ಕನಕದಾಸ ಜಯ಼ಂತಿಯ ಶುಭಾಶಯಗಳು
On 05-Nov-2017 5:09 pm, "Sameera samee" <[email protected]> wrote:

> ಮಾಹಿತಿ ಹಂಚಿಕೊಂಡಿದ್ದಕ್ಕೆ ತಮಗೆ  ತುಂಬಾ ಧನ್ಯವಾದಗಳು ಸರ್
>
> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>
> On Nov 5, 2017 3:09 PM, "Mahantagoud Patil" <[email protected]> wrote:
>
>> 💐💐💐💐💐💐💐💐💐💐💐
>>
>> *ಭಕ್ತ ಕನಕದಾಸರ ಜಯಂತಿಯ ಕುರಿತು ಮಾಹಿತಿ*
>>
>> *MAHANTAGOUD T PATIL SWCM KSPSTA*
>>
>> *ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬
>> ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ
>> ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ
>> ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆಕರ್ನಾಟಕ ಸಂಗೀತದ
>> ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತುಪುರಂದರದಾಸರನ್ನು
>> ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು
>> ದಂಡನಾಯಕರಾಗಿದ್ದು ಯುದ್ದವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ,
>> ಹರಿಭಕ್ತರಾದರಂತೆ.*
>>
>> 👉 *ಜನನ*
>>
>> *ತಿಮ್ಮಪ್ಪ ನಾಯಕ*
>> *1509*
>> *ಬಾಡ, ಹಾವೇರಿ ಜಿಲ್ಲೆ, ಕರ್ನಾಟಕ ರಾಜ್ಯ, ಭಾರತ*
>>
>> 👉 *ಮರಣ*
>>
>> *1609*
>> *ಬಾಡ*
>>
>> 👉 *ವೃತ್ತಿ*
>>
>> *ಹರಿದಾಸರು, ಕೀರ್ತನಕಾರರು, ಕವಿ*
>>
>> 👉 *ಪ್ರಕಾರ/ಶೈಲಿ*
>>
>> *ಕೀರ್ತನೆ, ಉಗಾಭೋಗ, ಮುಂಡಿಗೆ,ಕಾವ್ಯ*
>>
>> 👉 *ಜೀವನ*
>>
>> 👉 *ಜನನ*
>>
>> *ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ 1509ರಲ್ಲಿ ಕುರುಬ ಜನಾಂಗಕ್ಕೆ ಸೇರಿದ
>> ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು. ಕನಕದಾಸರು ಬರಿ ಕುರುಬ
>> ಜಾತಿಗೆ ಸಿಮಿತವಾತ ಭಕ್ತವಲ್ಲ, ಎಲ್ಲಾ ಜಾತಿಗಳಿಗೆ ಬೇಕಾದವರು. 15-16 ನೆಯ ಶತಮಾನದಲ್ಲೇ
>> ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾರು ಎಂದರೆ ತಪ್ಪಾಗಲಾರದು.*
>>
>> 👉 *ಸಾಧನೆ*
>>
>> *ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು. ವ್ಯಾಸರಾಯದಿಂದ ಮಧ್ವ
>> ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರು.
>> ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು.
>> ಇವರ ಕೀರ್ತನೆಗಳ ಅಂಕಿತ ಕಾಗಿನೆಲೆಯ ಆದಿಕೇಶವರಾಯ. === ಈಗಲು ಸಹಾ ಈ ಕಿಂಡಿಯನ್ನು ಕನಕನ
>> ಕಿಂಡಿ ಎಂದು ಕರೆಯುತ್ತಾರೆ-ಕನಕ ಕಿಂಡಿ*
>>
>> *ಅನೇಕರ ನಂಬಿಕೆಯಂತೆ ಉಡುಪಿಯ ದೇವಸ್ಥಾನದಲ್ಲಿ ಅವರಿಗೆ ಪ್ರವೇಶ ದೊರೆಯದೆ ಹೋದಾಗ
>> ದೇವಸ್ಥಾನದ ಹಿಂದೆ ನಿಂತು ಹಾಡತೊಡಗಿದರಂತೆ ("ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ").
>> ಆಗ ಹಿಂಭಾಗದ ಗೋಡೆ ಒಡೆದು ಕೃಷ್ಣನ ವಿಗ್ರಹ ಹಿಮ್ಮುಖವಾಗಿ ತಿರುಗಿತಂತೆ. (ಈಗಲೂ ಉಡುಪಿ
>> ಕೃಷ್ಣನ ದೇವಸ್ಥಾನದ ಹಿಂದುಗಡೆಯ ಗೋಡೆಯಲ್ಲಿರುವ ಬಿರುಕಿನಲ್ಲಿ ಶ್ರೀಕೃಷ್ಣನ ಕಾಣಬಹುದು.
>> ಇಲ್ಲಿ ಒಂದು ಕಿಟಕಿಯನ್ನು ನಿರ್ಮಿಸಿ ಅದನ್ನು 'ಕನಕನ ಕಿಂಡಿ' ಎಂದು ಕರೆಯಲಾಗಿದೆ).*
>>
>> *ಉಡುಪಿಯ ಕನಕನ ಕಿಂಡಿಯ ಬಗ್ಗೆ ಸ್ವತಃ ಕನಕದಾಸರ ಕೃತಿಗಳಲ್ಲಾಗಲೀ ಇತರೆ ಕೃತಿಗಳಲ್ಲಾಗಲೀ
>> ಮಠದ ದಾಖಲೆಗಳಲ್ಲಾಗಲೀ ಚರಿತ್ರೆಯ ಪುಟಗಳಲ್ಲಾಗಲೀ ಶಾಸನಗಳಲ್ಲಾಗಲೀ ಎಲ್ಲಿಯೂ
>> ಪ್ರಸ್ತಾಪವಾಗಿಲ್ಲ.*
>>
>> *ಇನ್ನು ಉಡುಪಿಯ ಆ ದೇವಾಲಯವಾದರೋ ಆಗಮಾದಿಗಳಲ್ಲಿ ಹೇಳಿರುವ ವಾಸ್ತುವಿನ್ಯಾಸದನ್ವಯ
>> ಕಟ್ಟಿಯೂ ಇಲ್ಲ. ಅಲ್ಲಿ ಬಲಿಕಲ್ಲು, ಧ್ವಜಸ್ತಂಭ, ಅಂತರಾಳ, ಅರ್ಧಮಂಟಪ, ಪ್ರದಕ್ಷಿಣಾಪಥಗಳೂ
>> ಇಲ್ಲ. ಇನ್ನು ಪ್ರಾಣದೇವರ ಪ್ರತಿಷ್ಠಾಪನೆಯೂ ವಿಭಿನ್ನವೇ.*
>>
>> *ಉಡುಪಿಯ ಶ್ರೀಕೃಷ್ಣ ವಿಗ್ರಹವನ್ನು ಮಧ್ವಾಚಾರ್ಯರು ಕ್ರಿಸ್ತ ಶಕ ೧೨೩೮ (ಶಕವರ್ಷ ೧೧೬೦
>> ಹೇವಿಳಂಬಿ ಸಂವತ್ಸರ ಮಾಘ ಶುದ್ಧ ತದಿಗೆ) ನೇ ವರ್ಷದಲ್ಲಿ ಪಶ್ಚಿಮಾಭಿಮುಖಿಯಾಗಿ ಪ್ರತಿಷ್ಠೆ
>> ಮಾಡಿದ್ದರಾಗಲೀ ಪೂರ್ವಾಭಿಮುಖವಾಗಿ ಅಲ್ಲ. ತಮಗೆ ಪಶ್ಚಿಮ ಸಮುದ್ರದಿಂದ ಲಭ್ಯವಾದ ಆ
>> ಮೂರ್ತಿಯನ್ನು ಪಶ್ಚಿಮಕ್ಕೇ ಮುಖ ಮಾಡಿ ಪ್ರತಿಷ್ಠಾಪಿಸಿ ಪಶ್ಚಿಮ ಸಮುದ್ರಾಧೀಶ್ವರನನ್ನಾಗಿ
>> ಕರೆದರೆನ್ನುವುದೇ ಸತ್ಯಸ್ಯ ಸತ್ಯ. ಇದಕ್ಕೆ ದಾಖಲೆಯಾಗಿ ಕನಕದಾಸರ ಸಮಕಾಲೀನರಾದ ಸುರೋತ್ತಮ
>> ತೀರ್ಥರ ಹೇಳಿಕೆ.*
>>
>> *ಅದರ ತಾತ್ಪರ್ಯ ಹೀಗಿದೆ: 'ದೇವತಾ ವಿಗ್ರಹಗಳನ್ನು ಪೂರ್ವಾಭಿಮುಖಿಯಾಗಿಯೇ
>> ಸ್ಥಾಪಿಸಬೇಕೆಂಬ ನಿಯಮ ಏನೂ ಇಲ್ಲ. ಆದ್ದರಿಂದಲೇ ಮಧ್ವರು ಈ ಕೃಷ್ಣನ ಪ್ರತಿಮೆಯನ್ನು
>> ಪಶ್ಚಿಮಾಭಿಮುಖಿಯಾಗಿ ಸ್ಥಾಪಿಸಿದ್ದಾರೆ". ಮಧ್ವರು ಶ್ರೀಕೃಷ್ಣಪಾದಾಂಬುಜಾರ್ಚಕರಾಗಿ ತಮ್ಮ
>> ಮತ್ತು ತಮ್ಮ ಎಂಟು ಮಂದಿ ಶಿಷ್ಯರು ಮತ್ತು ಅವರ ಪರಂಪರೆಯವರ ನಿತ್ಯಾರ್ಚನೆಗಾಗಿ ಸ್ಥಾಪಿಸಿದ
>> ಮೂರ್ತಿ ಇದು. ಈ ಮೂರ್ತಿ ಮತ್ತು ಅದರ ಅರ್ಚನೆ ಮಠದ ಖಾಸಗಿ ಕ್ರಿಯೆಗಳಾಗಿದ್ದು
>> ಸಾರ್ವಜನಿಕರಿಗೆ ತೆರೆದಿಟ್ಟದ್ದಲ್ಲ.*
>>
>> *ವಾದಿರಾಜರು, ಪುರಂದರದಾಸರು, ಕನಕದಾಸರು ತ್ರಿವೇಣೀ ಸಂಗಮದಂತೆ. ಅವರು ಮೂರು ಮಂದಿಯೂ
>> ಒಂದೇ ಓರಗೆಯವರು, ಒಂದೇ ಮನಸ್ಸಿನವರು, ಸಮಕಾಲೀನರು, ಪರಸ್ಪರ ಗೌರವಾದರಗಳನ್ನು
>> ಹೊಂದಿದ್ದವರು. ಪ್ರತಿಯೊಬ್ಬರಿಗೂ ಇನ್ನಿಬ್ಬರ ಪ್ರೌಢಿಮೆ ಔನ್ನತ್ಯಗಳ ಅರಿವಿ ತ್ತು. ೧೨೦
>> ವರ್ಷಗಳ ಕಾಲ ಬದುಕಿದ್ದ ವಾದಿರಾಜ(೧೪೮೦-೧೬೦೦)ರಿಗೆ ತಮ್ಮ ಮಠದಲ್ಲಿ ಸರ್ವಾಂಗೀಣ ಸುಧಾರಣೆ
>> ತರುವ ತವಕ ಇತ್ತಾದರೂ ಅಲ್ಲಿ ಭದ್ರವಾಗಿ ಬೇರೂರಿದ್ದ ಮಡಿವಂತಿಕೆಯನ್ನು ಹೋಗಲಾಡಿಸಲು
>> ಅವರಿಂದಾಗಿರಲಿಲ್ಲ. ವಾದಿರಾಜರೊಂದಿಗೆ ತಮಗಿದ್ದ ಸ್ನೇಹವನ್ನು ದುರುಪಯೋಗ ಪಡಿಸಿಕೊಂಡು
>> ಮಠದಲ್ಲಿ ಪ್ರವೇಶ ಪಡೆಯುವ ಧಾರ್ಷ್ಟ್ಯವೂ ಕನಕರಿಗಿರಲಿಲ್ಲ.*
>>
>> *ಹೀಗೆ ಕನಕದಾಸರ ಸಾಹಿತ್ಯಕೃತಿಗಳು, ಅವರ ಬಗೆಗಿನ ಐತಿಹ್ಯಗಳು, ಅವರ ಕುರಿತು ಇತರೇ
>> ಸಾಹಿತ್ಯಗಳಲ್ಲಿ ಅಥವಾ ಶಾಸನಗಳಲ್ಲಿನ ಮಾಹಿತಿಗಳನ್ನು ಕ್ರೋಢೀಕರಿಸಿ ಕನಕದಾಸರ ಸ್ಥೂಲ ಜೀವನ
>> ಚಿತ್ರಣವನ್ನು ರಚಿಸಬಹುದಲ್ಲದೆ ಪರಿಪೂರ್ಣ ಜೀವನಚರಿತ್ರೆಯ ನಿರೂಪಣೆ ಸಾಧ್ಯವಿಲ್ಲದ ಮಾತು.
>> ಆದರೆ ವಿದ್ವತ್ ನೆಲೆಯಲ್ಲಿ ವಿದ್ವತ್ಸಂಪನ್ನ ಕನಕದಾಸರು ಕುಲಾತೀತರಾಗಿ ಕಾಲಾತೀತರಾಗಿ ಕನ್ನಡ
>> ಸಾರಸ್ವತ ಲೋಕದಲ್ಲಿ ಅದ್ವೀತಿಯ ಸ್ಥಾನಗಳಿಸಿ, ಚಿರಸ್ಮರಣೀಯರಾಗಿದ್ದಾರೆ ಕನಕದಾಸರು.*
>>
>> 👉 *ಸಾಹಿತ್ಯ ರಚನೆ*
>>
>> *ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ
>> ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ
>> ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316ಕೀರ್ತನೆಗಳು ಹಾಗೂ
>> ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ. ಅವರ ಐದು ಮುಖ್ಯ
>> ಕಾವ್ಯಕೃತಿಗಳು ಇಂತಿವೆ:*
>>
>> *ಮೋಹನತರಂಗಿಣಿ*
>>
>> *ನಳಚರಿತ್ರೆ*
>>
>> *ರಾಮಧಾನ್ಯ ಚರಿತೆ*
>>
>> *ಹರಿಭಕ್ತಿಸಾರ*
>>
>> *ನೃಸಿಂಹಸ್ತವ (ಉಪಲಬ್ದವಿಲ್ಲ)*
>>
>> 👉 *ಮೋಹನತರಂಗಿಣಿ*
>>
>> *ಮೋಹನತರಂಗಿಣಿಯು 42 ಸಂಧಿಗಳಿಂದ ಕೂಡಿದ್ದುಸಾಂಗತ್ಯದಲ್ಲಿ ರಚಿತವಾಗಿರುವ 2700
>> ಪದ್ಯಗಳಿವೆ. ಮೋಹನತರಂಗಿಣಿಯಲ್ಲಿ ಕನಕದಾಸರು ಕೃಷ್ಣಚರಿತ್ರೆಯನ್ನು ಹೇಳುತ್ತಾ ತಮ್ಮ ಅಧಿರಾಜ
>> ಕೃಷ್ಣದೇವರಾಯನನ್ನೇ ಕೃಷ್ಣನಿಗೆ ಹೋಲಿಸುತ್ತಾರೆ. ಅವರ ದ್ವಾರಕಾಪುರಿ ಸ್ವಯಂ ವಿಜಯನಗರವೇ
>> ಆಗಿರುವುದು ಇತಿಹಾಸದಿಂದ ತಿಳಿದು ಬರುತ್ತದೆ. ಮೋಹನತರಂಗಿಣಿ ಅಥವಾ ಕೃಷ್ಣಚರಿತೆ ಎಂಬ ಈ
>> ಕಾವ್ಯದಲ್ಲಿ ಕನಕದಾಸರ ಸಮಕಾಲೀನ ಜೀವನ ಚಿತ್ರಗಳು ಹಾಗೂ ಪೌರಾಣಿಕ ಕಥೆಗಳು ಅಚ್ಚಗನ್ನಡದಲ್ಲಿ
>> ನಿರೂಪಿತವಾಗಿವೆ. ದಣ್ಣಾಯಕನಾಗಿ ಕನಕ ಆಗಾಗ್ಗೆ ರಾಜಧಾನಿವಿಜಯನಗರಕ್ಕೆ ಹೋಗಬೇಕಾಗಿತ್ತು.
>> ವಿಜಯನಗರ ಸಾಮ್ರಾಜ್ಯದ ರಾಜವೈಭವ, ರಾಜಸಭೆ, ರಾಜಪರಿವಾರದ ಸರಸ ಸುಮ್ಮಾನ, ಶೃಂಗಾರ ಜೀವನ,
>> ಜಲಕ್ರೀಡೆ, ಓಕುಳಿಯಾಟ, ನವರಾತ್ರಿ, ವಿಜಯನಗರದ ಪುರರಚನೆ, ಉದ್ಯಾನವನ, ಪ್ರಜೆಗಳ ವೇಷಭೂಷಣ,
>> ರಾಜ್ಯದ ಯುದ್ಧ ವಿಧಾನ ಇತ್ಯಾದಿಗಳು ಅವನ ಮನಸೂರೆಗೊಂಡಿದ್ದವು. ಕವಿ ಮನಸಿನ ಕನಕ ತನ್ನ
>> ಅನುಭವವನ್ನೆಲ್ಲ ಬರಹ ರೂಪಕ್ಕೆ ತಂದ. ಆ ಬರಹವೇ ಇಂದು ನಮಗೆ ಲಭ್ಯವಿರುವ ಮೋಹನತರಂಗಿಣಿ.
>> ಕನಕನ ಯೌವನ ಕಾಲದಲ್ಲಿ ರಚಿತವಾದ ತರಂಗಿಣಿಯ ಒಡಲಲ್ಲಿ ಯುದ್ಧದ ವರ್ಣನೆಗಳು
>> ಹೆಚ್ಚೆನ್ನಬಹುದು. ಏಕೆಂದರೆ ಕನಕ ಸ್ವತಃ ಕಲಿಯಾಗಿದ್ದವನೇ ತಾನೇ? ಶಂಬರಾಸುರ ವಧೆ, ಬಾಣಾಸುರ
>> ವಧೆ, ಹರಿಹರ ಯುದ್ಧ ಹೀಗೆ ವೀರರಸ, ರೌದ್ರರಸ ಕಾವ್ಯದಲ್ಲಿ ಮೇಳೈಸಿವೆ.*
>>
>> *ಸೋಮಸೂರಿಯ ವೀಥಿಯ ಇಕ್ಕೆಗಳಲಿ*
>>
>> *ಹೇಮ ನಿರ್ಮಿತ ಸೌಧದೋಳಿ*
>>
>> *ರಮಣೀಯತೆವೆತ್ತ ಕಳಸದಂಗಡಿಯಿರ್ದುಂ*
>>
>> *ವಾ ಮಹಾ ದ್ವಾರಕಾಪುರದೇ*
>>
>> *ಓರಂತೆ ಮರಕಾಲರು ಹಡಗಿನ ವ್ಯವ*
>>
>> *ಹಾರದಿ ಗಳಿಸಿದ ಹಣವ*
>>
>> *ಭಾರ ಸಂಖ್ಯೆಯಲಿ ತೂಗುವರು ಬೇಡಿದರೆ ಕು*
>>
>> *ಬೇರಂಗೆ ಕಡವ ಕೊಡುವರು*
>>
>> 👉 *ನಳಚರಿತ್ರೆ*
>>
>> *ನಳಚರಿತ್ರೆಯು 9 ಸಂಧಿಗಳಿಂದ ಕೂಡಿದ್ದು ಭಾಮಿನೀ ಷಟ್ಪದಿಯಲ್ಲಿ ರಚನೆಯಾಗಿರುವ 481
>> ಪದ್ಯಗಳಿವೆ.ಮಹಾಭಾರತದಂತಹ ರಾಷ್ಟ್ರ ಮಹಾಕಾವ್ಯಕ್ಕೆ ಪ್ರೇರಣೆಯಾದ ಉಜ್ವಲ ಆರ್ಯೇತರ
>> ಪ್ರೇಮಕಥೆ ನಳ ದಮಯಂತಿಯರ ಕಥೆ. ೧೩ನೇ ಶತಮಾನದ ನಳ ಚಂಪೂವಿಗಿಂತ ಈ ನಳಚರಿತ್ರೆ
>> ಹೃದಯಸ್ಪರ್ಶಿಯಾದ ಚಿತ್ರಣಗಳಿಂದ ಚಿರಂತನ ಪ್ರೇಮದ ಕಥನದಿಂದ ಅಶ್ಲೀಲತೆಯ ಸೋಂಕಿಲ್ಲದ ಶೃಂಗಾರ
>> ವರ್ಣನೆಯಿಂದ ಶೋಭಿಸುತ್ತಾ ಇಂದಿಗೂ ಅತ್ಯಂತ ಜನಪ್ರಿಯವಾಗಿದೆ. ನಳ ಮತ್ತು ದಮಯಂತಿಯರು ಹಂಸದ
>> ಮೂಲಕ ಪ್ರೇಮ ಸಂದೇಶಗಳನ್ನು ಕಳಿಸುವುದು, ಅವರ ಸಂತೋಷ-ಆಮೋದ-ಪ್ರವೋದ ನಂತರದ ಕಷ್ಟಕಾಲ ಹಾಗೂ
>> ಅದರ ನಂತರದ ಪುನರ್ಮಿಲನ ಹೀಗೆ ಎಲ್ಲರಿಗೂ ಈ ಕಥೆ ಚಿರಪರಿಚಿತ. ಕಷ್ಟ ಕಾಲದಲ್ಲಿ ಕಾಡಿನಲ್ಲಿ
>> ಮಲಗಿರುವಾಗ ದಮಯಂತಿಯನ್ನು ಕುರಿತು ನಳ:*
>>
>> *ಲಲಿತ ಹೇಮದ ತೂಗಮಂಚದ*
>>
>> *ಹೊಳೆವ ಮೇಲ್ವಾಸಿನಲಿ ಮಲಗು*
>>
>> *ಲಲನೆಗೀ ವಿಧಿ ಬಂದುದೇ ಹಾ! ಎನುತ ಬಿಸುಸುಯ್ದ (೫-೨)*
>>
>> *ಹೀಗೆ ನಳಚರಿತ್ರೆಯಲ್ಲಿ ಕರುಣರಸಕ್ಕೇ ಪ್ರಾಧಾನ್ಯತೆ ಇದೆ. ಇನ್ನು ನಳಚರಿತ್ರೆಯಲ್ಲಿನ
>> ಶೃಂಗಾರರಸದ ಬಗ್ಗೆ ಹೇಳುವುದಾದರೆ ಅದು ಪ್ರೌಢಶೃಂಗಾರ ಎನ್ನಬಹುದೇನೋ? ಅಲ್ಲಿ ಮೋಹನ
>> ತರಂಗಿಣಿಯಲ್ಲಿ ಅದು ಕಣ್ಣು ಕುಕ್ಕುವ ಶೃಂಗಾರ, ಆದರೂ ಅದು ಹುಳಿಮಾವಿನಂತೆ ಹಂಚಿ
>> ತಿನ್ನಲಾಗದು. ಮುಕ್ತವಾಗಿ ಚರ್ಚಿಸಲಾಗದು. ನಳಚರಿತ್ರೆಯ ಶೃಂಗಾರವಾದರೆ ಮಲ್ಲಿಗೆ ಮಾವಿನ
>> ಹಾಗೆ, ಮಧುರ ರುಚಿ, ಮಧುರ ಸುವಾಸನೆ.*
>>
>> 👉 *ರಾಮಧಾನ್ಯಚರಿತೆ*
>>
>> *ರಾಮಧಾನ್ಯಚರಿತ್ರೆ ಭಾಮಿನೀ ಷಟ್ಪದಿಯಲ್ಲಿ ರಚಿತವಾಗಿರುವ 156 ಪದ್ಯಗಳನ್ನು ಒಳಗೊಂಡಿದೆ.
>> ಈ ಕೃತಿಯಲ್ಲಿ ಧನಿಕರ ಆಹಾರಧಾನ್ಯ ಅಕ್ಕಿ ಹಾಗೂ ಕೆಳವರ್ಗದವರ ಆಹಾರಧಾನ್ಯವೆಂದು
>> ಪರಿಭಾವಿಸಲಾಗಿರುವ ರಾಗಿಯ ನಡುವಿನ ಸಂಭಾಷಣೆಯ ಮೂಲಕ ರಾಗಿ ಹೇಗೆ ತನ್ನ ಔನ್ನತ್ಯವನ್ನು
>> ಸಾಬೀತು ಪಡಿಸುತ್ತದೆ ಹಾಗೂ ರಾಮಧಾನ್ಯವೆಂಬ ಹೆಸರು ಪಡೆಯುತ್ತದೆ ಎಂಬುದನ್ನು
>> ನಿರೂಪಿಸಲಾಗಿದೆ. ಇದರಲ್ಲಿ ಯುದ್ಧದ ಸನ್ನಿವೇಶ ಇಲ್ಲವಾದರೂ ವೀರರಸದ ಮಾತುಗಳಿಗೇನೂ
>> ಕೊರತೆಯಿಲ್ಲ.*
>>
>> *ನುಡಿಗೆ ಹೇಸದ ಭಂಡ ನಿನ್ನೊಳು ಕೊಡುವರೇ ಮಾರುತ್ತರವ ಕಡುಜಡವಲಾ, ನಿನ್ನೊಡನೆ ಮಾತೇಕೆ?*
>>
>> *ಹೆಣದ ಬಾಯಿಗೆ ತುತ್ತು ನೀನಹೆ ನಿನ್ನ ಜನ್ಮ ನಿರರ್ಥಕವಲಾ*
>>
>> *ಎಲವೂ ನೀನೆಲ್ಲಿಹೆಯೋ ನಿನ್ನಯ ಬಳಗವದು..*
>>
>> *ಮುಂತಾದ ಮಾತುಗಳಲ್ಲಿ ಕನಕದಾಸರು ರಾಗಿಯ ನೆಪ ಹಿಡಿದು ತಮ್ಮದೇ ಆತ್ಮಕಥೆಯನ್ನು
>> ಹೇಳುತ್ತಿರುವಂತೆ ತೋರುತ್ತದೆ. ಸಮಾಜದ ಮೇಲ್ವರ್ಗದವರ ಆಹಾರ ಧಾನ್ಯ ಭತ್ತ ಹಾಗೂ ಕೆಳವರ್ಗದವರ
>> ಆಹಾರ ಧಾನ್ಯ ರಾಗಿಯ ನಡುವಿನ ಸಂಭಾಷಣೆಯನ್ನು ನಿರೂಪಿಸುವ ಕನಕದಾಸರ ಸೃಜನಶೀಲತೆ ಅತಿಶಯ.
>> ಒಂದು ರೀತಿಯಲ್ಲಿ ರಾಮಧಾನ್ಯಚರಿತ್ರೆ ಇಂದಿನ ಬಂಡಾಯ ಸಾಹಿತ್ಯದ ಬೇರು, ನವ್ಯೋತ್ತರದ ಸೂರು
>> ಎಂದರೆ ಬಹುಶ: ತಪ್ಪಾಗಲಾರದು.*
>>
>> *MAHANTAGOUD T PATIL SWCM KSPSTA*
>>
>> 👉 *ಹರಿಭಕ್ತಿಸಾರ*
>>
>> *ಹರಿಭಕ್ತಿಸಾರ ೧೧೦ ಭಕ್ತಿಪದ್ಯಗಳಿರುವ ಗ್ರಂಥ. ಭಾಮಿನೀ ಷಟ್ಪದಿಯಲ್ಲಿ ಸರಳಗನ್ನಡದಲ್ಲಿ
>> ರಚಿತವಾಗಿರುವ ಈ ಗ್ರಂಥ ಕನ್ನಡದ ಭಗವದ್ಗೀತೆಯಂತಿದೆ. ಒಟ್ಟಿನಲ್ಲಿ ಕನಕದಾಸರ ಎಲ್ಲ
>> ಕಾವ್ಯಗಳೂ ಕವಿ ಸಹಜವಾದ ವರ್ಣನೆಗಳಿಂದಲೂ ಉಪಮೆಗಳಿಂದಲೂ ಶ್ರೀಮಂತವಾಗಿದ್ದು ಅವರ ಕಾವ್ಯ
>> ಕೌಶಲಕ್ಕೆ ಎಲ್ಲರೂ ಬೆರಗಾಗುವಂತೆ ಮಾಡಿದೆಯೆಂದರೆ ಉತ್ಪ್ರೇಕ್ಷೆಯಲ್ಲ.*
>>
>> 👉 *ಕೀರ್ತನೆಗಳು*
>>
>> *ಕನಕದಾಸರು 316 ಕೀರ್ತನೆಗಳನ್ನು ರಚಿಸಿದ್ದಾರೆ. ಕನಕದಾಸರ ಭಕ್ತಿ ಪಾರಮ್ಯವನ್ನು ಅವರ
>> ಕೀರ್ತನೆಗಳಲ್ಲಿ ಕಾಣಬಹುದು. ಶ್ರೀಹರಿಯನ್ನು ತಮ್ಮ ಧಣಿಯಾಗಿ, ಇನಿಯನಾಗಿ, ಅಣೋರಣೀಯನಾಗಿ,
>> ಮಹತೋಮಹೀಮನಾಗಿ ಅವರು ಕಂಡಿದ್ದಾರೆ. 'ಬಾ ರಂಗ ಎನ್ನ ಮನಕೆ ಎಂದು ಹೃದಯ ಸದನಕ್ಕೆ 'ಎಂದು
>> ಕರೆದು ನೆಲೆ ನಿಲ್ಲಿಸಿಕೊಂಡ ಅನುಭಾವ ಅವರದು. ಒಳಗಣ್ಣಿನಿಂದ ಅವನ ಕಂಡು- 'ಕಂಡೆ ನಾ ತಂಡ
>> ತಂಡ ಹಿಂಡು ದೈವ ಪ್ರಚಂಡ ರಿಪು ಗಂಡ ಉದ್ಧಂಡ ನರಸಿಂಹನ' ಎಂದು ಸಂತೋಷಪಟ್ಟಿದ್ದಾರೆ. 'ಎಲ್ಲಿ
>> ನೋಡಿದರಲ್ಲಿ ರಾಮ' ಎಂಬ ಅನುಭೂತಿಯಲ್ಲಿ ಹರಿಯನ್ನು ಕಂಡ ಬಳಿಕ 'ಬದುಕಿದೆನು ಬದುಕಿದೆನು ಭವ
>> ಎನಗೆ ಹಿಂಗಿತು' ಎಂಬ ಧನ್ಯತಾಭಾವ. 'ದಾಸದಾಸರ ಮನೆಯ ದಾಸಿಯರ ಮಗ ಮಂಕುದಾಸ ಮರುಳುದಾಸ
>> ನರಜನ್ಮಹುಳು ಪರಮಪಾಪಿ' ಎಂದು ಕರೆದುಕೊಂಡಿದ್ದ ಅವರು ಜೀವ ಮಾಗಿ ಹಣ್ಣಾದಂತೆ ಪರಮಾತ್ಮನ
>> ಸಾಕ್ಷಾತ್ಕಾರವಾದಂತೆ 'ಆತನೊಲಿದ ಮೇಲೆ ಇನ್ಯಾತರ ಕುಲವಯ್ಯಾ' ಎಂದುಕೊಳ್ಳುತ್ತಾರೆ.*
>>
>> *MAHANTAGOUD T PATIL SWCM KSPSTA*
>>
>> *ಜೈನ, ವೀರಶೈವರ ಕಿತ್ತಾಟ, ಮುಸಲ್ಮಾನ ಪ್ರಾಬಲ್ಯ ಇವುಗಳಿಂದ ಸೊರಗಿ ಹೋಗಿದ್ದ ವೈದಿಕ
>> ಧರ್ಮಕ್ಕೆ ಪುನಶ್ಚೇತನ ನೀಡಲು ವ್ಯಾಸರಾಯರಂಥವರು ಶ್ರಮಿಸುತ್ತಿದ್ದ ಕಾಲವದು. ವೈದಿಕ
>> ಸಂಸ್ಕೃತಿಯ ಉತ್ಥಾನಕ್ಕೆಂದು ಹುಟ್ಟು ಹಾಕಲಾದ ವಿಜಯನಗರ ಸಾಮ್ರಾಜ್ಯ ಕೃಷ್ಣದೇವರಾಯನ ಅಳಿವಿನ
>> ನಂತರ ಪತನದ ಹಾದಿ ಹಿಡಿದಿತ್ತು. ಇಂಥಲ್ಲಿ ಕನಕದಾಸರಂಥವರ ಕಾವ್ಯಕೃಷಿ ಹಾಗೂ ಸಾರ್ವಜನಿಕ
>> ಜೀವನ ವ್ಯಾಸರಾಯರಿಗೆ ಬೆಂಬಲದ ಶ್ರೀರಕ್ಷೆಯಾಗಿದ್ದವು.*
>>
>> *'ನಾವು ಕುರುಬರು ನಮ್ಮ ದೇವರು ಬೀರಯ್ಯ ಕಾವ ನಮ್ಮಜ್ಜ ನರಕುರಿ ಹಿಂಡುಗಳ' ಎಂದು ವಿನೀತ
>> ಜಾತಿ ಭಾವನೆ ತೋರಿದ್ದ ಕನಕದಾಸರು ವ್ಯಾಸರಾಯರ ಸಂಪರ್ಕದ ನಂತರ 'ಕುಲಕುಲಕುಲವೆಂದು
>> ಹೊಡೆದಾಡದಿರಿ' ಎಂದು ಜಂಕಿಸಿ ಕೇಳುವ ಹಾಗಾದರು.*
>>
>> *ಇಂಥ ನಡವಳಿಕೆಗಳಿಂದ ವೈದಿಕ ಧರ್ಮದ ಗುತ್ತಿಗೆ ತಮ್ಮದು ಎಂದು ಭಾವಿಸಿದ್ದ ಬ್ರಾಹ್ಮಣರಿಗೆ
>> ಕನಕದಾಸರು ಬಿಸಿ ತುಪ್ಪವಾದರು. ಹಿಂದೂ ಸಮಾಜದಲ್ಲಿ ಈ ಬ್ರಾಹ್ಮಣಬ್ರಾಹ್ಮಣೇತರ ಕಂದರ/ಕ
>> ದೊಡ್ಡದಾಗುತ್ತಾ ಹೋದಂತೆ ವ್ಯಾಸಪೀಠದ ಜೊತೆಗೆ ದಾಸಕೂಟದ ರಚನೆಯೂ ಆಗಬೇಕಾದಂತಹ ಅನಿವಾರ್ಯತೆ
>> ಮೂಡಿತು. ಉಚ್ಚಕುಲದ ಮಾಧ್ವ ಬ್ರಾಹ್ಮಣರು ಶಾಸ್ತ್ರಾಧ್ಯಯನ-ತರ್ಕ-ವ್ಯಾಕರಣಾದಿ ವಿಶಿಷ್ಟ
>> ಜ್ಞಾನಸಂಪನ್ನರಾಗಿ ಶಬ್ದ ಶಬ್ದಗಳನ್ನು ತಿಕ್ಕಿ ತೀಡಿ ನಿಷ್ಪತ್ತಿ ಹಿಡಿದು ಸಿದ್ಧಾಂತ
>> ಪ್ರಮೇಯಗಳನ್ನು ಮಂಡಿಸುವುದೇ ಮುಂತಾದ ಪ್ರಕ್ರಿಯೆಗಳನ್ನು ವ್ಯಾಸಪೀಠದಲ್ಲಿ
>> ನಡೆಯಿಸುತ್ತಿದ್ದರು. ಪುರಂದರದಾಸ, ಕನಕದಾಸ, ಜಗನ್ನಾಥದಾಸ ಮೊದಲಾದವರ ಪ್ರಾತಿನಿಧಿಕ
>> ಸಂಘಟನೆಯೇ ದಾಸಕೂಟ. ಇವರೂ ಮಾಧ್ವ ಮತ ಪ್ರಮೇಯಗಳನ್ನೇ ಪಸರಿಸುತ್ತಾ ಆಚರಿಸುತ್ತಿದ್ದರಾದರೂ
>> ಅವುಗಳನ್ನು ಅರಿಯಲು ಸಂಸ್ಕೃತ ಜ್ಞಾನದ ಅನಿವಾರ್ಯತೆಯನ್ನು ನಿರಾಕರಿಸಿ, ಜಾತಿ ಮತಗಳ ಕಟ್ಟು
>> ಪಾಡಿಲ್ಲದ ಇವರು ಶಾಸ್ತ್ರಾಧ್ಯಯನದ ಅನಿವಾರ್ಯತೆ ಇಲ್ಲದೆ ತಮ್ಮ ಅನುಭಾವದಿಂದ ಹೊರಹೊಮ್ಮುವ
>> ಭಕ್ತಿಭಾವನೆಗಳನ್ನು ತಮ್ಮ ತಾಯ್ನುಡಿಯಲ್ಲಿ ಹಾಡಿ ಲೋಕಪಾವನವನ್ನೂ ಆತ್ಮೋದ್ಧಾರವನ್ನೂ ಮಾಡ
>> ಬೇಕೆನ್ನುವವರು. ಇಂಥಾ ದಾಸಕೂಟವನ್ನು ಹುಟ್ಟುಹಾಕಿ ಪೋಷಿಸಿ ಬೆಳೆಸಿದವರು ವ್ಯಾಸರಾಯರು
>> ಹಾಗೂವಾದಿರಾಜರು. ಇಷ್ಟಿದ್ದರೂ ದಾಸಕೂಟ ವ್ಯಾಸಪೀಠಗಳ ನಡುವೆ ಆಗಿಂದಾಗ್ಗೆ ಘರ್ಷಣೆಗಳು
>> ನಡೆದೇ ಇದ್ದವು. ಈ ಕುರಿತು ಕನಕ ಪುರಂದರರ ಕೀರ್ತನೆಗಳೇ ನಮಗೆ ಸೂಚ್ಯವಾಗಿ ಹೇಳುತ್ತವೆ.*
>>
>> *ಕುಲಕುಲವೆನ್ನುತಿಹರು ಕುಲವಾವುದು ಸತ್ಯ ಸುಖವುಳ್ಳ ಜನರಿಗೆ.*
>>
>> *ತೀರ್ಥವನು ಪಿಡಿದವರು ತಿರುನಾಮಧಾರಿಗಳೇ*
>>
>> *ಜನ್ಮ ಸಾರ್ಥಕವಿರದವರು ಭಾಗವತರಹುದೇ*
>>
>> *ಆವ ಕುಲವಾದರೇನು ಆವನಾದರೇನು ಆತ್ಮಭಾವವರಿತ ಮೇಲೆ.*
>>
>> *ಅವರ ಕೀರ್ತನೆಗಳಲ್ಲಿ ಅವರ ಸಂದೇಶ ನೇರ ಮತ್ತು ಖಚಿತ. ಹಾಗೆಯೇ ಅಮೂರ್ತವಾದ ಪ್ರತಿಮಾ
>> ನಿರೂಪಣೆಯಲ್ಲಿ ಪರಿಣತಿ, ಹಾಗೂ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತ ಸಾಹಿತ್ಯಗಳ ಪರಿಚಯವನ್ನು
>> ಅವರ ಸಾಹಿತ್ಯದಲ್ಲಿ ಕಾಣಬಹುದು.*
>>
>> *ನೀ ಮಾಯೆಯೊಳಗೋ ನಿನ್ನೊಳು ಮಾಯೆಯೋ*
>>
>> *ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೊ*
>>
>> *ನೀ ದೇಹದೊಳಗೊ, ನಿನ್ನೊಳು ದೇಹವೂ*
>>
>> *ಬಯಲು ಆಲಯದೊಳಗೊ, ಆಲಯವು ಬಯಲೊಳಗೊ*
>>
>> *ಬಯಲು ಆಲಯವೆರಡು ನಯನದೊಳಗೊ*
>>
>> *ನಯನ ಬುದ್ಧಿಯೊಳಗೊ, ಬುದ್ಧಿ ನಯನದೊಳಗೊ*
>>
>> *ನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ*
>>
>> *ಸವಿಯು ಸಕ್ಕರೆಯೊಳಗೊ, ಸಕ್ಕರೆಯು ಸವಿಯೊಳಗೊ*
>>
>> *ಸವಿಯು ಸಕ್ಕರೆಯೆರಡು ಜಿಹ್ವೆಯೊಳಗೊ*
>>
>> *ಜಿಹ್ವೆ ಮನಸಿನೊಳಗೊ, ಮನಸು ಜಿಹ್ವೆಯೊಳಗೊ*
>>
>> *ಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ*
>>
>> *ಕುಸುಮದೊಳು ಗಂಧವೊ, ಗಂಧದೊಳು ಕುಸುಮವೊ*
>>
>> *ಕುಸುಮ ಗಂಧಗಳೆರಡು ಘ್ರಾಣದೊಳಗೊ*
>>
>> *ಅಸಮಭವ ಕಾಗಿನೆಲೆಯಾದಿಕೇಶವರಾಯ*
>>
>> *ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೆ*
>>
>> *ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ*
>>
>> *ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ*
>>
>> *ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ*
>>
>> *ಒಡಲು ಹಸಿಯಲು ಅನ್ನವಿಲ್ಲದಲೇ ಇರಬಹುದು*
>>
>> *ಪಡೆದ ಕ್ಷೇತ್ರವ ಬಿಟ್ಟು ಹೊರಡಬಹುದು*
>>
>> *ಮಡದಿ ಮಕ್ಕಳನೆಲ್ಲಾ ತೊಲಗಿಸಿ ಬಿಡಬಹುದು*
>>
>> *ಕಡಲೊಡೆಯ ನಿನ್ನ ಅರೆಘಳಿಗೆ ಬಿಡಲಾಗದು /೧/*
>>
>> *ತಾಯಿ ತಂದೆಯ ಬಿಟ್ಟು ತಪವ ಮಾಡಲೂ ಬಹುದು*
>>
>> *ದಾಯಾದಿ ಬಂಧುಗಳ ಬಿಡಲೂ ಬಹುದು*
>>
>> *ರಾಯ ತಾ ಮುನಿದರೆ ರಾಜ್ಯವನೇ ಬಿಡಬಹುದು*
>>
>> *ಕಾಯಜ ಪಿತ ನಿನ್ನ ಅರೆಘಳಿಗೆ ಬಿಡಲಾಗದು /೨/*
>>
>> *ಪ್ರಾಣವ ಪರರು ಬೇಡಿದರೆತ್ತಿ ಕೊಡಬಹುದು*
>>
>> *ಮಾನದಲಿ ಮನವ ತಗ್ಗಿಸಬಹುದು*
>>
>> *ಜಾಣ ನಾಯಕನಾದ ಆದಿಕೇಶವರಾಯ*
>>
>> *ಜಾಣ ಶ್ರೀಕೃಷ್ಣಾ ನಿನ್ನ ಅರೆಘಳಿಗೆ ಬಿಡಲಾಗದು /೩*
>>
>> 👉 *ಸ್ಮರಣೆ*
>>
>> *ಕನಕದಾಸ ಜಯಂತಿ*
>>
>> *ಕರ್ನಾಟಕ ಸರ್ಕಾರವು 2008ರಿಂದ ಕನಕದಾಸ ಜಯಂತಿಯನ್ನು ಆಚರಿಸುತ್ತಿದೆ. ಆ ದಿನ ಸರ್ಕಾರಿ
>> ರಜೆ ಇರುತ್ತದೆ.*
>>
>> *MAHANTAGOUD T PATIL SWCM KSPSTA*💐💐🙏
>>
>> --
>> You received this message because you are subscribed to the Google Groups
>> "KSHST" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> To view this discussion on the web visit https://groups.google.com/d/ms
>> gid/kshst/CAL8OgzD%2B%2BB%2B6i3m3Vned19YLkOSaqT%2BBwuYYTYt_
>> 2SHEOxg79A%40mail.gmail.com
>> <https://groups.google.com/d/msgid/kshst/CAL8OgzD%2B%2BB%2B6i3m3Vned19YLkOSaqT%2BBwuYYTYt_2SHEOxg79A%40mail.gmail.com?utm_medium=email&utm_source=footer>
>> .
>> For more options, visit https://groups.google.com/d/optout.
>>
> --
> You received this message because you are subscribed to the Google Groups
> "KSHST" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> To view this discussion on the web visit https://groups.google.com/d/
> msgid/kshst/CAP9VewrrNOi9Y%2BQyjEzHNBKQZtJAsrfzheqUMxRz3m
> TuD10T%3DA%40mail.gmail.com
> <https://groups.google.com/d/msgid/kshst/CAP9VewrrNOi9Y%2BQyjEzHNBKQZtJAsrfzheqUMxRz3mTuD10T%3DA%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>

-- 
You received this message because you are subscribed to the Google Groups 
"KSHST" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
To view this discussion on the web visit 
https://groups.google.com/d/msgid/kshst/CABWqfUMYuDUfC3WpK3h4T4xQ%2B1vAop4c41v7Cocgwr8j2yXqiA%40mail.gmail.com.
For more options, visit https://groups.google.com/d/optout.

Reply via email to