ತುಂಬಾ ಉಪಯುಕ್ತ ಮಾಹಿತಿ ಗುರುಗಳೇ

On 26 Nov 2017 12:02 pm, "ssagasagi" <[email protected]> wrote:

>
>
>
>
> Sent from my Mi phoneOn 26-Nov-2017 11 <201711>:27 AM, Mahantagoud Patil <
> [email protected]> wrote:
>
> 🙏💐 *ನವೆಂಬರ್ 26 ಸಂವಿಧಾನ ದಿನಾಚರಣೆಯ ಮಾಹಿತಿ*💐🙏
>
>
> *MAHANTAGOUD T PATIL SWCM KSPSTA*
>
>
> *1949ರ ನವೆಂಬರ್ 26 ರಂದು ಬಾಬಾಸಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸಮಿತಿ ಸದಸ್ಯರು
> ಭಾರತ ದೇಶಕ್ಕೆ ಸಮರ್ಪಿಸಿದ ಸಂವಿಧಾನವನ್ನು ಆಂಗೀಕರಿಸಲಾಯಿತು. ಇದು 1950ರ ಜನವರಿ 26ರಂದು
> ಅನುಷ್ಠಾನಕ್ಕೆ ತರಲಾಯಿತು. ಇದು ಭಾರತದ ಇತಿಹಾಸದಲ್ಲಿ ಹೊಸ ಶಖೆಯನ್ನು ಆರಂಭಿಸಿತ್ತು.*
>
>
> 👉 *ಭಾರತದ ಸಂವಿಧಾನ ಬಗ್ಗೆ:*
>
> *ಭಾರತದಲ್ಲಿ ಸಂವಿಧಾನವನ್ನು 1949ರ ನವೆಂಬರ್ 26ರಂದು ಸ್ವೀಕರಿಸಲಾಯಿತು. ಇದು 1950ರ
> ಜನವರಿ 26ರಂದು ಅನುಷ್ಠಾನಕ್ಕೆ ಬಂತು.*
>
> *ಭಾರತದ ಸಂವಿಧಾನವು ಟೈಪ್ ಮಾಡಿರುವುದಲ್ಲ ಅಥವಾ ಮುದ್ರಿತವೂ ಅಲ್ಲ. ಅದನ್ನು ಕೈಯಲ್ಲಿ
> ಬರೆಯಲಾಗಿದ್ದು, ಇಂಗ್ಲಿಷ್ ಮತ್ತು ಹಿಂದಿಯಲ್ಲಿದೆ. (ಕನ್ನಡ ಭಾಷೆಯಲ್ಲೂ ಓದಬಹುದು)*
>
> *ಭಾರತ ಸಂವಿಧಾನದ ಮೂಲ ಪ್ರತಿಗಳನ್ನು ವಿಶೇಷ ಹೀಲಿಯಂ ತುಂಬಿದ ಕವಚಗಳಲ್ಲಿ
> ಸಂರಕ್ಷಿಸಲಾಗಿದ್ದು, ಇದು ಭಾರತದ ಸಂಸತ್ ಭವನದ ಗ್ರಂಥಾಲಯದಲ್ಲಿದೆ.*
>
> *ಭಾರತ ಸಂವಿಧಾನವನ್ನು ಬೇರೆ ಕಡೆಗಳಿಂದ ಪಡೆದ ಅಂಶಗಳ ಚೀಲ ಎಂದು ಕರೆಯಲಾಗುತ್ತಿದೆ.*
>
> *ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತದ ಪರಿಕಲ್ಪನೆಗಳನ್ನು ಫ್ರಾನ್ಸ್ ಸಂವಿಧಾನದಿಂದ
> ಪಡೆಯಲಾಗಿದೆ.*
>
> *ಪಂಚವಾರ್ಷಿಕ ಯೋಜನೆಯ ಕಲ್ಪನೆಯನ್ನು ಸೋವಿಯತ್ ಒಕ್ಕೂಟದಿಂದ ಪಡೆಯಲಾಗಿದೆ.*
>
> *ರಾಜ್ಯ ನಿರ್ದೇಶನ ತತ್ವಗಳು ಐರ್ಲೆಂಡ್ ಸಂವಿಧಾನದ ಕೊಡುಗೆ*
>
> *ಸುಪ್ರೀಂಕೋರ್ಟ್ ಕಾರ್ಯನಿರ್ವಹಣೆಯ ಕಾನೂನನ್ನು ಜಪಾನ್ನಿಂದ ಎರವಲು ಪಡೆಯಲಾಗಿದೆ.*
>
> *ಇದು ವಿಶ್ವದ ಯಾವುದೇ ಸ್ವತಂತ್ರ್ಯ ದೇಶಗಳ ಅತಿ ಉದ್ದವಾದ ಸಂವಿಧಾನವಾಗಿದೆ.*
>
> *ಭಾರತದ ಸಂವಿಧಾನದಲ್ಲಿ 448 ವಿಧಿಗಳು, 25 ಭಾಗಗಳು, 12 ಶೆಡ್ಯೂಲ್, 5 ಅನುಬಂಧಗಳು, 98
> ತಿದ್ದುಪಡಿಗಳಿವೆ.*
>
> *ಸಂವಿಧಾನ ರಚನಾ ಸಮಿತಿಯಲ್ಲಿ 284 ಮಂದಿ ಸದಸ್ಯರಿದ್ದರು. ಅವರಲ್ಲಿ 15 ಮಂದಿ ಮಹಿಳೆಯರು.*
>
> *ಇದರ ಕರಡನ್ನು 1949ರ ನವೆಂಬರ್ನಲ್ಲಿ ಸಲ್ಲಿಸಲಾಯಿತು. ಸಲ್ಲಿಕೆ ಬಳಿಕ ಅದನ್ನು
> ಪೂರ್ಣಗೊಳಿಸಲು ಮೂರು ವರ್ಷ ಬೇಕಾಯಿತು.*
>
> *ಸಂವಿಧಾನ ರಚನಾ ಸಮಿತಿಯಲ್ಲಿದ್ದ ಎಲ್ಲ 284 ಮಂದಿ ಸದಸ್ಯರು 1950ರ ಜನವರಿ 24ರಂದು ಈ
> ದಾಖಲೆಗೆ ಸಹಿ ಮಾಡಿದರು.*
>
> *1950ರ ಜನವರಿ 26ರಂದು ಇದು ಅಸ್ತಿತ್ವಕ್ಕೆ ಬಂತು.*
>
> *ಭಾರತದ ರಾಷ್ಟ್ರಲಾಂಛನವನ್ನೂ ಅದೇ ದಿನ ಅಳವಡಿಸಿಕೊಳ್ಳಲಾಯಿತು.*
>
> *ಭಾರತದ ಸಂವಿಧಾನವನ್ನು ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲೊಂದು ಎಂದು ಹೇಳಲಾಗಿದೆ.
> ಏಕೆಂದರೆ ಅದಕ್ಕೆ ಕೇವಲ 94 ತಿದ್ದುಪಡಿಗಳನ್ನು ತರಲಾಗಿದೆ.*
>
>
> *ಸಂವಿಧಾನದ ಮಹತ್ವ/ಪ್ರಾಮುಖ್ಯತೆ*
>
> *ಸಂವಿಧಾನವು ದೇಶದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಅದು
> ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳನ್ನು ಸರಕಾರದ ಮೂರು ಮುಖ್ಯ ಅಂಗಗಳಾಗಿ
> ಏರ್ಪಡಿಸುತ್ತದೆ. ಸಂವಿಧಾನವು ಪ್ರತಿ ಅಂಗದ ಅಧಿಕಾರದ ವ್ಯಾಖ್ಯೆಯನ್ನು ನೀಡುವದಲ್ಲದೆ ಅವುಗಳ
> ಜವಾಬ್ದಾರಿಯನ್ನೂ* *ಖಚಿತಗೊಳಿಸುತ್ತದೆ. ವಿಭಿನ್ನ ಅಂಗಗಳ ನಡುವಿನ ಸಂಬಂಧವನ್ನೂ ಜನತೆ ಹಾಗೂ
> ಸರಕಾರದ ನಡುವಿನ ಸಂಬಂಧವನ್ನೂ ನಿಯಂತ್ರಿಸುತ್ತದೆ.*
>
> *ಸಂವಿಧಾನವು ದೇಶದ ಎಲ್ಲ ಕಾನೂನುಗಳಿಗಿಂತ ಹೆಚ್ಚಿನ ಸ್ಥಾನವನ್ನು ಹೊಂದಿದೆ. ಸರಕಾರವು
> ಮಾಡುವ ಪ್ರತಿಯೊಂದು ಕಾನೂನು ಸಂವಿಧಾನಕ್ಕೆ ಅನುಗುಣವಾಗಿರಬೇಕು. ಭಾರತದ ಸಂವಿಧಾನವು ದೇಶದ
> ಗುರಿಗಳು - ಪ್ರಜಾಪ್ರಭುತ್ವ, ಸಮಾಜವಾದ, ಜಾತ್ಯತೀತತೆ ಮತ್ತು ರಾಷ್ಟ್ರೀಯ ಸಮಗ್ರತೆ ಎಂದು
> ಸ್ಪಷ್ಟಪಡಿಸುತ್ತದೆ. ಅದು ಪ್ರಜೆಗಳ ಹಕ್ಕುಗಳನ್ನು ಮತ್ತುಕರ್ತವ್ಯಗಳನ್ನು ಖಚಿತವಾಗಿ
> ವಿಧಿಸುತ್ತದೆ*
>
> *ಸಂಪುಟ ಸಮಿತಿ*
>
> *ಎರಡನೆಯ ಮಹಾಯುದ್ಧವು ಮೇ ೯, ೧೯೪೫ರಂದು* *ಯೂರೋಪಿನಲ್ಲಿ ಮುಕ್ತಾಯಗೊಂಡಿತು.ಅದೇ ವರ್ಷದ
> ಜುಲೈನಲ್ಲಿ ಯುನೈಟೆಡ್ ಕಿಂಗ್ಡಮ್ನಲ್ಲಿ ಹೊಸ ಸರಕಾರವು ಅಧಿಕಾರಕ್ಕೆ ಬಂದಿತು. ಈ ಹೊಸ*
> *ಸರಕಾರವು ತನ್ನ ಭಾರತೀಯ ಧೋರಣೆ (ಇಂಡಿಯನ್ ಪಾಲಿಸಿ)ಯನ್ನು ಘೋಷಿಸಿ, ಸಂವಿಧಾನದ ಕರಡನ್ನು
> ತಯಾರು ಮಾಡಲು ಸಮಿತಿಯನ್ನು ರಚಿಸಲು ನಿರ್ಧರಿಸಿತು. ಮೂವರು ಬ್ರಿಟೀಷ್ ಮಂತ್ರಿಗಳ
> ತಂಡವೊಂದು, ಭಾರತದ ಸ್ವಾತಂತ್ರ್ಯದ ಬಗ್ಗೆ, ಪರಿಹಾರ ಹುಡುಕಲುಭಾರತಕ್ಕೆ ಬಂದಿತು. ಈ
> ತಂಡವನ್ನು 'ಸಂಪುಟ* *ಸಮಿತಿ' (Cabinet Mission) ಎಂದು ಕರೆಯಲಾಯಿತು.*
>
> *ಸಂವಿಧಾನದ ರೂಪುರೇಷೆಗಳನ್ನು ಚರ್ಚಿಸಿದ ಈ ಸಮಿತಿಯು, ಕರಡು ಸಂವಿಧಾನ ರಚನಾ ಸಮಿತಿಯು
> ಅನುಸರಿಸಬೇಕಾದ ಕಾರ್ಯವಿಧಾನದ ಕೆಲವು ವಿವರಗಳನ್ನು ಸ್ಪಷ್ಟಪಡಿಸಿತು. ಬ್ರಿಟಿಷ್ ಭಾರತದ
> ಪ್ರಾಂತ್ಯಗಳ ೨೯೬ ಸ್ಥಾನಗಳಿಗೆ ಚುನಾವಣೆಗಳು ೧೯೪೬ರ ಜುಲೈ - ಅಗಸ್ಟ್ ಹೊತ್ತಿಗೆ ಮುಗಿದವು.
> ಆಗಸ್ಟ್ ೧೫, ೧೯೪೭ರಂದು ಭಾರತದ ಸ್ವಾತಂತ್ರ್ಯದೊಂದಿಗೆ ಸಂವಿಧಾನರಚನಾ ಸಮಿತಿಯು
> ಸಂಪೂರ್ಣವಾಗಿ ಸ್ವಾಯತ್ತ ಸಭೆಯಾಗಿ ಮಾರ್ಪಟ್ಟಿತು. ಈ ಸಮಿತಿಯುಡಿಸೆಂಬರ್ ೯, ೧೯೪೬ರಂದು
> ತನ್ನ ಕೆಲಸವನ್ನು ಆರಂಭಿಸಿತು.*
>
> *ಸಂವಿಧಾನ ರಚನಾಸಭೆ: ಭಾರತದ ಜನತೆ ಪ್ರಾಂತೀಯ ಸಭೆಗಳ ಸದಸ್ಯರನ್ನು ಆರಿಸಿ, ಆ ಸಭೆಗಳು
> ಸಂವಿಧಾನರಚನಾ ಸಭೆಯ ಸದಸ್ಯರನ್ನು ಆರಿಸಿದರು.ಸಂವಿಧಾನ ರಚನಾಸಭೆಯಲ್ಲಿ ಭಾರತದ ವಿವಿಧ
> ಪ್ರದೇಶಗಳಿಗೆ ಹಾಗೂ ಸಮುದಾಯಗಳಿಗೆ ಸೇರಿದ ಸದಸ್ಯರು ಇದ್ದರು. ಬೇರೆ ಬೇರೆ ರಾಜಕೀಯ
> ವಿಚಾರಧಾರೆಗಳನ್ನು ಪ್ರತಿನಿಧಿಸುವ ಸದಸ್ಯರೂ ಅಲ್ಲಿ ಇದ್ದರು. ಜವಾಹರ್ಲಾಲ್
> ನೆಹರೂ,ರಾಜೇಂದ್ರ ಪ್ರಸಾದ್, ಸರ್ದಾರ್ ಪಟೇಲ್, ಮೌಲಾನಾ ಅಬುಲ್ ಕಲಂ ಆಝಾದ್ ಮತ್ತು ಶ್ಯಾಮ್
> ಪ್ರಸಾದ್ ಮುಖರ್ಜಿ ಇವರುಗಳು ಸಭೆಯ ಚರ್ಚೆಗಳಲ್ಲಿ ಭಾಗವಹಿಸಿದ ಕೆಲವು ಪ್ರಮುಖ
> ವ್ಯಕ್ತಿಗಳಾಗಿದ್ದರು. ಪರಿಶಿಷ್ಟ ವರ್ಗಗಳಿಗೆ ಸೇರಿದ ಮೂವತ್ತಕ್ಕೂ ಹೆಚ್ಚು ಸದಸ್ಯರಿದ್ದರು
> ಆಂಗ್ಲೋ-ಇಂಡಿಯನ್ ಸಮುದಾಯವನ್ನು ಫ್ರಾಂಕ್ ಆಂಟನಿ ಅವರೂ ಪಾರ್ಸಿ ಜನರನ್ನು ಎಚ್.ಪಿ. ಮೋದಿ
> ಅವರೂ ಪ್ರತಿನಿಧಿಸಿದ್ದರು. ಆಂಗ್ಲೊ-ಇಂಡಿಯನ್ನರ ಹೊರತಾದ ಎಲ್ಲ ಕ್ರೈಸ್ತರನ್ನು
> ಪ್ರತಿನಿಧಿಸಿದ ಖ್ಯಾತ ಕ್ರೈಸ್ತರಾದ ಹರೇಂದ್ರ ಕುಮಾರ್ ಮುಖರ್ಜಿಯವರು ಅಲ್ಪಸಂಖ್ಯಾತರ
> ಸಮಿತಿಯ ಅಧ್ಯಕ್ಷರಾಗಿ ಇದ್ದರು. ಸಂವಿಧಾನ ತಜ್ಞರಾದ ಅಲ್ಲಾಡಿ ಕೃಷ್ಣಸ್ವಾಮಿ,
> ಬಿ.ಆರ್.ಅಂಬೇಡ್ಕರ್ , ಬಿ.ಎನ್. ರಾಜು ಮತ್ತು ಕೆ.ಎಂ. ಮುನ್ಶಿಯವರೂ ಸಭೆಯ
> ಸದಸ್ಯರಾಗಿದ್ದರು. ಸರೋಜಿನಿ ನಾಯ್ಡು ಮತ್ತು ವಿಜಯಲಕ್ಷ್ಮಿ ಪಂಡಿತ್ ಪ್ರಮುಖ ಮಹಿಳಾ
> ಸದಸ್ಯರಾಗಿದ್ದರು. ಡಾ. ಸಚ್ಚಿದಾನಂದ ಸಿನ್ಹಾರವರು ಸಂವಿಧಾನರಚನಾಸಭೆಯ ತಾತ್ಕಲಿಕ
> ಅಧ್ಯಕ್ಷರಾಗಿದ್ದರು.* *ನಂತರ, ಡಾ.ರಾಜೇಂದ್ರ ಪ್ರಸಾದ್ಅವರು ಅಧ್ಯಕ್ಷರಾಗಿಯೂ
> ಬಿ.ಆರ್.ಅಂಬೇಡ್ಕರ್ ಅವರು ಕರಡು ಸಮಿತಿ ಅಧ್ಯಕ್ಷರಾಗಿಯೂ ಆಯ್ಕೆಯಾದರು.*
>
> *ಸಂವಿಧಾನ ರಚನಾಸಭೆಯು ಎರಡು ವರ್ಷ ೧೧ ತಿಂಗಳು ೧೮ ದಿನಗಳ ಕಾಲದ ಅವಧಿಯಲ್ಲಿ ೧೬೬ ದಿನ
> ಸಮಾವೇಶಗೊಂಡಿತು. ಈ ಸಮಾವೇಶಗಳಿಗೆ ಸಾರ್ವಜನಿಕರಿಗೂ ಹಾಗು ಪತ್ರಕರ್ತರಿಗೂ ಪ್ರವೇಶವಿತ್ತು.*
>
>
> 👉 *ಆಶಯಗಳ ನಿಷ್ಕರ್ಷೆ(ಧೇಯಗಳ ನಿರ್ಣಯ)*
>
> 👉 *ಸಂವಿಧಾನದ ಮೂಲ ತತ್ವಗಳು:*
>
> • *ಭಾರತವು ಸ್ವತಂತ್ರ, ಸಾರ್ವಭೌಮ, ಗಣರಾಜ್ಯ.*
>
> • *ಭಾರತವು ಹಿಂದಿನ ಬ್ರಿಟಿಷ್ ಭಾರತದ ಪ್ರದೇಶಗಳು, ಭಾರತದ ರಾಜ್ಯಗಳು ಮತ್ತು ಭಾರತವನ್ನು
> ಸೇರಬಯಸುವ ಇತರ ಪ್ರದೇಶಗಳ ಒಕ್ಕೂಟ.*
>
> • *ಒಕ್ಕೂಟವನ್ನು ಸೇರುವ ಪ್ರದೇಶಗಳು ಸ್ವಾಯತ್ತ ಘಟಕಗಳಾಗಿದ್ದು ಒಕ್ಕೂಟಕ್ಕೆ ಒಪ್ಪಿಸಿದ
> ಅಧಿಕಾರಗಳ ಹೊರತಾಗಿ ಸರಕಾರದ ಮತ್ತು ಆಡಳಿತದ ಎಲ್ಲ ಅಧಿಕಾರಗಳನ್ನು ಮತ್ತು ಕರ್ತವ್ಯಗಳನ್ನು
> ಚಲಾಯಿಸಬಲ್ಲವಾಗಿರುತ್ತವೆ*
>
> • *ಸ್ವತಂತ್ರ ಸಾರ್ವಭೌಮ ಭಾರತದ ಮತ್ತು ಅದರ ಸಂವಿಧಾನದ ಎಲ್ಲಾ ಅಧಿಕಾರಗಳು ಮತ್ತು
> ಅಧಿಕರಣಗಳು ಭಾರತದ ಪ್ರಜೆಗಳಿಂದ ದೊರೆಯಲ್ಪಡುತ್ತವೆ*
>
> • *ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ಕಾನೂನಿನ
> ಮುಂದೆ ಸಮಾನ ಸ್ಥಾನಮಾನ ಮತ್ತು ಅವಕಾಶಗಳು; ಮತ್ತು ಕಾನೂನು ಮತ್ತು ಸಾರ್ವಜನಿಕ ಸದಾಚಾರದ
> ಮಿತಿಗಳಲ್ಲಿನ ಮಾತು, ಅಭಿವ್ಯಕ್ತಿ, ನಂಬಿಕೆ, ಭಕ್ತಿ, ಆರಾಧನೆ, ಉದ್ಯೋಗ, ಸಂಗ-ಸಹವಾಸ
> ಮತ್ತು ಕೃತ್ಯಗಳ ಮೂಲಭೂತ ಹಕ್ಕುಗಳು ಆಶ್ವಾಸಿತವಾಗಿದೆ ಮತ್ತಿವುಗಳು ಒದಗಿಸಲ್ಪಡುತ್ತವೆ*
>
> • *ಅಲ್ಪಸಂಖ್ಯಾತರಿಗೆ, ಹಿಂದುಳಿದ ಮತ್ತು ಆದಿವಾಸಿ ಪ್ರಾಂತ್ಯಗಳಿಗೆ, ದೀನ ಮತ್ತು
> ಹಿಂದುಳಿದ ವರ್ಗಗಳಿಗೆ ಸಮರ್ಪಕ ಸಂರಕ್ಷಣೆಗಳು ಒದಗಿಸಲಾಗುತ್ತದೆ*
>
> • *ಭಾರತ ಗಣರಾಜ್ಯದ ಭೂಮಿ, ಸಾಗರ ಮತ್ತು ವಾಯು ಪರಿಮಿತಿಗಳ ಸಾರ್ವಭೌಮತೆಯನ್ನು ಎಲ್ಲಾ
> ನಾಗರೀಕ ದೇಶಗಳಂತೆ ನ್ಯಾಯವಾಗಿ ಮತ್ತು ಕಾನೂನಿಗನುಸಾರವಾಗಿ ಕಾಪಾಡಲ್ಪಡುತ್ತದೆ*
>
> • *ಈ ದೇಶವು ಲೋಕಶಾಂತಿ ಮತ್ತು ಮನುಕುಲದ ಉದ್ಧಾರಕ್ಕೆ ತನ್ನ ಸಂಪೂರ್ಣ ಮತ್ತು ಮನಸಾರ
> ಪ್ರಯತ್ನವನ್ನು ಮಾಡುವುದು.*
>
>
> 👉 *ಪೀಠಿಕೆ*
>
> *ಮುಖ್ಯ ಲೇಖನ: ಭಾರತ ಸಂವಿಧಾನದ ಪೀಠಿಕೆ*
>
> *(ಪ್ರಸ್ತಾವನೆ)*
>
> *ಭಾರತ ಧರ್ಮಲಿಂಗಂ ಎಂಬು*
>
> *“ಭಾರತದ ಪ್ರಜೆಗಳಾದ ನಾವು, ಭಾರತವನ್ನು ಒಂದು ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ,
> ಪ್ರಜಾಸತ್ತಾತ್ಮಕ ಗಣತಂತ್ರವನ್ನಾಗಿ* *ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲಾ
> ಪ್ರಜೆಗಳಿಗೆ,*
>
> *ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ;ವನ್ನು*
>
> *ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯ;ವನ್ನು*
>
> *ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ*
>
> *ಗಳನ್ನು ದೊರಕಿಸಿ*
>
> *ವೈಯಕ್ತಿಕ ಘನತೆ ಮತ್ತು ದೇಶದ ಒಗ್ಗಟ್ಟು ಮತ್ತು ಐಕ್ಯತೆಗೆ* *ಎಲ್ಲರಲ್ಲೂ ಭ್ರಾತೃತ್ವತೆ
> ಯನ್ನು* *ಪ್ರೋತ್ನಾಹಿಸಲು ನಿರ್ಧರಿಸಿ*
>
> *ನಮ್ಮ ಸಂವಿಧಾನ ರಚನಾಸಭೆಯಲ್ಲಿ ಈ ೧೯೪೯ರ ನವೆಂಬರ್ ಮಾಹೆಯ ೨೬ನೇ ದಿನದಂದು, ನಾವಾಗಿ ನಾವೇ
> ಈ ಸಂವಿಧಾನವನ್ನು ಸ್ವೀಕರಿಸಿ, ಶಾಸನವನ್ನಾಗೆ* *ವಿಧಿಸಿಕೊಳ್ಳುತ್ತೇವೆ.*
>
> *ಪೀಠಿಕೆಯು ಭಾರತದ ಸಂವಿಧಾನದ ಒಂದು ಅಂಗವಲ್ಲ; ಏಕೆಂದರೆ ಇದನ್ನು ನ್ಯಾಯಾಲಯದಲ್ಲಿ
> ಪ್ರಯೋಗಿಸಲು ಸಾಧ್ಯವಿಲ್ಲ. ಹಾಗಿದ್ದರೂ, ಸಂವಿಧಾನದಲ್ಲಿ ದ್ವಂದ್ವ ಇರುವಂತೆ ಕಂಡುಬರುವಲ್ಲಿ
> ಪೀಠಿಕೆಯನ್ನು ಉಪಯೋಗಿಸಿ ದ್ವಂದ್ವ* *ನಿವಾರಿಸಬಹುದಾದ ಕಾರಣ ಸರ್ವೋಚ್ಛ ನ್ಯಾಯಾಲಯವು
> ಪೀಠಿಕೆಯನ್ನು ಸಂವಿಧಾನದ ಒಂದು ಅಂಗವಾಗಿ ಪರಿಗಣಿಸಿದೆ. ಇದಕ್ಕೆ ಉದಾಹರಣೆ, 'ಕೇಶವಾನಂದ
> ಭಾರತಿ ಮತ್ತು ಕೇರಳ ಸರ್ಕಾರ' ಪ್ರಕರಣ. ಅದಾಗ್ಯೂ, ಪೀಠಿಕೆಯನ್ನು ಸಂವಿಧಾನದ ಲೇಖನದಲ್ಲಿ
> ದ್ವಂದ್ವ ಇದ್ದಾಗ ಮಾತ್ರ, ಮತ್ತಷ್ಟು ಅರ್ಥವತ್ತಾಗಿಸುವ ಸಾಧನವನ್ನಾಗಿ ಬಳಸಬಹುದೇ ಹೊರತು,
> ಹಕ್ಕು ಸಾಧಿಸುವ* *ಸಂವಿಧಾನದ ಒಂದು ಪ್ರತ್ಯೇಕ ವಿಭಾಗವೆಂದು ಪರಿಗಣಿಸಲಾಗದು.*
>
> *ಪೀಠಿಕೆಯ ಮೂಲಪ್ರತಿಯಲ್ಲಿ "ಸಾರ್ವಭೌಮ ಪ್ರಜಾಪ್ರಭುತ್ವ ಗಣರಾಜ್ಯ" ಎಂದಿತ್ತು. ಎರಡು
> ಹೆಚ್ಚಿನ ಪದಗಳಾದ "ಸಮಾಜವಾದಿ" ಮತ್ತು "ಜಾತ್ಯಾತೀತ" ಪದಗಳನ್ನು ೧೯೭೬ರಲ್ಲಿಸಂವಿಧಾನದ ೪೨ನೆ
> ತಿದ್ದುಪಡಿಯಲ್ಲಿ ಸೇರಿಸಲಾಯಿತು. ಆ ಸಮಯದಲ್ಲಿ ತುರ್ತುಪರಿಸ್ಥಿತಿ
> ಜಾರಿಯಲ್ಲಿದ್ದಿದ್ದರಿಂದ, ಸಂವಿಧಾನಕ್ಕೆ ತಿದ್ದುಪಡಿ ತರಲು ಸಾಧ್ಯವೆ ಎಂಬುದನ್ನು ಹಿಂದಿನ
> ಅನುಭವದ ಆಧಾರದಲ್ಲಿ ಪರಿಶೀಲಿಸಿ, ಸರ್ದಾರ್ ಸ್ವರಣ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿನ
> ಸಮಿತಿಯು ಈ ತಿದ್ದುಪಡಿಯನ್ನು* *ಕಾರ್ಯಗತಗೊಳಿಸಬಹುದೆಂದು ಶಿಫಾರಸು ಮಾಡಿತು.
>
> *
>
> 👉 *ಪೀಠಿಕೆಯ ಮಹತ್ವ*
>
>
> *ಪೀಠಿಕೆಯಲ್ಲಿರುವ ಕೆಲವು ವಾಕ್ಯಗಳು, ಭಾರತದ ಸಂವಿಧಾನವು ರಚಿತವಾಗಿರುವ ಕೆಲವು ಮೂಲಭೂತ
> ಮೌಲ್ಯಗಳು ಮತ್ತು ಸಾತ್ವಿಕ ಸೂಚಿಗಳನ್ನು ಎತ್ತಿ ತೋರಿಸುತ್ತದೆ. ಈ ಪೀಠಿಕೆಯು ನಮ್ಮ
> ಸಂವಿಧಾನದ ದಿಕ್ಸೂಚಿಯಂತೆ ಕೆಲಸ ಮಾಡುತ್ತದೆ ಮತ್ತು ನ್ಯಾಯಾಧೀಶರು ಸಂವಿಧಾನವನ್ನು ಇದೇ
> ದಾರಿಯಲ್ಲಿ ವ್ಯಾಖ್ಯಾನಿಸಿ ಮುನ್ನಡೆಸುತ್ತಾರೆ. ಭಾರತದ ಸಂವಿಧಾನದ ಪೀಠಿಕೆಯಲ್ಲಿ
> ವ್ಯಕ್ತಪಡಿಸಿರುವ ಹಾಗು ತಿದ್ದುಪಡಿ ಮಾಡಲು* *ಸಾದ್ಯವಿಲ್ಲದ ಆಶಯಗಳನ್ನು ಬಹಳಷ್ಟು
> ಸಂದರ್ಭಗಳಲ್ಲಿ ಭಾರತದ ಸರ್ವೋಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ. ಪೀಠಿಕೆಯು ಸಂವಿಧಾನದ ಒಂದು
> ಭಾಗವಾದರೂ ಅದನ್ನು ಅಥವಾ ಅದರ ಯಾವುದೇ ಅಂಶವನ್ನು ಕಾನೂನಿಗನುಸಾರವಾಗಿ ಜಾರಿ(ಹೇರು)
> ಮಾಡುವಂತಿಲ್ಲ.
>
> ಪೀಠಿಕೆಯ ಮೊದಲ ಪದಗಳು - "ನಾವು, ಜನರು " - ಭಾರತದಲ್ಲಿ ಅಧಿಕಾರ ಜನಗಳ ಕೈನಲ್ಲಿದೆ ಎಂಬ
> ಅಂಶದ ಪ್ರಾಮುಖ್ಯತೆಯನ್ನು ಹೇಳುತ್ತದೆ. ಪೀಠಿಕೆಯು, ಭಾರತದ ಪ್ರತಿಯೂಬ್ಬ ನಾಗರೀಕ ಹಾಗು
> ಸರ್ಕಾರ ಅನುಸರಿಸಬೇಕಾದ ಮತ್ತು ಸಾಧಿಸಬೇಕಾದ ಬಹು ಮುಖ್ಯ ರಾಷ್ಟ್ರೀಯ ಧ್ಯೇಯಗಳನ್ನು ಬಿಡಿಸಿ
> ಹೇಳುತ್ತದೆ. ಅವುಗಳೆಂದರೆ ಸಮಾಜವಾದ, ಜಾತಿ ನಿರಪೇಕ್ಷತೆ ಮತ್ತು ರಾಷ್ಟ್ರೀಯ ಭಾವೈಕ್ಯತೆ.
> ಕೊನೆಯದಾಗಿ ಅದರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ದಿನಾಂಕ -ನವೆಂಬರ್ ೨೬ ೧೯೪೯ <261949>
> ಎಂದು ಹೇಳುತ್ತದೆ.
>
> ಪೀಠಿಕೆಯ ಕೆಲವು ಪದಗಳ ನಿರೂಪಣೆ
>
> ಸಾರ್ವಭೌಮ
>
> ಸಾರ್ವಭೌಮ ಎಂಬ ಪದದ ಅರ್ಥ ಪರಮಾಧಿಕಾರ ಅಥಾವ ಸ್ವತಂತ್ರ ಎಂದು. ಭಾರತವು ಆಂತರಿಕವಾಗಿ ಹಾಗೂ
> ಬಾಹ್ಯವಾಗಿ ಸಾರ್ವಭೌಮ. ಬಾಹ್ಯವಾಗಿ ಯಾವುದೇ ವಿದೇಶೀ ಶಕ್ತಿಯ ಅಧೀನದಲ್ಲಿ ಭಾರತ ಇಲ್ಲ ಹಾಗೂ
> ಆಂತರಿಕವಾಗಿ ಒಂದು ಮುಕ್ತ, ಜನರಿಂದ ಆರಿಸಲ್ಪಟ್ಟ ಸರಕಾರ ಕಾನೂನು ಸುವ್ಯವಸ್ಥೆ
> ಕಾಪಾಡುತ್ತದೆ.
>
> ಸಮಾಜವಾದಿ
>
> ಸಮಾಜವಾದಿ ಪದವು ಪೀಠಿಕೆಗೆ ೧೯೭೬ರಲ್ಲಿ ೪೨ನೇ ತಿದ್ದುಪಡಿಯಿಂದ ಸೇರಿಸಲ್ಪಟ್ಟಿತು. ಇದರ
> ಅರ್ಥ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ. ಸಾಮಾಜಿಕ ಸಮಾನತೆಯ ಅರ್ಥ ಧರ್ಮ, ಜಾತಿ, ಲಿಂಗ,
> ಭಾಷೆ ಇತ್ಯಾದಿಗಳ ಆಧಾರದ ಮೇಲೆ ತಾರತಮ್ಯ ಮಾಡದೇ ಇರುವುದು. ಸಾಮಾಜಿಕ ಸಮಾನತೆಯ ಅಡಿಯಲ್ಲಿ
> ಎಲ್ಲರಿಗೂ ಸಮಾನ ಸ್ಥಾನಮಾನ ಮತ್ತು ಅವಕಾಶಗಳಿವೆ. ಆರ್ಥಿಕ ಸಮಾನತೆಯ ಅರ್ಥ ಭಾರತ ಸರಕಾರ
> ಎಲ್ಲರಿಗೂ ಸಮಾನ ಆರ್ಥಿಕ ಅವಕಾಶಗಳನ್ನು ಹಾಗೂ ಎಲ್ಲರಿಗೂ ಯೋಗ್ಯವಾದ ಜೀವನಮಟ್ಟವನ್ನು
> ಕಲ್ಪಿಸಲು ಯತ್ನಿಸುತ್ತದೆ. ಇದರ ತತ್ತ್ವಾರ್ಥ ಒಂದು ಸುಖೀ ರಾಜ್ಯದ ನಿರ್ಮಾಣಕ್ಕೆ
> ಬದ್ಧರಾಗುವುದಾಗಿದೆ.
>
> ಭಾರತವು ಮಿಶ್ರ ಅರ್ಥವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಸರಕಾರವು ಸಾಮಾಜಿಕ ಸಮಾನತೆಯನ್ನು
> ಸಾಧಿಸಲು ಬಹಳಷ್ಟು ಕಾನೂನುಗಳನ್ನು ಮಾಡಿದೆ. ಇವುಗಳಲ್ಲಿ ಅಸ್ಪೃಶ್ಯತೆ ಮತ್ತು ಜೀತಪದ್ಧತಿ
> ನಿವಾರಣೆ, ಸಮಾನ ಭತ್ಯೆ ಮಸೂದೆ ಮತ್ತು ಬಾಲಕಾರ್ಮಿಕ ನಿಷೇಧ ಮಸೂದೆ ಸೇರಿವೆ.
>
> ಜಾತ್ಯತೀತ
>
> ಜಾತ್ಯತೀತ ಎಂಬ ಪದವನ್ನು ಪೀಠಿಕೆಗೆ ೧೯೭೬ರ ೪೨ನೇ ತಿದ್ದುಪಡಿಯ ಮೂಲಕ ಸೇರಿಸಲಾಯಿತು. ಇದರ
> ಅರ್ಥ ಎಲ್ಲ ಧರ್ಮಗಳ ಸಮಾನತೆ ಮತ್ತು ಧಾರ್ಮಿಕ ಸಹನೆ. ಭಾರತವು ಯಾವುದೇ ಅಧಿಕೃತ ಧರ್ಮವನ್ನು
> ಹೊಂದಿಲ್ಲ. ಪ್ರತಿಯೊಬ್ಬರಿಗೂ ತಮ್ಮ ಆಯ್ಕೆಯ ಧರ್ಮದ ಪ್ರಚಾರವನ್ನು ಮಾಡುವ ಹಾಗೂ ಆಚರಿಸುವ
> ಹಕ್ಕಿದೆ. ಸರಕಾರವು ಯಾವುದೇ ಧರ್ಮದ ಪರ ಅಥವಾ ವಿರುದ್ಧ ನಿಲುವನ್ನು ತಳೆಯುವಂತಿಲ್ಲ. ಎಲ್ಲ
> ಪ್ರಜೆಗಳು ತಮ್ಮ ಧಾರ್ಮಿಕ ಭಾವನೆಗಳ ಹೊರತಾಗಿಯೂ ಕಾನೂನಿನ ಕಣ್ಣಿನಲ್ಲಿ ಸಮಾನರಾಗಿದ್ದಾರೆ.
> ಸರಕಾರೀ ಅನುದಾನಿತ ಶಾಲೆಗಳಲ್ಲಿ ಯಾವುದೇ ಧರ್ಮದ ಆಚಾರ-ಪ್ರಚಾರ ನಡೆಯುವಂತಿಲ್ಲ. ಬೊಮ್ಮಾಯಿ
> vs ಭಾರತ ಸರಕಾರ ದಾವೆಯಲ್ಲಿ ಸರ್ವೋಚ್ಛ ನ್ಯಾಯಾಲಯವುಜಾತ್ಯತೀತತೆಯು ಭಾರತ ಸಂವಿಧಾನದ
> ವಿನ್ಯಾಸದ ಒಂದು ಸಮಗ್ರ ಅಂಗ ಎಂದು ಭಾವಿಸಿದೆ.
>
> ಪ್ರಜಾಪ್ರಭುತ್ವ
>
> ಪ್ರಜಾಪ್ರಭುತ್ವವಾದ ಭಾರತ ದೇಶದ ಪ್ರಜೆಗಳು ಕೇಂದ್ರ, ರಾಜ್ಯ ಹಾಗೂ ಪ್ರಾದೇಶಿಕ
> ವಿಭಾಗಗಳಲ್ಲಿ ತಮ್ಮ ಸರಕಾರವನ್ನು ಸಾರ್ವತ್ರಿಕ ಮತಾಧಿಕಾರದ ಪದ್ಧತಿಯ ಮೂಲಕ ಆರಿಸುತ್ತಾರೆ.
> ಭಾರತದ ಎಲ್ಲ ೧೮ ವರ್ಷಗಳ ವಯೋಮಿತಿಯ ಮೇಲಿರುವ ಕಾನೂನುಬದ್ಧ ಮತ ಚಲಾಯಿಸುವ ಅಧಿಕಾರ
> ಹೊಂದಿರುವ ಪ್ರಜೆಗಳು ಧರ್ಮ, ಜಾತಿ, ಮತ, ಲಿಂಗ ಅಥವಾ ಶಿಕ್ಷಣ ಮಟ್ಟದ ಭೇದವಿಲ್ಲದೇ ಮತ
> ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ.
>
> ಗಣತಂತ್ರ
>
> ಗಣತಂತ್ರವು ರಾಜಪ್ರಭುತ್ವಕ್ಕೆ ವಿರುದ್ದವಾದದ್ದು. ರಾಜಪ್ರಭುತ್ವದಲ್ಲಿ ಒಂದು ರಾಜ್ಯದ
> ಮುಖ್ಯಸ್ತರು ವಂಶ ಪಾರಂಪರೆಯ ಆಧಾರದ ಮೇಲೆ ಜೀವಮಾನದವರೆಗೆ ಅಥವಾ ಸಿಂಹಾಸನವನ್ನು
> ತ್ಯಜಿಸುವವರೆಗೆ ನೇಮಿತಗೊಳ್ಳುತ್ತಾರೆ. ಪ್ರಜಾಪ್ರಭುತ್ವದಲ್ಲಿ ಗಣತಂತ್ರ ಎಂದರೆ " ಒಂದು
> ರಾಷ್ಟ್ರದ ಮುಖ್ಯಸ್ಥರನ್ನು ಪ್ರತ್ಯೇಕ್ಷ ಅಥವಾ ಪರೋಕ್ಷ ಚುನಾವಣೆಯ ಮೂಲಕ ಆಯ್ಕೆ
> ಮಾಡುವುದಕ್ಕೆ ಗಣತಂತ್ರ" ಎನ್ನುವರು.
>
> ಅನುಚ್ಛೇಧಗಳು
>
> ಅನುಚ್ಛೇಧಗಳನ್ನು ಸಂವಿಧಾನದ ತಿದ್ದುಪಡಿಯ ಮುಖಾಂತರ ಸೇರಿಸಬಹುದು. ಪ್ರಚಲಿತದಲ್ಲಿರುವ ೧೨
> ಅನುಚ್ಛೇಧಗಳು ಇವುಗಳನ್ನು ಒಳಗೊಂಡಿವೆ. ರಾಜ್ಯ ಸರ್ಕಾರ ಹಾಗು ಕೇಂದ್ರಾಡಳಿತ ಪ್ರದೇಶಗಳ
> ಅಧಿಕಾರ ಪರಮಾವದಿ; ಉನ್ನತ ಅಧಿಕಾರಿಗಳ ಸಂಬಳ(ವರಮಾನ);ಪ್ರಮಾಣವಚನಗಳ ವಿಧಗಳು;
> ರಾಜ್ಯಸಭೆ(ರಾಜ್ಯಗಳ ಪರಿಷತ್ತು - ಸಂಸತ್ತಿನ ಮೇಲ್ಮನೆ)ಯಲ್ಲಿ ಪ್ರತಿ ರಾಜ್ಯ ಹಾಗು
> ಕೇಂದ್ರಾಡಳಿತ ಪ್ರದೇಶಗಳಿಗೆ ಇಂತಿಷ್ಟು ಎಂದು ಸ್ಥಾನಗಳನ್ನು ನಿಗದಿಪಡಿಸುವುದು.ಅನುಸೂಚಿತ
> ಜಾತಿ ಮತ್ತು ಅನುಸೂಚಿತ ಪಂಗಡಗಳ ಆಡಳಿತ ಮತ್ತು ನಿಯಂತ್ರಣಕ್ಕೆ ವಿಶೇಷ ಏರ್ಪಾಟು
> ಕಲ್ಪಿಸುವುದು;ಅಸ್ಸಾಮಿನಲ್ಲಿರುವ ಬುಡಕಟ್ಟು ಪ್ರದೇಶಗಳ ಆದಳಿತಕ್ಕೆ ಏರ್ಪಾಟು
> ಕಲ್ಪಿಸುವುದು; ಕೇಂದ್ರ(ಕೇಂದ್ರ ಸರ್ಕಾರ),ರಾಜ್ಯ ಹಾಗು ದ್ವಂದ್ವ ಜವಾಬ್ದಾರಿಗಳ ಪಟ್ಟಿಗಳು;
> ಅಧಿಕೃತ ಭಾಷೆಗಳು ; ಸ್ಥಳ ಮತ್ತು ಅವಧಿಯ ಸುಧಾರಣೆ ; ಭಾರತದೊಂದಿಗೆ ಸಿಕ್ಕಿಂನ್ ಸಂಯೋಗ;
> ಸಂಸತ್ ಸದಸ್ಯರು ಮತ್ತು ವಿಧಾನ ಸಭಾ ಸದಸ್ಯರ ಪಕ್ಷಾಂತರ ವಿರುದ್ದ ವಿಶೇಷ ಏರ್ಪಾಟು
> ಕಲ್ಪಿಸುವುದು ; ಗ್ರಾಮೀಣ ಅಭಿವೃದ್ಧಿ ; ಮತ್ತು ನಗರ ಯೋಜನೆ .
>
>
> ತಿದ್ದುಪಡಿಗಳು
>
> ಭಾರತದ ಸಂವಿಧಾನವನ್ನು ತಿದ್ದುಪಡಿ ಮಾಡಲು ಈ ಕೆಳಗಿನ ಪ್ರಕ್ರಿಯೆಗಳಿವೆ:
>
> • ಸಂಸತ್ತಿನಲ್ಲಿ ಸಾಮಾನ್ಯ ಬಹುಮತದಿಂದ: ಸಂಸತ್ತಿನಲ್ಲಿ ತಿದ್ದುಪಡಿ ಮತಕ್ಕೆ ಬಂದಾಗ
> ಅಲ್ಲಿರುವ ಅರ್ಧಕ್ಕಿಂತ ಹೆಚ್ಚು ಸಂಸದೀಯರ ಅಂಗೀಕಾರವಿದ್ದರೆ, ಈ ತಿದ್ದುಪಡಿ ರಾಷ್ಟ್ರಪತಿಯ
> ಸಮ್ಮತಿಗೆ ಕಳುಹಿಸಬಹುದು.
>
> • ಸಂಸತ್ತಿನಲ್ಲಿ ವಿಶೇಷ ಬಹುಮತದಿಂದ: ಸಂಸತ್ತಿನಲ್ಲಿ ಅರ್ಧಕ್ಕಿಂತ ಹೆಚ್ಚು ಸದಸ್ಯರು
> ಹಾಜರಿದ್ದು, ಅವರಲ್ಲಿ ೩ರಲ್ಲಿ ೨ ಭಾಗ ಸಂಸದೀಯರು ತಿದ್ದುಪಡಿಯನ್ನು ಅಂಗೀಕರಿಸಿದರೆ ಅ
> ತಿದ್ದುಪಡಿ ರಾಷ್ಟ್ರಪತಿಯ ಸಮ್ಮತಿಗೆ ಕಳುಹಿಸಬಹುದು.
>
> • ಕೇಂದ್ರ ಮತ್ತು ರಾಜ್ಯಗಳ ಸಂಬಂಧದ ಬಗೆಗಿನ ತಿದ್ದುಪಡಿಗಳಿಗೆ ಮೇಲಿನಂತೆ ಸಂಸತ್ತಿನ
> ವಿಶೇಷ ಬಹುಮತವಿದ್ದು, ಅದರೊಂದಿಗೆ ಕನಿಷ್ಟ ಅರ್ಧ ರಾಜ್ಯಗಳ ಶಾಸನಸಭೆಗಳಲ್ಲಿ ವಿಶೇಷ ಬಹುಮತ
> ಗಳಿಸಿದರೆ, ಈ ತಿದ್ದುಪಡಿ ರಾಷ್ಟ್ರಪತಿಯ ಸಮ್ಮತಿಗೆ ಕಳುಹಿಸಬಹುದು. [೧]
>
> ಮೇಲಿನಂತೆ ಸಂವಿಧಾನ ತಿದ್ದುಪಡಿ ಒಂದು ಕಠಿಣ ಪ್ರಕ್ರಿಯೆಯಾದರೂ, ಭಾರತದ ಸಂವಿಧಾನ ಪ್ರಪಂಚದ
> ಅತೀ ತಿದ್ದಲ್ಪಟ್ಟ ಸಂವಿಧಾನಗಳಲ್ಲಿ ಒಂದಾಗಿದೆ. ಮೊಟ್ಟಮೊದಲ ತಿದ್ದುಪಡಿ ಸಂವಿಧಾನದ
> ಅಳವಡಿಕೆಯ ಒಂದು ವರ್ಷದೊಳಗೆಯೆ ಆಯಿತು. ಇದರಲ್ಲಿ ಹಲವಾರು ಸಣ್ಣ ಬದಲಾವಣೆಗಳನ್ನು
> ಮಾಡಲಾಯಿತು. ನಂತರದಿಂದ ವರ್ಷಕ್ಕೆ ಸರಾಸರಿ ೨ ತಿದ್ದುಪಡಿಗಳಷ್ಟು ಆಗಿವೆ. ಈ ಸಂವಿಧಾನ
> ಸವಿಸ್ತಾರವಾಗಿರುವುದರಿಂದ, ಬೇರೆ ಜನತಂತ್ರ ದೇಶಗಳಲ್ಲಿ ವಿಶೇಷ ಕಾಯಿದೆ (ordinance) ಮೂಲಕ
> ಜಾರಿಗೆ ತರಬಲ್ಲ ಕಾಯಿದೆಗಳನ್ನು ಭಾರತದಲ್ಲಿ ತಿದ್ದುಪಡಿಯಿಂದ ಮಾತ್ರ ತರಲಾಗುತ್ತದೆ.
>
> ೧೯೭೪ರ ಕೇಶವಾನಂದ ಭಾರತಿ ವಿರುದ್ಧ ಕೇರಳಾ ರಾಜ್ಯ ಸರ್ಕಾರ ಮೊಕದ್ದಮೆಯಲ್ಲಿ ಭಾರತದ
> ಸರ್ವೋಚ್ಛ ನ್ಯಾಯಾಲಯ ನೀಡಿದ ಒಂದು ಪ್ರಮುಖ ತೀರ್ಪಿನಲ್ಲಿ ಸಂವಿಧಾನದತ್ತ ನ್ಯಾಯಾಂಗ
> ಪರಿಶೀಲನೆಯ ಶಕ್ತಿಯನ್ನು ಶಾಸಕಾಂಗದ ಸಂವಿಧಾನದ ತಿದ್ದುಪಡಿಗಳನ್ನೂ ಪರಿಶೀಲಿಸುವುದಕ್ಕೆ
> ವಿಸ್ತರಿಸಿ ಸಂವಿಧಾನದ ಮೂಲಭೂತ ತತ್ವಗಳ ವ್ಯಾಖ್ಯಾನವನ್ನು ಸ್ಥಾಪಿಸಿತು. ಇದರಡಿಯಲ್ಲಿ ೩೯ನೇ
> ತಿದ್ದುಪಡಿಯನ್ನು ಮತ್ತು ೪೨ನೇ ತಿದ್ದುಪಡಿಯ ಭಾಗಗಳನ್ನು ಅಸಂವಿಧಾನಿಕ ಎಂದು ಘೋಷಿಸಿ
> ಅವನ್ನು ತಗೆದೆ ಹಾಕಿತು. ಎಚ್.ಎಮ್.ಸೀರ್ವಾಯ್ರಂತಃ ಕೆಲ ಸಂವಿಧಾನಿಕ ತಜ್ಞರು ಇದು ಸಂವಿಧಾನ
> ಶಿಲ್ಪಿಗಳ ಆಶಯಗಳ ಉಲ್ಲಂಘನೆಯೆಂದು ಅಭಿಪ್ರಾಯಿಸಿದ್ದಾರೆ.
>
> ಭಾರತದ ಸಂವಿಧಾನ ಇಲ್ಲಿಯವರೆಗೂ ೧೦೮ ತಿದ್ದುಪಡಿಗಳನ್ನು ಕಂಡಿದ್ದು, ಇತ್ತೀಚೆಗೆ ೨೦೧೦ ನೇ
> ವರ್ಷ ಮಾರ್ಚ ೯ರಂದು ರಾಜ್ಯಸಭೆಯಲ್ಲಿ ಮಹಿಳಾ ವಿಧೆಯಕ ಅಂಗೀಕಾರವಾಗಿ ರಾಷ್ತ್ರಪತಿಗಲಳ
> ಅಂಕಿತಕ್ಕಾಗಿ ಹೋಗಿದೆ...
>
> *(ಕೃಪೆ.ಗೂಗಲ್... ಸಂಗ್ರಹ ಮಹಾಂತಗೌಡ.ಟಿ.ಪಾಟೀಲ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರು
> ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು)*💐💐🙏
>
>
> On 25-Nov-2017 8:19 AM, "sheetal patil" <[email protected]> wrote:
>
> ಗುರುಗಳೇ ಸಂವಿಧಾನ ದಿನದ ಬಗ್ಗೆ ಮಾಹಿತಿ ಹಾಕಿ
>
> On Nov 24, 2017 8:30 AM, "Mahantagoud Patil" <[email protected]> wrote:
>
> ಆಕಸ್ಮೀಕವಾಗಿ ಸಂದೇಶ ಬಂದಿದೆ ಎಲ್ಲರಲ್ಲಿಯೂ ಕ್ಷಮೆ ಇರಲಿ
>
> --
> You received this message because you are subscribed to the Google Groups
> "KSHST" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> To view this discussion on the web visit https://groups.google.com/d/
> msgid/kshst/CAL8OgzAt5vQdDFs_R6ZtcazREz%2BOid7qGB_
> YTF9dY3SLvHAbmg%40mail.gmail.com.
> For more options, visit https://groups.google.com/d/optout.
>
> --
> You received this message because you are subscribed to the Google Groups
> "KSHST" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> To view this discussion on the web visit https://groups.google.com/d/
> msgid/kshst/CANyiUyRF7bor%2B0PzDBMK-CchPYTOXNKKvUaYkH3-
> CJWBES7e0w%40mail.gmail.com.
> For more options, visit https://groups.google.com/d/optout.
>
>
> --
> You received this message because you are subscribed to the Google Groups
> "KSHST" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> To view this discussion on the web visit https://groups.google.com/d/
> msgid/kshst/CAL8OgzDHeQ5vr28eVm1ZjqZYis9DXa%3DQ6zWimE6PDOASCuGMoA%
> 40mail.gmail.com.
> For more options, visit https://groups.google.com/d/optout.
>
> --
> You received this message because you are subscribed to the Google Groups
> "KSHST" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> To view this discussion on the web visit https://groups.google.com/d/
> msgid/kshst/rqus9c6rb1ke57gp88o1gv2u.1511677844826%40email.android.com
> <https://groups.google.com/d/msgid/kshst/rqus9c6rb1ke57gp88o1gv2u.1511677844826%40email.android.com?utm_medium=email&utm_source=footer>
> .
> For more options, visit https://groups.google.com/d/optout.
>

-- 
You received this message because you are subscribed to the Google Groups 
"KSHST" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
To view this discussion on the web visit 
https://groups.google.com/d/msgid/kshst/CALvTDaQi6ty9T5xaO4-LKgQi2JA4R_OrUDVq4D-SqefF2UxyFQ%40mail.gmail.com.
For more options, visit https://groups.google.com/d/optout.

Reply via email to