🙏💐 *ಲಾಲ ಬಹದ್ದೂರ ಶಾಸ್ತ್ರೀ ರವರ ಜನ್ಮ ದಿನಾಚರಣೆಯ ಶುಭಾಶಯಗಳು*💐🙏

*MAHANTAGOUD T PATIL SWCM KSPSTA*

*ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ,*
*1965, ಆಗಸ್ಟ್ 15ರಂದು ಕೆಂಪುಕೋಟೆಯ* *ಮೇಲೆ ನಿಂತು ಪ್ರಧಾನಿ ಲಾಲ್‌ಬಹಾದ್ದೂರ್
ಶಾಸ್ತ್ರಿಯವರು ಗುಡುಗಿದಾಗ ಅನುಮಾನಪಟ್ಟವರೇ ಹೆಚ್ಚು.* *ಜತೆಗೆ ದುರ್ಬಲ ಕಾಯದ ಈ
ವ್ಯಕ್ತಿಯಿಂದ ಏನು ತಾನೇ ಸಾಧ್ಯ ಎಂಬ ಅಸಡ್ಡೆ.*
*ಇದಾಗಿ ಎರಡು ವಾರಗಳಾಗಿವೆಯಷ್ಟೆ.*
*ಅವತ್ತು 1965, ಆಗಸ್ಟ್ 31ನೇ ತಾರೀಖು. ಹೊತ್ತಿಗೆ ಮೊದಲೇ ಪ್ರಧಾನಿ ಲಾಲ್ ಬಹದ್ದೂರ್
ಶಾಸ್ತ್ರಿ ಮನೆಗೆ ಬಂದಿದ್ದರು. ಇನ್ನೇನು ಊಟಕ್ಕೆ ಕುಳಿತುಕೊಳ್ಳಬೇಕು. ಹತ್ತಿರಕ್ಕೆ ಬಂದ
ಆಪ್ತ ಕಾರ್ಯದರ್ಶಿಯೊಬ್ಬರು ಕಿವಿಯಲ್ಲೇನೋ ಪಿಸುಗುಟ್ಟಿದರು. ಹಸಿವನ್ನೇ ಮರೆತ
ಶಾಸ್ತ್ರಿಯವರು '10 ಜನಪಥ್‌' ರಸ್ತೆಯಲ್ಲಿದ್ದ ಪ್ರಧಾನಿ ಕಚೇರಿಯತ್ತ ನಡೆದೇ ಬಿಟ್ಟರು.*
*ಭೂಸೇನೆ, ವಾಯುಸೇನೆ ಮತ್ತು ನೌಕಾದಳದ ಮೂವರು ಮುಖ್ಯಸ್ಥರು ಪ್ರಧಾನಿಯ ಹಾದಿಯನ್ನೇ ಎದುರು
ನೋಡುತ್ತಿದ್ದರು. ಶಾಸ್ತ್ರಿಯವರು ಬಂದಿದ್ದೇ ತಡ ವೈಸ್ ಅಡ್ಮಿರಲ್ ಭಾಸ್ಕರ ಸದಾಶಿವ ಸೋಮನ್
ಮತ್ತು ಏರ್‌ಚೀಫ್ ಮಾರ್ಷಲ್ ಅರ್ಜನ್ ಸಿಂಗ್ ಪ್ರಧಾನಿ ಕೊಠಡಿಯನ್ನು ಸೇರಿದರು.*
*ಏನಿರಬಹುದು? ಎಂದು ಉಳಿದವರು ಯೋಚಿಸುವ ಮೊದಲೇ ಎಲ್ಲರೂ ಹೊರಬಂದರು.*
*ಕೇವಲ 5 ನಿಮಿಷಗಳಲ್ಲಿ ಪ್ರಧಾನಿ ಶಾಸ್ತ್ರಿಯವರು ಎದೆ ಝಲ್ಲೆನಿಸುವಂತಹ ನಿರ್ಧಾರ
ಕೈಗೊಂಡಿದ್ದರು.*
*ಪಾಕ್‌ನ ಮೇಲೆ ಯುದ್ಧ ಘೋಷಣೆಯಾಗಿತ್ತು.*
*ಜಮ್ಮುವಿನ ಛಾಂಬ್ ವಿಭಾಗದಲ್ಲಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿದ್ದ ಪಾಕಿಸ್ತಾನಿ ಪಡೆಗಳು
ಸುಮಾರು ನೂರಕ್ಕೂ ಅಧಿಕ ಯುದ್ಧ ಟ್ಯಾಂಕ್‌ಗಳ ಮೂಲಕ ಭಾರತದ ಮೇಲೆ ಮುಗಿಬಿದ್ದಿದ್ದವು.*
*ಇನ್ನು ಕೆಲವೇ ಗಂಟೆಗಳಲ್ಲಿ ಇಡೀ ಕಾಶ್ಮೀರವೇ ದೇಶದ ಇತರ ಭಾಗಗಳೊಂದಿಗೆ ಸಂಪರ್ಕ
ಕಳೆದುಕೊಳ್ಳುವ ಅಪಾಯ ಎದುರಾಗಿತ್ತು. ಛಾಂಬ್ ಅನ್ನು ರಕ್ಷಿಸಿಕೊಳ್ಳುವುದು ಅಸಾಧ್ಯ ಎಂದು
ಅರ್ಜನ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಶಾಸ್ತ್ರೀಜಿ ಅಳುಕಲಿಲ್ಲ! ನೆಹರು
ಅವರಂತೆ ಗೋಗರೆಯುತ್ತ ವಿಶ್ವಸಂಸ್ಥೆಯ ಕದ ತಟ್ಟಲಿಲ್ಲ.*
*ಅಂತಾರಾಷ್ಟ್ರೀಯ ಒತ್ತಡದ ಬಗ್ಗೆಯೂ ಚಿಂತಿಸಲಿಲ್ಲ. ವಿಶ್ವದ ನಾಯಕರು ಏನನ್ನುತ್ತಾರೋ ಎಂದು
ಯೋಚಿಸಲಿಲ್ಲ. ಏಕೆಂದರೆ 'ಹಮಾರಾ ದೇಶ್ ರಹೇಗಾ ತೋ, ಹಮಾರಾ ತಿರಂಗಾ ರಹೇಗಾ' ಎಂದು ಹದಿನೈದು
ದಿನಗಳ ಹಿಂದಷ್ಟೇ ತಾವೇ ಹೇಳಿದ ಮಾತುಗಳನ್ನು ಅವರು ಮರೆತಿರಲಿಲ್ಲ. 'ಛಾಂಬ್ ಕೈ ಜಾರುವ
ಮೊದಲು, ಲಾಹೋರನ್ನು ವಶಪಡಿಸಿಕೊಳ್ಳಿ' ಎಂದು ಭಾರತೀಯ ಪಡೆಗಳಿಗೆ ನಿರ್ದೇಶನ ನೀಡಿಯೇ
ಬಿಟ್ಟರು!*
*ಎರಡನೇ ಜಾಗತಿಕ ಸಮರದ ನಂತರ ಭುಗಿಲೆದ್ದ ಅತಿ ದೊಡ್ಡ* *ಸಂಘರ್ಷ ಅದಾಗಿತ್ತು.* *ಏಕೆಂದರೆ
ಎರಡೂ ರಾಷ್ಟ್ರಗಳು ಸಾವಿರಕ್ಕೂ ಅಧಿಕ ಟ್ಯಾಂಕ್‌ಗಳೊಂದಿಗೆ ಪರಸ್ಪರ ಮುಗಿಬಿದ್ದಿದ್ದವು.
ಆರಂಭದಲ್ಲಿ ಪಾಕಿಸ್ತಾನದ್ದೇ ಮೇಲುಗೈ. ಅಮೆರಿಕ ದಾನ ಮಾಡಿದ್ದ ಸುಧಾರಿತ ಎಂ-48 ಪ್ಯಾಟನ್
ಟ್ಯಾಂಕ್‌ಗಳನ್ನು ಹೊಂದಿದ್ದ ಪಾಕಿಸ್ತಾನದ ಎರಡು ಸೇನಾ ತುಕಡಿಗಳು ಭಾರತದ ಮೇಲೆ ಆಕ್ರಮಣ
ಮಾಡಿದರೆ, ನಮ್ಮ ಒಂದೇ ತುಕಡಿ ಶತ್ರುವನ್ನು ಹಿಮ್ಮೆಟ್ಟಿಸಬೇಕಿತ್ತು.*
*ಜತೆಗೆ ಪ್ರತಿ ದಾಳಿಯನ್ನು ಮಾಡಬೇಕಿತ್ತು. ಆದರೇನಂತೆ ಸಪ್ಟೆಂಬರ್ 10ರಂದು 'ಅಸಲ್
ಉತ್ತರ್‌' (True North) ಬಳಿ ನಡೆದ ನಿರ್ಣಾಯಕ ಸಮರದಲ್ಲಿ ನಮ್ಮ ಸೈನಿಕರು ಪಾಕ್‌ನ 97
ಟ್ಯಾಂಕ್‌ಗಳನ್ನು ವಶಪಡಿಸಿಕೊಂಡರು. ಲಾಹೋರನ್ನು ರಣರಂಗವಾಗಿಸಿದರು. ಶಾಸ್ತ್ರೀಜಿ ಅವರ
ತಾಕತ್ತಿನ ಬಗ್ಗೆ ಕೀಳಂದಾಜು ಮಾಡಿದ್ದ ಜನರಲ್ ಅಯೂಬ್‌ಖಾನ್ ಬೆದರಿದ. ಏಕೆಂದರೆ ಚೀನಾ
ಕೈಯಲ್ಲಿ ಸೋತಿದ್ದ ನಮ್ಮನ್ನು ಬಗ್ಗುಬಡಿಯಲು ಇದೇ ಸರಿಯಾದ ಸಮಯವೆಂದು ಭಾವಿಸಿದ್ದ
ಅಯೂಬ್‌ಖಾನ್‌ಗೆ ಶಾಸ್ತ್ರೀಜಿ ತಕ್ಕ ಪ್ರತ್ಯುತ್ತರ ನೀಡಿದ್ದರು.*
*ಈ ಮಧ್ಯೆ ಪಾಕಿಸ್ತಾನದ ಪರ ನಿಲುವು ತಳೆದಿದ್ದ ಚೀನಾ, ಯುದ್ಧದಲ್ಲಿ ಮೂಗು ತೂರಿಸುವ
ಮಾತಾಡಿತು. ಆದರೂ ಬೆದರಿಕೆಗೆ ಬಗ್ಗಲಿಲ್ಲ ಭಾರತ. ಯುದ್ಧ ಮುಂದುವರೆಯಿತು. ಏಕೆಂದರೆ ಅಂದು
ಪ್ರಧಾನಿಯಾಗಿದ್ದದ್ದು* *ನೆಹರು ಅಲ್ಲ. ಲಾಲ್ ಬಹಾದ್ದೂರ್ ಶಾಸ್ತ್ರಿ. ಹಾಗಾಗಿಯೇ
'ದೇಶಕ್ಕಾಗಿ ಒಂದು ಹೊತ್ತು ಉಪವಾಸ ಮಾಡಿ' ಎಂಬ ಕರೆಗೆ 50 ಕೋಟಿ ಭಾರತೀಯರು ಮನಃಪೂರ್ವಕವಾಗಿ
ಓಗೊಟ್ಟಿದ್ದರು.*
*ಇತ್ತ ಪರಿಸ್ಥಿತಿ ತೀವ್ರ ಸ್ಥಿತಿಗೆ ತಲುಪಿತು. ಕೈ ಮೀರಿ ಹೋಗುವ ಲಕ್ಷಣ ಕಂಡುಬಂತು.*
*ಮುಂದಾಗಬಹುದಾದ ಅಪಾಯವನ್ನರಿತ ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಿತು. ಫಲವಾಗಿ, ಸೆಪ್ಟೆಂಬರ್
21ರಂದು ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಒಪ್ಪಂದವೇರ್ಪಟ್ಟಿತು.*
*ಅವುಗಳಲ್ಲಿ 152 ಟ್ಯಾಂಕ್‌ಗಳನ್ನು ನಮ್ಮ ಸೈನಿಕರು ನಾಶಪಡಿಸುವ ಬದಲು
ವಶಪಡಿಸಿಕೊಂಡಿದ್ದರು.*
*ಅದು ನಮ್ಮ ಬಹಾದ್ದೂರಿಕೆಯ ಪ್ರತೀಕವಾಗಿತ್ತು. ಆದರೆ ಪ್ರತಿಯಾಗಿ ಭಾರತ ಕಳೆದುಕೊಂಡಿದ್ದು
ಕೇವಲ 128 ಟ್ಯಾಂಕುಗಳು.*
*ಇತ್ತ ಶಾಸ್ತ್ರಿಯವರ ಬಗ್ಗೆ* *ಹಗುರವಾಗಿ ಮಾತಾಡಿದ್ದವರು ಯುದ್ಧ ಮುಗಿದ ಮೇಲೆ ಸೊಲ್ಲೇ
ಎತ್ತಲಿಲ್ಲ.*
*ಸೋವಿಯತ್ ರಷ್ಯಾ, ಅಮೇರಿಕ ಮತ್ತು ಚೀನಾಗಳು ಹುಬ್ಬೇರಿಸಿದವು.* *ರಣರಂಗದಲ್ಲಿ*
*ಶಾಸ್ತ್ರಿಯವರನ್ನು ಮಣಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತವು. ಮಾತುಕತೆಗೆ ಕರೆದವು. ಈಗಿನ
ಕಜಕಿಸ್ತಾನದ ತಾಷ್ಕೆಂಟ್‌ನಲ್ಲಿ ಸಂಧಾನ ಮಾತುಕತೆ ಏರ್ಪಾಡಾಯಿತು.*
*ಮುಂದಿನದ್ದು ಮಹಾನ್ ದುರಂತ!*
*ರಷ್ಯಾ ಪ್ರಧಾನಿ ಅಲೆಕ್ಸಿ ಕೊಸಿಗಿನ್ ಮಧ್ಯಸ್ಥಿಕೆಯಲ್ಲಿ 1966, ಜನವರಿಯಲ್ಲಿ ಲಾಲ್
ಬಹಾದ್ದೂರ್ ಶಾಸ್ತ್ರಿ ಮತ್ತು ಅಯೂಬ್‌ಖಾನ್ ನಡುವೆ ಸಂಧಾನ ಪ್ರಾರಂಭವಾಯಿತು. 'ಮುಂದೆಂದೂ
ಬಲಪ್ರಯೋಗದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುವುದಿಲ್ಲ' ಎಂದು ಲಿಖಿತ ಭರವಸೆ
ನೀಡಬೇಕೆಂದು ಶಾಸ್ತ್ರೀಜಿ ಪಟ್ಟು ಹಿಡಿದರು.*
*ಅಯೂಬ್‌ಖಾನ್ ಒಪ್ಪದೇ* *ಹೋದಾಗ,''Then you will have to find another PM''
(ಹಾಗಾದರೆ ನನ್ನ ನಂತರದ ಪ್ರಧಾನಿ ಬರುವವರೆಗೂ ಕಾಯಬೇಕಾಗುತ್ತದೆ!) ಎಂದು ಮುಖಕ್ಕೆ
ಹೊಡೆದಂತೆ ಹೇಳಿದರು. ಶಾಸ್ತ್ರಿಯವರನ್ನು ಬಗ್ಗಿಸಲು ಸಾಧ್ಯವಿಲ್ಲ ಎಂದು ಅರಿತ ಅಯೂಬ್ ಖಾನ್
ತಾನೇ ಮಣಿದ. ಲಿಖಿತ ಭರವಸೆ ನೀಡಿದ. ಜನವರಿ 10ರಂದು ತಾಷ್ಕೆಂಟ್ ಒಪ್ಪಂದಕ್ಕೆ ಸಹಿ ಬಿತ್ತು.*
*ಆದರೆ ಸಹಿಯ ಶಾಯಿ ಆರುವ ಮೊದಲೇ, ಮಧ್ಯರಾತ್ರಿ 1 ಗಂಟೆ 32 ನಿಮಿಷಕ್ಕೆ ಭಾರತಕ್ಕೆ
ಬರಸಿಡಿಲು ಬಂದೆರಗಿತು! ಶಾಸ್ತ್ರೀಜಿ* *ಅನುಮಾನಾಸ್ಪದವಾಗಿ, 'ಹೃದಯಾಘಾತ'ಕ್ಕೊಳಗಾಗಿದ್ದರು.
ಗಾಂಧೀಜಿ ಕೊಲೆಯಾದ ನಂತರ ಮೊದಲಬಾರಿಗೆ ಇಡೀ ದೇಶವೇ ಕಂಬನಿಯ ಕೋಡಿಯಲ್ಲಿ ತೇಲಿ ಹೋಯಿತು.
ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ, ದುರಂತಮಯ ಅಧ್ಯಾಯ ಸಾವಿನ ನಂತರವೂ
ಮುಂದುವರಿಯಿತು.*
*ನೀಲಿಗಟ್ಟಿದ್ದ ದೇಹ ಭಾರತಕ್ಕೆ ಬಂತು!*
*ಆದರೆ ಶವ ಪರೀಕ್ಷೆ ನಡೆಯಲಿಲ್ಲ*
*ಗಾಂಧೀಜಿ ಮತ್ತು ನೆಹರು ರವರ ಅಂತ್ಯ ಸಂಸ್ಕಾರ ನಡೆದ ಸ್ಥಳದಲ್ಲಿ ಅಂತ್ಯ ಸಂಸ್ಕಾರ
ಮಾಡಲಾಯಿತು*
*1904, ಅಕ್ಟೋಬರ್ 2ರಂದು ಕಾಶಿ ಸಮೀಪದ ಮೊಘಲ್* *ಸರಾಯ್‌ನಲ್ಲಿ ಬಡ ಶಿಕ್ಷಕರಾದ ಶಾರದಾ
ಪ್ರಸಾದ ರಾಮ್ ದುಲಾರಿ ದೇವಿ ಮಗನಾಗಿ ಹುಟ್ಟಿದ ಲಾಲ್ ಬಹಾದ್ದೂರ್ ಶಾಸ್ತ್ರಿಯವರದ್ದು
ಏಳುಬೀಳಿನ ಹಾದಿ. ಪ್ರಧಾನಿ ಸ್ಥಾನ ಪಿತ್ರಾರ್ಜಿತ ಆಸ್ತಿಯಂತೆ ಬಂದಿದ್ದಲ್ಲ. ಬಾಲ ಗಂಗಾಧರ
ತಿಲಕ್ ಅವರಿಂದ* *ಪ್ರಭಾವಿತರಾಗಿದ್ದ ಅವರು 1921ರಲ್ಲಿ ಶಿಕ್ಷಣಕ್ಕೆ ಶರಣು ಹೊಡೆದು
ಸ್ವಾತಂತ್ರ್ಯ ಚಳವಳಿಗೆ ಧುಮುಕಿದ್ದರು. ಆರು ವರ್ಷ ಜೈಲುವಾಸವನ್ನೂ ಅನುಭವಿಸಿದ್ದರು.*

*ಶಾಸ್ತ್ರೀಜಿ ಪಠ್ಯ ಪುಸ್ತಕಗಳ ಒಂದೆರಡು ಪ್ಯಾರಾಗಳಿಗೆ ಸೀಮಿತರಾದರು. ಇತಿಹಾಸ ತನ್ನ ಧೀರ
ಪುತ್ರನನ್ನೇ ಮರೆಯುವಂತಾಯಿತು.*
*ಏಕೆ ಈ ಮಾತು ಹೇಳಬೇಕಾಗಿದೆ ಗೊತ್ತಾ?*
*ಅಕ್ಟೋಬರ್ 2ರಂದೇ ಜನಿಸಿದ ಈ ದೇಶದ ಮತ್ತೊಬ್ಬ ಸುಪುತ್ರ ಹಾಗೂ ಜನಪ್ರಿಯ ಪ್ರಧಾನಿ ಲಾಲ್
ಬಹಾದ್ದೂರ್* *ಶಾಸ್ತ್ರಿಯವರನ್ನು*
*ನಾವೂ ಮರೆಯುವುದು ಬೇಡ.*
*ಒಂದೇ ಭಾರತ ಶ್ರೇಷ್ಠ ಭಾರತ*
*‪ಜೈ‬ ಹಿಂದ*
*ಹೀಗೆ ಬದುಕಿದ್ದರು ನಮ್ಮ ಶಾಸ್ತ್ರೀಜಿ.*


*ಎರಡು ಘಂಟೆ ಯುದ್ಧ ಮುಂದುವರಿದಿದ್ದರೆ,ಭಾರತೀಯ ಸೇನೆ ಪಾಕಿಸ್ತಾನದ ಲಾಹೋರ್ ತನಕ ತನ್ನ
ಅಧಿಪತ್ಯವನ್ನು ಸ್ಥಾಪಿಸುತ್ತಿತ್ತು.*

*ಎಚ್ಚೆತ್ತ ಪಾಕಿಸ್ತಾನ ಅಮೇರಿಕದ ಮುಂದೆ ಮಂಡಿಯೂರಿ ಕೂತಿತು.ಯುದ್ಧವನ್ನು ನಿಲ್ಲಿಸಲು
ಭಾರತಕ್ಕೆ ಸೂಚಿಸುವಂತೇ ಗೋಗರೆಯಿತು.*

*MAHANTAGOUD T PATIL SWCM KSPSTA*

*ಆಗ ಅಮೇರಿಕದ ಗೋಧಿ ಭಾರತಕ್ಕೆ ಆಮದಾಗುತ್ತಿತ್ತು.ಆ ಗೋಧಿಯ ಗುಣಮಟ್ಟ
ಹೇಗಿತ್ತೆಂದರೆ,ಪ್ರಾಣಿಗಳು ತಿನ್ನಲೂ ಅಸಾಧ್ಯವಾದದ್ದು.ಈ ಆಮದು ಒಪ್ಪಂದಕ್ಕೆ ಸಹಿ ಹಾಕಿದ್ದು
ಜವಾಹರಲಾಲ್ ನೆಹರೂ.ಪಾಕಿಸ್ತಾನದ ಜೊತೆಗಿನ ಯುದ್ಧವನ್ನು ನಿಲ್ಲಿಸದಿದ್ದರೆ,ಗೋಧಿಯ ರಫ್ತನ್ನು
ನಿಲ್ಲಿಸುತ್ತೇವೆಂಬ ಸೂಚನೆ ಅಮೇರಿಕದಿಂದ ಶಾಸ್ತ್ರೀಜಿಯವರಿಗೆ ಬಂತು.ಶಾಸ್ತ್ರೀಜಿಯವರಿಂದ
ಬಂದ ಉತ್ತರ, “ನಿಲ್ಲಿಸಿ ತೊಂದರೆಯಿಲ್ಲ”*

 *“ಹೊಟ್ಟೆಗೆ ಆಹಾರವಿಲ್ಲದಿದ್ದರೆ ಭಾರತೀಯರು ಸಾಯುತ್ತಾರೆ”ಅಮೇರಿಕದ ಕುಚೋದ್ಯ
ಪ್ರತಿಕ್ರಿಯೆ..!!*

*“ದೊಡ್ಡು ಕೊಟ್ಟು ನಿಮ್ಮ ಕಳಪೆಗುಣಮಟ್ಟದ ಗೋಧಿಯನ್ನು ತಿಂದು ಆರೋಗ್ಯ
ಕೆಡಿಸಿಕೊಳ್ಳುವುದಕ್ಕಿಂತ,ಹಸಿವಿನಿಂದ ಸಾಯುವುದೇ ವಾಸಿ.ಇಂದಿನಿಂದ ನಿಮ್ಮ ಗೋಧಿ ನಮಗೆ
ಬೇಕಿಲ್ಲ” ಶಾಸ್ತ್ರೀಜಿಯವರ ತೀಕ್ಷ್ಣ ಪ್ರತಿಕ್ರಿಯೆ.*

*ದೆಹಲಿಯ ರಾಮಲೀಲಾ ಮೈದಾನದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಶಾಸ್ತ್ರೀಜಿ ಮಾತನಾಡುತ್ತಾರೆ.*

*“ಪಾಕಿಸ್ತಾನದೊಂದಿಗೆ ಯುದ್ಧ ನಡೆಯುತ್ತಿದೆ.ಅಮೇರಿಕದಿಂದ ಗೋಧಿ ಆಮದಾಗುವುದು
ನಿಂತಿದೆ.ದೇಶದ ಜನ ಸಹಕರಿಸಬೇಕಿದೆ.ಒಂದು..ನೀವು ನೇರವಾಗಿ ಸೇನೆಗೆ ಧನ ಅಥವಾ ಆಹಾರದ
ಸಹಾಯವನ್ನು ಮಾಡಬಹುದು.ಎರಡು..ಪ್ರತಿ ಸೋಮವಾರ ನೀವು ಉಪವಾಸವೃತವನ್ನು ಆಚರಿಸಬಹುದು.ಇದರಿಂದ
ದೇಶದ ಹಣಕಾಸಿನ ವ್ಯವಹಾರ ಸರಾಗವಾಗಿ ನಡೆಯಬಹುದು.ಇಲ್ಲದಿದ್ದರೆ ದೇಶ ಆರ್ಥಿಕ ಸಂಕಷ್ಟಗಳನ್ನು
ಎದುರಿಸಬೇಕಾಗಬಹುದು”*

*ಶಾಸ್ತ್ರೀಜಿಯವರ ಈ ಕರೆಗೆ ಇಡೀ ದೇಶ ಓಗೊಟ್ಟಿತು.ಹಲವರು ಸೇನೆಗೆ ಸಹಾಯ ಮಾಡಿದರು.ಲಕ್ಷಾಂತರ
ಜನ ಸೋಮವಾರದ ಉಪವಾಸವನ್ನು ಆರಂಭಿಸಿದರು.ಸ್ವತಃ ಶಾಸ್ತ್ರೀಜಿಯವರೂ ಸೋಮವಾರದಂದು
ಉಪವಾಸವೃತವನ್ನು ಕೈಗೊಂಡರು.*

*ಶಾಸ್ತ್ರೀಜಿಯವರ ಪತ್ನಿ,ಲಲಿತಾದೇವಿಯವರು ಅನಾರೋಗ್ಯಪೀಡಿತರಾಗಿದ್ದರು.ಮನೆಗೆಲಸಕ್ಕೆಂದು
ಕೆಲಸದವಳೊಬ್ಬಳು ಬರುತ್ತಿದ್ದಳು.ಶಾಸ್ತ್ರೀಜಿಯವರು ಮಹಿಳೆಗೆ ನಾಳೆಯಿಂದ ಕೆಲಸಕ್ಕೆ ಬರಬೇಡ
ಎಂದರು.ಆಕೆ”ಅಲ್ಲ,ನಿಮ್ಮ ಬಟ್ಟೆಯನ್ನು ತೊಳೆಯುವುದು,ಮನೆಯನ್ನು ಸ್ವಚ್ಛಗೊಳಿಸುವುದು,ನಿಮ್ಮ
ಪತ್ನಿಯ ಆರೈಕೆಯನ್ನು ಯಾರು ಮಾಡಿಕೊಡುತ್ತಾರೆ ಸ್ವಾಮೀ”ಎಂದು ಕೇಳಿದಳು.*

*“ದೇಶಕ್ಕಾಗಿ ಇದು ಅನಿವಾರ್ಯವಮ್ಮಾ.ನಿನಗೆ ಕೊಡುವ ಸಂಬಳದ ಹಣವಾದರೂ ಉಳಿದೀತು.ದೇಶದ
ಒಳಿತಿಗಾದೀತು” ಎಂದು ಹೇಳಿದರು.ನಂತರ ಮನೆಯ ಪ್ರತಿಯೊಂದು ಕೆಲಸವನ್ನೂ ಶಾಸ್ತ್ರೀಜಿಯವರೇ
ನಿಭಾಯಿಸುತ್ತಿದ್ದರು.*

*MAHANTAGOUD T PATIL SWCM KSPSTA*

*ಶಾಸ್ತ್ರೀಜಿಯವರ ಮಕ್ಕಳಿಗೆ ಇಂಗ್ಲೀಷ್ ಹೇಳಿಕೊಡಲೆಂದು ಟ್ಯೂಟರ್ ಬರುತ್ತಿದ್ದರು.ಅವರನ್ನೂ
ಕೆಲಸದಿಂದ ವಿಮುಕ್ತಗೊಳಿಸಿದರು.”ಮಕ್ಕಳು ಇಂಗ್ಲೀಷಿನಲ್ಲಿ ಫೇಲಾಗುತ್ತಾರೆ”ಟ್ಯೂಟರ್
ಹೇಳಿದ್ದಕ್ಕೆ ಶಾಸ್ತ್ರೀಜಿ,”ಆಗಲಿ ಬಿಡಿ ಇಂಗ್ಲೀಷ್ ನಮ್ಮ ಭಾಷೆಯಲ್ಲ.ಇಂಗ್ಲಿಷರು
ಹಿಂದಿಯನ್ನು ಬರೆದರೆ ಅವರೂ ಫೇಲಾಗುತ್ತಾರೆ”ಎಂದರು.*

*ಒಂದು ದಿನ ಶಾಸ್ತ್ರೀಜಿಯವರ ಪತ್ನಿ,ಹರಿದುಹೋಗಿರುವ ಅವರ ಧೋತಿಯನ್ನು ನೋಡಿ “ಒಂದು ಹೊಸ
ಧೋತಿಯನ್ನಾದರೂ ತೆಗೆದುಕೊಳ್ಳಬಾರದೇ?”ಎಂದು ಕೇಳುತ್ತಾರೆ.”ಅದನ್ನು ಕೊಳ್ಳಲು
ಹಣವೆಲ್ಲಿದೆ..?ಬರುವ ಸಂಬಳವನ್ನೂ ಬಿಟ್ಟಾಗಿದೆ.ಮನೆಯ ಖರ್ಚುಗಳನ್ನು ಕಡಿಮೆ ಮಾಡು”
ಎಂದಿದ್ದರು.*

*ಅಕ್ಟೋಬರ್ ಎರಡು ಬರುತ್ತಿದೆ.ಶಾಸ್ತ್ರೀಜಿಯವರ ಜನ್ಮದಿನ.ನಿರ್ಲಕ್ಷ್ಯಕ್ಕೊಳಗಾಗಿರುವ
ಸರಳ,ಸಜ್ಜನ ಮಹಾಪುರುಷನನ್ನು ನಾವಿಂದು ಸ್ಮರಿಸಬೇಕಿದೆ.*

*ಜೈ ಜವಾನ್,ಜೈ ಕಿಸಾನ್*

*MAHANTAGOUD T PATIL SWCM KSPSTA*💐💐🙏

-- 
You received this message because you are subscribed to the Google Groups 
"KSHST" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
To view this discussion on the web visit 
https://groups.google.com/d/msgid/kshst/CAL8OgzBgYoOrVm199F9Le1nssazqJVB8FD60QXFjz18Y914%3D_A%40mail.gmail.com.
For more options, visit https://groups.google.com/d/optout.

Reply via email to