ಧನ್ಯವಾದಗಳು ಸಾರ್
*ಎನ್ ನಾಗರಾಜು ಕನ್ನಡ ಭಾಷಾ ಶಿಕ್ಷಕರು ಸರ್ಕಾರಿ ಪ್ರೌಢಶಾಲೆ, ರೈಲ್ವೆಕಾರ್ಯಾಗಾರ ಕಾಲೋನಿ.ದಕ್ಷಿಣ ವಲಯ ಮೈಸೂರು -೦೮ಮೊ ೯೪೪೮೭೫೩೫೬೫* 2016-12-21 20:21 GMT+05:30 Mahesh S <[email protected]>: > *ಮುನ್ನುಡಿ* > ಪ್ರಿಯ ವಿದ್ಯಾರ್ಥಿಗಳೇ ಹಾಗೂ ಶಿಕ್ಷಕ ಮಿತ್ರರೇ, > 10ನೆಯ ತರಗತಿಯ ವಾರ್ಷಿಕ ಪರೀಕ್ಷೆ ಇಂದು ಹತ್ತು-ಹಲವು ಕಾರಣಗಳಿಂದಾಗಿ ಮಹತ್ವದ > ವಿಷಯವಾಗಿ ಪರಿಣಮಿಸಿರುವುದು ನಮಗೆಲ್ಲ ಈಗಾಗಲೇ ವೇದ್ಯವಾಗಿದೆ. ವಿದ್ಯಾರ್ಥಿಗಳ ಭವಿಷ್ಯದ > ದೃಷ್ಟಿಯಿಂದ, ಶಾಲೆಯ ಫಲಿತಾಂಶದ ದೃಷ್ಟಿಯಿಂದ ಅಷ್ಟೇ ಅಲ್ಲದೇ ಕೆಲವರ ಪ್ರತಿಷ್ಠೆಯ > ದೃಷ್ಟಿಯಿಂದ *10ನೆಯ ತರಗತಿ ಫಲಿತಾಂಶ *ಎಂಬ* 'ಬೆದರುಬೊಂಬೆ' *ಇಂದು ದೈತ್ಯಾಕಾರವಾಗಿ > ಬೆಳೆದು ನಿಂತಿದ್ದು; ಯಾವ ಪರೀಕ್ಷೆಗಳಿಗೂ ಇಲ್ಲದ ಭವ್ಯತೆಯನ್ನು ಪಡೆದುಕೊಂಡಿದೆ; > ವಿದ್ಯಾರ್ಥಿಗಳು, ಶಿಕ್ಷಕರು, ಮುಖ್ಯ ಶಿಕ್ಷಕರು, ಪಾಲಕರು ಅಲ್ಲದೆ ಈ ಶೈಕ್ಷಣಿಕ > ವ್ಯಾಪ್ತಿಗೆ ಒಳಪಡುವ ಹಲವು ಅಧಿಕಾರಿಗಳ ನಿದ್ದೆಗೆಡಿಸಿದೆ. > ತರಬೇತಿಗಳಲ್ಲಿ, ಕಾರ್ಯಾಗಾರಗಳಲ್ಲಿ *'ಗುಣಾತ್ಮಕ ಶಿಕ್ಷಣ'*ದ ಮಂತ್ರ > ಪಠಿಸುವ; ಉದ್ದುದ್ದ ಭಾಷಣ ಮಾಡುವ ಅನೇಕರು ದುರದೃಷ್ಟವಶಾತ್ ಇಂದು ಮೂರು ಗಂಟೆಗಳಲ್ಲಿ > ವಿದ್ಯಾರ್ಥಿಯ ಭವಿಷ್ಯವನ್ನು ನಿರ್ಧರಿಸುವ *'ಪರಿಮಾಣಾತ್ಮಕ' *ಪರೀಕ್ಷಾ ಪದ್ಧತಿಗೆ ಜೋತು > ಬಿದ್ದಿದ್ದು *"ಎಸ್.ಎಸ್.ಎಲ್.ಸಿ. ಅಂಕಗಳಿಕೆ.... **ಎಸ್.ಎಸ್.ಎಲ್.ಸಿ. ಅಂಕಗಳಿಕೆ.... > **ಎಸ್.ಎಸ್.ಎಲ್.ಸಿ. > ಅಂಕಗಳಿಕೆ....."* ಎಂದು ಹುಯಿಲೆಬ್ಬಿಸಿದ್ದಾರೆ. ಆ ಮೂಲಕ *"ಅಂಕಗಳಿಕೆಯೇ ನಮ್ಮ ಶಿಕ್ಷಣದ > ಗುರಿ" *ಎಂಬುದನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿದ್ದಾರೆ. > ಪ್ರಪಂಚದ ಯಾವುದಾದರೂ ಮೂಲೆಯಲ್ಲಿ *'ತಳಪಾಯ' *ಇಲ್ಲದ ಅಥವಾ *'ತಳಪಾಯ' *ಇದ್ದರೂ > *'ಭದ್ರವಾದ ತಳಪಾಯ' *ಇಲ್ಲದ ನೆಲದ ಮೇಲೆ *'ದೊಡ್ಡ ಕಟ್ಟಡ*' ನಿರ್ಮಾಣ ಮಾಡುವ* > 'ಇಂಜಿನಿಯರ್' *ನೋಡಿದ್ದೀರಾ...! ಅಂತಹ *'ಇಂಜಿನಿಯರ್' *ಏನಾದರೂ ಇದ್ದಲ್ಲಿ ಅದು *'ಕರ್ನಾಟಕದ > ಸರ್ಕಾರಿ ಪ್ರೌಢಶಾಲೆ'*ಗಳಲ್ಲಿ...!! > *"ಪ್ರೌಢಶಾಲೆಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಲ್ಲಿ ಶೇಕಡ 50 ಕ್ಕಿಂತ > ಹೆಚ್ಚು ವಿದ್ಯಾರ್ಥಿಗಳಿಗೆ ಸರಿಯಾಗಿ ಓದುವ, ಬರೆಯುವ, ಲೆಕ್ಕಮಾಡುವ ಸಾಮಾನ್ಯ ಸಾಮರ್ಥ್ಯವೂ > ಇಲ್ಲ"* ಎಂದು ಗೋಳಾಡುತ್ತಿರುವ ಶಿಕ್ಷಕರ ಅಳಲು ಕೇವಲ 'ಅರಣ್ಯ ರೋಧನ'ವಾಗಿದೆ. > ಏಳೆಂಟು ವರ್ಷ ಏನೂ ಕಲಿಯದೇ ಬಂದ ಶೇಕಡ 50 ಕ್ಕಿಂತ ಹೆಚ್ಚು > ವಿದ್ಯಾರ್ಥಿಗಳಿಗೆ; ಒಂದು ತಿಂಗಳ ಸೇತುಬಂಧ, ನಂತರದ ಕೆಲವು ತಿಂಗಳುಗಳಲ್ಲಿ ನಿಗದಿಪಡಿಸಲಾದ > ಪಠ್ಯಬೋಧನೆಯ ನಡುವೆ ಸಮಯ ಹೊಂದಿಸಿಕೊಂಡರೆ ದೊರೆಯುವ ಕೆಲವೇ ಕೆಲವು ಅವಧಿಗಳಲ್ಲಿ ಮಾಡಬಹುದಾದ > ಪರಿಹಾರ ಬೋಧನೆಯ ಮೂಲಕ ವಿದ್ಯಾರ್ಥಿಗಳನ್ನು ಮೇಲೆ ತರಬೇಕೆಂದು ಶಿಕ್ಷಕರು ದಿನನಿತ್ಯ > ಹೆಣಗಾಡುತ್ತಿದ್ದಾರೆ. ಕಟ್ಟಪ್ಪಣೆ ಮಾಡುವವರು ವಸ್ತುಸ್ಥಿತಿಯನ್ನು ಅರಿತಿರುವರೇ? > ಅರಿತಿದ್ದೂ ಹೀಗೆ ಆಜ್ಞೆ ಮಾಡುತ್ತಿರುವರೇ? ಎಂಬ ಪ್ರಶ್ನೆಗಳು ಶಿಕ್ಷಕರನ್ನು ಕಾಡುತ್ತಿವೆ. > ಎಲ್ಲಿಯವರೆಗೆ ಜವಾಬ್ದಾರಿಯುತ ಸ್ಥಾನದಲ್ಲಿರುವವರು ವಿದ್ಯಾರ್ಥಿ ಮೇಲ್ಮಟ್ಟದ > ತರಗತಿಗೆ ಬಂದ ನಂತರ "ಅಂಕಗಳಿಕೆ" ಯ ಹುಯಿಲೆಬ್ಬಿಸುವ ಬದಲು ತಳಮಟ್ಟದಿಂದ ಸರಿಪಡಿಸುವ ಬಗ್ಗೆ > ಚಿಂತನೆ ಮಾಡುವುದಿಲ್ಲವೋ: *ಮೇಲ್ಮಟ್ಟದ ವಿದ್ಯಾರ್ಥಿ ಕನಿಷ್ಠ ಅಂಕಗಳಿಸದಿರಲು ಅವನಿಗೆ > ತಳಮಟ್ಟದಲ್ಲಿ ಸರಿಯಾದ ಬುನಾದಿ ಇಲ್ಲದಿರುವುದೇ ಪ್ರಮುಖ ಕಾರಣ *ಎಂದು ಬುಡಮಟ್ಟದಿಂದ > ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ *'ಧೈರ್ಯ'* ತೋರುವುದಿಲ್ಲವೋ ಅಲ್ಲಿಯವರೆಗೆ ಈ > ಸಮಸ್ಯೆಗೆ, ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯಕ್ಕೆ, ಶಿಕ್ಷಕರ ಮೇಲೆ > ಹೇರಲಾಗುತ್ತಿರುವ ಒತ್ತಡಕ್ಕೆ ಕೊನೆ ಎಂಬುದಿಲ್ಲ. > ದಿನನಿತ್ಯ *'ದೊಡ್ಡವರ ಆಜ್ಞೆ', 'ನಿಯಮಗಳ ಸಂಕೋಲೆ', 'ಕಡತಗಳ ಸಾಗರ'*ದಲ್ಲಿ > ಶಿಕ್ಷಕರು ಹೈರಾಣಾಗಿದ್ದಾರೆ; ಕೆಲವರಂತು ಇಂತಹ ಒತ್ತಡಗಳಿಂದ ಮಾನಸಿಕ ನೆಮ್ಮದಿ/ಆರೋಗ್ಯ > ಕಳೆದುಕೊಂಡಿದ್ದಾರೆ. > *ಅಲ್ಲವೇ ಮತ್ತೆ....!! ತಳಪಾಯವಿಲ್ಲದ ನೆಲದ ಮೇಲೆ ಸೌಧ ನಿರ್ಮಿಸುವುದೆಂದರೆ....!! > ಸಾಮಾನ್ಯದ ಮಾತಾಯಿತೇ...!!* > ಅದೇನೇ ಇರಲಿ, ಮುಂಬರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ > 'ಅಂಕಗಳಿಕೆ' ಯ ಕಡೆ ನಮ್ಮೆಲ್ಲರ ಚಿತ್ತವಿದೆ. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು > ಉತ್ತೀರ್ಣರಾಗುವಂತೆ ಮಾಡುವ ಕರ್ತವ್ಯ ನಮ್ಮದಾಗಿದೆ. ಎಲ್ಲ ಒತ್ತಡಗಳನ್ನು ಹಗುರಾಗಿಸಿಕೊಂಡು; > ಯಾವ ಯಾವ ವಿಧಾನಗಳ ಮೂಲಕ, ವಿದ್ಯಾರ್ಥಿಗಳಿಗೆ ಉತ್ತೀರ್ಣರಾಗಲು ಬೇಕಾಗುವ ಅಂಕಗಳಿಕೆಗೆ > ಮಾರ್ಗದರ್ಶನ ಮಾಡಬೇಕು. ಎಂಬುದರ ಕಡೆ ನಮ್ಮ ಪ್ರಯತ್ನವಿರಬೇಕು. > ಈ ನಿಟ್ಟಿನಲ್ಲಿ ನೀಲನಕ್ಷೆಯನ್ನಾಧರಿಸಿ ಕಲಿಕಾ ಕಾರ್ಡುಗಳನ್ನು > ನಿರ್ಮಿಸಲಾಗಿದ್ದು, ಅದನ್ನು *'ಕನ್ನಡ ದೀವಿಗೆ'*ಯ ಮೂಲಕ ನಿಮಗೆ ತಲುಪಿಸುತ್ತಿದ್ದೇನೆ. > A4 ಅಳತೆಯ ಡ್ರಾಯಿಂಗ್ ಹಾಳೆಗಳಿಗೆ ನೇರವಾಗಿ ಮುದ್ರಿಸಿಕೊಂಡು ವಿದ್ಯಾರ್ಥಿಗಳ ಕಲಿಕೆಗೆ > ಬಳಸಿಕೊಳ್ಳಬಹುದಾಗಿದೆ. > > **ಕಲಿಕಾ ಕಾರ್ಡುಗಳ ಡೌನ್ ಲೋಡ್ ಪುಟಕ್ಕೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ** > <https://kannadadeevige.blogspot.in/2016/12/10th-kannada-passing-package.html> > ಧನ್ಯವಾದಗಳು, > -- > *ಮಹೇಶ್.ಎಸ್* > ಕನ್ನಡ ಭಾಷಾ ಶಿಕ್ಷಕರು, > ಸರ್ಕಾರಿ ಪ್ರೌಢಶಾಲೆ,ನಿಡುವಣಿ, > ಹೊಳೆನರಸೀಪುರ ತಾ. ಹಾಸನ ಜಿಲ್ಲೆ. > ಮೊಬೈಲ್: 9743316629 > ವೆಬ್ ಸೈಟ್: www.kannadadeevige.blogspot.in > > > > ****************************** > > -- > *For doubts on Ubuntu and other public software, visit > http://karnatakaeducation.org.in/KOER/en/index.php/ > Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read http://karnatakaeducation.org. > in/KOER/en/index.php/Become_a_STF_groups_member > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/kannadastf. > To view this discussion on the web, visit https://groups.google.com/d/ > msgid/kannadastf/CANaCK5aUfbfqOHo54KFtBmeqh7yt0 > HTKQkRvSOGsu9So-BweYg%40mail.gmail.com > <https://groups.google.com/d/msgid/kannadastf/CANaCK5aUfbfqOHo54KFtBmeqh7yt0HTKQkRvSOGsu9So-BweYg%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/kannadastf. To view this discussion on the web, visit https://groups.google.com/d/msgid/kannadastf/CAM3YhEoxE14wZe6iKfhJXq3CfQ%3D4f-%2BagYFHgNKvpOwWBepxpQ%40mail.gmail.com. For more options, visit https://groups.google.com/d/optout.
