IT@ school? ? ? ? ? ? ? Bari hesrige aste.

2016-03-19 11:25 GMT+05:30 DORA CARMINE D'SILVA <[email protected]>:

> Thank u for d information sir
> On Mar 19, 2016 6:30 AM, "HAREESHKUMAR K Agasanapura" <
> [email protected]> wrote:
>
>>
>> http://m.vijaykarnataka.com/state/State-budget-Digital-Education-to-highschool-students/articleshow/51463798.cms
>>
>> *ಹೈಸ್ಕೂಲ್ ಹೈಕ್ಳುಗಳಿಗೆ ಡಿಜಿಟಲ್ ಶಿಕ್ಷಣ*
>>
>> Mar 19, 2016, 04.00 AM IST
>>
>> WhatsappFacebookGoogle PlusTwitterEmail
>>
>> state-budget-2
>>
>> AAA
>>
>> ಸಿಬಿಎಸ್‌ಇ, ಐಸಿಎಸ್‌ಇ ಪಠ್ಯಕ್ಕೆ ಅನುಮತಿ ಎಲ್ಲ ವಿದ್ಯಾರ್ಥಿಗಳ ಆಧಾರ್ ನೋಂದಣಿ
>> 'ನಲಿ-ಕಲಿ' ಕಾರ್ಯಕ್ರಮ ಪುನರ್‌ರೂಪಿಸಿ ಜಾರಿ ಗಣಿತ ವಿಷಯದ ಚಟುವಟಿಕೆ ಆಧರಿತ ಕಲಿಕೆ 4,
>> 5ನೇ ತರಗತಿಗಳಿಗೂ ವಿಸ್ತರಣೆ
>>
>> * ಈ ವರ್ಷದೊಳಗೆ ಎಲ್ಲ ವಿದ್ಯಾರ್ಥಿಗಳ ಆಧಾರ್ ನೋಂದಣಿ.
>>
>> * ಬಿಸಿಯೂಟ ಅಡಿಗೆಯವರ ಮಾಸಿಕ ಗೌರವಧನ 300 ರೂ. ಹೆಚ್ಚಳ.
>>
>> * 'ನಲಿ-ಕಲಿ' ಕಾರ್ಯಕ್ರಮ ಪುನರ್‌ರೂಪಿಸಿ ಜಾರಿ.
>>
>> * ಗಣಿತ ವಿಷಯದ ಚಟುವಟಿಕೆ ಆಧರಿತ ಕಲಿಕೆ 4,5ನೇ ತರಗತಿಗಳಿಗೂ ವಿಸ್ತರಣೆ.
>>
>> * ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಶಿಕ್ಷಕರ 6 ತರಬೇತಿ ಕಾಲೇಜುಗಳು.
>>
>> * ಕನಿಷ್ಠ 5 ವರ್ಷಗಳಿಗೆ ಶಾಲೆ ಮತ್ತು ಕಾಲೇಜುಗಳ ಮಾನ್ಯತೆ ನವೀಕರಣ.
>>
>> * ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪಠ್ಯಕ್ರಮ ಅಳವಡಿಸಲು ಅನುಮತಿ.
>>
>> ಸರಕಾರಿ ಪ್ರೌಢಶಾಲೆಗಳಲ್ಲಿನ ಎಲ್ಲ ವಿದ್ಯಾರ್ಥಿಗಳಿಗೆ ಡಿಜಿಟಲ್ ಶಿಕ್ಷಣ ಒದಗಿಸಲು
>> ಪ್ರೌಢಶಾಲಾ ಶಿಕ್ಷಕರ ಮೂಲಕ ಸಮಗ್ರವಾದ ಇ-ವಿಷಯಾಧರಿತ 'ಐಟಿ ಅಟ್ ಸ್ಕೂಲ್ಸ್ ಇನ್ ಕರ್ನಾಟಕ'
>> ಎಂಬ ಕಾರ್ಯಕ್ರಮ ಪ್ರಾರಂಭಿಸಲು ಸರಕಾರ ನಿರ್ಧರಿಸಿದೆ.
>>
>> ಸರಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಿಸಲು ಪ್ರಸ್ತುತ ಜಾರಿಯಲ್ಲಿರುವ
>> ಯೋಜನೆಗಳನ್ನು ತಾರ್ಕಿಕವಾಗಿ ಸಮನ್ವಯಗೊಳಿಸಿ, ಐದು ಹೊಸ ಕಾರ್ಯಕ್ರಮಗಳಡಿ ಜಾರಿಗೆ ತರಲು
>> ಉದ್ದೇಶಿಸಲಾಗಿದೆ. ಅವುಗಳೆಂದರೆ ಶಿಕ್ಷಣ ಗುಣಮಟ್ಟ ಸುಧಾರಣೆ ಕಾರ್ಯಕ್ರಮ, ಗುಣಮಟ್ಟ ಖಾತರಿಯ
>> ಉಪ ಕ್ರಮಗಳು, ತಂತ್ರಜ್ಞಾನ ಆಧರಿತ ಕಲಿಕೆ, ಪ್ರಾಥಮಿಕ ಶಿಕ್ಷಣದ ಸಾರ್ವತ್ರೀಕರಣಕ್ಕಾಗಿ
>> ವಿದ್ಯಾರ್ಥಿಗಳಿಗೆ ಪ್ರೋತ್ಸಾಹ, ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಕಾರ್ಯಕ್ರಮಗಳು.
>>
>> ಸಮಂಜಸವಾದ ಮಾಹಿತಿ ತಂತ್ರಜ್ಞಾನ ವ್ಯವಸ್ಥೆ ನೆರವಿನಿಂದ ಸರಕಾರಿ ಶಾಲೆಗಳಲ್ಲಿರುವ
>> ವಿದ್ಯಾರ್ಥಿಗಳ ಹಾಗೂ ಶಿಕ್ಷಣ ಹಕ್ಕು ಕಾಯಿದೆಯಡಿ ಖಾಸಗಿ ಶಾಲೆಗಳಿಗೆ ದಾಖಲಾದ
>> ವಿದ್ಯಾರ್ಥಿಗಳ ಕಲಿಕೆಯಲ್ಲಿನ ಸಾಧನೆಯ ಬಗ್ಗೆ ಮೇಲ್ವಿಚಾರಣೆ ನಡೆಸಲು ಉದ್ದೇಶಿಸಲಾಗಿದೆ.
>>
>> 'ನಲಿ-ಕಲಿ' ಪುನರ್‌ರೂಪಿಸಿ ಜಾರಿ
>>
>> ಇನ್ನು, ಸರಕಾರಿ ಶಾಲೆಗಳಲ್ಲಿನ ಶಿಕ್ಷಣದ ಗುಣಮಟ್ಟ ಉತ್ತಮಪಡಿಸಲು ವಸ್ತುನಿಷ್ಠ
>> ಮೌಲ್ಯಮಾಪನದಿಂದ ಯಶಸ್ವಿ ಕಲಿಕೆಯ ವಿಧಾನ ಎಂದು ಗುರುತಿಸಲಾಗಿರುವ ಚಟುವಟಿಕೆ ಆಧರಿತ
>> 'ನಲಿ-ಕಲಿ' ವಿಧಾನವನ್ನು ಪುನರ್ ರೂಪಿಸಿ ಸಮಗ್ರವಾಗಿ ಜಾರಿಗೊಳಿಸಲು ನಿರ್ಧರಿಸಲಾಗಿದೆ.
>> ಗಣಿತ ವಿಷಯದ ಚಟುವಟಿಕೆ ಆಧಾರಿತ ಕಲಿಕೆಯನ್ನು 4 ಮತ್ತು 5ನೇ ತರಗತಿಗಳಿಗೂ
>> ವಿಸ್ತರಿಸಲಾಗುತ್ತಿದೆ.
>>
>> ಶಿಕ್ಷಣ ಗುಣಮಟ್ಟ ಹಾಗೂ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ಮೂಡಿಸುವ ಯಶಸ್ವಿ ಉಪ
>> ಕ್ರಮಗಳನ್ನು ಕೈಗೊಂಡು ಲಾಭದ ನಿರೀಕ್ಷೆ ಹೊಂದಿಲ್ಲದ ಸಂಸ್ಥೆಗಳ ಚಟುವಟಿಕೆಗಳನ್ನು
>> ವಿಸ್ತರಿಸಲು ಉದ್ದೇಶಿಸಿರುವ ಸರಕಾರ, 3 ವರ್ಷಗಳ ಅವಧಿಯಲ್ಲಿ ವೆಚ್ಚದ ಶೇ.50ರಷ್ಟನ್ನು
>> ಭರಿಸಲಿದೆ. ಸರಕಾರಿ ಶಾಲೆಗಳಲ್ಲಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ರಜೆಯಲ್ಲಿ
>> ಪೂರಕ ಬೋಧನೆಯ ವ್ಯವಸ್ಥೆ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ.
>>
>> ಎಲ್ಲ ವಿದ್ಯಾರ್ಥಿಗಳ ಆಧಾರ್ ನೋಂದಣಿ
>>
>> 2016ರೊಳಗೆ ಖಾಸಗಿ ಶಾಲೆ-ಕಾಲೇಜುಗಳೂ ಸೇರಿದಂತೆ ಶಾಲೆ-ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳ
>> ಆಧಾರ್ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಲು ಸರಕಾರ ತೀರ್ಮಾನಿಸಿದೆ. ಎಲ್ಲ ಸರಕಾರಿ
>> ಶಾಲೆಗಳಲ್ಲಿ ಯೋಗ ಶಿಕ್ಷಣವನ್ನು ಆರಂಭಿಸುವುದಕ್ಕೆ ಪ್ರೋತ್ಸಾಹ ನೀಡುವುದಾಗಿ ಸರಕಾರ
>> ಪ್ರಕಟಿಸಿದೆ.
>>
>> ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡಿಗೆಯವರ ಗೌರವಧನವನ್ನು
>> ಮಾಸಿಕ 300 ರೂ. ಹೆಚ್ಚಿಸಲಾಗಿದೆ. ಶಿಕ್ಷಕರ 6 ತರಬೇತಿ ಕಾಲೇಜುಗಳನ್ನು ಉನ್ನತ ಶಿಕ್ಷಣ
>> ಇಲಾಖೆಯ ವ್ಯಾಪ್ತಿಗೆ ತರಲಾಗುತ್ತಿದೆ. ಪ್ರೌಢಶಾಲೆ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಒಂದೇ
>> ಆಡಳಿತ ಹಾಗೂ ಕಾರ್ಯವ್ಯವಸ್ಥೆಯಡಿ ತರಲು ಮೂರು ವರ್ಷದ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ.
>>
>> 5 ವರ್ಷಗಳಿಗೆ ಮಾನ್ಯತೆ ನವೀಕರಣ
>>
>> ಕನಿಷ್ಠ 5 ವರ್ಷಗಳಿಗೆ ಶಾಲೆ ಮತ್ತು ಕಾಲೇಜುಗಳ ಮಾನ್ಯತೆ ನವೀಕರಣ. ಸಿಬಿಎಸ್‌ಇ ಮತ್ತು
>> ಐಸಿಎಸ್‌ಇ ಪಠ್ಯಕ್ರಮ ಅಳವಡಿಸಲು ಅನುಮತಿ. ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ
>> ಸ್ಥಾನಮಾನಕ್ಕಾಗಿ ಮಾನ್ಯತೆ ಅಥವಾ ನಿರಾಕ್ಷೇಪಣೆ ಪತ್ರ ನೀಡುವುದು. ಶಿಕ್ಷಣ ಹಕ್ಕು
>> ಕಾಯಿದೆಯಡಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳುವ ಖಾಸಗಿ ಶಾಲೆಗಳಿಗೆ ಶಿಕ್ಷಣ ವೆಚ್ಚ
>> ಮರುಪಾವತಿ ಪ್ರಕ್ರಿಯೆ ಮುಂದುವರಿಕೆ. ಎಲ್ಲ ಖಾಸಗಿ ಶಾಲೆ ಹಾಗೂ ಕಾಲೇಜುಗಳಲ್ಲಿರುವ ಬೋಧಕ
>> ಮತ್ತು ಮೂಲಸೌಕರ್ಯ ಸಂಪನ್ಮೂಲಗಳ ವಿವರವನ್ನು ಸಾರ್ವಜನಿಕ ವೆಬ್‌ಸೈಟ್‌ನಲ್ಲಿ ಪ್ರಕಟಿಸುವ
>> ವ್ಯವಸ್ಥೆ ಮಾಡುವುದಾಗಿ ಸರಕಾರ ಪ್ರಕಟಿಸಿದೆ. ಒಟ್ಟಾರೆ, 2016-17ನೇ ಸಾಲಿನಲ್ಲಿ ಪ್ರಾಥಮಿಕ
>> ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ 13,373 ಕೋಟಿ ರೂ.ಗಳನ್ನು ಒದಗಿಸಲಾಗಿದೆ.
>>
>> ಕರ್ನಾಟಕ ಶಿಕ್ಷಣ ನೀತಿ ಜಾರಿಗೆ ನಿರ್ಧಾರ
>>
>> -ಕಲಬುರ್ಗಿ ಹೆಸರಿನಲ್ಲಿ ಸಂಶೋಧನಾ ಕೇಂದ್ರ, ಪ್ರಶಸ್ತಿ-
>>
>> * ಕಲಬುರ್ಗಿ ಹೆಸರಿನಲ್ಲಿ ಅತ್ಯುತ್ತಮ ಸಂಶೋಧನಾ ಸಾಹಿತ್ಯಕ್ಕೆ ಪ್ರತಿ ವರ್ಷ ಪ್ರಶಸ್ತಿ
>>
>> * ಬೀದರ್‌ನಲ್ಲಿ ಸರಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆ
>>
>> * ಕರ್ನಾಟಕ ಚಿತ್ರಕಲಾ ಪರಿಷತ್‌ನ ಕಾರ್ಯಕ್ರಮಗಳಿಗೆ 1.5 ಕೋಟಿ ರೂ. ಅನುದಾನ
>>
>> * ಕರ್ನಾಟಕ ಜಾನಪದ ವಿವಿ ವ್ಯಾಪ್ತಿಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಪಾರಂಪರಿಕ
>> ಕೇಂದ್ರ ಸ್ಥಾಪನೆ
>>
>> * ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲ ಸಂಸ್ಥೆಗಳಿಗೂ 'ಜ್ಞಾನ ಸಂಗಮ' ಯೋಜನೆ
>> ವಿಸ್ತರಣೆ
>>
>> * ವಿಶ್ವೇಶ್ವರಯ್ಯ ತಾಂತ್ರಿಕ ವಿವಿ, ತುಮಕೂರು ವಿವಿಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ
>> ಶ್ರೇಷ್ಠತಾ ಕೇಂದ್ರಗಳ ಸ್ಥಾಪನೆ
>>
>> ರಾಜ್ಯದಲ್ಲಿ ಜ್ಞಾನ ಮತ್ತು ಆರ್ಥಿಕ ಅಗತ್ಯಗಳಿಗೆ ಒತ್ತು ನೀಡುವ ಮಾನವ ಸಂಪನ್ಮೂಲ
>> ಕೇಂದ್ರಿತ ಪ್ರಗತಿದಾಯಕ ಕರ್ನಾಟಕ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಸರಕಾರ ನಿರ್ಧರಿಸಿದೆ.
>>
>> ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ಸಂಸ್ಥೆಗಳಲ್ಲಿ 'ಜ್ಞಾನ ಸಂಗಮ' ಯೋಜನೆ
>> ವಿಸ್ತರಿಸುವುದರ ಜತೆಗೆ, ಸರಕಾರಿ ಕಾಲೇಜುಗಳು ಎನ್‌ಎಎಸಿ ಮಾನ್ಯತೆ ಪಡೆದು ಯುಜಿಸಿ ಅನುದಾನ
>> ಪಡೆಯಲು ಅನುವಾಗುವಂತೆ 10 ಕೋಟಿ ರೂ.ಗಳ ಅನುದಾನ ಒದಗಿಸಲಾಗುತ್ತದೆ. ಸಾಂಪ್ರದಾಯಿಕ ಪದವಿ
>> ಕೋರ್ಸ್‌ಗಳ ಜತೆಗೆ, ಉತ್ತಮ ಉದ್ಯೋಗವಕಾಶಗಳಿರುವ ಕ್ಷೇತ್ರಗಳಾದ ಮಾಹಿತಿ ತಂತ್ರಜ್ಞಾನ,
>> ದೂರಸಂಪರ್ಕ, ರೀಟೇಲ್, ಪ್ರವಾಸೋದ್ಯಮ, ಮಾಧ್ಯಮ ಮತ್ತು ಮನೋರಂಜನೆ, ಎಲೆಕ್ಟ್ರಾನಿಕ್ಸ್
>> ಮತ್ತು ಆರೋಗ್ಯ ಪಾಲನೆ, ಮೆಕ್ಯಾನಿಕಲ್, ಸೈಬರ್ ಭದ್ರತೆ ಇತ್ಯಾದಿ ಕೋರ್ಸ್‌ಗಳನ್ನು 5 ಕೋಟಿ
>> ರೂ.ಗಳ ವೆಚ್ಚದೊಂದಿಗೆ ಇಂಡೋ-ಜರ್ಮನ್ ಸಹಭಾಗಿತ್ವದಲ್ಲಿ ಐದು ಸರಕಾರಿ ಎಂಜಿನಿಯರಿಂಗ್
>> ಕಾಲೇಜುಗಳಲ್ಲಿ ಪ್ರಾರಂಭಿಸಲಾಗುತ್ತದೆ.
>>
>> ಶ್ರೇಷ್ಠತಾ ಕೇಂದ್ರಗಳ ಸ್ಥಾಪನೆ
>>
>> ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ತುಮಕೂರು ವಿವಿಗಳಲ್ಲಿ
>> ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು 10 ಕೋಟಿ ರೂ. ವೆಚ್ಚದಲ್ಲಿ
>> ಶ್ರೇಷ್ಠತಾ ಕೇಂದ್ರಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ.
>>
>> ಕರ್ನಾಟಕ ಜಾನಪದ ವಿವಿ ಕಾರ್ಯವ್ಯಾಪ್ತಿಯಲ್ಲಿ ರಾಜ್ಯದ ಶ್ರೀಮಂತ ಹಾಗೂ ಸಾಂಸ್ಕೃತಿಕ
>> ಮತ್ತು ಶೈಕ್ಷಣಿಕ ಪರಂಪರೆ ಬಿಂಬಿಸಲು ಕರ್ನಾಟಕ ಪಾರಂಪರಿಕ ಕೇಂದ್ರವನ್ನು 2 ಕೋಟಿ ರೂ.
>> ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಬೀದರ್‌ನಲ್ಲಿ ಸರಕಾರಿ ಎಂಜಿನಿಯರಿಂಗ್ ಕಾಲೇಜು
>> ಪ್ರಾರಂಭಿಸಲು ತೀರ್ಮಾನಿಸಲಾಗಿದೆ.
>>
>> ಅಂಗನವಾಡಿ ಮಕ್ಕಳಿಗೆ ಕೆನೆಸಹಿತ ಹಾಲು
>>
>> ಈ ವರ್ಷದಿಂದ ಅಂಗನವಾಡಿ ಮಕ್ಕಳಿಗೆ ಕೆನೆಸಹಿತ ಹಾಲು ನೀಡಲು 'ಕ್ಷೀರಭಾಗ್ಯ ಯೋಜನೆ'ಯಡಿ
>> 42.50 ಕೋಟಿ ರೂ. ಅನುದಾನ ಮೀಸಲಿಟ್ಟರೆ, ಹಿಂದುಳಿದ ತಾಲೂಕುಗಳಲ್ಲಿರುವ ಗರ್ಭಿಣಿ ಮತ್ತು
>> ಬಾಣಂತಿಯರಿಗೆ ಮೈಕ್ರೊ ನ್ಯೂಟ್ರಿಯಂಟ್ಸ್ ಒದಗಿಸಲು 'ಮಾತೃಪುಷ್ಟಿವರ್ಧಿನಿ' ಯೋಜನೆಗಾಗಿ 42
>> ಕೋಟಿ ರೂ. ಅನುದಾನ ಘೋಷಿಸಲಾಗಿದೆ.
>>
>> ವಿಶೇಷ ಚೇತನರಿಗೆ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವ ಸಲುವಾಗಿ ಈವರೆಗೆ ಇದ್ದ ಮಹಿಳಾ
>> ಅಭಿವೃದ್ಧಿ ನಿಗಮವನ್ನು 'ಮಹಿಳಾ ಮತ್ತು ವಿಶೇಷಚೇತನರ ಅಭಿವೃದ್ಧಿ ನಿಗಮ'ಎಂದು ಮರುನಾಮಕರಣ
>> ಮಾಡಲು ಬಜೆಟ್‌ನಲ್ಲಿ ನಿರ್ಧರಿಸಲಾಗಿದೆ.
>>
>> ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ 25 ಸಾವಿರ ಮಕ್ಕಳಿಗೆ ಬಾಲ ಪೋಷಕ ಯೋಜನೆಯಡಿ
>> ಪ್ರತಿದಿನ (180 ದಿನ) 2 ಗ್ರಾಂ ಸ್ಪಿರುಲಿನಾ ನೀಡಲು 3.6 ಕೋಟಿ ವೆಚ್ಚದ 'ಬಾಲ ಪೋಷಕ
>> ಯೋಜನೆ'ಯನ್ನು ರೂಪಿಸಲಾಗಿದೆ. ಬಹು ಅಪೌಷ್ಟಿಕ ಆಹಾರ ಕೊರತೆಯುಳ್ಳ ಮಕ್ಕಳ ಹಿತದೃಷ್ಟಿಯಿಂದ
>> 3.12 ಕೋಟಿ ರೂ. ಮೀಸಲಿಟ್ಟಿದ್ದು, ಪ್ರಸ್ತುತ ಪ್ರತಿ ಮಗುವಿಗೆ ನೀಡುತ್ತಿರುವ 750 ರೂ.ಗಳ
>> ಬದಲಿಗೆ 2 ಸಾವಿರ ರೂ.ಗೆ ಏರಿಸಲಾಗಿದೆ.
>>
>> 4 ಸಾವಿರ ಅಂಗನವಾಡಿ ಕಟ್ಟಡಗಳು
>>
>> ಪರಿಶಿಷ್ಟ ಜಾತಿ/ಪಂಗಡದ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ 500
>> ಸ್ಥಳಗಳಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ನಿಧಿಗಳಿಂದ 3 ಸಾವಿರ ಅಂಗನವಾಡಿ ಕಟ್ಟಡಗಳು,
>> ಎಸ್‌ಡಿಪಿ ಅಡಿಯಲ್ಲಿ 500 ಕಟ್ಟಡಗಳು ಸೇರಿದಂತೆ ಒಟ್ಟಾರೆ 4 ಸಾವಿರ ಅಂಗನವಾಡಿ
>> ಕಟ್ಟಡಗಳನ್ನು ನಿರ್ಮಿಸಲಾಗುವುದು. ಅಂಗನವಾಡಿ ಮಕ್ಕಳಿಗೆ ಕೆನೆಭರಿತ ಹಾಲು ನೀಡಲು ಬಾಲ
>> ಸ್ನೇಹಿ ಕೇಂದ್ರಗಳ ಯೋಜನೆಯಡಿ 10 ಸಾವಿರ ಅಂಗನವಾಡಿ ಕೇಂದ್ರಗಳನ್ನು 'ಶಿಶು ಸ್ನೇಹಿ
>> ಕೇಂದ್ರ'ಗಳನ್ನಾಗಿ ಪರಿವರ್ತಿಸಲಾಗುವುದು. ಇದಕ್ಕಾಗಿ ಪ್ರತಿ ಕೇಂದ್ರಕ್ಕೆ ತಲಾ 10 ಸಾವಿರ
>> ರೂ. ಅನುದಾನ ಘೋಷಣೆಯಾಗಿದೆ.
>>
>> ಸ್ಪರ್ಧಾಚೇತನ ಯೋಜನೆ
>>
>> ಸ್ತ್ರೀಶಕ್ತಿ ಗುಂಪುಗಳ ನೋಂದಣಿಗಾಗಿ 30 ಲಕ್ಷ ರೂ., ಮಹಿಳಾ ಸಬಲೀಕರಣ ಕಾರ್ಯನೀತಿ ಜಾರಿ,
>> ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಪ್ರಾರಂಭ, ಐಎಎಸ್/ಕೆಎಎಸ್ ಆಕಾಂಕ್ಷಿಗಳ ತರಬೇತಿಗಾಗಿ
>> 'ಸ್ಪರ್ಧಾ ಚೇತನ ಯೋಜನೆ'ಯಡಿ 1 ಕೋಟಿ ರೂ. ಸಹಾಯಧನ ಮೀಸಲು. 1.50 ಕೊಟಿ ರೂ.ವೆಚ್ಚದಲ್ಲಿ
>> ವಿಶೇಷಚೇತನ ಪೋಷಕರಿಗೆ ಅರಿವು ಮೂಡಿಸಲು 'ಅರಿವಿನ ಸಿಂಚನ' ಯೋಜನೆ ಜಾರಿ ಹಾಗೂ ನಿರಾಶ್ರಿತ
>> ಬುದ್ಧಿಮಾಂದ್ಯರ ಸಂರಕ್ಷಣೆಗಾಗಿ 'ಅನುಪಾಲನಾ ಗೃಹ'ಗಳನ್ನು ತೆರೆಯಲು 4 ಕೋಟಿ ರೂ. ಅನುದಾನ
>> ಘೋಷಣೆಯಾಗಿದೆ.
>>
>> ವಿಶೇಷಚೇತನರಿಗೆ ನಿರಾಳ
>>
>> ವಿಶೇಷಚೇತನರಿಗೆ 'ಸಾಧನಾ ಸಲಕರಣಾ ಯೋಜನೆ'ಯಡಿ ನೀಡುವ ಮೊತ್ತ 15 ಸಾವಿರ ರೂ.ಗೆ
>> ಏರಿಕೆಯಾಗಿದೆ. ಜತೆಗೆ ಈ ವರ್ಷದಿಂದ ತೀವ್ರ ಅಂಗವಿಕಲತೆಯುಳ್ಳ 2 ಸಾವಿರ ಮಂದಿಗೆ
>> ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲಾಗುವುದು. ಜಿಲ್ಲಾ ಪುನರ್ವಸತಿ ಕೇಂದ್ರಗಳ
>> ಸಹಾಯಧನವನ್ನು ಇನ್ನೂ 16 ಜಿಲ್ಲೆಗಳಿಗೆ ವಿಸ್ತರಿಸಿ, ಪ್ರತಿ ಕೇಂದ್ರಕ್ಕೆ 28 ಲಕ್ಷದ
>> ಬದಲಿಗೆ 36 ಲಕ್ಷ ರೂ. ನೀಡಲಾಗುವುದು. ವಿಶೇಷಚೇತನರ ಶಾಲಾ ಕಟ್ಟಡಗಳ ನಿರ್ಮಾಣ ಮತ್ತು
>> ದುರಸ್ತಿಗಾಗಿ 10 ಕೋಟಿ ರೂ. ಮೀಸಲಿಡಲಾಗಿದೆ.
>>
>> ಬುದ್ಧಿಮಾಂದ್ಯ ಮಕ್ಕಳ ಶಾಲೆಗಳಿಗೆ ಪ್ರತಿ ಮಗುವಿಗೆ ನೀಡುತ್ತಿರುವ ಅನುದಾನವನ್ನು ವಸತಿ
>> ಶಾಲೆಗಳಲ್ಲಿ 5 ಸಾವಿರವಿದ್ದುದು 5,600 ರೂ.ಗೆ ಮತ್ತು ವಸತಿ ರಹಿತ ಶಾಲೆಗಳಿಗೆ 4 ಸಾವಿರ
>> ರೂ. ಇದ್ದುದು 4,800 ರೂ.ಗೆ ಪರಿಷ್ಕರಿಸಲಾಗಿದೆ. ಸ್ತ್ರೀಶಕ್ತಿ ಗುಂಪುಗಳ ಮಹಿಳೆಯರಿಗೆ
>> 'ಸ್ತ್ರೀ ಶಕ್ತಿ ಕೌಶಲ್ಯ' ಯೋಜನೆಯಡಿ ತರಬೇತಿ ನೀಡಲು 2.50 ಕೋಟಿ ರೂ., ಎಚ್‌ಐವಿ
>> ಪೀಡಿತರಿಗೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಸಾಲದ ರೂಪದಲ್ಲಿ 40 ಸಾವಿರ ಹಾಗೂ
>> ಸಹಾಯಧನವಾಗಿ 10 ಸಾವಿರ ರೂ. ನೀಡಲು 'ಧನಶ್ರೀ' ಯೋಜನೆಗಾಗಿ 5 ಕೋಟಿ ಅನುದಾನ
>> ಮೀಸಲಿಡಲಾಗಿದೆ. ಈ ಬಾರಿ ಈ ಇಲಾಖೆಗೆ ಒಟ್ಟಾರೆ 4,497 ಕೋಟಿ ರೂ. ಅನುದಾನ ನೀಡಲಾಗಿದೆ.
>>
>> Hareeshkumar K
>> AM(PCM)
>> GHS HUSKURU
>> MALAVALLI TQ
>> MANDYA DT 571475
>> mobile no 9880328224
>> email [email protected]
>>
>> --
>> 1. If a teacher wants to join STF, visit
>> http://karnatakaeducation.org.in/KOER/en/index.php/Become_a_STF_groups_member
>> 2. For STF training, visit KOER -
>> http://karnatakaeducation.org.in/KOER/en/index.php
>> 4. For Ubuntu 14.04 installation, visit
>> http://karnatakaeducation.org.in/KOER/en/index.php/Kalpavriksha
>> 4. For doubts on Ubuntu, public software, visit
>> http://karnatakaeducation.org.in/KOER/en/index.php/Frequently_Asked_Questions
>> 5. Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Why_public_software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ---
>> You received this message because you are subscribed to the Google Groups
>> "Maths & Science STF" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> Visit this group at https://groups.google.com/group/mathssciencestf.
>> For more options, visit https://groups.google.com/d/optout.
>>
> --
> 1. If a teacher wants to join STF, visit
> http://karnatakaeducation.org.in/KOER/en/index.php/Become_a_STF_groups_member
> 2. For STF training, visit KOER -
> http://karnatakaeducation.org.in/KOER/en/index.php
> 4. For Ubuntu 14.04 installation, visit
> http://karnatakaeducation.org.in/KOER/en/index.php/Kalpavriksha
> 4. For doubts on Ubuntu, public software, visit
> http://karnatakaeducation.org.in/KOER/en/index.php/Frequently_Asked_Questions
> 5. Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Why_public_software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/mathssciencestf.
> For more options, visit https://groups.google.com/d/optout.
>



-- 
Mohan K R.
                 Bio teacher
GHS hiremarli. Pandavapura.
Mandya.
mobile: 9901815471

-- 
1. If a teacher wants to join STF, visit 
http://karnatakaeducation.org.in/KOER/en/index.php/Become_a_STF_groups_member
2. For STF training, visit KOER - 
http://karnatakaeducation.org.in/KOER/en/index.php
4. For Ubuntu 14.04 installation,    visit 
http://karnatakaeducation.org.in/KOER/en/index.php/Kalpavriksha 
4. For doubts on Ubuntu, public software, visit 
http://karnatakaeducation.org.in/KOER/en/index.php/Frequently_Asked_Questions
5. Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Why_public_software 
ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
Visit this group at https://groups.google.com/group/mathssciencestf.
For more options, visit https://groups.google.com/d/optout.

Reply via email to