗೆ ಹೌದು. ಆದ್ದರಿಂದಲೇ ಕರ್ನಾಟಕದ ವಿಸ್ತಾರವನ್ನು ಕುರಿತು ಮತ್ತೆ ಮತ್ತೆ
> ಮಾತನಾಡುವವರು ಭೂಗೋಳ ಪ್ರಜ್ಞೆಯ ಪರಿಧಿಯಲ್ಲೇ ಉಳಿದಿದ್ದಾರೆ. ನಿಜ; ಕಾವೇರಿಯಿಂದ
> ಗೋದಾವರಿವರೆಗೆ ನಮ್ಮ ಅಂದಿನ ನಾಡು ಇತ್ತು ಎಂದುಕೊಳ್ಳೋಣ. ಅಷ್ಟೇಕೆ ಅಚ್ಚಕನ್ನಡ
> ರಾಜವಂಶವೆಂಬ ಕೀರ್ತಿಗೆ ಭಾಜನರಾದ ಮತ್ತು 215 ವರ್ಷಗಳವರೆಗೆ  ಆಳಿದ  ಕದಂಬರ ಸಾಮ್ರಾಜ್ಯವು
> ಮೃಗೇಶ ವರ್ಮನ ಕಾಲದಲ್ಲಿ ಉತ್ತರದ ನರ್ಮದಾ ನದಿಯವರೆಗೆ ವಿಸ್ತಾರಗೊಂಡಿತ್ತು. ಬಾದಾಮಿ
> ಚಾಲುಕ್ಯರ ಸಾಮ್ರಾಜ್ಯದಲ್ಲಿ ಅಜಂತ, ಎಲ್ಲೋರ, ನಾಸಿಕ್, ಓರಂಗಲ್ ಮುಂತಾದ ಪ್ರದೇಶಗಳೂ
> ಇದ್ದವು. ರಾಷ್ಟ್ರಕೂಟರ ಸಾಮ್ರಾಜ್ಯದಲ್ಲಿಯೂ ಅಜಂತ, ಎಲ್ಲೋರ, ಇದ್ದವು. ಕಲ್ಯಾಣಿ ಚಾಲುಕ್ಯರ
> ಸಾಮ್ರಾಜ್ಯದಲ್ಲಿ ಓರಂಗಲ್ಲು, ಪಂಡರಪುರ, ದೇವಗಿರಿ, ನವಸಾರಿಕ ಮುಂತಾದ ಪ್ರದೇಶಗಳಿದ್ದವು.
> ಹೊಯ್ಸಳರ ಸಾಮ್ರಾಜ್ಯದಲ್ಲಿ ಕಂಚಿ, ಕಣ್ಣಾನೂರುಗಳಿದ್ದವು. ವಿಜಯನಗರ ಸಾಮ್ರಾಜ್ಯದಲ್ಲಿ
> ತೇಡಪತ್ರಿ, ಲೇಪಾಕ್ಷಿ, ತಿರುಪತಿ, ವೆಲ್ಲೂರು, ಮಧುರೆ, ಪಾಂಡಿಚೆರಿ ಮುಂತಾದ ಪ್ರದೇಶಗಳು
> ಇದ್ದವು. ಹೀಗೆ ವಿವಿಧ ಸಾಮ್ರಾಜ್ಯಗಳಲ್ಲಿದ್ದ ಪ್ರದೇಶಗಳಲ್ಲಿ ಕನ್ನಡವೂ ಇತ್ತು.  ಆದರೆ
> ಎಲ್ಲ ಪ್ರದೇಶಗಳಲ್ಲೂ  ಕನ್ನಡವಿರಲಿಲ್ಲ. ಇದರರ್ಥ ಏನು? ಈ ಪ್ರದೇಶಗಳೆಲ್ಲ ಕನ್ನಡ
> ಪ್ರದೇಶಗಳಲ್ಲ; ಕನ್ನಡ ಬಲ್ಲ ರಾಜರ ಪ್ರದೇಶಗಳು. ಇದಕ್ಕೆ ಉತ್ತಮ ಉದಾಹರಣೆಯೆಂದರೆ ವಿಜಯನಗರ
> ಸಾಮ್ರಾಜ್ಯ ಮತ್ತು  ಶ್ರೀಕೃಷ್ಣದೇವರಾಯ. ಆಂಧ್ರಪ್ರದೇಶದವರು ಶ್ರೀಕೃಷ್ಣದೇವರಾಯನನ್ನು
> ತಮ್ಮವನೆಂದು ತಿಳಿದಿದ್ದಾರೆ. ನಾವು ಕನ್ನಡಿಗರು ನಮ್ಮವನೆಂದು ತಿಳಿದಿದ್ದೇವೆ. ಆಂಧ್ರದಲ್ಲಿ
> ನಮಗಿಂತ ಮೊದಲೇ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯ ಸ್ಥಾಪನೆಯಾಗುತ್ತದೆ. ಶ್ರೀಕೃಷ್ಣ
> ದೇವರಾಯ ತೆಲುಗು ಸಿನಿಮಾ ತಯಾರಾಗುತ್ತದೆ.  ಆನಂತರ ನಮ್ಮಲ್ಲಿ ಶ್ರೀಕೃಷ್ಣದೇವರಾಯ ಸಿನಿಮಾ
> ನಿರ್ಮಾಣ; ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಸ್ಥಾಪನೆ. ಇದರರ್ಥ ಏನು?
> ಶ್ರೀಕೃಷ್ಣದೇವರಾಯನ ಸಾಮ್ರಾಜ್ಯ ಪೂರ್ಣ ಕನ್ನಡ ಸಾಮ್ರಾಜ್ಯವಲ್ಲ. ಅಷ್ಟೇಕೆ, ಯಾವುದೇ ರಾಜರ
> ಸಾಮ್ರಾಜ್ಯಗಳು ಒಂದೇ ಭಾಷೆಯ ರಾಜ್ಯಗಳಲ್ಲ. ಆದ್ದರಿಂದ ಕನ್ನಡ ರಾಜವಂಶಗಳ ಸಾಮ್ರಾಜ್ಯಗಳನ್ನು
> ಇಡಿಯಾಗಿ                    ಕನ್ನಡ ಪ್ರದೇಶಗಳೆಂದು ಕರೆಯುವುದು ಚಾರಿತ್ರಿಕವಾಗಿ
> ಸರಿಯಲ್ಲ.
> ಸಮಸ್ಯೆ  ಇರುವುದೇ ಇಲ್ಲಿ. ಭೂಗೋಳಪ್ರಜ್ಞೆ ಮತ್ತು ಚರಿತ್ರೆಯ ಪ್ರಜ್ಞೆ ಒಂದಾಗಿ ಬೆಸೆದ
> ಕನ್ನಡ ಪ್ರಜ್ಞೆಯ ಕೊರತೆಯಿಂದ ಸಾಮ್ರಾಜ್ಯಪ್ರಜ್ಞೆಯೇ ಪ್ರಧಾನವಾಗಿಬಿಡುತ್ತದೆ. ಚರಿತ್ರೆಯ
> ಪ್ರಜ್ಞೆಯೆಂಬುದು ಸಹ ಗತಕಾಲದ ಕನವರಿಕೆಯಲ್ಲ.
> ಇಲ್ಲಿ ಡಿ.ಡಿ. ಕೊಸಾಂಬಿಯವರ ವ್ಯಾಖ್ಯಾನವನ್ನು ಉಲ್ಲೇಖಿಸಬೇಕು: “ಚರಿತ್ರೆಕಾರನ ಕೆಲಸ ಕೇವಲ
> ಭೂತಕಾಲವನ್ನು ಪ್ರೀತಿಸುವುದು ಅಥವಾ ಭೂತ ಕಾಲದಿಂದ ದೂರವಾಗುವುದಲ್ಲ. ವರ್ತಮಾನವನ್ನು
> ಅರ್ಥಮಾಡಿಕೊಳ್ಳಲು ಭೂತಕಾಲವನ್ನು ಕೀಲಿಕೈ ಎಂದು ತಿಳಿಯಬೇಕು. ಭೂತಕಾಲದ ಬೆಳಕಿನಲ್ಲಿ
> ವರ್ತಮಾನವನ್ನು ಅರಿಯುವುದೆಂದರೆ, ವರ್ತಮಾನದ ಬೆಳಕಿನಲ್ಲಿ, ಭೂತಕಾಲವನ್ನು ಸಹ ಅರಿಯುವುದು
> ಎಂದರ್ಥ”
> ಭಾಷಾಭಿಮಾನಕ್ಕೆ ಭೂತಕಾಲ ಮತ್ತು ವರ್ತಮಾನಗಳ ಉಚಿತಾನುಸಂಧಾನ ಮುಖ್ಯ. ಭೂತದಲ್ಲೇ ಹೂತು
> ಹೋಗುವುದು ಕೇವಲ ಕನವರಿಕೆಯಾಗುತ್ತದೆ. ವರ್ತಮಾನವೇ ಸರ್ವಸ್ವ ಎಂದುಕೊಂಡರೆ ಪರಂಪರೆಯ
> ಪ್ರಜ್ಞೆ ಪತನಗೊಳ್ಳುತ್ತದೆ.                     ಒಂದರಿಂದ ಇನ್ನೊಂದನ್ನು ಅರಿಯುವ
> ಅರ್ಥಪೂರ್ಣತೆ ಮುಖ್ಯ.
> ಆದ್ದರಿಂದ, ನಾವು ಅರ್ಥಮಾಡಿಕೊಳ್ಳಬೇಕು: ಭಾಷೆ ಮತ್ತು ಭೂಗೋಳದ ಸಂಬಂಧವಷ್ಟೇ
> ಕನ್ನಡಾಭಿಮಾನವಲ್ಲ. ಭೂಗೋಳ ಮಿತಿಯ ಚಿಂತನೆಯೊಂದೇ ಕರ್ನಾಟಕದ ಮನಸ್ಸನ್ನು ಒಂದುಗೂಡಿಸುವ
> ಅಂತಿಮ ಸಾಧನವಾಗುವುದಿಲ್ಲ. ಸಾಮಾಜಿಕ-ಆರ್ಥಿಕ  ಸಮಾನತೆಯ ಆಧಾರದಲ್ಲಿ ಅಭಿವೃದ್ಧಿಯ
> ಸಮತೋಲನವನ್ನು ಸಾಧಿಸದಿದ್ದರೆ ಕರ್ನಾಟಕದ ಒಳಗೆ ಒಡಕು ಹುಟ್ಟುತ್ತದೆ. ಹುಟ್ಟುತ್ತದೆ
> ಅನ್ನುವುದಾದರೂ ಏಕೆ? ಹುಟ್ಟುತ್ತಿದೆ. ಅಭಿವೃದ್ಧಿಯಲ್ಲಿ ಪ್ರಾದೇಶಿಕ ಅಸಮತೋಲನದ ಅಸಮಾಧಾನ
> ಪ್ರಕಟಗೊಳ್ಳುತ್ತಿದೆ. ನಿಜ; ದಕ್ಷಿಣ ಕರ್ನಾಟಕದ ಕೆಲವು ಪ್ರದೇಶಗಳೂ ಹಿಂದುಳಿದಿವೆ. ಆದರೆ
> ಮೈಸೂರು ರಾಜ್ಯಕ್ಕೆ ಸೇರಿದ  ಹೊಸ ಪ್ರದೇಶಗಳು ಹೆಚ್ಚು ಹಿಂದುಳಿದಿವೆ. ಕೇವಲ ಆರ್ಥಿಕ
> ಅಭಿವೃದ್ಧಿಯ  ಅಸಮತೋಲನವಷ್ಟೇ ಅಲ್ಲ, ಸಾಂಸ್ಕøತಿಕ ಪ್ರಾತಿನಿಧ್ಯದ ಪರಕೀಯತೆಯೂ  ಇವರನ್ನು
> ಕಾಡಿಸುತ್ತಿದೆ.  ರಾಜಧಾನಿ ಕೇಂದ್ರಿತ ನೋಟದಿಂದ ಸಿಗುವ ಸಾಂಕೇತಿಕ ಪ್ರಾತಿನಿಧ್ಯವು
> ಸಾಂಸ್ಕøತಿಕ ಪರಕೀಯತೆಯನ್ನು ಸಲೀಸಾಗಿ ಹೋಗಲಾಡಿಸಲಾರದು. ಕರ್ನಾಟಕದ ಸಮಸ್ತ ಭೂಗೋಳದೊಳಗೆ
> ಇರುವ ಜನರ ಸಾಂಸ್ಕøತಿಕ ವೈಶಿಷ್ಟ್ಯಗಳನ್ನು ಉಳಿಸಿ ಬೆಳೆಸಬೇಕಾದ್ದು ಒಂದು
> ಹೊಣೆಗಾರಿಕೆಯಾದರೆ, ಏಕೀಕರಣದ ಫಲವಾಗಿ ಜೊತೆಗೂಡಿದ ಪ್ರದೇಶಗಳ ಪ್ರತಿಭಾವಂತರಿಗೆ
> ಪ್ರತೀಕಾತ್ಮಕ ಪ್ರಾತಿನಿಧ್ಯ ನೀಡುವ ಹೊಣೆಗಾರಿಕೆಯೂ ಆಡಳಿತಗಾರರ ಮೇಲಿದೆ; ಸಾಂಸ್ಕøತಿಕ
> ಸಂಘಸಂಸ್ಥೆಗಳ  ಜವಾಬ್ದಾರಿಯೂ ಆಗಿದೆ. ಅಷ್ಟೇಕೆ ಸಾಮಾಜಿಕವಾಗಿ ತುಳಿತಕ್ಕೊಳಗಾದವರನ್ನು
> ಪರಕೀಯತೆಯಿಂದ                      ಪಾರು ಮಾಡಬೇಕಾಗಿದೆ.  ಸಮಗ್ರ ಸಾಮಾಜಿಕ,
> ಆರ್ಥಿಕ, ಸಾಂಸ್ಕøತಿಕ ದೃಷ್ಟಿ ಕೋನದ ದೂರಗಾಮಿಚಿಂತನೆ ಮತ್ತು ಬದ್ಧಕ್ರಿಯಾಶೀಲತೆಯಿಂದ
> ಮಾತ್ರ ಇದು ಸಾಧ್ಯ. ಇಲ್ಲದಿದ್ದರೆ, ಬೇಕೊ ಬೇಡವೊ, ಪ್ರತ್ಯೇಕ ರಾಜ್ಯದ  ಬೇಡಿಕೆ
> ಇಡುತ್ತಿರುವವರ ದನಿ ಮುಂದೊಂದು ದಿನ ಸಮೂಹ ಸನ್ನಿಯಾದರೆ ಅಚ್ಚರಿಯಿಲ್ಲ.
> ಏಕೀಕರಣದಿಂದ  ಪ್ರತ್ಯೇಕೀಕರಣದ ಕಿರುದನಿಯತ್ತ ವಾಲುತ್ತಿರುವ ನಮ್ಮ ಸಂದರ್ಭದಲ್ಲಿ
> ಆತ್ಮಾವಲೋಕನ ಅಗತ್ಯ  ಎಂದು ನಾನು ಭಾವಿಸುತ್ತೇನೆ.   ಪ್ರತ್ಯೇಕ ರಾಜ್ಯದ ಬೇಡಿಕೆ
> ಇಡುತ್ತಿರುವವರು ಪ್ರತ್ಯೇಕತೆಯೊಂದೇ  ಪರಿಹಾರವೇ ಎಂದು ತಮ್ಮೊಳಗನ್ನು ಕೇಳಿಕೊಳ್ಳಬೇಕು.
> ಪ್ರತ್ಯೇಕ ರಾಜ್ಯವೆನ್ನುವುದು ಭೂಗೋಳ ವಿಭಜನೆ ಮತ್ತು ಅಧಿಕಾರ ಹಂಚಿಕೆಗೆ ನೆರವಾಗಬಹುದು.
> ಆದರೆ ಒಂದು ರಾಜ್ಯದ ಅಭಿವೃದ್ಧಿಗೆ ಅದಷ್ಟೇ ಸಾಕೆ? ನಿರ್ದಿಷ್ಟ ಭೂಗೋಳದೊಳಗೆ ಇರುವ ಸಾಮಾಜಿಕ
> ಪ್ರತ್ಯೇಕತೆ ಮತ್ತು ಸಾಂಸ್ಕøತಿಕ ಪ್ರತ್ಯೇಕತೆಯು ಪ್ರತ್ಯೇಕ ರಾಜ್ಯ ರಚನೆಯಿಂದ
> ಪರಿಹಾರವಾಗುತ್ತದೆಯೆ? ಖಂಡಿತ ಇಲ್ಲ. ಜಾತಿ, ವರ್ಣ,                      ಲಿಂಗತ್ವ
> ಅಸಮಾನತೆಗಳನ್ನು ಆಧಾರಿಸಿದ ಸಾಮಾಜಿಕ ಪ್ರತ್ಯೇಕತೆಗೆ ಸಾಮಾಜಿಕ ನ್ಯಾಯದ ರಾಜ್ಯಬೇಕು;
> ಪ್ರತ್ಯೇಕರಾಜ್ಯವಲ್ಲ. ಸಾಂಸ್ಕøತಿಕ ಪ್ರತ್ಯೇಕತೆಯನ್ನು ಹೋಗಲಾಡಿಸಲು ಬಹುತ್ವ ಬದ್ಧ ಚಿಂತನೆ
> ಮತ್ತು ಕ್ರಿಯೆ ಬೇಕು. ನಾವು ತಿಳಿಯಬೇಕು: ಸಾಮಾಜಿಕ ಪ್ರತ್ಯೇಕತೆ ಮತ್ತು ಸಾಂಸ್ಕøತಿಕ
> ಪ್ರತ್ಯೇಕತೆಯನ್ನುವುದು ಕೇವಲ ಪ್ರತ್ಯೇಕತೆಯಲ್ಲ. ಅದು ಪರಕೀಯತೆ. ಕನ್ನಡ ಭಾಷಾ
> ಭೂಗೋಳದಲ್ಲೇ ಅನುಭವಿಸುವ ಪರಕೀಯತೆ. ಈ ಪರಕೀಯತೆ ಏಕೀಕೃತ ಅಖಂಡ ಕರ್ನಾಟಕದಲ್ಲಿಯೇ
> ಕೊನೆಗಾಣಬೇಕು.                            ಪ್ರತ್ಯೇಕ ರಾಜ್ಯಬೇಡಿಕೆಯವರಿಗೆ
> ಅಭಿವೃದ್ಧಿಯ ಅಸಮತೋಲನ ಮತ್ತು ಅಧಿಕಾರ ಮುಖ್ಯವಾದಂತೆ ಸಾಮಾಜಿಕ ಮತ್ತು ಸಾಂಸ್ಕøತಿಕ ಸಮಸ್ಯೆ
> ಮುಖ್ಯವಾದಂತೆ ಕಾಣಿಸುತ್ತಿಲ್ಲ.  ಆದ್ದರಿಂದ ಪ್ರತ್ಯೇಕ ರಾಜ್ಯ ಬೇಡಿಕೆಯವರಲ್ಲಿ ನನ್ನದೊಂದು
> ಬೇಡಿಕೆ. ನಾವು ಒಂದಾಗಿ ಸಮಸ್ಯೆಗಳನ್ನು ಬಿಡಿಸೋಣ. ಸವಾಲುಗಳನ್ನು ಒಂದಾಗಿ  ಎದುರಿಸೋಣ.
> ಭಾವನಾತ್ಮಕವಾಗಿ ಮಾತ್ರವಲ್ಲ. ಕ್ರಿಯಾತ್ಮಕವಾಗಿ ಕೆಲಸ ಮಾಡೋಣ. ಕರ್ನಾಟಕದ ಯಾವುದೇ
> ಪ್ರದೇಶಕ್ಕೆ ಅನ್ಯಾಯವಾದರೂ ಒಂದಾಗಿ  ಪ್ರತಿಭಟಿಸೋಣ. ಒಡೆದು ಹೋಗುವುದಕ್ಕೆ ನಾವು
> ಒಂದಾಗಲಿಲ್ಲ ಎಂಬುದನ್ನು ತೋರಿಸಿಕೊಡೋಣ. ಇಂಥದೊಂದು ಕ್ರಿಯೆಗೆ ಕರ್ನಾಟಕದ
> ಎಲ್ಲ ಪ್ರದೇಶಗಳ ನೋಟವೇ ಬದಲಾಗಬೇಕು. ಅಪನಂಬಿಕೆಯ ವಾತಾವರಣ ಹೋಗಬೇಕು. ಈ ನಿಟ್ಟಿನಲ್ಲಿ
> ಆಳುವ  ಸರ್ಕಾರಗಳ ಜವಾಬ್ದಾರಿಯೂ ದೊಡ್ಡದಾಗಬೇಕು. ಎಲ್ಲ ಪ್ರದೇಶದ ಜನಪ್ರತಿನಿಧಿಗಳ ದನಿ
> ಗಟ್ಟಿಯಾಗಬೇಕು.
> [12/2, 9:14pm ಸಾಹಿತ್ಯ ಸಮ್ಮೇಳನದ ಅಧ್ಯಕ್ಷೀಯ ನುಡಿ ( ಬರಗೂರರು ) 👆ಸಮೀರ ( ಕನ್ನಡ
> ಭಾಷಾ ಶಿಕ್ಷಕಿ )
> ಸರ್ಕಾರಿ ಪದವಿ ಪೂರ್ವ ಕಾಲೇಜ್
> ವಿಜಯಪುರ
> ದೇವನಹಳ್ಳಿ ತಾಲ್ಲೂಕು
> ಬೆಂಗಳೂರು  ಗ್ರಾಮಾಂತರ ಜಿಲ್ಲೆ
>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/
> Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read http://karnatakaeducation.org.
> in/KOER/en/index.php/Become_a_STF_groups_member
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/kannadastf.
> To view this discussion on the web, visit https://groups.google.com/d/
> msgid/kannadastf/CAP9VewoHCbyQ0emggmBmOjVFAGxVT-Ue_aMu7sDaDYuMJ8XY%2BQ%
> 40mail.gmail.com
> <https://groups.google.com/d/msgid/kannadastf/CAP9VewoHCbyQ0emggmBmOjVFAGxVT-Ue_aMu7sDaDYuMJ8XY%2BQ%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
Visit this group at https://groups.google.com/group/kannadastf.
To view this discussion on the web, visit 
https://groups.google.com/d/msgid/kannadastf/CAFdt22T_sBhUh%3D75LJwTFAA7mU7d_3sTe0y6ZkD0e%3DQ4%2BqDFhQ%40mail.gmail.com.
For more options, visit https://groups.google.com/d/optout.

Reply via email to