very very motivational Sr. Anitha D'souza J. Headmistress Amruthlalji High School Kelarai,Neermarga. D.K.
2016-07-17 14:51 GMT+05:30 Basavaraj Itagi <[email protected]>: > Very useful sir > On Jul 17, 2016 6:46 AM, "Hrushi Harsha" <[email protected]> wrote: > >> Very good arrival sir. thank u . >> On Jul 16, 2016 7:04 PM, "HAREESHKUMAR K Agasanapura" < >> [email protected]> wrote: >> >>> http://m.prajavani.net/article/2016_07_14/423603 >>> >>> *ಅವಮಾನ, ಸ್ವಾಭಿಮಾನ ಮತ್ತು ಆತ್ಮಹತ್ಯೆ* >>> >>> 14 Jul, 2016 >>> >>> ನಾಗೇಶ್ ಹೆಗಡೆ >>> >>> >>> <https://www.facebook.com/sharer/sharer.php?u=http%3A%2F%2Fgoo.gl%2FfYSdF5> >>> <https://twitter.com/intent/tweet?text=%E0%B2%85%E0%B2%B5%E0%B2%AE%E0%B2%BE%E0%B2%A8%2C++%E0%B2%B8%E0%B3%8D%E0%B2%B5%E0%B2%BE%E0%B2%AD%E0%B2%BF%E0%B2%AE%E0%B2%BE%E0%B2%A8+%E0%B2%AE%E0%B2%A4%E0%B3%8D%E0%B2%A4%E0%B3%81+%E0%B2%86%E0%B2%A4%E0%B3%8D%E0%B2%AE%E0%B2%B9%E0%B2%A4%E0%B3%8D%E0%B2%AF%E0%B3%86+http%3A%2F%2Fgoo.gl%2FfYSdF5> >>> <https://plus.google.com/share?url=http%3A%2F%2Fgoo.gl%2FfYSdF5> >>> <http://www.pinterest.com/pin/find/?url=http%3A%2F%2Fgoo.gl%2FfYSdF5> >>> <http://www.linkedin.com/shareArticle?mini=true&title=%E0%B2%85%E0%B2%B5%E0%B2%AE%E0%B2%BE%E0%B2%A8%2C++%E0%B2%B8%E0%B3%8D%E0%B2%B5%E0%B2%BE%E0%B2%AD%E0%B2%BF%E0%B2%AE%E0%B2%BE%E0%B2%A8+%E0%B2%AE%E0%B2%A4%E0%B3%8D%E0%B2%A4%E0%B3%81+%E0%B2%86%E0%B2%A4%E0%B3%8D%E0%B2%AE%E0%B2%B9%E0%B2%A4%E0%B3%8D%E0%B2%AF%E0%B3%86+&url=http%3A%2F%2Fgoo.gl%2FfYSdF5> >>> >>> ಕಳೆದ ಎರಡು ವಾರಗಳಲ್ಲಿ ಸಂಭವಿಸಿದ ನಾಲ್ಕೂ ಆತ್ಮಹತ್ಯೆಗಳಲ್ಲಿ ಕಂಡುಬಂದ ಒಂದು ಸಮಾನ >>> ಅಂಶ ಏನು ಗೊತ್ತೆ? ಅಪಮಾನ. ಹದಿನಾಲ್ಕರ ಹರೆಯದ ಹೈಸ್ಕೂಲ್ ವಿದ್ಯಾರ್ಥಿ ರೌನಕ್ ಬ್ಯಾನರ್ಜಿ >>> ಶಾಲೆಯಿಂದ ಬಂದವನೇ 19ನೇ ಅಂತಸ್ತಿನ ತನ್ನ ಮನೆಯ ಬಾಲ್ಕನಿಯಿಂದ ಕೆಳಕ್ಕೆ ಜಿಗಿದು ಪ್ರಾಣ >>> ಕಳೆದುಕೊಂಡ. >>> >>> ‘ಕಿಲಾಡಿ ಹುಡುಗರ ಒಂದಿಡೀ ತಂಡ ಪ್ರತಿದಿನವೂ ನನ್ನನ್ನು ಛೇಡಿಸಿ ಅವಮಾನ ಮಾಡುತ್ತಿದೆ. >>> ನನ್ನಿಂದ ಇನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ’ ಎಂಬ ಅರ್ಥದ ಚೀಟಿಯೊಂದು ಅವನ >>> ಬ್ಯಾಗಿನಲ್ಲಿತ್ತು. ಇನ್ನು, ಡಿವೈಎಸ್ಪಿ ಕಲ್ಲಪ್ಪ ಹಂಡೀಬಾಗ ಮತ್ತು ಇನ್ನೊಬ್ಬ >>> ಡಿವೈಎಸ್ಪಿ ಎಂ.ಕೆ.ಗಣಪತಿ ಕೂಡ ತಮ್ಮ ಆತ್ಮಹತ್ಯೆಗೆ ಯಾವ ಸಂದರ್ಭಗಳು ಕಾರಣ ಎಂಬುದರ ದಾಖಲೆ >>> ಉಳಿಸಿಯೇ ನೇಣಿಗೆ ತಲೆ ಕೊಟ್ಟಿದ್ದಾರೆ. >>> >>> ರೌನಕ್ ಮಾದರಿಯಲ್ಲಿ ತನಗೆ ಅಪಮಾನವಾಗಿದೆ ಎಂದು ನೇರವಾಗಿ ಹೇಳಿಲ್ಲವಾದರೂ ಮೇಲಿನವರ >>> ಎದುರು ತನಗೆ ಮುಖಭಂಗವಾಗಿದೆ, ತನ್ನ ವ್ಯಕ್ತಿತ್ವದ ಅವಹೇಳನವಾಗಿದೆ ಎಂಬುದರ ಬಗ್ಗೆ ಧಾರಾಳ >>> ಸಾಕ್ಷ್ಯಗಳನ್ನು ಬಿಟ್ಟು ಹೋಗಿದ್ದಾರೆ. >>> >>> ಈ ಘಟನೆಗಳ ಕುರಿತು ಚರ್ಚೆ ನಡೆಯುತ್ತಿದ್ದಾಗಲೇ, ಬೆಂಗಳೂರಿನ ಪ್ರೆಸಿಡೆನ್ಸಿ >>> ಕಾಲೇಜಿನಲ್ಲಿ ಓದುತ್ತಿದ್ದ 23ರ ಯುವತಿ ಸೋಫಿಯಾ ಜುಲೈ 10ರಂದು ತನ್ನ ಹಾಸ್ಟೆಲಿನಲ್ಲಿ ನೇಣು >>> ಹಾಕಿಕೊಂಡಳು. ಅವಳು ತರಗತಿಗೆ ಸರಿಯಾಗಿ ಹಾಜರಾಗುತ್ತಿಲ್ಲ ಎಂಬ ಸಂಗತಿ ಅಮ್ಮನಿಗೆ >>> ಗೊತ್ತಾಗಿತ್ತು. >>> >>> ಮಾಧ್ಯಮಗಳ ವರದಿಯ ಪ್ರಕಾರ, ಮಗಳ ಶಿಕ್ಷಣ ಶುಲ್ಕವನ್ನು ಕಟ್ಟಲೆಂದು ಎರಡು ದಿನಗಳ ಹಿಂದೆ >>> ಕಾಲೇಜಿಗೆ ಬಂದ ಅಮ್ಮ ಎಲ್ಲ ವಿದ್ಯಾರ್ಥಿನಿಯರ ಎದುರು ಸೋಫಿಯಾಗೆ ಬೈದಿದ್ದಳು. ಅದನ್ನೇ >>> ಮನಸ್ಸಿಗೆ ಹಚ್ಚಿಕೊಂಡ ಯುವತಿ ಅದೆಷ್ಟು ಹಿಂಸೆಪಟ್ಟಳೊ, ಇಹಲೋಕ ತ್ಯಜಿಸಿದಳು. ಅಪಮಾನ >>> ಎಂಬುದು ಅಷ್ಟೊಂದು ತೀವ್ರವಾಗಿ ಮನಸ್ಸನ್ನು ಘಾಸಿ ಮಾಡುತ್ತದೆಯೆ? >>> >>> ಎಚ್ಚರವಿದ್ದಷ್ಟು ಹೊತ್ತೂ ನಮ್ಮ ಮನಸ್ಸು ನಾನಾ ಘಟನೆಗಳನ್ನು ಮೆಲುಕು >>> ಹಾಕುತ್ತಿರುತ್ತದೆ. ಸಂತಸ, ಉದ್ವೇಗ, ಜಿಗುಪ್ಸೆ, ಕಾತರ, ಶಂಕೆ, ಚಿಂತೆ, ಉಮ್ಮಳ, ಅಪಮಾನ, >>> ಹೆಮ್ಮೆ, ನಾಚಿಕೆ, ದುಃಖ, ಭಯ, ಅಸೂಯೆ, ಲಜ್ಜೆ, ಕೋಪ, ಹತಾಶೆ, ಸಂತೃಪ್ತಿ ಹೀಗೆ ನಾನಾ ಬಗೆಯ >>> ಭಾವನೆಗಳು ಮಿದುಳಿನಲ್ಲಿ ಮೂಡುತ್ತಿರುತ್ತವೆ. ಕೆಲವು ಮೂಡುತ್ತವೆ, ಮತ್ತೆ ಹಾಗೇ >>> ಮಾಯವಾಗುತ್ತವೆ. >>> >>> ಕೆಲವು ಘಟನೆಗಳನ್ನು ಮನಸ್ಸು ಮತ್ತೆ ಮತ್ತೆ ಮಥಿಸುತ್ತಿರುತ್ತದೆ. ಮನೋವಿಜ್ಞಾನಿಗಳ >>> ಪ್ರಕಾರ ಈ ಹತ್ತು ಹಲವು ಭಾವನೆಗಳಲ್ಲಿ ಅಪಮಾನವೇ ಎಲ್ಲಕ್ಕಿಂತ ಹೆಚ್ಚು ಹೊತ್ತು >>> ಮನಸ್ಸಿನಲ್ಲಿ ಕೂತಿರುತ್ತದೆ. ಮತ್ತೆ ಮತ್ತೆ ಮನಸ್ಸನ್ನು ಕಲಕುತ್ತಿರುತ್ತದೆ, >>> ಕಾಡುತ್ತಿರುತ್ತದೆ. ಪ್ರತೀಕಾರಕ್ಕೆ ಹಪಹಪಿಸುತ್ತದೆ. ಅದಕ್ಕೆ ಅವಕಾಶ ಇಲ್ಲದ ಸಂದರ್ಭದಲ್ಲಿ >>> ಮನಸ್ಸು ಇಡೀ ದೇಹವನ್ನೇ ದಂಡಿಸುತ್ತದೆ. ಆತ್ಮಘಾತುಕ ಕೃತ್ಯಕ್ಕೆ ದೇಹವನ್ನು ತಳ್ಳುತ್ತದೆ. >>> >>> ಅದನ್ನು ವಿಜ್ಞಾನಿಗಳೇ ಹೇಳಬೇಕೆಂದೇನಿಲ್ಲ. ನಾಲ್ಕು ಜನರ ಎದುರಿಗೆ ಆಗುವ ಅವಮಾನದ ನೋವು >>> ಎಷ್ಟೆಂಬುದು ನಮಗೂ ಗೊತ್ತಿದೆ. ವೈರಿಯ ದೇಹಕ್ಕೆ ಗಾಯ ಮಾಡುವುದಕ್ಕಿಂತ ಆತನ/ಆಕೆಯ ಮನಸ್ಸಿಗೆ >>> ಗಾಯ ಮಾಡಿದರೇ ಹೆಚ್ಚು ನೋವಾಗುತ್ತದೆ ಎಂಬುದು ಎಲ್ಲ ಸಮಾಜದ ಎಲ್ಲರಿಗೂ ಗೊತ್ತಿದೆ. >>> >>> ವೈರಿಯ ದೇಹವನ್ನು ಇರಿಯಲು ಬಳಸುವ ಶಸ್ತ್ರಾಸ್ತ್ರಗಳಿಗಿಂತ ಅದೆಷ್ಟೋ ಪಟ್ಟು ವೈವಿಧ್ಯಮಯ >>> ಶಸ್ತ್ರಗಳು ಬೈಗುಳಗಳ ರೂಪದಲ್ಲಿ ವಿಕಾಸಗೊಂಡಿವೆ (ಅದನ್ನು ನಾವು ಈಗಿನ ವಿಧಾನ ಸಭೆಯ >>> ಅಧಿವೇಶನದಲ್ಲಿ, ಅದರಲ್ಲೂ ಆತ್ಮಹತ್ಯೆಗಳ ಮೇಲಿನ ಚರ್ಚೆಯ ಸಂದರ್ಭದಲ್ಲೇ ನೋಡುತ್ತಿದ್ದೇವೆ). >>> >>> ಮುಕ್ತ ಸಮಾಜದಲ್ಲಿ ಅಂಥ ‘ಹರಿತ ನಾಲಗೆ’ಗೆ ಪೂರಕವಾಗಿ ಚಪ್ಪಲು, ಮಸಿ, ಮೂತ್ರ, >>> ಅರೆಮುಂಡನ, ಕತ್ತೆ ಮೆರವಣಿಗೆಯೇ ಮುಂತಾದ ಅಷ್ಟೇನೂ ದೇಹಕ್ಕೆ ಅಪಾಯಕಾರಿಯಲ್ಲದ, ಆದರೆ >>> ಆತ್ಮಗೌರವವನ್ನು ಕ್ರೂರವಾಗಿ ಘಾಸಿಗೊಳಿಸಬಲ್ಲ ನಾನಾ ಬಗೆಯ ಶಸ್ತ್ರಗಳು ರೂಪುಗೊಂಡಿವೆ. >>> >>> ಈಗೀಗಂತೂ ವರದಿಯಾಗುವ ಬಹಳಷ್ಟು ಆತ್ಮಹತ್ಯೆ ಪ್ರಕರಣಗಳಿಗೆ ಅವಮಾನವೇ ಮುಖ್ಯ ಕಾರಣ >>> ಇದ್ದೀತೆಂದು ಯಾರೂ ತರ್ಕಿಸಬಹುದಾಗಿದೆ. ವರದಕ್ಷಿಣೆ ಪೀಡನೆಯಿಂದ ಹೆಣ್ಣುಮಗಳೊಬ್ಬಳು ಬೆಂಕಿ >>> ಹಚ್ಚಿಕೊಂಡು ಸಾವಪ್ಪಿದಳೆಂದು ದಾಖಲಾದರೂ ಯಾವುದೋ ಕ್ಷಣದಲ್ಲಿ ತನ್ನ ತವರಿನ ಪ್ರತಿಷ್ಠೆಗೆ >>> ಧಕ್ಕೆ ಬಂತೆಂದೋ, ತನ್ನ ಪ್ರೀತಿಯ ಅಪ್ಪನಿಗೆ ಅಪಮಾನ ಮಾಡಿದರೆಂದೋ ಮನಸ್ಸು ತೀರಾ >>> ಘಾಸಿಗೊಂಡಿರುತ್ತದೆ. >>> >>> ರೈತರ ಆತ್ಮಹತ್ಯೆಯಲ್ಲೂ ಸಾಲದ ಹೊರೆಯೇ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದರೂ ಸ್ವಯಂ >>> ಪ್ರತಿಷ್ಠೆಗೆ, ಸ್ವಾಭಿಮಾನಕ್ಕೆ ಧಕ್ಕೆ ಬರುವಂಥ ಎಂಥದ್ದೋ ಮಾತು ಯಾರದ್ದೋ ಬಾಯಿಂದ >>> ಬಂದಿದ್ದೇ ಮುಖ್ಯ ಕಾರಣ ಇದ್ದೀತು. ಇಷ್ಟಕ್ಕೂ ಅಪಮಾನ ಬೇರೆಯವರಿಂದಲೇ ಆಗಬೇಕಿಲ್ಲ. >>> ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಲ್ಲಿ ಕೆಲವರು ತಮ್ಮ ಆತ್ಮಗೌರವವನ್ನು ತಾವೇ >>> ಅಪಮೌಲ್ಯಗೊಳಿಸಿಕೊಳ್ಳುತ್ತಾರೆ. ಆತ್ಮಹತ್ಯೆಯ ದಾರಿ ಹುಡುಕುತ್ತಾರೆ. >>> >>> ಕಳೆದ ಮಾರ್ಚ್ 1ರಂದು, ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ನೇಹಾ ರೆಡ್ಡಿ ಎಂಬ >>> ಯುವತಿ ತನ್ನ ಬಾಯ್ಫ್ರೆಂಡ್ ಭೇಟಿಗೆ ಹೋಗಿ ಅದೆಂಥ ಅವಮಾನವಾಯಿತೊ, ಆತನ ಮನೆಯ ಛಾವಣಿಯಿಂದ >>> ಕೆಳಕ್ಕೆ ಧುಮುಕಿ ಆತ್ಮಾರ್ಪಣೆ ಮಾಡಿಕೊಂಡಳು. ಅದೇ ತಿಂಗಳು 30ರಂದು ಬೆಂಗಳೂರಿನ ಕೇಂಬ್ರಿಜ್ >>> ಸ್ಕೂಲಿನಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ಪಾರ್ಥಿಬನ್ ಎಂಬ ಹುಡುಗ ಮನೆಗೆ ಬಂದವನೇ ನೇಣು >>> ಹಾಕಿಕೊಂಡ. >>> >>> ‘ನಿಮ್ಮ ಮಗನಿಗೆ ಬೇರೆ ಯಾವುದಾದರೂ ಶಾಲೆಯನ್ನು ನೋಡಿಕೊಳ್ಳಿ. ಇಷ್ಟೊಂದು ವಿಷಯಗಳಲ್ಲಿ >>> ಫೇಲ್ ಆಗುವ ಆತ ನಮಗೆ ಬೇಡ’ ಎಂದು ಶಾಲೆಯವರು ಪಾಲಕರಿಗೆ ಬರೆದಿದ್ದ ಪತ್ರ ಆತನ >>> ಚೀಲದಲ್ಲಿತ್ತು. >>> >>> ಇವೆಲ್ಲ ಅವಮಾನದ ಮೇಲ್ನೋಟಗಳಾದವು. ಆದರೆ ಅವಮಾನಿತ ಮಿದುಳಲ್ಲಿ ಏನಾಗುತ್ತದೆ ಎಂಬ >>> ಚಿತ್ರಣ ಬೇಕಲ್ಲ? ಅವಮಾನವೇ ಅತಿ ಕ್ರೂರ ಮನೋದಂಡನೆ ಹೌದೆ ಅಲ್ಲವೇ ಎಂಬುದನ್ನು ಅಳೆದು >>> ನೋಡಬೇಕಲ್ಲ? ಆಮ್ಸ್ಟರ್ಡಾಮ್ ವಿಶ್ವವಿದ್ಯಾಲಯದ ಇಬ್ಬರು ಮನೋವಿಜ್ಞಾನಿಗಳು ಅದನ್ನು ಅಳೆಯಲು >>> ಹೊರಟರು. >>> >>> ಪ್ರಯೋಗಕ್ಕೆ ತಲೆಯೊಡ್ಡಲು ಬಂದ ಯುವಕ, ಯುವತಿಯರ ತಲೆಗೆ ಇಇಜಿ ಬಿಲ್ಲೆಗಳನ್ನು ಅಂಟಿಸಿ >>> ಕೈಗೆ ಕತೆ ಪುಸ್ತಕ ಕೊಟ್ಟರು. ಕತೆಯಲ್ಲಿ ಬರುವ ವ್ಯಕ್ತಿ ತಾನೇ ಎಂದು ಪರಿಗಣಿಸಿ ಮನಸ್ಸು >>> ಕೊಟ್ಟು ಓದಲು ಹೇಳಿದರು. ದುಃಖ, ನಿರಾಸೆ, ಅವಮಾನ, ಕೋಪ ಬರುವಂಥ ವಿವಿಧ ಸನ್ನಿವೇಶಗಳು >>> ಕತೆಗಳಲ್ಲಿದ್ದವು. >>> >>> ಉದಾ: ಅಂತರ್ಜಾಲದಲ್ಲಿ ಪರಿಚಯಗೊಂಡು ಪರಸ್ಪರ ಪ್ರೇಮಿಗಳಾದ ಇಬ್ಬರು ಕೊನೆಗೂ >>> ಭೇಟಿಯಾಗುತ್ತಾರೆ. ಮೊದಲ ನೋಟದಲ್ಲೇ ನಿರಾಸೆಯಾಗಿ ಮುಖ ತಿರುಗಿಸಿ, ಒಂದೂ ಮಾತಾಡದೆ ಹಠಾತ್ >>> ಆತ ಹೊರಟು ಹೋದಾಗ ಇವಳಿಗೆ ತೀವ್ರ ಮುಖಭಂಗವಾಗುತ್ತದೆ. >>> >>> ಅದು ಒಂದು ಕತೆಯಾದರೆ, ಅಮ್ಮನಿಗೆ ಬೈದು ಊಟವನ್ನು ಅರ್ಧಕ್ಕೇ ಬಿಟ್ಟು ಏಳುವಾಗ ಅಮ್ಮ >>> ಹಠಾತ್ತಾಗಿ ಅಳುವ ಕತೆ ಇನ್ನೊಂದು. ಹೀಗೆ ತನ್ಮಯರಾಗಿ ಕತೆ ಓದುತ್ತಿದ್ದವರ ಮಿದುಳಿನಲ್ಲಿ >>> ಉಕ್ಕುವ ವಿದ್ಯುತ್ ಕಾಂತೀಯ ತರಂಗಗಳನ್ನು ವಿಜ್ಞಾನಿಗಳು ಆಲೇಖದ ರೂಪದಲ್ಲಿ >>> ದಾಖಲಿಸಿಕೊಳ್ಳುತ್ತಿದ್ದರು. ಕೊನೆಯಲ್ಲಿ ಇಇಜಿ ಸ್ಕ್ಯಾನ್ನಲ್ಲಿ ಮೂಡಿದ ರೇಖೆಗಳನ್ನು >>> ವಿಶ್ಲೇಷಣೆ ಮಾಡಿದರು. ಅವಮಾನದ ಸಂದರ್ಭಗಳಲ್ಲೇ ಮಿದುಳು ಎಲ್ಲಕ್ಕಿಂತ ತೀವ್ರ >>> ವಿಹ್ವಲತೆಯನ್ನು ದಾಖಲಿಸಿತ್ತು. >>> >>> ಏಕೆ ಹೀಗಾಗುತ್ತದೆ? ದೇಹಕ್ಕೆ ಗಾಯವಾದರೆ ಅದರ ನೆನಪು ಆಗಾಗ ಬರುತ್ತದೆ ನಿಜ; ಆದರೆ ಹಳೆಯ >>> ನೋವು ಮರುಕಳಿಸುವುದಿಲ್ಲ. ಆದರೆ ಅವಮಾನದ ವಿಷಯ ಹಾಗಲ್ಲ.ಅದರ ನೆನಪು ಹಸಿಯಾಗಿದ್ದಷ್ಟು >>> ಹೊತ್ತೂ ನೋವಿನ ತೀವ್ರತೆ ಅಷ್ಟೇ ಇರುತ್ತದೆ. ಅಥವಾ ಅಂಥದ್ದೇ ಬೇರೆ ಘಟನೆಗಳನ್ನು ತಳಕು >>> ಹಾಕಿಕೊಂಡು ನೋವು ಹೆಚ್ಚಲೂಬಹುದು. >>> >>> ವಿದ್ಯಾರ್ಥಿ ರೌನಕ್ಗೆ ಇಂದಿನ ಅವಮಾನದ ಜೊತೆ ನಿನ್ನೆಯ, ಮೊನ್ನೆಯ ಅವಮಾನಗಳೂ ಒಟ್ಟಾಗಿ >>> ನುಗ್ಗಿ ತೀವ್ರತೆಯನ್ನು ಹೆಚ್ಚಿಸಿದ ಹಾಗೆ. ದೈಹಿಕ ಗಾಯದಲ್ಲಿ ಹೀಗಾಗುವುದಿಲ್ಲ. ಅಗಲಿಕೆಯ >>> ದುಃಖದಲ್ಲೂ ಹೀಗಾಗುವುದಿಲ್ಲ ಏಕೆಂದರೆ ಅಲ್ಲಿ ಸ್ವಯಂ ಪ್ರತಿಷ್ಠೆಯ ಪ್ರಶ್ನೆ ಬರುವುದಿಲ್ಲ. >>> ಮಿದುಳು ತನ್ನ ವ್ಯಕ್ತಿತ್ವದ ಒಂದು ಬಿಂಬ >>> ವನ್ನು ತಾನೇ ಸೃಷ್ಟಿ ಮಾಡಿಕೊಂಡಿರುತ್ತದೆ. >>> >>> ಬದುಕುಳಿಯುವ ಹೋರಾಟದಲ್ಲಿ, ಪೈಪೋಟಿಯಲ್ಲಿ ಆತ್ಮಪ್ರತಿಷ್ಠೆಯ ಈ ಬಿಂಬವೇ ದೇಹ ಮತ್ತು >>> ಮನಸ್ಸಿಗೆ ಸೂಕ್ತ ಚಾಲನೆ ಕೊಡುತ್ತಿರುತ್ತದೆ. ಅವಮಾನ ಆದಾಗ ಈ ಬಿಂಬಕ್ಕೇ ಧಕ್ಕೆ ಬರುತ್ತದೆ. >>> ಕೆಲವು ಮಿದುಳುಗಳು ಸೇಡಿನ ಕಿಡಿ ಹೊಮ್ಮಿಸಿ, ಫೂಲನ್ ದೇವಿಯ ಹಾಗೆ ಸಡ್ಡು ಹೊಡೆಯಬಹುದು. >>> ಅಳ್ಳೆದೆಯ ನತದೃಷ್ಟರ ಮಿದುಳು ಮಾತ್ರ ಈ ಬಿಂಬವನ್ನೇ ಹೊಸಕಿ ಹಾಕಲು ಸಜ್ಜಾಗುತ್ತದೆ. >>> >>> ಹಾಗಿದ್ದರೆ ದಿನದಿನವೂ ಅವಮಾನಕ್ಕೆ ತುತ್ತಾಗುವ ದಲಿತರು, ಮಾಣಿಗಳು, ಪೇದೆಗಳು, >>> ಅಷ್ಟೇಕೆ- ರಾಜಕೀಯ ಮುಖಂಡರು ಹೇಗೆ ಏಗುತ್ತಾರೆ? ಅವರೆಲ್ಲ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ >>> ಅಥವಾ ಬಂಡೆದ್ದು ಹೋರಾಡುವುದೂ ಇಲ್ಲ; ಏಕೆಂದರೆ ಅವರು ಅವಮಾನವನ್ನು ಅಂತರ್ಗತ >>> ಮಾಡಿಕೊಳ್ಳುವುದಿಲ್ಲ. ಅಂದರೆ, ಅಪಮಾನ >>> ವನ್ನು ತಟ್ಟಿಸಿಕೊಳ್ಳುವುದಿಲ್ಲ ಅಥವಾ ಬಯ್ಗುಳಗಳು ಅವಮಾನಕಾರಿ ಎಂದು ಅವರಿಗೆ >>> ಅನ್ನಿಸುವುದೇ ಇಲ್ಲ. >>> >>> ಏಕೆಂದರೆ ತನ್ನ ಅಸ್ತಿತ್ವಕ್ಕೆ ಧಕ್ಕೆ ಬರುವಷ್ಟರಮಟ್ಟಿಗೆ ಅವರ ಪ್ರತಿಷ್ಠೆಯ ಬಿಂಬ >>> ಪೆಡಸಾಗಿರುವುದಿಲ್ಲ. ಆದರೆ ಕುಸುಮ ಕೋಮಲವಾಗಿ ತಮ್ಮ ಬಿಂಬವನ್ನು ಕಾಪಾಡಿಕೊಂಡು ಬರುವವರ >>> ಸ್ಥಿತಿ ಹಾಗಿರುವುದಿಲ್ಲ. ಅಂಥ ಸೂಕ್ಷ್ಮ ಸಂವೇದನೆ ಇರುವವರು ಹೇಗೆ ಅವಮಾನವನ್ನು >>> ಎದುರಿಸಬೇಕು ಎಂಬುದರ ಬಗ್ಗೆ ಹತ್ತಾರು ಉಪಾಯಗಳನ್ನು ಮನೋ >>> ವಿಜ್ಞಾನಿಗಳು ಸೂಚಿಸುತ್ತಾರೆ. >>> >>> ಮೋಹನದಾಸ ಗಾಂಧಿಗೆ ಯಾರೂ ಸೂಚಿಸಿರಲಿಲ್ಲ. ದಕ್ಷಿಣ ಆಫ್ರಿಕದಲ್ಲಿ ರೈಲಿನಿಂದ >>> ದಬ್ಬಿಸಿಕೊಂಡ ಆ ಘಟನೆ ಭಾರತದಲ್ಲಿ ಬ್ರಿಟಿಷರ ಆಧಿಪತ್ಯದ ಶವ ಪೆಟ್ಟಿಗೆಗೆ ಬಿದ್ದ ಮೊದಲ >>> ಮೊಳೆ ಎನ್ನಿಸಿಕೊಂಡಿತು. ಇಂದಿರಾ ಗಾಂಧಿಯವರನ್ನು ಪ್ರಧಾನಿ ಪಟ್ಟಕ್ಕೆ ಅರ್ಹಳಲ್ಲದ ‘ಗೂಂಗಿ >>> ಗುಡಿಯಾ’ (ಮೊದ್ದು ಬೊಂಬೆ) ಎಂದು ಯಾರೆಲ್ಲ ಹಂಗಿಸಿದರು. ಅಂಥ ಅವಮಾನವನ್ನೇ ಯಶಸ್ಸಿನ >>> ಮೆಟ್ಟಿಲಾಗಿ ಮಾಡಿಕೊಂಡವರ ಚೇತೋಹಾರಿ ಕತೆಗಳು ಎಷ್ಟೊಂದಿಲ್ಲ?ಅವಮಾನ, ಹೆಮ್ಮೆ, ಆತ್ಮಗೌರವ >>> ಎಂಬುದು ವ್ಯಕ್ತಿಗಷ್ಟೇ ಸೀಮಿತವಾಗಿಲ್ಲ. >>> >>> ಒಂದೊಂದು ಸಮುದಾಯಕ್ಕೂ ಅದರದ್ದೇ ಪ್ರತಿಷ್ಠೆಯ ಬಿಂಬಗಳಿರುತ್ತವೆ. ಒಂದು ಗ್ರಾಮ, ಒಂದು >>> ಕೋಮು, ಒಂದು ಭಾಷೆ, ಒಂದು ಧರ್ಮ, ಒಂದು ದೇಶ ಏಕತ್ರವಾಗಿ ತನ್ನ ಬಿಂಬವನ್ನು >>> ರೂಪಿಸಿಕೊಂಡಿರುತ್ತದೆ. >>> >>> ಖಾಪ್ ಪಂಚಾಯತ್ ಎನ್ನಿ, ‘ಮರಾಠಿ ಮಾನುಸ್’ ಎನ್ನಿ, ‘ರಾಜಪೂತ್ ರಕ್ತ’ ಎನ್ನಿ, ಅಂಥ >>> ಅಭಿಮಾನವನ್ನು ಪೋಷಿಸುವ, ಅದಕ್ಕಾಗಿ ರಕ್ತ ಹರಿಸುವ, ಸಮೂಹ ಸನ್ನಿ ಸೃಷ್ಟಿಸುವ, ಅಂಥ >>> ಬಿಂಬಕ್ಕೆ ಘಾಸಿಯಾದಾಗ ಯುದ್ಧ ಸಾರಿ, ಪ್ರತೀಕಾರಕ್ಕೆ ಹೊರಟು ಅಮಾಯಕರನ್ನು ಬಲಿಹಾಕಿದ >>> ಸಂದರ್ಭಗಳು ಚರಿತ್ರೆಯ ಪುಟಗಳಲ್ಲಿ ಅದ್ದಿಬಿದ್ದಿವೆ. >>> >>> ಅವಮಾನ ನುಂಗಿಕೊಳ್ಳುವುದೂ ಒಂದು ಕಲೆಯೇ. ಚೀನೀಯರು ತಮಗಿಂತ ಕೆಳಗಿನವರ ಜೊತೆ >>> ವ್ಯವಹರಿಸುವಾಗ ಕೆಳಗಿನವರು ತಗ್ಗಿನಲ್ಲಿ ಕೂತಿರಬೇಕು. ಸಮಬಲರು ಮಾತ್ರ ಸಮಾನ ಎತ್ತರದಲ್ಲಿ >>> ಕೂತಿರಬೇಕು. ಇದು ಅಲ್ಲಿನ ಸಂಪ್ರದಾಯ. ಕ್ರಿ.ಶ. 1900ರಲ್ಲಿ ಚೀನೀಯರು ಪಾಶ್ಚಾತ್ಯರ >>> ವಿರುದ್ಧ ದಂಗೆ ಎದ್ದು ಕೊನೆಗೆ ತಾವೇ ಸೋತು ಸುಣ್ಣವಾಗಿ ದಾಳಿಕೋರರ ಜೊತೆಗೆ ಒಂದು >>> ಒಪ್ಪಂದಕ್ಕೆ ಬರುತ್ತಾರೆ. >>> >>> ಅದು ‘ಬಾಕ್ಸರ್ ದಂಗೆ’ ಎಂತಲೇ ಪ್ರಸಿದ್ಧಿ ಪಡೆದಿದೆ. ಭಾರೀ ಅವಮಾನಕಾರಿ ಎನಿಸುವ >>> ಒಪ್ಪಂದಕ್ಕೆ ಸಹಿ ಹಾಕಲೇಬೇಕಾದ ಅನಿವಾರ್ಯತೆ ಚೀನೀಯರಿಗೆ ಬರುತ್ತದೆ. ಆದರೆ ಚೀನಾದವರು >>> ಮಾತ್ರ ತಾವೇ ಗೆದ್ದೆವೆಂದು ಹೇಳುತ್ತಾರೆ. ಏಕೆಂದರೆ ಆ ಒಪ್ಪಂದಕ್ಕೆ ಸಹಿ ಮಾಡುವಾಗ >>> ವಿದೇಶಿಯರು ಕೂರಬೇಕಾದ ಆಸನಗಳ ಕಾಲುಗಳ ತಳಭಾಗವನ್ನು ಅವರಿಗೆ ಗೊತ್ತಾಗದಂತೆ ಗರಗಸದಲ್ಲಿ >>> ಅರ್ಧ ಇಂಚು ಕತ್ತರಿಸಿದ್ದರಂತೆ. >>> >>> ತಗ್ಗಿನಲ್ಲಿ ಕೂತು ಒಪ್ಪಂದಕ್ಕೆ ಸಹಿ ಹಾಕಿದ್ದರಿಂದ ವಿದೇಶೀಯರದ್ದೇ ಮರ್ಯಾದೆ >>> ಹೋಯಿತೆಂದು ಚೀನೀಯರು ಈಗಲೂ ಭಾವಿಸುತ್ತಾರೆ. ಮೊನ್ನೆ ಚೀನೀಯರಿಗೆ ಮತ್ತೆ ಅಪಮಾನವಾಗಿದೆ. >>> ದಕ್ಷಿಣ ಚೀನಾ ಸಮುದ್ರದ ಭೂಭಾಗದ ಮೇಲೆ ಅವರಿಗೆ ಹಕ್ಕಿಲ್ಲ ಎಂದು ಅಂತರರಾಷ್ಟ್ರೀಯ ನ್ಯಾಯಾಲಯ >>> ಹೇಳಿದೆ. ಈಗ ಚೀನೀಯರು ಮತ್ತೆ ಅದೆಂಥ ಗರಗಸ ಹುಡುಕುತ್ತಾರೊ ನೋಡಬೇಕು. >>> >>> ವೈಯಕ್ತಿಕ ಅವಮಾನದ ವಿಷಯ ಚರ್ಚೆಗೆ ಬಂದಾಗ, ರಾಜಕೀಯ ಮನೋವಿಜ್ಞಾನ ತಜ್ಞ ಆಶಿಶ್ ನಂದಿ >>> ತಮ್ಮ ಅಪ್ಪನ ಕುರಿತು ಒಂದು ಚಂದದ ಕತೆ ಹೇಳುತ್ತಾರೆ. ಅವರ ಅಪ್ಪ (ಕ್ರಿಶ್ಚಿಯನ್ ಆಗಿದ್ದರೂ) >>> ಸಂಸ್ಕೃತ ಭಾಷೆಯನ್ನು ಚೆನ್ನಾಗಿ ಬಲ್ಲವರಾಗಿದ್ದರು. ಅವರು ಶಾಲೆಯಲ್ಲಿ ಓದುತ್ತಿದ್ದಾಗ >>> ಮೇಷ್ಟ್ರು ಕೇಳಿದ ಪ್ರಶ್ನೆಗೆ ಬೇರೆ ಯಾರೂ ಉತ್ತರಿಸದಿದ್ದಾಗ ‘ಹೇ ಮ್ಲೇಚ್ಛಾ ನೀನೇ ಹೇಳು!’ >>> ಎಂದು ನಂದಿಗೆ ಆಜ್ಞಾಪಿಸುತ್ತಿದ್ದರಂತೆ. >>> >>> ‘ಮ್ಲೇಚ್ಛ’ ಎಂದರೆ ಭಾರೀ ಅಪಮಾನಕರ ಬೈಗುಳ ಆಗಿದ್ದರೂ ಈ ಹುಡುಗ ತುಸುವೂ ಬೇಸರಿಸದೆ >>> ಸರಿಯಾದ ಉತ್ತರವನ್ನು ಹೇಳುತ್ತಿದ್ದರಂತೆ. ಬೈದವನೂ ಖುಷ್, ಬೈಸಿಕೊಂಡವನೂ ಖುಷ್. ಶಾಲಾ >>> ಮಕ್ಕಳಿರಲಿ, ಪೊಲೀಸ್ ಅಧಿಕಾರಿಯಿರಲಿ, ತೀರ ಅವಮಾನದ ಸಂದರ್ಭದಲ್ಲಿ ಹೇಗೆ ತಮ್ಮನ್ನು ತಾವೇ >>> ನಿಭಾಯಿಸಬೇಕು ಎಂಬ ಬಗ್ಗೆ ಪಠ್ಯಗಳಲ್ಲಿ, ಸೇವಾ ನಿಯಮಗಳಲ್ಲಿ ಸೂಕ್ತ ಮನೋವೈಜ್ಞಾನಿಕ >>> ಸೂತ್ರಗಳನ್ನು ಅಳವಡಿಸಬೇಕು. ಅಳವಡಿಸಬೇಕೆಂದು ಮೇಲಿನವರಿಗೆ ಸಲಹೆ ಕೊಡುವವರು ಕೂಡ ಎಂಥ >>> ಬೈಗುಳವನ್ನೂ ಅವಮಾನವನ್ನೂ ಸಹಿಸಲು ಸಮರ್ಥರೇ ಆಗಿರಬೇಕು. >>> >>> Hareeshkumar K >>> GHS HUSKURU >>> MALAVALLI TQ >>> MANDYA DT >>> MOB 9880328224 >>> >>> -- >>> 1. If a teacher wants to join STF, visit >>> http://karnatakaeducation.org.in/KOER/en/index.php/Become_a_STF_groups_member >>> 2. For STF training, visit KOER - >>> http://karnatakaeducation.org.in/KOER/en/index.php >>> 4. For Ubuntu 14.04 installation, visit >>> http://karnatakaeducation.org.in/KOER/en/index.php/Kalpavriksha >>> 4. For doubts on Ubuntu, public software, visit >>> http://karnatakaeducation.org.in/KOER/en/index.php/Frequently_Asked_Questions >>> 5. Are you using pirated software? Use Sarvajanika Tantramsha, see >>> http://karnatakaeducation.org.in/KOER/en/index.php/Why_public_software >>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>> --- >>> You received this message because you are subscribed to the Google >>> Groups "Maths & Science STF" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> Visit this group at https://groups.google.com/group/mathssciencestf. >>> For more options, visit https://groups.google.com/d/optout. >>> >> -- >> 1. If a teacher wants to join STF, visit >> http://karnatakaeducation.org.in/KOER/en/index.php/Become_a_STF_groups_member >> 2. For STF training, visit KOER - >> http://karnatakaeducation.org.in/KOER/en/index.php >> 4. For Ubuntu 14.04 installation, visit >> http://karnatakaeducation.org.in/KOER/en/index.php/Kalpavriksha >> 4. For doubts on Ubuntu, public software, visit >> http://karnatakaeducation.org.in/KOER/en/index.php/Frequently_Asked_Questions >> 5. Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Why_public_software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> --- >> You received this message because you are subscribed to the Google Groups >> "Maths & Science STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/mathssciencestf. >> For more options, visit https://groups.google.com/d/optout. >> > -- > 1. If a teacher wants to join STF, visit > http://karnatakaeducation.org.in/KOER/en/index.php/Become_a_STF_groups_member > 2. For STF training, visit KOER - > http://karnatakaeducation.org.in/KOER/en/index.php > 4. For Ubuntu 14.04 installation, visit > http://karnatakaeducation.org.in/KOER/en/index.php/Kalpavriksha > 4. For doubts on Ubuntu, public software, visit > http://karnatakaeducation.org.in/KOER/en/index.php/Frequently_Asked_Questions > 5. Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Why_public_software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/mathssciencestf. > For more options, visit https://groups.google.com/d/optout. > -- 1. If a teacher wants to join STF, visit http://karnatakaeducation.org.in/KOER/en/index.php/Become_a_STF_groups_member 2. For STF training, visit KOER - http://karnatakaeducation.org.in/KOER/en/index.php 4. For Ubuntu 14.04 installation, visit http://karnatakaeducation.org.in/KOER/en/index.php/Kalpavriksha 4. For doubts on Ubuntu, public software, visit http://karnatakaeducation.org.in/KOER/en/index.php/Frequently_Asked_Questions 5. Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Why_public_software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/mathssciencestf. For more options, visit https://groups.google.com/d/optout.
