Dhaanya alla dhyan saripadisikolli On 15 Jan 2018 7:38 pm, "parvathamma s" <parvathamm...@gmail.com> wrote:
> puspavathij...@gmail.com > > On 15-Jan-2018 12:47 PM, "Sameera samee" <mehak.sa...@gmail.com> wrote: > >> ಪ್ರಕೃತ "ರಾಮಧಾನ್ಯ ಚರಿತ್ರೆ"ಯು ಕನಕದಾಸರಿಂದ ರಚಿತವಾದ ಒಂದು ಪುಟ್ಟ ವಿಡಂಬನ ಕಾವ್ಯ. >> ಇದೊಂದು ಕಲ್ಪಿತ ಕಥೆ. ರಾಗಿ(ನರೆದಲೆಗ) ಹಾಗೂ ಭತ್ತ(ವ್ರಿಹಿಗ)- ಇವರಿಬ್ಬರ ನಡುವೆ ಯಾರು >> ಹೆಚ್ಚು ಯಾರು ಕಡಿಮೆ ಎಂಬ ಜಗಳವು ಉದ್ಭವಿಸಲಾಗಿ, ರಾಮನು ಇವರಿಬ್ಬರ ವ್ಯಾಜ್ಯವನ್ನು >> ಪರಿಹರಿಸಿ ನರೆದಲೆಗವೇ ಉತ್ತಮವೆಂದು ಸಾರಿ ತೀರ್ಪನ್ನು ನೀಡುವುದು ಇಲ್ಲಿನ ಕಥಾಹಂದರ. >> >> ಆ ಕಾಲಕ್ಕೆ ಇದ್ದಿರಬಹುದಾದ ವರ್ಗ-ವರ್ಣ ತಾರತಮ್ಯಗಳ ಪ್ರತೀಕವಾಗಿ - ಉಚ್ಛ ವರ್ಗಗಳ >> ಪ್ರತಿನಿಧಿಯಾಗಿ ನೆಲ್ಲೂ, ಕೆಳವರ್ಗಗಳ ಪ್ರತಿನಿಧಿಯಾಗಿ ರಾಗಿಯೂ ಈ ಕಾವ್ಯದಲ್ಲಿ >> ಕಂಡುಬರುತ್ತವೆ. ಹೀಗಾಗಿ ’ರಾಮಧಾನ್ಯ ಚರಿತ್ರೆ’ಯನ್ನು ರೂಪಕ ಕಾವ್ಯವೆಂದೂ ಹೇಳಬಹುದು. >> >> >> ರಾವಣನನ್ನು ಸಂಹರಿಸಿದ ನಂತರ ರಾಮನು ಸೀತೆ, ಲಕ್ಷ್ಮಣ, ವಿಭೀಷಣ, ಹನುಮಂತ >> ಮುಂತಾದವರೊಂದಿಗೆ ಅಯೋಧ್ಯೆಗೆ ಮರಳುತ್ತಿರುವಾಗ, ಮಾರ್ಗಮಧ್ಯದಲ್ಲಿ ಮುನಿಗಳೆಲ್ಲರೂ ಇವರಿಗೆ >> ವಿವಿಧ ಧಾನ್ಯಗಳಿಂದ ಸಿದ್ಧಪಡಿಸಿದ ಭಕ್ಷ್ಯ-ಭೋಜನಗಳ ಔತಣವೊಂದನ್ನು ಏರ್ಪಡಿಸಿರುತ್ತಾರೆ. ಆಗ >> ಅವರಲ್ಲಿ ಸಹಜವಾಗಿ ಧಾನ್ಯಗಳಲ್ಲಿ ಯಾವುದು ಶ್ರೇಷ್ಠ ಎಂಬ ಪ್ರಶ್ನೆಯು ಉದ್ಭವಿಸುತ್ತದೆ. ಈ >> ಪ್ರಶ್ನೆಯೇ ’ರಾಮಧಾನ್ಯ ಚರಿತ್ರೆ’ಯ ಕಥಾಮೂಲ. ಇಲ್ಲಿಂದಲೇ ಭತ್ತ ಹಾಗೂ ರಾಗಿಯ ನಡುವೆ >> ಜಗಳವೇರ್ಪಡುವುದು. >> >> >> ಅವರಿಬ್ಬರ ನಡುವಿನ ಜಗಳವನ್ನು ನಿವಾರಿಸಿ ನ್ಯಾಯವನ್ನು ಹೇಳಲೆಂದು ರಾಮನು ಅವರಿಬ್ಬರನ್ನೂ >> ಆರು ತಿಂಗಳುಗಳ ಕಾಲ ಬಂಧನದಲ್ಲಿರಿಸುವಂತೆ ಹೇಳುತ್ತಾನೆ. ಆರು ತಿಂಗಳ ನಂತರ ಇವರಿಬ್ಬರನ್ನೂ >> ಸಭೆಗೆ ಕರೆಸಲಾಗಿ, ಆ ವೇಳೆಗೆ ಭತ್ತವು ಸೊರಗಿ ಟೊಂಕ ಮುರಿದು ಬಿದ್ದರೆ, ರಾಗಿಯು ಯಾವ >> ಕ್ಲೇಶಕ್ಕೂ ಒಳಗಾಗದೆ ಗಟ್ಟಿಯಾಗಿ ನಿಲ್ಲುತ್ತದೆ. ಕೊನೆಗೆ, ಆರು ತಿಂಗಳುಗಳ ನಂತರವೂ >> ಸ್ವಲ್ಪವೂ ಕಾಂತಿಗುಂದದ ರಾಗಿಗೇ ರಾಮನ ಸಭೆಯಲ್ಲಿ ಶ್ರೇಷ್ಠತೆಯ ಪಟ್ಟ ದೊರೆಯುತ್ತದೆ. ಇಡೀ >> ಸಭೆಯು ರಾಗಿಯನ್ನು ಮೆಚ್ಚಿ ಹಾರೈಸುತ್ತದೆ. >> >> ------------------------------------------------------------ >> ------------------------------------------------ >> >> >> ರಾಮಧಾನ್ಯ ಚರಿತ್ರೆ >> >> >> >> ರಾಮಧಾನ್ಯದ ಕೃತಿಯನೀ ಜನ >> >> ದಾಮವೆಲ್ಲಾದರಿಸುವಂದದಿ >> >> ಭೂಮಿಗಚ್ಚರಿಯಾಗಿ ಪೇಳುವೆನೀ ಮಹಾಕಥೆಯ >> >> ಪ್ರೇಮದಿಂದಾದರಿಸಿ ಕೇಳ್ದ ಸ >> >> ನಾಮರಿಗೆ ಸತ್ಕರುಣದಲಿ >> >> ರಾಮ ಪಾಲಿಸಿಕೊಡುವ ಮನದಲಿ ಇಷ್ಟಸಂಪದವ (೩) >> >> >> ಧರೆಯನೆಲ್ಲವ ಸೋತು ಜೂಜಲಿ >> >> ಕುರುಪತಿಗೆ, ಕೈದಳಿಸಿ ತಮ್ಮಂ >> >> ದಿರು ಸಹಿತ ಧರ್ಮಜನು ಕಾಮ್ಯಕ ವನದೊಳಿರುತಿರಲು >> >> ಪರಮ ಋಷಿ ಶಾಂಡಿಲ್ಯ ಸ >> >> ತ್ಕರುಣದಲಿ ನಡೆತಂದನಲ್ಲಿಗೆ >> >> ವರ ತಪೋಧನರೊಡನೆ ಕಾಣಿಸಿಕೊಂಡನುಚಿತದಲಿ (೪) >> >> >> ಧರಣಿಪತಿ ಧರ್ಮಜನು ತಮ್ಮಂದಿರೊಡಗೂಡಿ ಶಾಂಡಿಲ್ಯ ಮುನಿಗೆ ವಂದಿಸಿ ಸತ್ಕರಿಸಿದನು. ಆಗ >> ಶಾಂಡಿಲ್ಯ ಮುನಿಯು "ನೃಪಸಿರಿ - ದರಿದ್ರತೆ ನಿಲದು, ಪರಿಹಾರವಹುದು" ಎಂದು ನುಡಿಯುತ್ತಾನೆ. >> ಆಗ ಧರ್ಮಜನು : >> >> >> "ದೇವಋಷಿಗಳು ನಿಮ್ಮ ಕರುಣಾ >> >> ಭಾವವೆಮ್ಮಲ್ಲಿರಲು ನಮಗಿ >> >> ನ್ನಾವ ಕಷ್ಟದ ಬಳಕೆದೋರದು. ನಿಮ್ಮ ದರುಶನದಿ >> >> ಪಾವನರು ನಾವಾದೆವೆಮಗಿ >> >> ನ್ನಾವ ಬುದ್ಧಿಯನರುಹುವಿರಿಯದ >> >> ನೀವು ಪೇಳೆನೆ", ನಸುನಗುತ ಮುನಿನಾಥನಿಂತೆಂದ (೬) >> >> >> "ದೇವಋಷಿಗಳು ನಿಮ್ಮ ಕರುಣೆ ನಮ್ಮ ಮೇಲಿರುವಾಗ ನಮಗೆ ಯಾವ ಕಷ್ಟವೂ ಬರದು. ನಿಮ್ಮ >> ದರ್ಶನದಿಂದ ನಾವು ಪಾವನರಾದೆವು ಸ್ವಾಮಿ, ನಮಗೆ ನೀವು ಯಾವ ವಿಷಯವನ್ನು ಅರುಹುವಿರಿ ಈಗ" >> ಎಂದು ಕೇಳಲು, ಶಾಂಡಿಲ್ಯ ಮುನಿಯು "ಯುಧಿಷ್ಟಿರ, ಭೂಮಿಯಲ್ಲಿ ಅಧಿಕವಾದ ಖ್ಯಾತಿಯನ್ನು >> ಹೊಂದಿರುವ ನಾಲ್ಕು ಅರಸುಗಳೆಂದರೆ - ನಳ, ರಾಮ, ಯುಧಿಷ್ಟಿರ ಹಾಗೂ ಹರಿಶ್ಚಂದ್ರ ಎಂದು >> ಜಗವೆಲ್ಲ ಸಾರುತ್ತಿದೆ. ಅವರಲ್ಲಿ ರಾಮನು ಅತ್ಯಂತ ಗುಣಶೀಲನಾಗಿದ್ದಾನೆ. ಒಮ್ಮೆ >> ನೆಲ್ಲು(ವ್ರಿಹಿಗ) ಹಾಗೂ ರಾಗಿ(ನರೆದಲೆಗ)ಗಳ ನಡುವೆ ಮೂಡಿದ್ದ ಜಗಳವನ್ನು ನಿವಾರಿಸಿ, >> ಸರಿಯಾದ ನ್ಯಾಯವನ್ನು ಹೇಳಿ ಶ್ರೀರಾಮನು ಧರ್ಮವನ್ನು ಪಾಲಿಸಿದ" ಎಂದು ತಿಳಿಸುತ್ತಾನೆ. >> >> >> ಆಗ ಧರ್ಮರಾಯನು ರಾಮಚರಿತೆಯನ್ನು ತಮಗೆ ಹೇಳಬೇಕೆಂದು ಶಾಂಡಿಲ್ಯ ಮುನಿಯನ್ನು ಬಿನ್ನವಿಸಲು, >> ಆ ಮುನಿಪನು ಅಲ್ಲಿದ್ದವರಿಗೆಲ್ಲ ರಾಮನ ಕಥೆಯನ್ನು ವಿಸ್ತರಿಸಿ ಹೆಳುತ್ತಾನೆ. : >> >> >> ಕೇಳು ಕುಂತೀ ತನಯ, ಗಂಗಾ ನದಿಯ ದಡದ ಉತ್ತರ ಭಾಗದಲ್ಲಿ ವಿಶಾಲವಾಗಿಯೂ, ವೈಭವಯುತವಾಗಿಯೂ >> ಇರುವ ಅಯೋಧ್ಯಾಪುರ. ಆ ಪುರದ ಅರಸ ದಶರಥ. ಅವನಿಗೆ ಕೌಸಲ್ಯೆ, ಕೈಕೆ ಹಾಗೂ ಸುಮಿತ್ರೆ - ಈ >> ಮೂವರು ಅರಸಿಯರು. >> >> ಆ ದಶರಥ ಹಾಗೂ ಕೌಸಲ್ಯೆಯರಿಗೆ ಜನಿಸಿದ ಗುಣನಿಧಿ ಆ ರಾಮ. ಅವನು ತಾಟಕಿಯೆಂಬ >> ರಾಕ್ಷಸಿಯನ್ನು ಸಂಹರಿಸಿ, ಮಾರೀಚ-ಸುಬಾಹುಗಳನ್ನು ಕೊಂದು, ವಿಶ್ವಾಮಿತ್ರ ಮುನಿಯು >> ನಡೆಸುತ್ತಿದ್ದ ಮಖ(ಯಾಗ)ವನ್ನು ಯಾವುದೇ ವಿಘ್ನ ಬಾರದಂತೆ ರಕ್ಷಿಸಿದನು. ಆ ನಂತರದಲ್ಲಿ >> ರಾಮನು ಗೌತಮನ ಸತಿ ಅಹಲ್ಯೆಯ ಶಾಪವನ್ನು ನಿವಾರಿಸಿ, ತನ್ನ ತಮ್ಮ ಲಕ್ಷ್ಮಣ ಹಾಗೂ ಮುನಿ >> ವಿಶ್ವಾಮಿತ್ರನೊಡಗೂಡಿ ಮಿಥಿಲಾನಗರಕ್ಕೆ ಬಂದನು. >> >> ಮುಂದೆ, ಅಲ್ಲಿನ ಅರಸನಾದ ಜನಕನ ಮಗಳು ಸೀತೆಯ ಸ್ವಯಂವರದಲ್ಲಿ ಶಿವಧನುಸ್ಸನ್ನು >> ಹೆದೆಯೇರಿಸಿ ಮುರಿದು, ಶುಭಮುಹೂರ್ತದಲ್ಲಿ ರಾಮನು ಸೀತೆಯನ್ನು ವರಿಸಿದನು. ಆ ನಂತರದಲ್ಲಿ >> ರಾಮನು ತನ್ನವರೊಡಗೂಡಿ ಅಯೋಧ್ಯೆಗೆ ಹೊರಟುಬಂದನು. >> >> >> ಕೇಳು ಧರ್ಮಜ, ರಾಮನಿಗೆ ಕೂಡ ನಿಮ್ಮಂತೆಯೇ ವನವಾಸ ಮಾಡಬೇಕಾಗಿ ಬಂತು. ಪಿತೃವಚನ >> ಪಾಲನೆಗೆಂದು ರಾಮನು ತನ್ನ ಮಡದಿ ಸೀತೆ ಹಾಗೂ ಲಕ್ಷ್ಮಣರೊಂದಿಗೆ ಘೋರವಾದ ಕಾನನದಲ್ಲಿ >> ಇರಬೇಕಾಯಿತು. >> >> "ಭರತನನು ಸಂತೈಸಿ, ಕಾಕಾಸುರನ ಪ್ರಾಣವ ಕಾಯ್ದು, ದಾನವ ತರುಣಿ ನಾಸಿಕವರಿದು, ಮಾಯಾಮೃಗವ >> ಸಂಹರಿಸಿ, ಸರಸಿಜಾಕ್ಷಿಯನಗಲಿ, ಮಾರ್ಗಾಂತರದಿ ಕಂಡ ಜಟಾಯುವನು - ಮನ ಮರುಗಿ ವೃತ್ತಾಂತವನು >> ತಿಳಿದವನಲ್ಲಿ ಗತಗೊಳಿಸಿ..(೧೩)" >> >> >> ಸೀತೆಯನ್ನು ಹುಡುಕಿ ಹೊರಟ ರಾಮಲಕ್ಷ್ಮಣರಿಗೆ ಸಾವಿನ ಅಂಚಿನಲ್ಲಿದ್ದ ಜಟಾಯುವು >> ಕಾಣಿಸುತ್ತಾನೆ. ಅವನಿಂದ ರಾಮನು ನಡೆದ ವೃತ್ತಾಂತವನ್ನು(ಸೀತಾ ಅಪಹರಣ, ಹಾಗೂ ರಾವಣನನ್ನು >> ಎದುರಿಸಿದ ಜಟಾಯುವನ್ನು ರಾವಣನು ಗಾಯಗೊಳಿಸಿದ್ದು) ಕೇಳಿ ತಿಳಿದುಕೊಳ್ಳುತ್ತಾನೆ. ಇಷ್ಟನ್ನೂ >> ತಿಳಿಸುವ ವೇಳೆಗೆ ಜಟಾಯುವು ಮೃತನಾಗುತ್ತಾನೆ. ಅವನ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ >> ನಂತರ ರಾಮಲಕ್ಷ್ಮಣರು ಸೀತೆಯನ್ನು ಹುಡುಕುತ್ತ ಹೊರಡುತ್ತಾರೆ. >> >> ಮಾರ್ಗ ಮಧ್ಯದಲ್ಲಿ ಹನುಮನನ್ನು ಕಂಡು, ಕಿಷ್ಕಿಂದೆಯನ್ನು ತಲುಪಿ, ಅಲ್ಲಿ ವಾಲಿಯನ್ನು >> ಹರಿಸಿ, ಸುಗ್ರೀವನು ಕಳುಹಿಸಿದ ವಾನರ ಸೈನ್ಯವನ್ನು ಒಡಗೊಂಡು ರಾಮನು ದಕ್ಷಿಣಕ್ಕೆ ಹೊರಟನು. >> ಸಮುದ್ರವನ್ನು ದಾಟಲು ಸೇತುಬಂಧವನ್ನು ನಿರ್ಮಿಸಿ, ಲಂಕೆಯನ್ನು ತಲುಪಿ, ರಾವಣ ಕುಂಭಕರ್ಣಾದಿ >> ದಾನವ ವೀರರನ್ನು ಕೊಂದು, ರಾಮನು ನಂತರದಲ್ಲಿ ವಿಭೀಷಣನಿಗೆ ಪಟ್ಟವನ್ನು ಕಟ್ಟಿದನು. >> >> >> ಆ ನಂತರ ರಾಮನು ಸೀತೆಯನ್ನು ಕೈಕೊಂಡು, ತಮ್ಮೊಡನೆ ಅಯೋಧ್ಯೆಗೆ ಬರಲು ವಿಭೀಷಣನನ್ನೂ >> ಅಹ್ವಾನಿಸುತ್ತಾನೆ. ಅಗ ಅಗಣಿತ ದಾನವ ಸೇನೆಯು ಅವರೊಡನೆ ಅಯೋಧ್ಯೆಗೆ ಹೊರಡಲು ಸಿದ್ಧವಾಯ್ತು. >> >> ವಿಭೀಷಣನು ತನಗೆಂದು ಅರ್ಪಿಸಿದ ಕುಬೇರನ ರಥದಲ್ಲಿ ರಾಮನು ಸೀತೆ ಹಾಗೂ ಲಕ್ಷ್ಮಣರೊಡನೆ >> ಕುಳಿತಿರಲು, ಅವರೊಡನೆ ಹನುಮ, ಜಾಂಬವಂತ, ವಿಭೀಷಣಾದಿಯಾಗಿ, ದಾನವ ಹಾಗೂ ವಾನರ ಸೈನ್ಯವೂ >> ಅಯೋಧ್ಯೆಯೆಡೆಗೆ ಹೊರಡುತ್ತಾರೆ. >> >> >> ಮಾರ್ಗ ಮಧ್ಯದಲ್ಲಿ ಇವರೆಲ್ಲ ವಾಲ್ಮೀಕಿ, ಮುಚುಕುಂದ ಮುಂತಾದ ಮುನಿಗಳ ಆಶ್ರಮಗಳನ್ನು >> ಸಂದರ್ಶಿಸಿದರು. ನಂತರ ಮುಂದುವರೆದು ಇವರೆಲ್ಲ ಮಾಹವನವೊಂದರಲ್ಲಿ ಬೀಡುಬಿಟ್ಟಿರಲು ಹಲವಾರು >> ಮುನಿವರರು ಬಂದು ರಾಮನನ್ನು ಕಂಡರು. >> >> >> ಕೌಶಿಕನು, ಜಮದಗ್ನಿ, ಜನ್ಹು, ಪರಾಶರನು, ಜಾಬಾಲಿ, ಭೃಗು, ದೂರ್ವಾಸ, ಗೌತಮನಾದಿಯಾದ >> ಸಮಸ್ತ ಮುನಿವರರು ಭಾಸುರದ ತೇಜದಲಿ ತಮ್ಮ ನಿವಾಸವನು ಹೊರವಂಟು ಬಂದರು, ದಾಶರಥಿಯನು ಕಂಡು >> ಹರಸಿದರಕ್ಷತೆಯ ತಳಿದು (೨೩) >> >> >> ಅವರೆಲ್ಲ ರಾಮನನ್ನು ಮನಸಾರೆ ಪ್ರಾರ್ಥಿಸಿ, ಹೊಗಳಿ, ವಿವಿಧ ಬಗೆಯಲ್ಲಿ ಸತ್ಕರಿಸಿದರು. >> >> >> ಅಲ್ಲಿ ನೆರೆದ ಮಹಾಮುನೀಶ್ವರ >> >> ರೆಲ್ಲ ತರಿಸಿದರಖಿಳ ವಸ್ತುವ - >> >> ಬೆಲ್ಲ, ಸಕ್ಕರೆ, ಜೇನುತುಪ್ಪ, ರಸಾಯನಂಗಳಲಿ >> >> ಭುಲ್ಲವಿಸಿ ರಚಿಸಿದ ಸುಭಕ್ಷಗ >> >> ಳೆಲ್ಲವನು ತುಂಬಿದರು ಹೆಡಗೆಗ >> >> ಳಲ್ಲಿ. ಜೋಡಿಸಿ, ಹೊರಿಸಿ ತಂದರು ರಾಮನೋಲಗಕೆ (೨೮) >> >> >> ರಾಮನೊಡನೆ ಬಂದವರೆಲ್ಲ ಆ ರುಚಿರುಚಿಯಾದ ಭೋಜ್ಯಗಳೆಲ್ಲವನ್ನು ಮನಸಾರೆ ಸವಿದರು. ಅವರೆಲ್ಲ >> ಮುನಿವರರನ್ನು ಆನಂದದಿಂದ ಕೊಂಡಾಡಿದರು. ಆಗ ರಾಮನು ಹನುಮನನ್ನು ಕರೆದು ಆ ಭಕ್ಷ್ಯಗಳ >> ರುಚಿಯನ್ನು ಕುರಿತು ಪ್ರಶ್ನಿಸಿದನು - >> >> >> ಅನಿಲಸುತ ಬಾರೆಂದು ರಘುನಂ >> >> ದನನು "ಕರುಣದೊಳಿವರ ರುಚಿಯೆಂ >> >> ತೆನಲು", ಕರಗಳ ಮುಗಿದು ಬಿನ್ನೈಸಿದನು ರಘುಪತಿಗೆ >> >> ’ಇನಕುಲಾನ್ವಯತಿಲಕ ಚಿತ್ತೈ >> >> ಸೆನಗೆ ಸವಿಯಹುದಿನ್ನು ಧಾನ್ಯದ >> >> ತನುವನೀಕ್ಷಿಸಬೇಕು, ದೇವರು ತರಿಸಿ ನೀವೆಂದ’ (೨೯) >> >> >> ಆಗ ಹನುಮನು ’ಭಕ್ಷ್ಯಗಳೇನೋ ಬಹಳ ರುಚಿಯಾಗಿವೆ. ಆದರೆ ಈ ಭಕ್ಷ್ಯಗಳನ್ನು ಯಾವ ಯಾವ >> ಧಾನ್ಯಗಳಿಂದ ತಯಾರಿಸಿದ್ದಾರೋ ಆ ಧಾನ್ಯಗಳನ್ನೆಲ್ಲ ಒಮ್ಮೆ ತಾನು ನೋಡಬೇಕು. ದಯವಿಟ್ಟು ತಾವು >> ಆ ಧಾನ್ಯಗಳನ್ನು ತರಿಸಿ’ ಎಂದು ರಾಮನನ್ನು ಕೇಳುತ್ತಾನೆ. >> >> ಹಾಗೇ ಆಗಲಿ ಎಂದು ರಾಮನು ಗೌತಮ ಮುನಿಯನ್ನು ’ಧಾನ್ಯಗಳನ್ನು ತರಿಸಬೇಕು’ ಎಂದು ವಿನಯದಿಂದ >> ಕೇಳಿಕೊಳ್ಳುತ್ತಾನೆ. ಆಗ ಗೌತಮ ಮುನಿಯ ಶಿಷ್ಯರು ಎಲ್ಲ ತರದ ಧಾನ್ಯಗಳನ್ನೂ ಹೊತ್ತು ತಂದು >> ಅಲ್ಲಿದ್ದವರೆಲ್ಲರ ಮುಂದಿಡುತ್ತಾರೆ. >> >> >> "ನರೆದಲೆಗನಿದು, ನೆಲ್ಲು, ಹಾರಕ, ಬರಗು, ಜೋಳವು, ಕಂಬು, ಸಾಮೆಯು, ಉರುತರದ ನವಣೆಯಿದು >> ನವಧಾನ್ಯ"ವೆಂದೆನಲು, ಮೆರೆವ ರಾಶಿಯ ಕಂಡು - ’ಇದರೊಳು ಪರಮಸಾರದ ಹೃದಯನಾರೆಂದರಸಿ’ >> ಕೇಳಿದನಲ್ಲಿರುತಿಹ ಮಹಾಮುನೀಶ್ವರರ (೩೨) >> >> (೧. ನರೆದಲೆಗ: ರಾಗಿ, ೨. ನೆಲ್ಲು: ಭತ್ತ. ೩. ಹಾರಕ, ಬರಗು, ಕಂಬು, ಸಾಮೆ, ನವಣೆ - >> ಬಗೆಬಗೆಯ ಇತರ ಧಾನ್ಯಗಳು). >> >> ಎಲ್ಲ ಧಾನ್ಯಗಳ ಹೆಸರುಗಳನ್ನೂ ಒಂದೊಂದಾಗಿ ಹೇಳುತ್ತಿರಲು, ರಾಮನು - "ಈ ಧಾನ್ಯಗಳಲ್ಲಿ >> ಉತ್ತಮವಾದದ್ದು ಯಾವುದು?" ಎಂದು ಅಲ್ಲಿದ್ದ ಮುನಿಗಳನ್ನು ಕೇಳುತ್ತಾನೆ. ಆಗ >> >> >> ಕೆಲರು ಗೋದಿಯ, ಸಾಮೆಯನು ಕೆಲ >> >> ಕೆಲರು ನವಣೆಯ, ಕಂಬು, ಜೋಳವ >> >> ಕೆಲರು ಹಾರಕವೆಂದು, ಕೆಲವರು ನೆಲ್ಲನತಿಶಯವ, >> >> ಕೆಲರು ನರೆದಲಗನನು ಪತಿಕರಿ >> >> ಸಲದ ನೋಡಿದ ನೃಪತಿ"ಯದರೊಳು >> >> ಹಲವು ಮತವೇಕೊಂದನೇ ಪೇಳೆನಲು", ಗೌತಮನು: (೩೩) >> >> >> (ಅಲ್ಲಿದ್ದ ಕೆಲವರು ಗೋಧಿಯನ್ನೂ, ಕೆಲವರು ಸಾಮೆಯನ್ನೂ, ಕೆಲವರು ಇತರ ಧಾನ್ಯಗಳನ್ನೂ, >> ಕೆಲವರು ಭತ್ತವನ್ನೂ, ಹಾಗೇ ಇನ್ನೂ ಕೆಲವರು ರಾಗಿಯನ್ನೂ ಪತಿಕರಿಸಿ(ಪತಿಕರಿಸು: >> ಅಂಗೀಕರಿಸು/ಹೊಗಳು) ನುಡಿದರು. ಆಗ ರಾಮನು "ಹೀಗೆಹಲವು ಅಭಿಪ್ರಾಯಗಳೇಕೆ, ಯಾವುದಾದರೂ >> ಒಂದನ್ನು ಒಪ್ಪಿ ಹೇಳಿ" ಎನ್ನಲು, ಗೌತಮನು..) >> >> >> ದಾಶರಥಿ ಚಿತ್ತೈಸು ನಮ್ಮಯ >> >> ದೇಶಕತಿಶಯ ನರೆದಲೆಗನೇ >> >> ವಾಸಿಯುಳ್ಳವನೀತ ಮಿಕ್ಕಿನ ಧಾನ್ಯವೇಕೆನಲು >> >> "ಲೇಸನಾಡಿದೆ ಮುನಿಪ ಗೌತಮ >> >> ದೋಷರಹಿತನು ಪಕ್ಷಪಾತವ >> >> ನೀಸು ಪರಿಯಲಿ ಮಾಡುವರೆ ಶಿವ"ಯೆಂದನಾ ವ್ರಿಹಿಗ (೩೪) >> >> >> "ಎಲ್ಲ ಧರ್ಮದ ಸಾರವನು ನೀವ್ >> >> ಬಲ್ಲಿರರಿಯಿರೆ ಎಲ್ಲರನು ನೀ >> >> ವಿಲ್ಲಿ ನುಡಿವ ಉಪೇಕ್ಷೆಯುಂಟೇ! ಸಾಕದಂತಿರಲಿ, >> >> ನೆಲ್ಲು ನಾನಿರೆ, ಗೋದಿ ಮೊದಲಾ >> >> ದೆಲ್ಲ ಧಾನ್ಯಗಳಿರಲು ಇದರಲಿ >> >> ಬಲ್ಲಿದನು ನರೆದಲೆಗನೆಂಬುದಿದಾವ ಮತ?"ವೆಂದ (೩೫) >> >> >> ಗೌತಮನು "ಕೇಳು ದಾಶರಥಿ, ನಮ್ಮ ದೇಶಕ್ಕೆ ಅತಿಶಯವಾದ ಈ ನರೆದಲೆಗನೇ(ರಾಗಿ) >> ಮಿಕ್ಕೆಲ್ಲವುಗಳಿಗಿಂತ ಉತ್ತಮವಾದ ಧಾನ್ಯ. ಏಕೆಂದರೆ.." ಎಂದು ನುಡಿಯುತ್ತಿರುವಷ್ಟರಲ್ಲೇ >> ಅಲ್ಲಿದ್ದ ನೆಲ್ಲಿಗೆ(ವ್ರಿಹಿಗ: ನೆಲ್ಲು) ರೋಷವುಕ್ಕುತ್ತದೆ. >> >> ಕೂಡಲೆ ನೆಲ್ಲು ಸಿಡಿದೆದ್ದು ಗೌತಮನನ್ನು ಕುರಿತು "ಆಹಾ! ಲೇಸನಾಡಿದಿರಿ ಗೌತಮರೇ, >> ದೋಷರಹಿತರಾದ ನೀವೂ ಹೀಗೆ ಪಕ್ಷಪಾತದಿಂದ ನುಡಿಯಬಹುದೇ. ಶಿವಶಿವಾ! >> >> ಎಲ್ಲ ಧರ್ಮಗಳ ಸಾರವನ್ನೂ ಅರಿತ ನೀವು ಹೀಗೆ ಉಪೇಕ್ಷಿಸಿ ನುಡಿಯುವುದು ಸರಿಯೇ? ಅಲ್ಲ, >> ನೆಲ್ಲು ನಾನಿರುವಾಗ, ಗೋಧಿ ಮುಂತಾದ ಎಲ್ಲ ಧಾನ್ಯಗಳೂ ಇಲ್ಲಿರುವಾಗ ಇವರೆಲ್ಲರಲ್ಲಿ ಈ >> ರಾಗಿಯೇ ಶ್ರೇಷ್ಠ ಎಂದು ಹೇಳುವುದು ಎಷ್ಟು ಸರಿ. ಇದಾವ ನ್ಯಾಯ?" ಎಂದು ಗೌತಮನನ್ನು >> ಪ್ರಶ್ನಿಸುತ್ತದೆ ನೆಲ್ಲು. >> >> ಸಮೀರ ( ಕನ್ನಡ ಭಾಷಾ ಶಿಕ್ಷಕಿ >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to kannadastf+unsubscr...@googlegroups.com. >> To post to this group, send email to kannadastf@googlegroups.com. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.