On Tue, 18 Sep 2018, 20:49 mahendra ks, <[email protected]> wrote:
> ಗೌರಿ ಹಬ್ಬಕ್ಕೆ ಮಗಳು ಅಳಿಯ ಬರುತ್ತಾರೆಂಬ ಸಂಭ್ರಮದಲ್ಲೇ, ಇರುವ ಪುಟ್ಟ ಮನೆಯನ್ನೇ > ಅಚ್ಚುಕಟ್ಟಾಗಿ ಇಟ್ಟುಕೊಳ್ಳುವ ಅಮ್ಮ. ಮುಂಚೆಯೇ ಬೇಸಾಯ ಸರಿಯಾಗಿ ಲಾಭ ಕೊಡದ, ಮನೆಯಲ್ಲಿ > ದುಡ್ಡಿಲ್ಲದ ಪರಿಸ್ಥಿತಿ. ಆದರೂ ಮಗಳು ಬಂದಾಗ ಕಡೆಯಲ್ಲಿ ಗಡಿಬಿಡಿಯಾಗಬಾರದು ಅಂತ ಅವರಿಗೆ > ಊಟ ತಿಂಡಿಗೆ ಏನೇನು ಸಾಮಾನು ಬೇಕು ಅಂತ ಮುಂಚೆಯೇ ಯೋಚಿಸಿ ಶೆಟ್ಟರಂಗಡಿಯಲ್ಲಿ ಸಾಲ ಹೇಳಿ > ದಿನಸಿ ತರುವ ಅಪ್ಪ. ಮನೆಯವರಿಗೆಲ್ಲ ಮಗಳು ಅಳಿಯ ಬರುವ ಸಂಭ್ರಮ. ಬಸ್ಸಿನಿಂದ ಇಳಿದು > ಬರುವವರಿಗಾಗಿ ಸಮಯ ನೋಡಿಕೊಂಡು ಬಸ್ ನಿಲ್ದಾಣದಲ್ಲೇ ಕಾಯುವ ಅಪ್ಪ. ಬಸ್ಸಿನಿಂದ ನಗುನಗುತ್ತ > ಇಳಿಯುವ ಮಗಳನ್ನು ಸಂತೋಷದಿಂದ ಬರಮಾಡಿಕೊಳ್ಳುವ ಅಪ್ಪನ ಕಣ್ಣಲ್ಲಿ ಆನಂದಭಾಷ್ಪ. ಅಳಿಯನ > ಯೋಗಕ್ಷೇಮವನ್ನು ವಿಚಾರಿಸಿಕೊಳ್ಳುತ್ತಲೇ ಮೊಮ್ಮಗನನ್ನೆತ್ತಿ ಹೆಗಲ ಮೇಲೆ ಕುಳ್ಳರಿಸಿಕೊಂಡು > ಮನೆಯತ್ತ ದಾಪುಗಾಲು ಹಾಕುವ ಅಪ್ಪ. ಎಲ್ಲರನ್ನು ತಲೆಬಾಗಿಲಿನಿಂದಲೇ ಎದುರು ನೋಡುತ್ತ ಅವರು > ಕಂಡೊಡನೆ ಖುಶಿಯಿಂದ ಬರಮಾಡಿಕೊಂಡು ಕಾಲಿಗೆ ನೀರು ಕೊಡುವ ಅಮ್ಮ. ಅದೆಷ್ಟೋ ದಿನಗಳಾದ ಮೇಲೂ > ತನಗೆ ಅನ್ನ ಹಾಕುತ್ತಿದ್ದವಳನ್ನು ನೆನೆಸಿಕೊಂಡು ಬಾಲ ಅಳ್ಳಾಡಿಸುತ್ತ ಅವಳ ಕಾಲ ನೆಕ್ಕುವ > ಮುದ್ದಿನ ನಾಯಿಮರಿ ರಾಜ. ಮಿಯಾಂವ್ ಅಂತ ಒಳಗಿಂದಲೇ ಕಣ್ಣುಮಿಟುಕಿಸುವ ಬೆಕ್ಕಿನಮರಿ. ಸದ್ದು > ಕೇಳಿದೊಡನೆ ಅಲ್ಲಿ ಒಟ್ಟುಸೇರಿ ಸುಖದುಃಖ ಹಂಚಿಕೊಳ್ಳುವ ನೆರೆಹೊರೆಯವರು. ನಗುನಗುತ್ತಲೇ > ಎಲ್ಲರನ್ನು ಮಾತನಾಡಿಸುತ್ತ ತಂದ ಹಣ್ಣು ಸಿಹಿತಿನಿಸುಗಳ ಎಲ್ಲರಿಗೂ ಹಂಚುವ ಆ ಸಂತಸದ > ಕ್ಷಣಗಳು. ಹೆಚ್ಚೂ ಆಗದಂತೆ ಕಡಿಮೆಯೂ ಆಗದಂತೆ ಗೌರವದಿಂದ ಅಳಿಯನ ಮಾತನಾಡಿಸುವ ಅಪ್ಪ ಅಮ್ಮ. > ಅವರಿಗೆ ಬೇಸರವಾಗದಂತೆ ಚುಟುಕಾಗಿ ಉತ್ತರಿಸುವ ಅಳಿಯ. ಅಡುಗೆ ಮನೆಯಿಂದ ಬರುವ ಪಾಯಸದ ಘಮ, > ಬಾಳೆಯೆಲೆ ಕೊಯ್ದು ತರಲು ಹಿತ್ತಲಿಗೆ ಕುಡುಗೋಲು ಹಿಡಿದು ಓಡುವ ಅಪ್ಪ. ಒಟ್ಟಿಗೆ ಕೂತು > ಮಾತನಾಡುತ್ತ ಸವಿಯುವ ಭೋಜನ. ನಂತರದ ಎಲೆ ಅಡಿಕೆ ಜಗಿಯುತ್ತ ಮಾತುಕತೆ. ವಿಚಾರಗಳು ಒಂದಾ, > ಎರಡಾ? ದೂರದ ನಗರದ ಟ್ರಾಫಿಕ್ಕು, ಬೆಲೆ ಏರಿಕೆ, ಸರಕಾರ, ಹಗರಣಗಳು, ಹಳ್ಳಿ, ಬಾರದ ಮಳೆ, > ಹೆಚ್ಚಾದ ಕೀಟಗಳು, ಮಕಾಡೆ ಮಲಗಿದ ಬೆಳೆ, ಕಾಟ ಕೊಡುವ ಮುಳ್ಳುಹಂದಿ, ಪಕ್ಕದ ಕಾಡಿನಲ್ಲಿ > ಊರಿನವನನ್ನು ಹಿಡಿದು ಹಾಕಿದ ಕಿರುಬ, ಕರು ಹಾಕಿದ ಎಮ್ಮೆ, ಬತ್ತಿ ಹೋದ ಕೆರೆ, ಒಣಗಿದ > ಹುಲ್ಲು, ಊರಿನೊಳಕ್ಕೇ ಬಂದ ಆನೆಗಳ ಹಿಂಡು..........ಅದೆಷ್ಟು ವಿಚಾರ. ಅಳಿಯನೊಡನೆ ಮಾವ > ಮಾತಿಗಿಳಿದಿದ್ದರೆ, ಅಡುಗೆ ಮನೆಯೊಳಗೆ ಅವ್ವನ ಸೆರಗು ಹಿಡಿದು ಅವಳಿಗೆ ಮಾತ್ರ ಕೇಳಿಸುವ > ದನಿಯಲ್ಲಿ ಅದೇನೇನೋ ಪಿಸುಗುಟ್ಟುವ ಮಗಳು. ಮಧ್ಯೆ ಮಧ್ಯೆ ಸಮಯಕ್ಕೆ ಸರಿಯಾಗಿ ಕಾಫಿ, ಚಹಾ.... > ಅವರು ಬಂದು ಇದ್ದ ಎರಡು ದಿನ ಕೇವಲ ಎರಡು ನಿಮಿಷದಂತೆಯೇ ಕಳೆದುಹೋದ ಭಾವ. ಹಬ್ಬ ಮುಗಿಸಿ > ಹೊರಟ ಮಗಳು ಅಳಿಯನನ್ನು ಇನ್ನೊಂದೆರಡು ದಿನ ಇದ್ದು ಹೋಗುವಂತೆ ಒತ್ತಾಯಿಸುವ ಅಪ್ಪ. ಆದರೂ > ಹೊರಡಲೇಬೇಕೆಂಬ ಹಠ ಹಿಡಿದವರ ಒತ್ತಾಯಕ್ಕೆ ಮಣಿದು ಮಗಳಿಗೆ ಅರಿಶಿನ ಕುಂಕುಮ ಕೊಡಲು ಅವ್ವ > ತಯಾರು. ಯಾರಿಗೂ ಗೊತ್ತಾಗದಂತೆ ಪಕ್ಕದ ಮನೆಯ ಹಿರಿಯರ ಬಳಿ ಓಡಿ ಸಾಲ ಮಾಡಿ ಸಾವಿರ ರೂಪಾಯಿಯ > ನೋಟನ್ನು ಮಡಚಿ ತಂದು ಹೆಂಡತಿಯ ಕೈಗಿಡುವ ಅಪ್ಪ. ಕಣ್ಣಲ್ಲಿ ನೀರು ತುಂಬಿಕೊಳ್ಳುತ್ತಲೇ ಚಾಪೆ > ಮೇಲೆ ಕುಳಿತ ಮಗಳ ಮಡಿಲಿಗೆ ಅಕ್ಕಿ ಹಾಕುತ್ತ ಅರಿಶಿನ ಕುಂಕುಮ ಕೊಟ್ಟು, ಸಾವಿರ ರೂಪಾಯಿಯ > ನೋಟನ್ನು ಕೈಗಿಡುತ್ತಾಳೆ ಅವ್ವ. "ಹೇ, ಇದ್ಯಾಕವ್ವ. ಬ್ಯಾಡ ಮಡಿಕ್ಕೋ" ಅಂತ ಗದ್ಗದಿತಳಾಗಿ > ಹೇಳುವ ಮಗಳಿಗೆ "ಅಯ್ಯೋ, ಮಡಿಕವ್ವ. ಕಡೇ ಘಳಿಗೇಲಿ ನಿಂಗೆ ಒಂದು ಸೀರೆ ತಕಂಡು > ಬರಕ್ಕಾಗನಿಲ್ಲ, ಸಿಬ್ಬರಿ ಬ್ಯಾಡ ನನ್ನವ್ವ, ಒಂದು ಸೀರೇನೋ, ನಿಮ್ ಮನೆಯವುರ್ಗೆ ಒಂದು > ಪಂಚೆನೋ, ಮಗೀಗೆ ಒಂದ್ ಬಟ್ಟೆನೋ ತಕ್ಕೋ. ಬ್ಯಾಡ ಅನ್ಬೇಡ ಕಣ್ ನನ್ ತಾಯಿ" ಅಂತ ಗೋಗರೆಯುವ > ಅವ್ವ. ಅವರ ಒತ್ತಾಯಕ್ಕೆ ಮಣಿದು ಕಣ್ಣಂಚಿನಲ್ಲಿ ತೊಟ್ಟಿಕ್ಕಿದ ನೀರನ್ನು > ಒರೆಸಿಕೊಳ್ಳುತ್ತಲೇ ಆ ನೋಟನ್ನು ಮಡಚಿ ಕೈನಲ್ಲಿಟ್ಟುಕೊಳ್ಳುತ್ತಾಳೆ. ಬೀದಿಯಲ್ಲಿ ಸದ್ದಾಗುವ > ಬಸ್ಸಿನ ಹಾರ್ನ್ ಕೇಳಿದೊಡನೇ ಕೂಗು ಹಾಕುವ ಪಕ್ಕದ ಮನೆಯವರು. "ಉದಯರಂಗಾ ಬಂತು ಕಣವ್ವೋ, ಬಸ್ > ಸ್ಟ್ಯಾಂಡ್ ತಮಕೆ ಓಡಿ. ಇಲ್ದಿದ್ರೆ ಮುಂದಿನ ಬಸ್ಸಿನಾಗೆ ಸೀಟ್ ಸಿಕ್ಕದಿಲ್ಲ" ಅನ್ನುವ > ಸದ್ದು ಕೇಳಿದೊಡನೆ. ಮೊಮ್ಮಗನ ಕೆನ್ನೆಗೆ ಮುತ್ತಿಕ್ಕುತ್ತ ಅವನನ್ನು ಸೊಂಟದ ಮೇಲೆ ಹೊತ್ತು > ತರುವ ಅಮ್ಮ. "ಕೊಡೀ ಮಾವ, ನಾನು ಹಿಡ್ಕೋತೀನಿ" ಅನ್ನುವ ಅಳಿಯನ ಮಾತನ್ನು ಕೇಳಿಸಿಕೊಳ್ಳದೆ > ಅವರ ಲಗ್ಗೇಜುಗಳಲ್ಲಿ ಭಾರವಾದದ್ದೊಂದನ್ನು ಹಿಡಿದು ಬಸ್ ಸ್ಟ್ಯಾಂಡಿನತ್ತ ಓಡುವ ಅಪ್ಪ..... > ಬೀದಿಗಳಲ್ಲಿ ಎಲ್ಲರೂ ಕೈಬೀಸುತ್ತ ಬೀಳ್ಕೊಡುತ್ತಿದ್ದರೆ ಎಲ್ಲರಿಗೂ ನಗುನಗುತ್ತಲೇ > ಕೈಬೀಸುತ್ತ ಲಗುಬಗೆಯಲ್ಲಿ ಬಸ್ಸಿನತ್ತ ಓಡುವ ಮಗಳು. ಟಾರು ಹಾಕದ ಮಣ್ಣು ರಸ್ತೆಯ ಮೇಲೆ > ಬುಗ್ಗನೆ ಧೂಳೆಬ್ಬಿಸಿಕೊಂಡು ಬಂದು ನಿಲ್ಲುವ ಉದಯರಂಗ ಬಸ್ಸು. ತುಂಬಿದ್ದ ಬಸ್ಸಿಗೆ > ಹತ್ತುವಾಗಲೂ "ಅಪ್ಪಂಗೆ ಬೇಜಾರ್ ಮಾಡ್ಬೇಡ ಕಣವ್ವೋ, ಉಸಾರು. ಎಲ್ಲರ್ನೂ ಚೆಂದಗೆ ನೋಡ್ಕೋ" > ಅನ್ನುತ್ತ ಕಣ್ತುಂಬಿಕೊಳ್ಳುತ್ತ, ಕೈಲಿ ಮಡಚಿಟ್ಟಿದ್ದ ಅದೇ ಸಾವಿರ ರೂಪಾಯಿಯ ನೋಟನ್ನು > ಯಾರಿಗೂ ಗೊತ್ತಾಗದಂತೆ ಮತ್ತೆ ಅಪ್ಪನ ಅಂಗಿಯ ಜೇಬಿಗೆ ತುರುಕಿ ಕೈಬೀಸುವ ಮಗಳು. > 'ರೈ....ರೈಟ್" ಅನ್ನುತ್ತ ಶಿಳ್ಳೆ ಹಾಕಿದೊಡನೆ ತುಂಬುಬಸುರಿಯಂತೆ ನಿಧಾನವಾಗಿ ಮುನ್ನುಗ್ಗುವ > ಕಿಕ್ಕಿರಿದು ತುಂಬಿದ ಉದಯರಂಗ ಬಸ್ಸು. ಬೀದಿಯ ತಿರುವು ಕಾಣುವವರೆಗೂ ಹೋಗುವ ಬಸ್ಸನ್ನೇ > ನೋಡುತ್ತ ಕಣ್ಣೊರೆಸಿಕೊಳ್ಳುತ್ತ ಕೈಬೀಸುವ ಅಪ್ಪ ಅಮ್ಮ. ದು:ಖ ಹೇಳಿಕೊಳ್ಳಲಾಗದೇ ಸುಮ್ಮನೆ > ಅದೇ ದಿಕ್ಕಿನತ್ತ ಮೂಕವಾಗಿ ನೋಡುವ ನಾಯಿಮರಿ ರಾಜ. > ಎಲ್ಲವನ್ನೂ ಕೇವಲ ಹಣದಲ್ಲೇ ಅಳೆಯಲಾಗುವುದಿಲ್ಲ. ಪ್ರೀತಿಯನ್ನೇ ಉಸಿರಾಗಿಸಿಕೊಂಡ > ಭಾವುಕರಿಗೆ ಹಣದ ಹಂಗಿರುವುದಿಲ್ಲ. ಅಲ್ಲಿ ಕೇವಲ ಭಾವನೆಗಳಿಗೆ ಬೆಲೆಯಿರುತ್ತದೆ ಅಷ್ಟೇ. > > ಕೃಪೆ > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - > https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > - > http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು - > http://karnatakaeducation.org.in/KOER/en/index.php/Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
