On 29 Dec 2015 4:20 a.m., "Mallikarjunagouda Patil" <[email protected]>
wrote:

> ಕನ್ನಡದ ಮಹಾನ್ ಚೇತನ- ಕುವೆಂಪು.
> """"""""""""""""""""""""""""""""""
> ಕನ್ನಡ ಎನೆ ಕುಣಿದಾಡುವುದೆನ್ನೆದೆ
> ಕನ್ನಡ ಎನೆ ಕಿವಿ ನಿಮಿರುವುದು....
> ಎಲ್ಲಾದರು ಇರು ಎಂತಾದರೂ ಇರು
> ಎಂದೆಂದಿಗೂ ನೀ, ಕನ್ನಡವಾಗಿರು...
> ಬಾರಿಸು ಕನ್ನಡ ಡಿಂಡಿಮವ
> ಓ ಕರ್ನಾಟಕ ಹೃದಯ ಶಿವ ಬಾರಿಸು ಕನ್ನಡ ಡಿಂಡಿಮವ...
> ಜಯ ಭಾರತ ಜನನಿಯ ತನುಜಾತೇ..
> ಜಯಹೇ ಕರ್ನಾಟಕ ಮಾತೆ...
> ಕುವೆಂಪು ಎಂಬ ಮೂರಕ್ಷರದಿಂದಲೇ ಕನ್ನಡಿಗರ ಮನೆ ಮಾತಾದ ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ
> ಪುಟ್ಟಪ್ಪ ಕನ್ನಡದ ಮಹಾನ್ ಚೇತನ. ಕನ್ನಡ- ಕರ್ನಾಟಕದ ಬಗ್ಗೆ ಅವರು ಬರೆದಿರುವ ಭಾವಗೀತೆಗಳು
> ನಿತ್ಯ ನೂತನ. ಮನುಜ ಮತ ವಿಶ್ವಪಥವನ್ನು ಸಾರಿದ ಈ ಸಾಹಿತ್ಯ ಶ್ರೇಷ್ಠ
> ವಿಶ್ವಮಾನವರೆನಿಸಿದವರು.
> ಕುವೆಂಪು ಹೊಸಗನ್ನಡ ಸಾಹಿತ್ಯದ ಹಿರಿಯ ಕವಿ. ಕನ್ನಡ ಸಾಹಿತ್ಯವನ್ನು ವಿಶ್ವ ಸಾಹಿತ್ಯ
> ವೇದಿಕೆಗೆ ಕೊಂಡೊಯ್ದ ವಿಶ್ವಮಾನವ. ಮಹಾಕಾವ್ಯ, ನಾಟಕ, ಖಂಡಕಾವ್ಯ, ಕಥನಕಾವ್ಯ, ಭಾವಗೀತೆಯೇ
> ಮೊದಲಾದ ಹಲವು ಪ್ರಕಾರಗಳಲ್ಲಿ ಅತ್ಯುತ್ತಮ ಕೃತಿಗಳನ್ನು ನೀಡಿದ ಅದ್ವರ್ಯು. ಕುವೆಂಪು
> ಅವರಂತೆ ಸರ್ವ ಪ್ರಕಾರಗಳಲ್ಲೂ ಏಕ ಪ್ರಕಾರವಾದ ಸಿದ್ಧಿ ಪಡೆದ ಕವಿಗಳು ಅತಿ ವಿರಳ.
> ಓ ನನ್ನ ಚೇತನ
> ಆಗು ನೀ ಅನಿಕೇತನ!
> ರೂಪ ರೂಪಗಳನು ದಾಟಿ
> ನಾಮ ಕೋಟಿಗಳನು ಮೀಟಿ
> ಎದೆಯ ಬಿರಿಯೆ ಭಾವದೀಟಿ....
> ‘ಅನಿಕೇತನದ’ ವಿಶ್ವ ಮಾನವ ಗೀತೆ. ಇದು ಮಾನವನ ಬದುಕಿನ ಅರ್ಥ-ವ್ಯಾಪ್ತಿಯನ್ನು ಕೆಲವೇ
> ಪದಗಳಲ್ಲಿ ಅರ್ಥಗರ್ಭಿತವಾಗಿ ತೆರೆದಿಡುತ್ತದೆ. ಅರ್ಥೈಸಿಕೊಳ್ಳಲು ಪ್ರಕೃತಿ - ಸೃಷ್ಟಿಯ
> ಪರಿಕಲ್ಪನೆಗಳನ್ನು - ರಹಸ್ಯಗಳನ್ನು ಕುವೆಂಪು ತಮ್ಮ ಕೃತಿಗಳಲ್ಲಿ ಶ್ರೀಸಾಮಾನ್ಯನಿಗೂ
> ಅರ್ಥವಾಗುವ ರೀತಿಯಲ್ಲಿ ತೆರೆದಿಟ್ಟಿದ್ದಾರೆ.
> ‘ಕಾನೂರು ಹೆಗ್ಗಡಿತಿ’ ‘ಮಲೆಗಳಲ್ಲಿ ಮದುಮಗಳು’ (ಬೃಹತ್ ಕಾದಂಬರಿಗಳು), ‘ಶ್ರೀರಾಮಕೃಷ್ಣ
> ಪರಮಹಂಸ’ ‘ಸ್ವಾಮಿ ವಿವೇಕಾನಂದ’ (ಜೀವನ ಚರಿತ್ರೆ), ‘ರಕ್ತಾಕ್ಷಿ’, ‘ಬೆರಳ್ಗೆ ಕೊರಳ್’
> ‘ಜಲಗಾರ’ ‘ಯಮನ ಸೋಲು’ ಕೃತಿಗಳಲ್ಲಿ ಬದುಕಿನ ಬವಣೆ, ಬದುಕಿನ ಸತ್ಯ - ರಹಸ್ಯಗಳ ವರ್ಣನೆ
> ಹಾಸುಹೊಕ್ಕಾಗಿವೆ.
> ಕುವೆಂಪು ಅವರು ಹುಟ್ಟಿದ್ದು ೨೯ ಡಿಸೆಂಬರ್ ೧೯೦೪. ಅವರೂರು ಶಿವಮೊಗ್ಗ ಜಿಲ್ಲೆಯ
> ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿ. ತಂದೆ ವೆಂಕಟಪ್ಪ ಗೌಡರು, ತಾಯಿ ಸೀತಮ್ಮ. ಆದರೆ,
> ಕುವೆಂಪು ಅವರು ಹುಟ್ಟಿದ್ದು ತಾಯಿಯ ತವರಾದ ಚಿಕ್ಕಮಗಳೂರು ಜಿಲ್ಲೆಯ ಹಿರೇಕೂಡಿಗೆ
> ಗ್ರಾಮದಲ್ಲಿ. ಮಲೆನಾಡಿನ ಮಡಿಲಲ್ಲಿ ಹುಟ್ಟಿ ಬೆಳೆದ ಕುವೆಂಪು ಅವರು, ಶಾಲೆ, ಕಾಲೇಜು,
> ವಿಶ್ವವಿದ್ಯಾಲಯಗಳಲ್ಲಿ ಕಲಿತದ್ದಕ್ಕಿಂತ ಹೆಚ್ಚಿನ ವಿಷಯವನ್ನು ಕಲಿಸಿದ್ದು ಮಲೆನಾಡಿನ
> ಪ್ರಕೃತಿ. ಹೀಗಾಗೇ ಅವರ ಎಲ್ಲ ಕೃತಿಗಳಲ್ಲಿ ಮಲೆನಾಡಿನ ಸೊಬಗು ಕಂಗೊಳಿಸುತ್ತದೆ. ಇದಕ್ಕೆ
> ಕಾನೂರು ಹೆಗ್ಗಡಿತಿ ಹಾಗೂ ಮಲೆಗಳಲ್ಲಿ ಮದುಮಗಳು ಸಾಕ್ಷಿ.
> ಕುವೆಂಪು ಅವರು ಮೊದಲು ಬರೆದದ್ದು (ಬಿಗಿವರ್ಸ್ ಮ್ಯೂಸ್) ಇಂಗ್ಲಿಷ್‌ನಲ್ಲಿ. ಆದರೆ, ಅವರ
> ಕಣ್ಣು ತೆರೆಸಿ ಮಾತೃಭಾಷೆಯಲ್ಲಿ ಬರೆಯುವಂತೆ ಪ್ರೇರೇಪಿಸಿದವರು ಐರಿಷ್ ಕವಿ ಜೇಮ್ಸ್
> ಕಸಿನ್ಸ್. ಅಂದಿನಿಂದ ಕುವೆಂಪು ಅವರು ೭೦ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಈ ಪೈಕಿ
> ಶ್ರೀರಾಮಾಯಣ ದರ್ಶನಂ - ಮಹಾಕಾವ್ಯ (ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಕೃತಿ), ಮಲೆಗಳಲ್ಲಿ
> ಮದುಮಗಳು, ಕಾನೂರು ಹೆಗ್ಗಡಿತಿ (ಕಾದಂಬರಿ), ಸನ್ಯಾಸಿ ಮತ್ತು ಇತರ ಕತೆಗಳು (ಕಥಾ ಸಂಕಲನ),
> ಸ್ವಾಮಿ ವಿವೇಕಾನಂದ, ರಾಮಕೃಷ್ಣ ಪರಮಹಂಸ (ಜೀವನ ಚರಿತ್ರೆ), ಶೂದ್ರ ತಪಸ್ವಿ, ರಕ್ತರಾತ್ರಿ,
> ರಕ್ತಾಕ್ಷಿ, ಯಮನಸೋಲು, ಬೆರಳ್ಗೆ ಕೊರಳ್ (ನಾಟಕಗಳು), ಪಕ್ಷಿಕಾಶಿ, ಪಾಂಚಜನ್ಯ, ಅನಿಕೇತನ,
> ಚಂದ್ರಮಂಚಕೆ ಬಾ ಚಕೋರಿ, ಕೊಳಲು (ಕವನಸಂಕಲನಗಳು) ಪ್ರಮುಖವಾದವು.
> ಇಂತಹ ಅತ್ಯಮೂಲ್ಯ ಕೃತಿಗಳನ್ನು ನೀಡಿದ ಕವಿಗೆ ಪದ್ಮವಿಭೂಷಣ (೧೯೫೮), ರಾಜ್ಯ-ಕೇಂದ್ರ
> ಸಾಹಿತ್ಯ ಅಕಾಡಮಿ ಪ್ರಶಸ್ತಿ, ರಾಷ್ಟ್ರಕವಿ ಬಿರುದು (೧೯೬೪), ಪಂಪಪ್ರಶಸ್ತಿ, ಕರ್ನಾಟಕ
> ರತ್ನ ಪುರಸ್ಕಾರಗಳನ್ನು ನೀಡಿ ಸರಕಾರ ಗೌರವಿಸಿದರೆ, ಕನ್ನಡ ಸಾಹಿತ್ಯ ಪರಿಷತ್ತು ಕುವೆಂಪು
> ಅವರಿಗೆ ೩೯ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನವನ್ನು ನೀಡಿ ತನ್ನ
> ಘನತೆಯನ್ನೇ ಹೆಚ್ಚಿಸಿಕೊಂಡಿತು
>
> ಕುವೆಂಪು ಅವರು ಮಾನವ ಕುಲಕ್ಕೆ ನೀಡಿದ ಮಾರ್ಗದರ್ಶನ/ಆದರ್ಶಗಳು ಸಾರ್ವಕಾಲಿಕ. ಕನ್ನಡಕ್ಕೆ
> ಹೊಸ ನುಡಿಗಟ್ಟು ಹಾಗೂ ಹೊಸ ಕಲ್ಪನೆಗಳನ್ನು ನೀಡಿ ಹೊಸಗನ್ನಡ ಸಾಹಿತ್ಯವನ್ನು
> ಶ್ರೀಮಂತಗೊಳಿಸಿದ ಧೀಮಂತ ಸಾಹಿತಿ. 'ಮನುಜ ಮತ ವಿಶ್ವಪಥ' ಸಂದೇಶ ಸಾರಿದ ಶ್ರೇಷ್ಠ
> ವಿಶ್ವಮಾನವ. ಅಂತಹ ಮಹಾನ್ ಚೇತನ ಕುವೆಂಪು ಅವರ ವಿಶ್ವಮಾನವ ಸಂದೇಶ ಕುರಿತು ವಿಚಾರ ಗೋಷ್ಠಿ
> ಏರ್ಪಡಿಸುವ ಮೂಲಕ ಅವರ ಜನ್ಮ ದಿನಾಚರಣೆಯನ್ನು 'ವಿಶ್ವ ಮಾನವ ದಿನಾಚರಣೆ'ಯನ್ನಾಗಿ ಆಚರಿಸಲು
> ಇಂದಿನ ಘನ ಸರ್ಕಾರ ನಿರ್ಧರಿಸಿರುವುದು ನಮಗೆಲ್ಲರಿಗೂ ಸಂತೋಷದ ವಿಷಯವಾಗಿದೆ.
>
> ಸಂಗ್ರಹ ಲೇಖನ:
> ಪೋತರಾಜ ಪೋತರದ.
>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/
> Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read http://karnatakaeducation.org.
> in/KOER/en/index.php/Become_a_STF_groups_member
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/kannadastf.
> To view this discussion on the web, visit https://groups.google.com/d/
> msgid/kannadastf/CAOM04w%2B14hkFZtpbEGMrB-YFn2METULHzeMfUngDEpJ2xv-tmg%
> 40mail.gmail.com
> <https://groups.google.com/d/msgid/kannadastf/CAOM04w%2B14hkFZtpbEGMrB-YFn2METULHzeMfUngDEpJ2xv-tmg%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to