🙏💐 *ನವೆಂಬರ್ 26 ಸಂವಿಧಾನ ದಿನಾಚರಣೆಯ ಮಾಹಿತಿ*💐🙏
*MAHANTAGOUD T PATIL SWCM KSPSTA* *1949ರ ನವೆಂಬರ್ 26 ರಂದು ಬಾಬಾಸಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸಮಿತಿ ಸದಸ್ಯರು ಭಾರತ ದೇಶಕ್ಕೆ ಸಮರ್ಪಿಸಿದ ಸಂವಿಧಾನವನ್ನು ಆಂಗೀಕರಿಸಲಾಯಿತು. ಇದು 1950ರ ಜನವರಿ 26ರಂದು ಅನುಷ್ಠಾನಕ್ಕೆ ತರಲಾಯಿತು. ಇದು ಭಾರತದ ಇತಿಹಾಸದಲ್ಲಿ ಹೊಸ ಶಖೆಯನ್ನು ಆರಂಭಿಸಿತ್ತು.* 👉 *ಭಾರತದ ಸಂವಿಧಾನ ಬಗ್ಗೆ:* *ಭಾರತದಲ್ಲಿ ಸಂವಿಧಾನವನ್ನು 1949ರ ನವೆಂಬರ್ 26ರಂದು ಸ್ವೀಕರಿಸಲಾಯಿತು. ಇದು 1950ರ ಜನವರಿ 26ರಂದು ಅನುಷ್ಠಾನಕ್ಕೆ ಬಂತು.* *ಭಾರತದ ಸಂವಿಧಾನವು ಟೈಪ್ ಮಾಡಿರುವುದಲ್ಲ ಅಥವಾ ಮುದ್ರಿತವೂ ಅಲ್ಲ. ಅದನ್ನು ಕೈಯಲ್ಲಿ ಬರೆಯಲಾಗಿದ್ದು, ಇಂಗ್ಲಿಷ್ ಮತ್ತು ಹಿಂದಿಯಲ್ಲಿದೆ. (ಕನ್ನಡ ಭಾಷೆಯಲ್ಲೂ ಓದಬಹುದು)* *ಭಾರತ ಸಂವಿಧಾನದ ಮೂಲ ಪ್ರತಿಗಳನ್ನು ವಿಶೇಷ ಹೀಲಿಯಂ ತುಂಬಿದ ಕವಚಗಳಲ್ಲಿ ಸಂರಕ್ಷಿಸಲಾಗಿದ್ದು, ಇದು ಭಾರತದ ಸಂಸತ್ ಭವನದ ಗ್ರಂಥಾಲಯದಲ್ಲಿದೆ.* *ಭಾರತ ಸಂವಿಧಾನವನ್ನು ಬೇರೆ ಕಡೆಗಳಿಂದ ಪಡೆದ ಅಂಶಗಳ ಚೀಲ ಎಂದು ಕರೆಯಲಾಗುತ್ತಿದೆ.* *ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತದ ಪರಿಕಲ್ಪನೆಗಳನ್ನು ಫ್ರಾನ್ಸ್ ಸಂವಿಧಾನದಿಂದ ಪಡೆಯಲಾಗಿದೆ.* *ಪಂಚವಾರ್ಷಿಕ ಯೋಜನೆಯ ಕಲ್ಪನೆಯನ್ನು ಸೋವಿಯತ್ ಒಕ್ಕೂಟದಿಂದ ಪಡೆಯಲಾಗಿದೆ.* *ರಾಜ್ಯ ನಿರ್ದೇಶನ ತತ್ವಗಳು ಐರ್ಲೆಂಡ್ ಸಂವಿಧಾನದ ಕೊಡುಗೆ* *ಸುಪ್ರೀಂಕೋರ್ಟ್ ಕಾರ್ಯನಿರ್ವಹಣೆಯ ಕಾನೂನನ್ನು ಜಪಾನ್ನಿಂದ ಎರವಲು ಪಡೆಯಲಾಗಿದೆ.* *ಇದು ವಿಶ್ವದ ಯಾವುದೇ ಸ್ವತಂತ್ರ್ಯ ದೇಶಗಳ ಅತಿ ಉದ್ದವಾದ ಸಂವಿಧಾನವಾಗಿದೆ.* *ಭಾರತದ ಸಂವಿಧಾನದಲ್ಲಿ 448 ವಿಧಿಗಳು, 25 ಭಾಗಗಳು, 12 ಶೆಡ್ಯೂಲ್, 5 ಅನುಬಂಧಗಳು, 98 ತಿದ್ದುಪಡಿಗಳಿವೆ.* *ಸಂವಿಧಾನ ರಚನಾ ಸಮಿತಿಯಲ್ಲಿ 284 ಮಂದಿ ಸದಸ್ಯರಿದ್ದರು. ಅವರಲ್ಲಿ 15 ಮಂದಿ ಮಹಿಳೆಯರು.* *ಇದರ ಕರಡನ್ನು 1949ರ ನವೆಂಬರ್ನಲ್ಲಿ ಸಲ್ಲಿಸಲಾಯಿತು. ಸಲ್ಲಿಕೆ ಬಳಿಕ ಅದನ್ನು ಪೂರ್ಣಗೊಳಿಸಲು ಮೂರು ವರ್ಷ ಬೇಕಾಯಿತು.* *ಸಂವಿಧಾನ ರಚನಾ ಸಮಿತಿಯಲ್ಲಿದ್ದ ಎಲ್ಲ 284 ಮಂದಿ ಸದಸ್ಯರು 1950ರ ಜನವರಿ 24ರಂದು ಈ ದಾಖಲೆಗೆ ಸಹಿ ಮಾಡಿದರು.* *1950ರ ಜನವರಿ 26ರಂದು ಇದು ಅಸ್ತಿತ್ವಕ್ಕೆ ಬಂತು.* *ಭಾರತದ ರಾಷ್ಟ್ರಲಾಂಛನವನ್ನೂ ಅದೇ ದಿನ ಅಳವಡಿಸಿಕೊಳ್ಳಲಾಯಿತು.* *ಭಾರತದ ಸಂವಿಧಾನವನ್ನು ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲೊಂದು ಎಂದು ಹೇಳಲಾಗಿದೆ. ಏಕೆಂದರೆ ಅದಕ್ಕೆ ಕೇವಲ 94 ತಿದ್ದುಪಡಿಗಳನ್ನು ತರಲಾಗಿದೆ.* *ಸಂವಿಧಾನದ ಮಹತ್ವ/ಪ್ರಾಮುಖ್ಯತೆ* *ಸಂವಿಧಾನವು ದೇಶದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಅದು ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳನ್ನು ಸರಕಾರದ ಮೂರು ಮುಖ್ಯ ಅಂಗಗಳಾಗಿ ಏರ್ಪಡಿಸುತ್ತದೆ. ಸಂವಿಧಾನವು ಪ್ರತಿ ಅಂಗದ ಅಧಿಕಾರದ ವ್ಯಾಖ್ಯೆಯನ್ನು ನೀಡುವದಲ್ಲದೆ ಅವುಗಳ ಜವಾಬ್ದಾರಿಯನ್ನೂ* *ಖಚಿತಗೊಳಿಸುತ್ತದೆ. ವಿಭಿನ್ನ ಅಂಗಗಳ ನಡುವಿನ ಸಂಬಂಧವನ್ನೂ ಜನತೆ ಹಾಗೂ ಸರಕಾರದ ನಡುವಿನ ಸಂಬಂಧವನ್ನೂ ನಿಯಂತ್ರಿಸುತ್ತದೆ.* *ಸಂವಿಧಾನವು ದೇಶದ ಎಲ್ಲ ಕಾನೂನುಗಳಿಗಿಂತ ಹೆಚ್ಚಿನ ಸ್ಥಾನವನ್ನು ಹೊಂದಿದೆ. ಸರಕಾರವು ಮಾಡುವ ಪ್ರತಿಯೊಂದು ಕಾನೂನು ಸಂವಿಧಾನಕ್ಕೆ ಅನುಗುಣವಾಗಿರಬೇಕು. ಭಾರತದ ಸಂವಿಧಾನವು ದೇಶದ ಗುರಿಗಳು - ಪ್ರಜಾಪ್ರಭುತ್ವ, ಸಮಾಜವಾದ, ಜಾತ್ಯತೀತತೆ ಮತ್ತು ರಾಷ್ಟ್ರೀಯ ಸಮಗ್ರತೆ ಎಂದು ಸ್ಪಷ್ಟಪಡಿಸುತ್ತದೆ. ಅದು ಪ್ರಜೆಗಳ ಹಕ್ಕುಗಳನ್ನು ಮತ್ತುಕರ್ತವ್ಯಗಳನ್ನು ಖಚಿತವಾಗಿ ವಿಧಿಸುತ್ತದೆ* *ಸಂಪುಟ ಸಮಿತಿ* *ಎರಡನೆಯ ಮಹಾಯುದ್ಧವು ಮೇ ೯, ೧೯೪೫ರಂದು* *ಯೂರೋಪಿನಲ್ಲಿ ಮುಕ್ತಾಯಗೊಂಡಿತು.ಅದೇ ವರ್ಷದ ಜುಲೈನಲ್ಲಿ ಯುನೈಟೆಡ್ ಕಿಂಗ್ಡಮ್ನಲ್ಲಿ ಹೊಸ ಸರಕಾರವು ಅಧಿಕಾರಕ್ಕೆ ಬಂದಿತು. ಈ ಹೊಸ* *ಸರಕಾರವು ತನ್ನ ಭಾರತೀಯ ಧೋರಣೆ (ಇಂಡಿಯನ್ ಪಾಲಿಸಿ)ಯನ್ನು ಘೋಷಿಸಿ, ಸಂವಿಧಾನದ ಕರಡನ್ನು ತಯಾರು ಮಾಡಲು ಸಮಿತಿಯನ್ನು ರಚಿಸಲು ನಿರ್ಧರಿಸಿತು. ಮೂವರು ಬ್ರಿಟೀಷ್ ಮಂತ್ರಿಗಳ ತಂಡವೊಂದು, ಭಾರತದ ಸ್ವಾತಂತ್ರ್ಯದ ಬಗ್ಗೆ, ಪರಿಹಾರ ಹುಡುಕಲುಭಾರತಕ್ಕೆ ಬಂದಿತು. ಈ ತಂಡವನ್ನು 'ಸಂಪುಟ* *ಸಮಿತಿ' (Cabinet Mission) ಎಂದು ಕರೆಯಲಾಯಿತು.* *ಸಂವಿಧಾನದ ರೂಪುರೇಷೆಗಳನ್ನು ಚರ್ಚಿಸಿದ ಈ ಸಮಿತಿಯು, ಕರಡು ಸಂವಿಧಾನ ರಚನಾ ಸಮಿತಿಯು ಅನುಸರಿಸಬೇಕಾದ ಕಾರ್ಯವಿಧಾನದ ಕೆಲವು ವಿವರಗಳನ್ನು ಸ್ಪಷ್ಟಪಡಿಸಿತು. ಬ್ರಿಟಿಷ್ ಭಾರತದ ಪ್ರಾಂತ್ಯಗಳ ೨೯೬ ಸ್ಥಾನಗಳಿಗೆ ಚುನಾವಣೆಗಳು ೧೯೪೬ರ ಜುಲೈ - ಅಗಸ್ಟ್ ಹೊತ್ತಿಗೆ ಮುಗಿದವು. ಆಗಸ್ಟ್ ೧೫, ೧೯೪೭ರಂದು ಭಾರತದ ಸ್ವಾತಂತ್ರ್ಯದೊಂದಿಗೆ ಸಂವಿಧಾನರಚನಾ ಸಮಿತಿಯು ಸಂಪೂರ್ಣವಾಗಿ ಸ್ವಾಯತ್ತ ಸಭೆಯಾಗಿ ಮಾರ್ಪಟ್ಟಿತು. ಈ ಸಮಿತಿಯುಡಿಸೆಂಬರ್ ೯, ೧೯೪೬ರಂದು ತನ್ನ ಕೆಲಸವನ್ನು ಆರಂಭಿಸಿತು.* *ಸಂವಿಧಾನ ರಚನಾಸಭೆ: ಭಾರತದ ಜನತೆ ಪ್ರಾಂತೀಯ ಸಭೆಗಳ ಸದಸ್ಯರನ್ನು ಆರಿಸಿ, ಆ ಸಭೆಗಳು ಸಂವಿಧಾನರಚನಾ ಸಭೆಯ ಸದಸ್ಯರನ್ನು ಆರಿಸಿದರು.ಸಂವಿಧಾನ ರಚನಾಸಭೆಯಲ್ಲಿ ಭಾರತದ ವಿವಿಧ ಪ್ರದೇಶಗಳಿಗೆ ಹಾಗೂ ಸಮುದಾಯಗಳಿಗೆ ಸೇರಿದ ಸದಸ್ಯರು ಇದ್ದರು. ಬೇರೆ ಬೇರೆ ರಾಜಕೀಯ ವಿಚಾರಧಾರೆಗಳನ್ನು ಪ್ರತಿನಿಧಿಸುವ ಸದಸ್ಯರೂ ಅಲ್ಲಿ ಇದ್ದರು. ಜವಾಹರ್ಲಾಲ್ ನೆಹರೂ,ರಾಜೇಂದ್ರ ಪ್ರಸಾದ್, ಸರ್ದಾರ್ ಪಟೇಲ್, ಮೌಲಾನಾ ಅಬುಲ್ ಕಲಂ ಆಝಾದ್ ಮತ್ತು ಶ್ಯಾಮ್ ಪ್ರಸಾದ್ ಮುಖರ್ಜಿ ಇವರುಗಳು ಸಭೆಯ ಚರ್ಚೆಗಳಲ್ಲಿ ಭಾಗವಹಿಸಿದ ಕೆಲವು ಪ್ರಮುಖ ವ್ಯಕ್ತಿಗಳಾಗಿದ್ದರು. ಪರಿಶಿಷ್ಟ ವರ್ಗಗಳಿಗೆ ಸೇರಿದ ಮೂವತ್ತಕ್ಕೂ ಹೆಚ್ಚು ಸದಸ್ಯರಿದ್ದರು ಆಂಗ್ಲೋ-ಇಂಡಿಯನ್ ಸಮುದಾಯವನ್ನು ಫ್ರಾಂಕ್ ಆಂಟನಿ ಅವರೂ ಪಾರ್ಸಿ ಜನರನ್ನು ಎಚ್.ಪಿ. ಮೋದಿ ಅವರೂ ಪ್ರತಿನಿಧಿಸಿದ್ದರು. ಆಂಗ್ಲೊ-ಇಂಡಿಯನ್ನರ ಹೊರತಾದ ಎಲ್ಲ ಕ್ರೈಸ್ತರನ್ನು ಪ್ರತಿನಿಧಿಸಿದ ಖ್ಯಾತ ಕ್ರೈಸ್ತರಾದ ಹರೇಂದ್ರ ಕುಮಾರ್ ಮುಖರ್ಜಿಯವರು ಅಲ್ಪಸಂಖ್ಯಾತರ ಸಮಿತಿಯ ಅಧ್ಯಕ್ಷರಾಗಿ ಇದ್ದರು. ಸಂವಿಧಾನ ತಜ್ಞರಾದ ಅಲ್ಲಾಡಿ ಕೃಷ್ಣಸ್ವಾಮಿ, ಬಿ.ಆರ್.ಅಂಬೇಡ್ಕರ್ , ಬಿ.ಎನ್. ರಾಜು ಮತ್ತು ಕೆ.ಎಂ. ಮುನ್ಶಿಯವರೂ ಸಭೆಯ ಸದಸ್ಯರಾಗಿದ್ದರು. ಸರೋಜಿನಿ ನಾಯ್ಡು ಮತ್ತು ವಿಜಯಲಕ್ಷ್ಮಿ ಪಂಡಿತ್ ಪ್ರಮುಖ ಮಹಿಳಾ ಸದಸ್ಯರಾಗಿದ್ದರು. ಡಾ. ಸಚ್ಚಿದಾನಂದ ಸಿನ್ಹಾರವರು ಸಂವಿಧಾನರಚನಾಸಭೆಯ ತಾತ್ಕಲಿಕ ಅಧ್ಯಕ್ಷರಾಗಿದ್ದರು.* *ನಂತರ, ಡಾ.ರಾಜೇಂದ್ರ ಪ್ರಸಾದ್ಅವರು ಅಧ್ಯಕ್ಷರಾಗಿಯೂ ಬಿ.ಆರ್.ಅಂಬೇಡ್ಕರ್ ಅವರು ಕರಡು ಸಮಿತಿ ಅಧ್ಯಕ್ಷರಾಗಿಯೂ ಆಯ್ಕೆಯಾದರು.* *ಸಂವಿಧಾನ ರಚನಾಸಭೆಯು ಎರಡು ವರ್ಷ ೧೧ ತಿಂಗಳು ೧೮ ದಿನಗಳ ಕಾಲದ ಅವಧಿಯಲ್ಲಿ ೧೬೬ ದಿನ ಸಮಾವೇಶಗೊಂಡಿತು. ಈ ಸಮಾವೇಶಗಳಿಗೆ ಸಾರ್ವಜನಿಕರಿಗೂ ಹಾಗು ಪತ್ರಕರ್ತರಿಗೂ ಪ್ರವೇಶವಿತ್ತು.* 👉 *ಆಶಯಗಳ ನಿಷ್ಕರ್ಷೆ(ಧೇಯಗಳ ನಿರ್ಣಯ)* 👉 *ಸಂವಿಧಾನದ ಮೂಲ ತತ್ವಗಳು:* • *ಭಾರತವು ಸ್ವತಂತ್ರ, ಸಾರ್ವಭೌಮ, ಗಣರಾಜ್ಯ.* • *ಭಾರತವು ಹಿಂದಿನ ಬ್ರಿಟಿಷ್ ಭಾರತದ ಪ್ರದೇಶಗಳು, ಭಾರತದ ರಾಜ್ಯಗಳು ಮತ್ತು ಭಾರತವನ್ನು ಸೇರಬಯಸುವ ಇತರ ಪ್ರದೇಶಗಳ ಒಕ್ಕೂಟ.* • *ಒಕ್ಕೂಟವನ್ನು ಸೇರುವ ಪ್ರದೇಶಗಳು ಸ್ವಾಯತ್ತ ಘಟಕಗಳಾಗಿದ್ದು ಒಕ್ಕೂಟಕ್ಕೆ ಒಪ್ಪಿಸಿದ ಅಧಿಕಾರಗಳ ಹೊರತಾಗಿ ಸರಕಾರದ ಮತ್ತು ಆಡಳಿತದ ಎಲ್ಲ ಅಧಿಕಾರಗಳನ್ನು ಮತ್ತು ಕರ್ತವ್ಯಗಳನ್ನು ಚಲಾಯಿಸಬಲ್ಲವಾಗಿರುತ್ತವೆ* • *ಸ್ವತಂತ್ರ ಸಾರ್ವಭೌಮ ಭಾರತದ ಮತ್ತು ಅದರ ಸಂವಿಧಾನದ ಎಲ್ಲಾ ಅಧಿಕಾರಗಳು ಮತ್ತು ಅಧಿಕರಣಗಳು ಭಾರತದ ಪ್ರಜೆಗಳಿಂದ ದೊರೆಯಲ್ಪಡುತ್ತವೆ* • *ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ಕಾನೂನಿನ ಮುಂದೆ ಸಮಾನ ಸ್ಥಾನಮಾನ ಮತ್ತು ಅವಕಾಶಗಳು; ಮತ್ತು ಕಾನೂನು ಮತ್ತು ಸಾರ್ವಜನಿಕ ಸದಾಚಾರದ ಮಿತಿಗಳಲ್ಲಿನ ಮಾತು, ಅಭಿವ್ಯಕ್ತಿ, ನಂಬಿಕೆ, ಭಕ್ತಿ, ಆರಾಧನೆ, ಉದ್ಯೋಗ, ಸಂಗ-ಸಹವಾಸ ಮತ್ತು ಕೃತ್ಯಗಳ ಮೂಲಭೂತ ಹಕ್ಕುಗಳು ಆಶ್ವಾಸಿತವಾಗಿದೆ ಮತ್ತಿವುಗಳು ಒದಗಿಸಲ್ಪಡುತ್ತವೆ* • *ಅಲ್ಪಸಂಖ್ಯಾತರಿಗೆ, ಹಿಂದುಳಿದ ಮತ್ತು ಆದಿವಾಸಿ ಪ್ರಾಂತ್ಯಗಳಿಗೆ, ದೀನ ಮತ್ತು ಹಿಂದುಳಿದ ವರ್ಗಗಳಿಗೆ ಸಮರ್ಪಕ ಸಂರಕ್ಷಣೆಗಳು ಒದಗಿಸಲಾಗುತ್ತದೆ* • *ಭಾರತ ಗಣರಾಜ್ಯದ ಭೂಮಿ, ಸಾಗರ ಮತ್ತು ವಾಯು ಪರಿಮಿತಿಗಳ ಸಾರ್ವಭೌಮತೆಯನ್ನು ಎಲ್ಲಾ ನಾಗರೀಕ ದೇಶಗಳಂತೆ ನ್ಯಾಯವಾಗಿ ಮತ್ತು ಕಾನೂನಿಗನುಸಾರವಾಗಿ ಕಾಪಾಡಲ್ಪಡುತ್ತದೆ* • *ಈ ದೇಶವು ಲೋಕಶಾಂತಿ ಮತ್ತು ಮನುಕುಲದ ಉದ್ಧಾರಕ್ಕೆ ತನ್ನ ಸಂಪೂರ್ಣ ಮತ್ತು ಮನಸಾರ ಪ್ರಯತ್ನವನ್ನು ಮಾಡುವುದು.* 👉 *ಪೀಠಿಕೆ* *ಮುಖ್ಯ ಲೇಖನ: ಭಾರತ ಸಂವಿಧಾನದ ಪೀಠಿಕೆ* *(ಪ್ರಸ್ತಾವನೆ)* *ಭಾರತ ಧರ್ಮಲಿಂಗಂ ಎಂಬು* *“ಭಾರತದ ಪ್ರಜೆಗಳಾದ ನಾವು, ಭಾರತವನ್ನು ಒಂದು ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ, ಪ್ರಜಾಸತ್ತಾತ್ಮಕ ಗಣತಂತ್ರವನ್ನಾಗಿ* *ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲಾ ಪ್ರಜೆಗಳಿಗೆ,* *ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ;ವನ್ನು* *ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯ;ವನ್ನು* *ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ* *ಗಳನ್ನು ದೊರಕಿಸಿ* *ವೈಯಕ್ತಿಕ ಘನತೆ ಮತ್ತು ದೇಶದ ಒಗ್ಗಟ್ಟು ಮತ್ತು ಐಕ್ಯತೆಗೆ* *ಎಲ್ಲರಲ್ಲೂ ಭ್ರಾತೃತ್ವತೆ ಯನ್ನು* *ಪ್ರೋತ್ನಾಹಿಸಲು ನಿರ್ಧರಿಸಿ* *ನಮ್ಮ ಸಂವಿಧಾನ ರಚನಾಸಭೆಯಲ್ಲಿ ಈ ೧೯೪೯ರ ನವೆಂಬರ್ ಮಾಹೆಯ ೨೬ನೇ ದಿನದಂದು, ನಾವಾಗಿ ನಾವೇ ಈ ಸಂವಿಧಾನವನ್ನು ಸ್ವೀಕರಿಸಿ, ಶಾಸನವನ್ನಾಗೆ* *ವಿಧಿಸಿಕೊಳ್ಳುತ್ತೇವೆ.* *ಪೀಠಿಕೆಯು ಭಾರತದ ಸಂವಿಧಾನದ ಒಂದು ಅಂಗವಲ್ಲ; ಏಕೆಂದರೆ ಇದನ್ನು ನ್ಯಾಯಾಲಯದಲ್ಲಿ ಪ್ರಯೋಗಿಸಲು ಸಾಧ್ಯವಿಲ್ಲ. ಹಾಗಿದ್ದರೂ, ಸಂವಿಧಾನದಲ್ಲಿ ದ್ವಂದ್ವ ಇರುವಂತೆ ಕಂಡುಬರುವಲ್ಲಿ ಪೀಠಿಕೆಯನ್ನು ಉಪಯೋಗಿಸಿ ದ್ವಂದ್ವ* *ನಿವಾರಿಸಬಹುದಾದ ಕಾರಣ ಸರ್ವೋಚ್ಛ ನ್ಯಾಯಾಲಯವು ಪೀಠಿಕೆಯನ್ನು ಸಂವಿಧಾನದ ಒಂದು ಅಂಗವಾಗಿ ಪರಿಗಣಿಸಿದೆ. ಇದಕ್ಕೆ ಉದಾಹರಣೆ, 'ಕೇಶವಾನಂದ ಭಾರತಿ ಮತ್ತು ಕೇರಳ ಸರ್ಕಾರ' ಪ್ರಕರಣ. ಅದಾಗ್ಯೂ, ಪೀಠಿಕೆಯನ್ನು ಸಂವಿಧಾನದ ಲೇಖನದಲ್ಲಿ ದ್ವಂದ್ವ ಇದ್ದಾಗ ಮಾತ್ರ, ಮತ್ತಷ್ಟು ಅರ್ಥವತ್ತಾಗಿಸುವ ಸಾಧನವನ್ನಾಗಿ ಬಳಸಬಹುದೇ ಹೊರತು, ಹಕ್ಕು ಸಾಧಿಸುವ* *ಸಂವಿಧಾನದ ಒಂದು ಪ್ರತ್ಯೇಕ ವಿಭಾಗವೆಂದು ಪರಿಗಣಿಸಲಾಗದು.* *ಪೀಠಿಕೆಯ ಮೂಲಪ್ರತಿಯಲ್ಲಿ "ಸಾರ್ವಭೌಮ ಪ್ರಜಾಪ್ರಭುತ್ವ ಗಣರಾಜ್ಯ" ಎಂದಿತ್ತು. ಎರಡು ಹೆಚ್ಚಿನ ಪದಗಳಾದ "ಸಮಾಜವಾದಿ" ಮತ್ತು "ಜಾತ್ಯಾತೀತ" ಪದಗಳನ್ನು ೧೯೭೬ರಲ್ಲಿಸಂವಿಧಾನದ ೪೨ನೆ ತಿದ್ದುಪಡಿಯಲ್ಲಿ ಸೇರಿಸಲಾಯಿತು. ಆ ಸಮಯದಲ್ಲಿ ತುರ್ತುಪರಿಸ್ಥಿತಿ ಜಾರಿಯಲ್ಲಿದ್ದಿದ್ದರಿಂದ, ಸಂವಿಧಾನಕ್ಕೆ ತಿದ್ದುಪಡಿ ತರಲು ಸಾಧ್ಯವೆ ಎಂಬುದನ್ನು ಹಿಂದಿನ ಅನುಭವದ ಆಧಾರದಲ್ಲಿ ಪರಿಶೀಲಿಸಿ, ಸರ್ದಾರ್ ಸ್ವರಣ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿನ ಸಮಿತಿಯು ಈ ತಿದ್ದುಪಡಿಯನ್ನು* *ಕಾರ್ಯಗತಗೊಳಿಸಬಹುದೆಂದು ಶಿಫಾರಸು ಮಾಡಿತು. * 👉 *ಪೀಠಿಕೆಯ ಮಹತ್ವ* *ಪೀಠಿಕೆಯಲ್ಲಿರುವ ಕೆಲವು ವಾಕ್ಯಗಳು, ಭಾರತದ ಸಂವಿಧಾನವು ರಚಿತವಾಗಿರುವ ಕೆಲವು ಮೂಲಭೂತ ಮೌಲ್ಯಗಳು ಮತ್ತು ಸಾತ್ವಿಕ ಸೂಚಿಗಳನ್ನು ಎತ್ತಿ ತೋರಿಸುತ್ತದೆ. ಈ ಪೀಠಿಕೆಯು ನಮ್ಮ ಸಂವಿಧಾನದ ದಿಕ್ಸೂಚಿಯಂತೆ ಕೆಲಸ ಮಾಡುತ್ತದೆ ಮತ್ತು ನ್ಯಾಯಾಧೀಶರು ಸಂವಿಧಾನವನ್ನು ಇದೇ ದಾರಿಯಲ್ಲಿ ವ್ಯಾಖ್ಯಾನಿಸಿ ಮುನ್ನಡೆಸುತ್ತಾರೆ. ಭಾರತದ ಸಂವಿಧಾನದ ಪೀಠಿಕೆಯಲ್ಲಿ ವ್ಯಕ್ತಪಡಿಸಿರುವ ಹಾಗು ತಿದ್ದುಪಡಿ ಮಾಡಲು* *ಸಾದ್ಯವಿಲ್ಲದ ಆಶಯಗಳನ್ನು ಬಹಳಷ್ಟು ಸಂದರ್ಭಗಳಲ್ಲಿ ಭಾರತದ ಸರ್ವೋಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ. ಪೀಠಿಕೆಯು ಸಂವಿಧಾನದ ಒಂದು ಭಾಗವಾದರೂ ಅದನ್ನು ಅಥವಾ ಅದರ ಯಾವುದೇ ಅಂಶವನ್ನು ಕಾನೂನಿಗನುಸಾರವಾಗಿ ಜಾರಿ(ಹೇರು) ಮಾಡುವಂತಿಲ್ಲ. ಪೀಠಿಕೆಯ ಮೊದಲ ಪದಗಳು - "ನಾವು, ಜನರು " - ಭಾರತದಲ್ಲಿ ಅಧಿಕಾರ ಜನಗಳ ಕೈನಲ್ಲಿದೆ ಎಂಬ ಅಂಶದ ಪ್ರಾಮುಖ್ಯತೆಯನ್ನು ಹೇಳುತ್ತದೆ. ಪೀಠಿಕೆಯು, ಭಾರತದ ಪ್ರತಿಯೂಬ್ಬ ನಾಗರೀಕ ಹಾಗು ಸರ್ಕಾರ ಅನುಸರಿಸಬೇಕಾದ ಮತ್ತು ಸಾಧಿಸಬೇಕಾದ ಬಹು ಮುಖ್ಯ ರಾಷ್ಟ್ರೀಯ ಧ್ಯೇಯಗಳನ್ನು ಬಿಡಿಸಿ ಹೇಳುತ್ತದೆ. ಅವುಗಳೆಂದರೆ ಸಮಾಜವಾದ, ಜಾತಿ ನಿರಪೇಕ್ಷತೆ ಮತ್ತು ರಾಷ್ಟ್ರೀಯ ಭಾವೈಕ್ಯತೆ. ಕೊನೆಯದಾಗಿ ಅದರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ದಿನಾಂಕ -ನವೆಂಬರ್ ೨೬ ೧೯೪೯ ಎಂದು ಹೇಳುತ್ತದೆ. ಪೀಠಿಕೆಯ ಕೆಲವು ಪದಗಳ ನಿರೂಪಣೆ ಸಾರ್ವಭೌಮ ಸಾರ್ವಭೌಮ ಎಂಬ ಪದದ ಅರ್ಥ ಪರಮಾಧಿಕಾರ ಅಥಾವ ಸ್ವತಂತ್ರ ಎಂದು. ಭಾರತವು ಆಂತರಿಕವಾಗಿ ಹಾಗೂ ಬಾಹ್ಯವಾಗಿ ಸಾರ್ವಭೌಮ. ಬಾಹ್ಯವಾಗಿ ಯಾವುದೇ ವಿದೇಶೀ ಶಕ್ತಿಯ ಅಧೀನದಲ್ಲಿ ಭಾರತ ಇಲ್ಲ ಹಾಗೂ ಆಂತರಿಕವಾಗಿ ಒಂದು ಮುಕ್ತ, ಜನರಿಂದ ಆರಿಸಲ್ಪಟ್ಟ ಸರಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತದೆ. ಸಮಾಜವಾದಿ ಸಮಾಜವಾದಿ ಪದವು ಪೀಠಿಕೆಗೆ ೧೯೭೬ರಲ್ಲಿ ೪೨ನೇ ತಿದ್ದುಪಡಿಯಿಂದ ಸೇರಿಸಲ್ಪಟ್ಟಿತು. ಇದರ ಅರ್ಥ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ. ಸಾಮಾಜಿಕ ಸಮಾನತೆಯ ಅರ್ಥ ಧರ್ಮ, ಜಾತಿ, ಲಿಂಗ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ತಾರತಮ್ಯ ಮಾಡದೇ ಇರುವುದು. ಸಾಮಾಜಿಕ ಸಮಾನತೆಯ ಅಡಿಯಲ್ಲಿ ಎಲ್ಲರಿಗೂ ಸಮಾನ ಸ್ಥಾನಮಾನ ಮತ್ತು ಅವಕಾಶಗಳಿವೆ. ಆರ್ಥಿಕ ಸಮಾನತೆಯ ಅರ್ಥ ಭಾರತ ಸರಕಾರ ಎಲ್ಲರಿಗೂ ಸಮಾನ ಆರ್ಥಿಕ ಅವಕಾಶಗಳನ್ನು ಹಾಗೂ ಎಲ್ಲರಿಗೂ ಯೋಗ್ಯವಾದ ಜೀವನಮಟ್ಟವನ್ನು ಕಲ್ಪಿಸಲು ಯತ್ನಿಸುತ್ತದೆ. ಇದರ ತತ್ತ್ವಾರ್ಥ ಒಂದು ಸುಖೀ ರಾಜ್ಯದ ನಿರ್ಮಾಣಕ್ಕೆ ಬದ್ಧರಾಗುವುದಾಗಿದೆ. ಭಾರತವು ಮಿಶ್ರ ಅರ್ಥವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಸರಕಾರವು ಸಾಮಾಜಿಕ ಸಮಾನತೆಯನ್ನು ಸಾಧಿಸಲು ಬಹಳಷ್ಟು ಕಾನೂನುಗಳನ್ನು ಮಾಡಿದೆ. ಇವುಗಳಲ್ಲಿ ಅಸ್ಪೃಶ್ಯತೆ ಮತ್ತು ಜೀತಪದ್ಧತಿ ನಿವಾರಣೆ, ಸಮಾನ ಭತ್ಯೆ ಮಸೂದೆ ಮತ್ತು ಬಾಲಕಾರ್ಮಿಕ ನಿಷೇಧ ಮಸೂದೆ ಸೇರಿವೆ. ಜಾತ್ಯತೀತ ಜಾತ್ಯತೀತ ಎಂಬ ಪದವನ್ನು ಪೀಠಿಕೆಗೆ ೧೯೭೬ರ ೪೨ನೇ ತಿದ್ದುಪಡಿಯ ಮೂಲಕ ಸೇರಿಸಲಾಯಿತು. ಇದರ ಅರ್ಥ ಎಲ್ಲ ಧರ್ಮಗಳ ಸಮಾನತೆ ಮತ್ತು ಧಾರ್ಮಿಕ ಸಹನೆ. ಭಾರತವು ಯಾವುದೇ ಅಧಿಕೃತ ಧರ್ಮವನ್ನು ಹೊಂದಿಲ್ಲ. ಪ್ರತಿಯೊಬ್ಬರಿಗೂ ತಮ್ಮ ಆಯ್ಕೆಯ ಧರ್ಮದ ಪ್ರಚಾರವನ್ನು ಮಾಡುವ ಹಾಗೂ ಆಚರಿಸುವ ಹಕ್ಕಿದೆ. ಸರಕಾರವು ಯಾವುದೇ ಧರ್ಮದ ಪರ ಅಥವಾ ವಿರುದ್ಧ ನಿಲುವನ್ನು ತಳೆಯುವಂತಿಲ್ಲ. ಎಲ್ಲ ಪ್ರಜೆಗಳು ತಮ್ಮ ಧಾರ್ಮಿಕ ಭಾವನೆಗಳ ಹೊರತಾಗಿಯೂ ಕಾನೂನಿನ ಕಣ್ಣಿನಲ್ಲಿ ಸಮಾನರಾಗಿದ್ದಾರೆ. ಸರಕಾರೀ ಅನುದಾನಿತ ಶಾಲೆಗಳಲ್ಲಿ ಯಾವುದೇ ಧರ್ಮದ ಆಚಾರ-ಪ್ರಚಾರ ನಡೆಯುವಂತಿಲ್ಲ. ಬೊಮ್ಮಾಯಿ vs ಭಾರತ ಸರಕಾರ ದಾವೆಯಲ್ಲಿ ಸರ್ವೋಚ್ಛ ನ್ಯಾಯಾಲಯವುಜಾತ್ಯತೀತತೆಯು ಭಾರತ ಸಂವಿಧಾನದ ವಿನ್ಯಾಸದ ಒಂದು ಸಮಗ್ರ ಅಂಗ ಎಂದು ಭಾವಿಸಿದೆ. ಪ್ರಜಾಪ್ರಭುತ್ವ ಪ್ರಜಾಪ್ರಭುತ್ವವಾದ ಭಾರತ ದೇಶದ ಪ್ರಜೆಗಳು ಕೇಂದ್ರ, ರಾಜ್ಯ ಹಾಗೂ ಪ್ರಾದೇಶಿಕ ವಿಭಾಗಗಳಲ್ಲಿ ತಮ್ಮ ಸರಕಾರವನ್ನು ಸಾರ್ವತ್ರಿಕ ಮತಾಧಿಕಾರದ ಪದ್ಧತಿಯ ಮೂಲಕ ಆರಿಸುತ್ತಾರೆ. ಭಾರತದ ಎಲ್ಲ ೧೮ ವರ್ಷಗಳ ವಯೋಮಿತಿಯ ಮೇಲಿರುವ ಕಾನೂನುಬದ್ಧ ಮತ ಚಲಾಯಿಸುವ ಅಧಿಕಾರ ಹೊಂದಿರುವ ಪ್ರಜೆಗಳು ಧರ್ಮ, ಜಾತಿ, ಮತ, ಲಿಂಗ ಅಥವಾ ಶಿಕ್ಷಣ ಮಟ್ಟದ ಭೇದವಿಲ್ಲದೇ ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ. ಗಣತಂತ್ರ ಗಣತಂತ್ರವು ರಾಜಪ್ರಭುತ್ವಕ್ಕೆ ವಿರುದ್ದವಾದದ್ದು. ರಾಜಪ್ರಭುತ್ವದಲ್ಲಿ ಒಂದು ರಾಜ್ಯದ ಮುಖ್ಯಸ್ತರು ವಂಶ ಪಾರಂಪರೆಯ ಆಧಾರದ ಮೇಲೆ ಜೀವಮಾನದವರೆಗೆ ಅಥವಾ ಸಿಂಹಾಸನವನ್ನು ತ್ಯಜಿಸುವವರೆಗೆ ನೇಮಿತಗೊಳ್ಳುತ್ತಾರೆ. ಪ್ರಜಾಪ್ರಭುತ್ವದಲ್ಲಿ ಗಣತಂತ್ರ ಎಂದರೆ " ಒಂದು ರಾಷ್ಟ್ರದ ಮುಖ್ಯಸ್ಥರನ್ನು ಪ್ರತ್ಯೇಕ್ಷ ಅಥವಾ ಪರೋಕ್ಷ ಚುನಾವಣೆಯ ಮೂಲಕ ಆಯ್ಕೆ ಮಾಡುವುದಕ್ಕೆ ಗಣತಂತ್ರ" ಎನ್ನುವರು. ಅನುಚ್ಛೇಧಗಳು ಅನುಚ್ಛೇಧಗಳನ್ನು ಸಂವಿಧಾನದ ತಿದ್ದುಪಡಿಯ ಮುಖಾಂತರ ಸೇರಿಸಬಹುದು. ಪ್ರಚಲಿತದಲ್ಲಿರುವ ೧೨ ಅನುಚ್ಛೇಧಗಳು ಇವುಗಳನ್ನು ಒಳಗೊಂಡಿವೆ. ರಾಜ್ಯ ಸರ್ಕಾರ ಹಾಗು ಕೇಂದ್ರಾಡಳಿತ ಪ್ರದೇಶಗಳ ಅಧಿಕಾರ ಪರಮಾವದಿ; ಉನ್ನತ ಅಧಿಕಾರಿಗಳ ಸಂಬಳ(ವರಮಾನ);ಪ್ರಮಾಣವಚನಗಳ ವಿಧಗಳು; ರಾಜ್ಯಸಭೆ(ರಾಜ್ಯಗಳ ಪರಿಷತ್ತು - ಸಂಸತ್ತಿನ ಮೇಲ್ಮನೆ)ಯಲ್ಲಿ ಪ್ರತಿ ರಾಜ್ಯ ಹಾಗು ಕೇಂದ್ರಾಡಳಿತ ಪ್ರದೇಶಗಳಿಗೆ ಇಂತಿಷ್ಟು ಎಂದು ಸ್ಥಾನಗಳನ್ನು ನಿಗದಿಪಡಿಸುವುದು.ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಆಡಳಿತ ಮತ್ತು ನಿಯಂತ್ರಣಕ್ಕೆ ವಿಶೇಷ ಏರ್ಪಾಟು ಕಲ್ಪಿಸುವುದು;ಅಸ್ಸಾಮಿನಲ್ಲಿರುವ ಬುಡಕಟ್ಟು ಪ್ರದೇಶಗಳ ಆದಳಿತಕ್ಕೆ ಏರ್ಪಾಟು ಕಲ್ಪಿಸುವುದು; ಕೇಂದ್ರ(ಕೇಂದ್ರ ಸರ್ಕಾರ),ರಾಜ್ಯ ಹಾಗು ದ್ವಂದ್ವ ಜವಾಬ್ದಾರಿಗಳ ಪಟ್ಟಿಗಳು; ಅಧಿಕೃತ ಭಾಷೆಗಳು ; ಸ್ಥಳ ಮತ್ತು ಅವಧಿಯ ಸುಧಾರಣೆ ; ಭಾರತದೊಂದಿಗೆ ಸಿಕ್ಕಿಂನ್ ಸಂಯೋಗ; ಸಂಸತ್ ಸದಸ್ಯರು ಮತ್ತು ವಿಧಾನ ಸಭಾ ಸದಸ್ಯರ ಪಕ್ಷಾಂತರ ವಿರುದ್ದ ವಿಶೇಷ ಏರ್ಪಾಟು ಕಲ್ಪಿಸುವುದು ; ಗ್ರಾಮೀಣ ಅಭಿವೃದ್ಧಿ ; ಮತ್ತು ನಗರ ಯೋಜನೆ . ತಿದ್ದುಪಡಿಗಳು ಭಾರತದ ಸಂವಿಧಾನವನ್ನು ತಿದ್ದುಪಡಿ ಮಾಡಲು ಈ ಕೆಳಗಿನ ಪ್ರಕ್ರಿಯೆಗಳಿವೆ: • ಸಂಸತ್ತಿನಲ್ಲಿ ಸಾಮಾನ್ಯ ಬಹುಮತದಿಂದ: ಸಂಸತ್ತಿನಲ್ಲಿ ತಿದ್ದುಪಡಿ ಮತಕ್ಕೆ ಬಂದಾಗ ಅಲ್ಲಿರುವ ಅರ್ಧಕ್ಕಿಂತ ಹೆಚ್ಚು ಸಂಸದೀಯರ ಅಂಗೀಕಾರವಿದ್ದರೆ, ಈ ತಿದ್ದುಪಡಿ ರಾಷ್ಟ್ರಪತಿಯ ಸಮ್ಮತಿಗೆ ಕಳುಹಿಸಬಹುದು. • ಸಂಸತ್ತಿನಲ್ಲಿ ವಿಶೇಷ ಬಹುಮತದಿಂದ: ಸಂಸತ್ತಿನಲ್ಲಿ ಅರ್ಧಕ್ಕಿಂತ ಹೆಚ್ಚು ಸದಸ್ಯರು ಹಾಜರಿದ್ದು, ಅವರಲ್ಲಿ ೩ರಲ್ಲಿ ೨ ಭಾಗ ಸಂಸದೀಯರು ತಿದ್ದುಪಡಿಯನ್ನು ಅಂಗೀಕರಿಸಿದರೆ ಅ ತಿದ್ದುಪಡಿ ರಾಷ್ಟ್ರಪತಿಯ ಸಮ್ಮತಿಗೆ ಕಳುಹಿಸಬಹುದು. • ಕೇಂದ್ರ ಮತ್ತು ರಾಜ್ಯಗಳ ಸಂಬಂಧದ ಬಗೆಗಿನ ತಿದ್ದುಪಡಿಗಳಿಗೆ ಮೇಲಿನಂತೆ ಸಂಸತ್ತಿನ ವಿಶೇಷ ಬಹುಮತವಿದ್ದು, ಅದರೊಂದಿಗೆ ಕನಿಷ್ಟ ಅರ್ಧ ರಾಜ್ಯಗಳ ಶಾಸನಸಭೆಗಳಲ್ಲಿ ವಿಶೇಷ ಬಹುಮತ ಗಳಿಸಿದರೆ, ಈ ತಿದ್ದುಪಡಿ ರಾಷ್ಟ್ರಪತಿಯ ಸಮ್ಮತಿಗೆ ಕಳುಹಿಸಬಹುದು. [೧] ಮೇಲಿನಂತೆ ಸಂವಿಧಾನ ತಿದ್ದುಪಡಿ ಒಂದು ಕಠಿಣ ಪ್ರಕ್ರಿಯೆಯಾದರೂ, ಭಾರತದ ಸಂವಿಧಾನ ಪ್ರಪಂಚದ ಅತೀ ತಿದ್ದಲ್ಪಟ್ಟ ಸಂವಿಧಾನಗಳಲ್ಲಿ ಒಂದಾಗಿದೆ. ಮೊಟ್ಟಮೊದಲ ತಿದ್ದುಪಡಿ ಸಂವಿಧಾನದ ಅಳವಡಿಕೆಯ ಒಂದು ವರ್ಷದೊಳಗೆಯೆ ಆಯಿತು. ಇದರಲ್ಲಿ ಹಲವಾರು ಸಣ್ಣ ಬದಲಾವಣೆಗಳನ್ನು ಮಾಡಲಾಯಿತು. ನಂತರದಿಂದ ವರ್ಷಕ್ಕೆ ಸರಾಸರಿ ೨ ತಿದ್ದುಪಡಿಗಳಷ್ಟು ಆಗಿವೆ. ಈ ಸಂವಿಧಾನ ಸವಿಸ್ತಾರವಾಗಿರುವುದರಿಂದ, ಬೇರೆ ಜನತಂತ್ರ ದೇಶಗಳಲ್ಲಿ ವಿಶೇಷ ಕಾಯಿದೆ (ordinance) ಮೂಲಕ ಜಾರಿಗೆ ತರಬಲ್ಲ ಕಾಯಿದೆಗಳನ್ನು ಭಾರತದಲ್ಲಿ ತಿದ್ದುಪಡಿಯಿಂದ ಮಾತ್ರ ತರಲಾಗುತ್ತದೆ. ೧೯೭೪ರ ಕೇಶವಾನಂದ ಭಾರತಿ ವಿರುದ್ಧ ಕೇರಳಾ ರಾಜ್ಯ ಸರ್ಕಾರ ಮೊಕದ್ದಮೆಯಲ್ಲಿ ಭಾರತದ ಸರ್ವೋಚ್ಛ ನ್ಯಾಯಾಲಯ ನೀಡಿದ ಒಂದು ಪ್ರಮುಖ ತೀರ್ಪಿನಲ್ಲಿ ಸಂವಿಧಾನದತ್ತ ನ್ಯಾಯಾಂಗ ಪರಿಶೀಲನೆಯ ಶಕ್ತಿಯನ್ನು ಶಾಸಕಾಂಗದ ಸಂವಿಧಾನದ ತಿದ್ದುಪಡಿಗಳನ್ನೂ ಪರಿಶೀಲಿಸುವುದಕ್ಕೆ ವಿಸ್ತರಿಸಿ ಸಂವಿಧಾನದ ಮೂಲಭೂತ ತತ್ವಗಳ ವ್ಯಾಖ್ಯಾನವನ್ನು ಸ್ಥಾಪಿಸಿತು. ಇದರಡಿಯಲ್ಲಿ ೩೯ನೇ ತಿದ್ದುಪಡಿಯನ್ನು ಮತ್ತು ೪೨ನೇ ತಿದ್ದುಪಡಿಯ ಭಾಗಗಳನ್ನು ಅಸಂವಿಧಾನಿಕ ಎಂದು ಘೋಷಿಸಿ ಅವನ್ನು ತಗೆದೆ ಹಾಕಿತು. ಎಚ್.ಎಮ್.ಸೀರ್ವಾಯ್ರಂತಃ ಕೆಲ ಸಂವಿಧಾನಿಕ ತಜ್ಞರು ಇದು ಸಂವಿಧಾನ ಶಿಲ್ಪಿಗಳ ಆಶಯಗಳ ಉಲ್ಲಂಘನೆಯೆಂದು ಅಭಿಪ್ರಾಯಿಸಿದ್ದಾರೆ. ಭಾರತದ ಸಂವಿಧಾನ ಇಲ್ಲಿಯವರೆಗೂ ೧೦೮ ತಿದ್ದುಪಡಿಗಳನ್ನು ಕಂಡಿದ್ದು, ಇತ್ತೀಚೆಗೆ ೨೦೧೦ ನೇ ವರ್ಷ ಮಾರ್ಚ ೯ರಂದು ರಾಜ್ಯಸಭೆಯಲ್ಲಿ ಮಹಿಳಾ ವಿಧೆಯಕ ಅಂಗೀಕಾರವಾಗಿ ರಾಷ್ತ್ರಪತಿಗಲಳ ಅಂಕಿತಕ್ಕಾಗಿ ಹೋಗಿದೆ... *(ಕೃಪೆ.ಗೂಗಲ್... ಸಂಗ್ರಹ ಮಹಾಂತಗೌಡ.ಟಿ.ಪಾಟೀಲ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು)*💐💐🙏 On 25-Nov-2017 8:19 AM, "sheetal patil" <[email protected]> wrote: ಗುರುಗಳೇ ಸಂವಿಧಾನ ದಿನದ ಬಗ್ಗೆ ಮಾಹಿತಿ ಹಾಕಿ On Nov 24, 2017 8:30 AM, "Mahantagoud Patil" <[email protected]> wrote: > ಆಕಸ್ಮೀಕವಾಗಿ ಸಂದೇಶ ಬಂದಿದೆ ಎಲ್ಲರಲ್ಲಿಯೂ ಕ್ಷಮೆ ಇರಲಿ > > -- > You received this message because you are subscribed to the Google Groups > "KSHST" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > To view this discussion on the web visit https://groups.google.com/d/ms > gid/kshst/CAL8OgzAt5vQdDFs_R6ZtcazREz%2BOid7qGB_YTF9dY3SLvHA > bmg%40mail.gmail.com > <https://groups.google.com/d/msgid/kshst/CAL8OgzAt5vQdDFs_R6ZtcazREz%2BOid7qGB_YTF9dY3SLvHAbmg%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- You received this message because you are subscribed to the Google Groups "KSHST" group. To unsubscribe from this group and stop receiving emails from it, send an email to [email protected]. To post to this group, send email to [email protected]. To view this discussion on the web visit https://groups.google.com/d/ msgid/kshst/CANyiUyRF7bor%2B0PzDBMK-CchPYTOXNKKvUaYkH3- CJWBES7e0w%40mail.gmail.com <https://groups.google.com/d/msgid/kshst/CANyiUyRF7bor%2B0PzDBMK-CchPYTOXNKKvUaYkH3-CJWBES7e0w%40mail.gmail.com?utm_medium=email&utm_source=footer> . For more options, visit https://groups.google.com/d/optout. -- You received this message because you are subscribed to the Google Groups "KSHST" group. To unsubscribe from this group and stop receiving emails from it, send an email to [email protected]. To post to this group, send email to [email protected]. To view this discussion on the web visit https://groups.google.com/d/msgid/kshst/CAL8OgzDHeQ5vr28eVm1ZjqZYis9DXa%3DQ6zWimE6PDOASCuGMoA%40mail.gmail.com. For more options, visit https://groups.google.com/d/optout.
