ಅದೇ ವಿದಿಲಿಕಿತ ವಾಗಿದ್ದರೆ ಅದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ , ಇದು ಬಸ್ಮಾಸುರನ ನೃತ್ಯ ವನ್ನು ನೆನಪಿಸುವಂತಿದೆ, ಹಸಿದ ಕೈಗಳಿಕೆ ಅನ್ನವನ್ನು ನೀಡುವ ಬದಲು ಬಂದೂಕು ನೀಡುವ ಪಾಕಿಸ್ತಾನದಂತ ಪಾಪಿ ರಾಷ್ಟ್ರಗಳು ಇರುವ ವರೆಗೂ ವಿಶ್ವಕ್ಕೆ ನೆಮ್ಮದಿಯಿಲ್ಲ . ಇರಾಕ್ ಅಮೆರಿಕಾವನ್ನು ದ್ವೇಷಿಸಿದರೆ ಅದಕ್ಕೊಂದು ಅರ್ಥವಿದೆ . ಆದರೆ ಪಾಕಿಸ್ತಾನ ಭಾರತವನ್ನು ದ್ವೇಷಿಸುವುದು ಅರ್ಥ ಹೀನ, ಅಷ್ಟಕ್ಕೂ ಭಾರತ ಪಾಕಿಸ್ತಾನಕ್ಕೆ ಮಾಡಿದ ದ್ರೋಹವಾದರೂ ಏನು?. ತಮ್ಮ ದೇಶದಲ್ಲಿ ಅಭಿವೃದ್ದಿ ಆಡಳಿತ ಸಾಧ್ಯವಿಲವೆಂದು ತಿಳಿದೇ ಅಲ್ಲಿನ ರಾಜಕಾರಣಿಗಳು ಜನರನ್ನು ಮತ್ತು ಮೂಲಭೂತ ವಾಧಿಗಳನ್ನು ಭಾರತದ ವಿರುದ್ದ ಎತ್ತಿ ಕಟ್ಟುತ್ತಾರೆ . ಓ ದೇವರೇ ಇವರಿಗೆ ಸನ್ಮಾರ್ಗ ತೋರಿಸು!
2016-10-06 7:05 GMT+05:30 HAREESHKUMAR K Agasanapura <[email protected]> : > http://m.prajavani.net/article/2016_10_06/443141 > > *ಉಡಿಯ ಕಿಡಿ ಸಿಡಿದರೆ ಅರ್ಧ ಜಗವೇ ನಾಶ* > > 6 Oct, 2016 > > ನಾಗೇಶ್ ಹೆಗಡೆ > > > <https://www.facebook.com/sharer/sharer.php?u=https%3A%2F%2Fgoo.gl%2FXlyyeD> > <https://twitter.com/intent/tweet?text=%E0%B2%89%E0%B2%A1%E0%B2%BF%E0%B2%AF+%E0%B2%95%E0%B2%BF%E0%B2%A1%E0%B2%BF+%E0%B2%B8%E0%B2%BF%E0%B2%A1%E0%B2%BF%E0%B2%A6%E0%B2%B0%E0%B3%86+%E0%B2%85%E0%B2%B0%E0%B3%8D%E0%B2%A7+%E0%B2%9C%E0%B2%97%E0%B2%B5%E0%B3%87+%E0%B2%A8%E0%B2%BE%E0%B2%B6++https%3A%2F%2Fgoo.gl%2FXlyyeD> > <https://plus.google.com/share?url=https%3A%2F%2Fgoo.gl%2FXlyyeD> > <http://www.pinterest.com/pin/find/?url=https%3A%2F%2Fgoo.gl%2FXlyyeD> > <http://www.linkedin.com/shareArticle?mini=true&title=%E0%B2%89%E0%B2%A1%E0%B2%BF%E0%B2%AF+%E0%B2%95%E0%B2%BF%E0%B2%A1%E0%B2%BF+%E0%B2%B8%E0%B2%BF%E0%B2%A1%E0%B2%BF%E0%B2%A6%E0%B2%B0%E0%B3%86+%E0%B2%85%E0%B2%B0%E0%B3%8D%E0%B2%A7+%E0%B2%9C%E0%B2%97%E0%B2%B5%E0%B3%87+%E0%B2%A8%E0%B2%BE%E0%B2%B6++&url=https%3A%2F%2Fgoo.gl%2FXlyyeD> > > ಚರಿತ್ರೆಯಲ್ಲಿ ತೀರ ಅಪರೂಪಕ್ಕೆ ಹೀಗಾಗುತ್ತದೆ: ನೀರಿನ ವಿಷಯದಲ್ಲಿ ಕರ್ನಾಟಕ ಮತ್ತು ಭಾರತ > ಒಂದೇ ಬಗೆಯ ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ನಮಗೆ ಇಲ್ಲಿ ಕಾವೇರಿ ಇದ್ದ ಹಾಗೆ, > ಭಾರತಕ್ಕೆ ಅಲ್ಲಿ ಕಾಶ್ಮೀರಿ ಕಣಿವೆಯಲ್ಲಿ ಸಿಂಧೂ ನದಿ ಇದೆ. ನಮ್ಮದೇ ನದಿಯಾದರೂ ನಮ್ಮ > ಇಚ್ಛೆಗೆ ತಕ್ಕಂತೆ ಅದನ್ನು ಬಳಸುವ ಹಾಗಿಲ್ಲ. > > ಇಲ್ಲಿ ಕಾವೇರಿ ನೀರಿನ ಬಗ್ಗೆ ತಮಿಳುನಾಡು ನಮಗೆ ನಿರ್ಬಂಧ ಹಾಕುವ ಹಾಗೆ ಪಾಕಿಸ್ತಾನ ಅಲ್ಲಿ > ಭಾರತಕ್ಕೆ ನಿರ್ಬಂಧ ಹಾಕಿದೆ. ಹಾಗೆಂದು ನಾವು ಗೊಣಗುವಂತಿಲ್ಲ, ಏಕೆಂದರೆ ಜಗತ್ತಿನ ಎಲ್ಲ > ಕಡೆ ಇದೇ ನಿಯಮ ಇದೆ. ನದಿಯ ಉಗಮಸ್ಥಾನದ ಬಳಕೆದಾರರು ಕೆಳ ಹರಿವಿನ ಬಳಕೆದಾರರಿಗೆ ತೊಂದರೆ > ಮಾಡಬಾರದು. ಕೆಳಹರಿವಿನ ಜನರು ನೀರನ್ನು ಹೇಗೆ ಬೇಕಾದರೂ ಬಳಸಬಹುದು; ಆದರೆ ಉಗಮಸ್ಥಾನದವರ > ಸ್ವಾತಂತ್ರ್ಯಕ್ಕೆ ನಿರ್ಬಂಧಗಳಿವೆ. > > ಕಾಶ್ಮೀರದ ಸಿಂಧೂ (ಇಂಡಸ್) ಕಣಿವೆಗೆ ಬನ್ನಿ. ಒಪ್ಪಂದದ ಪ್ರಕಾರ ಪಾಕಿಸ್ತಾನಕ್ಕೆ ಹೋಗುವ > ಆರು ಉಪನದಿಗಳಲ್ಲಿ ರಾವಿ, ಬಿಯಾಸ್ ಮತ್ತು ಸತ್ಲೆಜ್ ಈ ಮೂರು ಉಪನದಿಗಳಷ್ಟೆ ನಮ್ಮ > ಬಳಕೆಗಿವೆ. ಇನ್ನಿತರ ಮೂರು-ಸಿಂಧೂ, ಝೆಲಮ್ ಮತ್ತು ಚಿನಾಬ್ ನದಿಗಳಿಂದ ಹೆಚ್ಚೆಂದರೆ ಶೇ > 20ರಷ್ಟು ನೀರನ್ನು ಮಾತ್ರ ಬಳಸಿಕೊಳ್ಳಬಹುದು. ಈ ಆರೂ ಉಪನದಿಗಳು ಮುಂದೆ ಪಾಕಿಸ್ತಾನದಲ್ಲಿ > ಒಂದಾಗಿ ಸಿಂಧೂ ನದಿಯೇ ಆಗುತ್ತವೆ. > > ಪಾಕಿಸ್ತಾನಕ್ಕೆ ಇರುವುದು ಅದೊಂದೇ ನದಿ. 1960ರ ಈ ಒಪ್ಪಂದಕ್ಕೆ ಆಸ್ಟ್ರೇಲಿಯಾ, > ನ್ಯೂಝಿಲ್ಯಾಂಡ್, ಬ್ರಿಟನ್, ಅಮೆರಿಕ ಮತ್ತು ಕೆನಡಾ ದೇಶಗಳ ಸಾಕ್ಷಿ ಸಹಿ ಇದೆ. ಭಾರತ ಈಗ > ಅದನ್ನು ಧಿಕ್ಕರಿಸಿದರೆ, ಅಂದರೆ ಸಿಂಧೂ ಉಪನದಿಗಳ ನೀರಿಗೆ ತಡೆಯೊಡ್ಡಿದರೆ ಪಾಕಿಸ್ತಾನದ > ಕನಿಷ್ಠ ಎರಡು ಕೋಟಿ ಜನರು ಸಿಡಿದೆದ್ದು ಪಾಕಿಸ್ತಾನ ಯುದ್ಧ ಸಾರುತ್ತದೆ. ಮೇಲಾಗಿ ಆ ಆರೂ > ಸಾಕ್ಷಿರಾಷ್ಟ್ರಗಳು ಭಾರತಕ್ಕೆ ದಿಗ್ಬಂಧನ ಹಾಕಬಹುದು. > > ಭಾರತ ಸಿಂಧೂ ಕಣಿವೆಯ ಗೊಡವೆಗೆ ಹೋಗಲೇ ಇಲ್ಲ. ಚಿಕ್ಕಪುಟ್ಟ ಯೋಜನೆಗಳಿಂದಾಗಿ > ವಿವಾದಗಳೆದ್ದರೂ ಅಲ್ಲಲ್ಲೇ ಬಗೆಹರಿದಿವೆ. ಪಾಕಿಸ್ತಾನದೊಂದಿಗಿನ ಕಳೆದ ಮೂರು ಯುದ್ಧಗಳ > ಸಮಯದಲ್ಲೂ ಸಿಂಧೂ- ಝೆಲಮ್- ಚಿನಾಬ್ನ ನೀರನ್ನು ಅಡ್ಡ ತಿರುಗಿಸುವ ಬಗ್ಗೆ ಮಾತಾಡಲಿಲ್ಲ. > ಅಡ್ಡ ತಿರುಗಿಸುವುದು ಸುಲಭವೂ ಅಲ್ಲ; ಲಕ್ಷ ಕೋಟಿ ಅಲ್ಲ, ಕೋಟಿ ಕೋಟಿ ಹಣ ಸುರಿದರೂ ಒಂದೆರಡು > ದಶಕಗಳಲ್ಲಿ ಆಗುವ ಕೆಲಸವೂ ಅದಲ್ಲ. ಆದರೆ ಈಗ ಅದರ ಪ್ರಸ್ತಾಪ ಮತ್ತೆ ಮತ್ತೆ ಆಗುತ್ತಿದೆ. > > ಸಿಂಧೂ ಎಂದಾಕ್ಷಣ ಪಾಕಿಸ್ತಾನ ಮುಟ್ಟಿದರೆ ಮುನಿದೇಳುತ್ತದೆ. ಕಳೆದ ವಾರ ‘ಇಂಡಿಯಾ ಟುಡೇ’ > ಚಾನೆಲ್ನ ರಾಹುಲ್ ನೀಲಕಮಲ್ ಹೇಗೊ ಷಿಕ್ಯಾಗೊದಲ್ಲಿರುವ ಮಾಜಿ ಪಾಕ್ ಅಧ್ಯಕ್ಷ ಜನರಲ್ > ಮುಷರ್ರಫ್ರನ್ನು ಮಾತಿಗೆಳೆದರು. > > ಪಾಕಿಸ್ತಾನವನ್ನು ಭಾರತ ಶಿಕ್ಷಿಸಬಹುದಾದ ವಿವಿಧ ವಿಧಾನಗಳ ಬಗೆಗಿನ ಪ್ರಶ್ನೆಗಳಿಗೆ > ಸಮಾಧಾನದಿಂದಲೇ ಉತ್ತರ ಕೊಟ್ಟ ಮುಷರ್ರಫ್, ಸಿಂಧೂ ಕಣಿವೆಯ ನೀರನ್ನು ನಿಲ್ಲಿಸುವ ಮಾತು > ಬಂದಾಗ ಮಾತ್ರ ಭುಗಿಲೆದ್ದರು. ‘ಏನು ಏನಂತೀರಿ ರಾಹುಲ್! ಪಾಕಿಸ್ತಾನದಂಥ ಅಣ್ವಸ್ತ್ರ > ಸನ್ನದ್ಧ ದೇಶಕ್ಕೆ ನೀರು ಸಿಗದಂತೆ ಮಾಡುತ್ತೀರಾ? ಅದು ತೀರಾ ತೀರಾ ಗಂಭೀರ ವಿಷಯ. ಅದರ > ಸೊಲ್ಲೆತ್ತಬೇಡಿ’ ಎಂದು ಗದರಿದರು. > > ಆದರೆ ನಮ್ಮಲ್ಲಿಯೇ ಸಡಿಲ ನಾಲಗೆಯ ಕೆಲವು ತೀವ್ರವಾದಿಗಳು ಮಾಧ್ಯಮಗಳ ಎದುರು ಅಣ್ವಸ್ತ್ರ > ಪ್ರಯೋಗದ ಬಗ್ಗೆ ಮನ ಬಂದಂತೆ ಮಾತಾಡುತ್ತಾರೆ. ಚಾನೆಲ್ಗಳೂ ಅಹೋರಾತ್ರಿ ಯುದ್ಧದ ಭಜನೆ > ಮಾಡುತ್ತಿವೆ. ಅಣ್ವಸ್ತ್ರವೆಂದರೆ ಅದೇನೊ ಆಟವೆಂಬಂತೆ, ಹಬ್ಬದ ಪಟಾಕಿಯೆಂಬಂತೆ ಅದನ್ನೆತ್ತಿ > ಪಾಕಿಸ್ತಾನದ, ಉಗ್ರರ ಶಾಶ್ವತ ದಮನದ ಚರ್ಚೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ನಡೆಯುತ್ತಿವೆ. > > ‘ನಮ್ಮ ಹತ್ತು ಕೋಟಿ ಜನರು ಪಾಕಿಸ್ತಾನದ ಅಣುಬಾಂಬ್ಗೆ ತಲೆಯೊಡ್ಡಿದರೆ ನಾವು ಇಡೀ > ಪಾಕಿಸ್ತಾನವನ್ನು ದೂಳೀಪಟ ಮಾಡಬಹುದು’ ಎಂಬರ್ಥದ ಸುಬ್ರಹ್ಮಣ್ಯ ಸ್ವಾಮಿಯ ಹೇಳಿಕೆ > ಲಂಗುಲಗಾಮಿಲ್ಲದೆ ಹರಿದಾಡುತ್ತದೆ. > > ಭಾರತ- ಪಾಕಿಸ್ತಾನದ ನಡುವೆ ಪರಮಾಣು ಯುದ್ಧ ಸಂಭವಿಸೀತೆ? ಭಾರತದ ಮಿಲಿಟರಿಯಂತೂ ತಾನು > ಮೊದಲು ಬಟನ್ ಒತ್ತುವುದಿಲ್ಲವೆಂದು ಎಂದೋ ಘೋಷಿಸಿದೆ.ಆದರೆ ನಾವು ಮಾಮೂಲು ದಾಳಿಯನ್ನು ನಡೆಸಿ > ಪಾಕಿಸ್ತಾನದ ಗಡಿಯೊಳ್ಳಕ್ಕೆ ನುಗ್ಗುತ್ತ ಹೋದರೆ ಪಾಕಿಸ್ತಾನ ತನ್ನ ಮೊದಲ ಅಣ್ವಸ್ತ್ರ > ಪ್ರಯೋಗ ಮಾಡುತ್ತದೆಂದು ಅಲ್ಲಿನ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಹೇಳಿದ್ದಾರೆ. ಅಂಥ ಮೊದಲ > ಅಸ್ತ್ರವಾಗಿ ‘ನಾಸ್ರ್’ ಕ್ಷಿಪಣಿ ಅಲ್ಲಿಂದ ಬಂದೀತು. ಅದು ಹೆಚ್ಚೆಂದರೆ 60 ಕಿಲೊಮೀಟರ್ ದೂರ > ಬರುತ್ತದೆ. > > ತನ್ನದೇ ಭೂಪ್ರದೇಶ ನಾಶವಾದರೂ ಚಿಂತೆಯಿಲ್ಲ, ಅಲ್ಲಿಗೆ ಬಂದ ಭಾರತೀಯ ಸೈನ್ಯವನ್ನು ಹೊಸಕಿ > ಹಾಕಲು ಅದು ಯತ್ನಿಸಬಹುದು. ಅಥವಾ ಒಂದೊಮ್ಮೆ ಪಾಕಿಸ್ತಾನ ಆಗಲೂ ಸಂಯಮವನ್ನು > ಪ್ರದರ್ಶಿಸಿದರೆ, ಅಂದರೆ ಅಣ್ವಸ್ತ್ರ ಪ್ರಯೋಗ ಮಾಡದೇ ಇದ್ದರೂ, ಅಲ್ಲಿನ ಉಗ್ರರು ಕೈಕಟ್ಟಿ > ಕೂರಲಿಕ್ಕಿಲ್ಲ. ವರದಿಗಳ ಪ್ರಕಾರ, ಈ ಹಿಂದೆ ನಾಲ್ಕು ಬಾರಿ ಉಗ್ರರು ಪಾಕಿಸ್ತಾನದ್ದೇ > ಅಣ್ವಸ್ತ್ರ ತಯಾರಿಕೆಯ ನೆಲೆಗಳ ಮೇಲೆ ದಾಳಿ ಮಾಡಿದ್ದಾರೆ. > > ಬಾಂಬ್ ತಯಾರಿಕೆಗೆ ಬೇಕಿದ್ದ ದ್ರವ್ಯಗಳನ್ನು ಅವರು ಕದ್ದಿರಬಹುದು, ಬಾಂಬನ್ನೇ > ಕದ್ದಿರಬಹುದು ಅಥವಾ ಬಾಂಬನ್ನು ಹೂಡಿಟ್ಟ ಕ್ಷಿಪಣಿಯನ್ನೇ ಕದ್ದು ಸಾಗಿಸಿರಬಹುದು. > ನಮ್ಮಲ್ಲಿರುವಷ್ಟು ಅಚ್ಚುಕಟ್ಟಾದ ಯುದ್ಧವ್ಯವಸ್ಥೆ ಪಾಕಿಸ್ತಾನದಲ್ಲಿಲ್ಲ. ಅಲ್ಲಿ ಸರ್ಕಾರ > ಮತ್ತು ಮಿಲಿಟರಿ ನಡುವೆ ಹೊಂದಾಣಿಕೆ ಕಮ್ಮಿ. ಉಗ್ರರು ಎಲ್ಲೆಲ್ಲೋ ತೂರಿಕೊಂಡಿದ್ದಾರೆ. > > ಹೀಗಾಗಿ ಎರಡು ದೇಶಗಳ ನಡುವೆ ಚಿಕ್ಕದೊಂದು ಸಂಘರ್ಷವೂ (ಅಥವಾ ಮುಷರ್ರಫ್ ಹೇಳಿದ ಹಾಗೆ, > ಸಿಂಧೂ ನದಿಗೆ ದಿಗ್ಬಂಧನ ಹಾಕುವ ಸಿದ್ಧತೆಯೂ) ಅಣ್ವಸ್ತ್ರ ಪ್ರಯೋಗಕ್ಕೆ > ಕಾರಣವಾಗಬಹುದು. ಆಗೇನಾದರೂ ಭಾರತ ಪ್ರತೀಕಾರ ಭಾವದಿಂದ ತನ್ನ ಅಣ್ವಸ್ತ್ರವನ್ನು > ಚಿಮ್ಮಿಸಿದ್ದೇ ಆದರೆ ಪಾಕಿಸ್ತಾನದಿಂದ ಮಧ್ಯದೂರದ ಕ್ಷಿಪಣಿಗಳು ನಮ್ಮತ್ತ ತೂರಿ ಬರಬಹುದು. > ಅದಕ್ಕೆ ಪ್ರತಿಯಾಗಿ ನಾವೂ ಠೇಂಕರಿಸಲೇಬೇಕು. > > ಅಮೆರಿಕದ ‘ಬುಲ್ಲೆಟಿನ್ ಆಫ್ ಅಟಾಮಿಕ್ ಸೈಂಟಿಸ್ಟ್ಸ್’ ಪತ್ರಿಕೆಯ 2015 ವರದಿಯ ಪ್ರಕಾರ > ಪಾಕಿಸ್ತಾನದ ಬಳಿ ಎಫ್-ಸಿಕ್ಸ್ಟೀನ್ ಮತ್ತು ಮಿರಾಜ್ ವಿಮಾನಗಳಲ್ಲಿ 36 ಅಣುಬಾಂಬ್ಗಳಿವೆ; > ಘಝ್ನವಿ, ಶಹೀನ್, ಘಾವ್ರಿ ಮತ್ತು ನಾಸ್ರ್ ಹೆಸರಿನ ಕ್ಷಿಪಣಿಗಳಲ್ಲಿ 86 ಬಾಂಬ್ಗಳಿವೆ. > ದೂರಗಾಮಿ ಬಾಬರ್ ಕ್ಷಿಪಣಿಯ ಮೇಲೆ 8 ಬಾಂಬ್ಗಳು ಕೂತಿವೆ. > > ಬಾಬರ್ ಕ್ಷಿಪಣಿ 1300 ಕಿ.ಮೀ ದೂರಕ್ಕೂ ಸಾಗಿ ಬರಬಹುದಾಗಿದ್ದು ಲುಧಿಯಾನಾ, ದಿಲ್ಲಿ, > ಜಯಪುರ, ಭೋಪಾಲ, ಲಖ್ನೋ ಮತ್ತು ಅಹ್ಮದಾಬಾದ್ವರೆಗೆ ಬರಬಹುದು. ಕ್ಷಿಪಣಿಗಳಿಗಿಂತ ಬಾಂಬರ್ > ವಿಮಾನಗಳು ಹೆಚ್ಚು ಅಪಾಯಕಾರಿ. ಸಮುದ್ರ ಪಾತಳಿಯಿಂದ ಕೇವಲ ಮೂರಡಿ ಎತ್ತರದಲ್ಲಿ ಹಾರುತ್ತ > ರಡಾರ್ಗಳ ಕಣ್ತಪ್ಪಿಸಿ ಪಾಕಿಸ್ತಾನದ ಎಫ್-16 ಮುಂಬೈ, ಕಾರವಾರ, ಕೈಗಾ, ಸೀಬರ್ಡ್ವರೆಗೂ > ಬರಬಹುದು. > > ಭಾರತದ ಅಣ್ವಸ್ತ್ರ ಶೇಖರಣೆ ಪಾಕಿಸ್ತಾನದಕ್ಕಿಂತ ಹೆಚ್ಚೇನಿಲ್ಲ. ಆದರೆ ಅವನ್ನು ಚಿಮ್ಮಿಸುವ > ಸಾಧನಗಳು ಹೆಚ್ಚು ಪ್ರಬಲವಾಗಿವೆ. ಲಭ್ಯ ಮಾಹಿತಿಗಳ ಪ್ರಕಾರ ನಮ್ಮ ವಜ್ರ (ಮಿರಾಜ್) ಮತ್ತು > ಶಮ್ಶೇರ್ (ಸುಧಾರಿತ ಜಾಗ್ವಾರ್) ವಿಮಾನಗಳಲ್ಲಿ 48 ಅಣುಬಾಂಬ್ಗಳಿವೆ; ಪೃಥ್ವಿ ಕ್ಷಿಪಣಿ > ಮತ್ತು ಬಹುದೂರಗಾಮಿ ಅಗ್ನಿ ಕ್ಷಿಪಣಿಗಳಲ್ಲಿ 56 ಬಾಂಬ್ಗಳಿವೆ; ಹಡಗಿನ ಮೇಲಿನ ಧನುಷ್ > ಮತ್ತು ಜಲಾಂತರ್ಗಾಮಿಯ ಸಾಗರಿಕಾ ಕ್ಷಿಪಣಿಗಳಲ್ಲಿ 14 ಅಣುಬಾಂಬ್ಗಳಿವೆ. > > ಭಾರತದ ಒಟ್ಟಾರೆ ಮಿಲಿಟರಿ ತಾಕತ್ತಿಗೆ ಹೋಲಿಸಿದರೆ ಪಾಕಿಸ್ತಾನದ್ದು ತೀರ > ದುರ್ಬಲವಾಗಿದ್ದು, ನಾವು ಸಾದಾ ದಾಳಿಯ ಮೂಲಕ ಶೆಲ್ಗಳ ಮಳೆಗರೆದರೆ ಅವರು ಸಲೀಸಾಗಿ > ಅಣ್ವಸ್ತ್ರವನ್ನೇ ಚಿಮ್ಮಿಸುವ ಸಾಧ್ಯತೆ ಇರುತ್ತದೆ. ಅವರ ನೆಲದಲ್ಲೇ ಅದು ಸ್ಫೋಟಗೊಂಡರೆ > ಭಾರತ ಆಗಲೂ ಅಣ್ವಸ್ತ್ರವನ್ನು ಬಳಸದೇ ಇರಬಹುದು. ಆದರೆ ನಮ್ಮ ಆಯಕಟ್ಟಿನ ಸ್ಥಳಗಳ ಮೇಲೆ ದಾಳಿ > ನಡೆದರೆ? ಪ್ರತಿದಾಳಿ ಅನಿವಾರ್ಯವಾಗುತ್ತದೆ. > > ಅಕಸ್ಮಾತ್ ಈ ಚಕಮಕಿಯಲ್ಲಿ ಹಿರೊಶಿಮಾ ಬಾಂಬ್ ಗಾತ್ರದ ಪುಟಾಣಿ ನೂರು ಅಣುಬಾಂಬ್ಗಳು > ಸ್ಫೋಟಿಸಿದರೂ ಸಾಕು, ಇಡೀ ಪ್ರಪಂಚ ತತ್ತರಿಸುತ್ತದೆ. ಈ ಉಪಖಂಡದ ಸುಮಾರು 210 ಲಕ್ಷ ಜನರು > ನೇರವಾಗಿ ಸಾಯುತ್ತಾರೆ. ಕರೀ ಹೊಗೆ ಆಕಾಶಕ್ಕೇರಿ ಪೂರ್ವ-ಪಶ್ಚಿಮಕ್ಕೆ ಪಸರಿಸುತ್ತ ಮೂರು > ತಿಂಗಳುಗಳಲ್ಲಿ ಭೂಮಿಗೆ ಕಪ್ಪು ಚಾದರ ಆವರಿಸುತ್ತದೆ. ಮಳೆಮಾರುತಗಳೆಲ್ಲ ನಾಪತ್ತೆಯಾಗಿ, > ಕೃಷಿ ಚಟುವಟಿಕೆ ಬಹುಪಾಲು ಸ್ಥಗಿತವಾಗುತ್ತದೆ. > > ಜಗತ್ತಿನ ಇನ್ನೂರು ಕೋಟಿ ಜನರು ಆಹಾರಕ್ಕಾಗಿ ಪರದಾಡುತ್ತ ಅಲ್ಲಲ್ಲಿ ಕಿರುಯುದ್ಧಗಳಿಗೆ > ಕಾರಣರಾಗುತ್ತಾರೆ. ಭೂಮಿಗೆ ರಕ್ಷಾಕವಚ ಎನಿಸಿರುವ ಓಝೋನ್ ವಲಯ ಚಿಂದಿಯಾಗುತ್ತದೆ. > ಕೊಲಂಬಿಯಾದ nucleardarkness.org ಎಂಬ ಜಾಲತಾಣದ ಚಲಿಸುವ ನಕ್ಷೆಯಲ್ಲಿ ಈ ದುರಂತದ > ಚಿತ್ರಣವಿದೆ. > > ಅಣುದಾಳಿಗೆ ಸಿಕ್ಕ ಭಾರತ- ಪಾಕಿಸ್ತಾನದ ಎರಡು ಕೋಟಿ ಜನರು ದಿಢೀರಾಗಿ ಸಾಯುವುದಿಲ್ಲ. > ಅಣುಬಾಂಬ್ ಸ್ಫೋಟಿಸಿದಾಗ ಹಠಾತ್ ಮಿಂಚುವ ಪ್ರಭೆಯಿಂದ ಶರೀರದ ಕೆಲಭಾಗ ಆ ಕ್ಷಣವೇ ಪೂರ್ತಿ > ಬೆಂದು ಹೋಗುತ್ತದೆ. ಏನಾಯಿತೆಂದು ಮುಖವನ್ನು ಒರೆಸಲು ಹೋದರೆ ಇಡೀ ಚರ್ಮ ಕೈಗೆ ಬರುತ್ತದೆ. > ದಿಗ್ಭ್ರಮೆಗೊಂಡು ಅತ್ತಿತ್ತ ನೋಡುವಷ್ಟರಲ್ಲಿ ಎರಡನೇ ಆಘಾತದ ಅಲೆ ಅಪ್ಪಳಿಸುತ್ತದೆ. ಅದು > ಸರ್ವನಾಶದ ಅಲೆ! ನಿಂತಿದ್ದವರು ದೂರ ಚಿಮ್ಮಿ ಹೋಗುತ್ತಾರೆ. > > ಬಸ್ನಲ್ಲಿದ್ದರೆ ಇಡೀ ಬಸ್ ಎಗರಿ ಬೀಳುತ್ತದೆ. ನಗರದ ಎಲ್ಲ ಕಟ್ಟಡಗಳೂ ಕುಸಿಯುತ್ತವೆ. > ಎಲ್ಲ ಪೆಟ್ರೋಲ್ ಬಂಕ್ಗಳೂ ಸಿಡಿಯುತ್ತವೆ. ಎಲ್ಲ ವಿದ್ಯುತ್ ಕಂಬಗಳೂ ಧರಾಶಾಹಿ ಆಗುತ್ತವೆ. > ಕುಸಿತ, ಬೆಂಕಿ, ವಿದ್ಯುತ್ ಆಘಾತ ಈ ಮೂರರಿಂದಲೂ ತಪ್ಪಿಸಿಕೊಂಡ ಅದೃಷ್ಟಶಾಲಿ ಯಾವುದೋ > ಉದ್ಯಾನದಲ್ಲಿ ಪಕ್ಷಿವೀಕ್ಷಣೆ ಮಾಡುತ್ತಿದ್ದರೆ ಈಗ ಮೂರನೆಯ ಅಲೆ ಅಪ್ಪಳಿಸುತ್ತದೆ. ಅದು > ವಿಕಿರಣದ ಅಲೆ. ಗ್ಯಾಮಾ ಕಿರಣಗಳು ದೇಹದ ಒಳಕ್ಕೆ ಹೊಕ್ಕು ಜೀವಕೋಶಗಳನ್ನು ಧ್ವಂಸ > ಮಾಡುತ್ತವೆ. ರಕ್ತ ಉಮ್ಮಳಿಸಿಬರುತ್ತದೆ. > > ಗಾಯಾಳುಗಳಿಗೆ ತುರ್ತುಸೇವೆ ಒದಗಿಸಬೇಕಾದ ವೈದ್ಯತಂಡ ಬದುಕಿ ಉಳಿದಿದ್ದರೂ ಯಾವ ಸೇವೆಯನ್ನೂ > ಒದಗಿಸಲಾರದು. ಪ್ರಥಮ ಶುಶ್ರೂಷೆ, ರಕ್ತಪೂರೈಕೆ ಹಾಗಿರಲಿ ಅಂಬುಲೆನ್ಸ್ > ಸುಸ್ಥಿತಿಯಲ್ಲಿದ್ದರೂ ಚಲಿಸಲು ರಸ್ತೆಗಳೇ ಇರುವುದಿಲ್ಲ. ನೆಲಮಾಳಿಗೆಯಲ್ಲಿ ಬದುಕುಳಿದ > ಕೆಲವರು ನೀರು, ಆಹಾರಕ್ಕಾಗಿ ಮೇಲಕ್ಕೆ ಬಂದರೆ ವಿಕಿರಣಕ್ಕೆ, ವಿಷಗಾಳಿಗೆ ಸಿಲುಕುತ್ತಾರೆ. > ಬಾಂಬ್ ದಾಳಿಗೆ ಸಿಕ್ಕು ನೇರವಾಗಿ ಸತ್ತವರೇ ಅದೃಷ್ಟಶಾಲಿಗಳು ಎನ್ನುವಂತಾಗುತ್ತದೆ. > > ನಗರಗಳ ಮೇಲೆ, ಅಥವಾ ತುಂಬಿದ ಅಣೆಕಟ್ಟುಗಳ ಮೇಲೆ ಬೀಳುವ ಬದಲು ಅಣುಬಾಂಬ್ಗಳು ಗುರಿ ತಪ್ಪಿ > ಎಲ್ಲೋ ಬಟಾಬಯಲಿನಲ್ಲೊ ಕಾಡುಮೇಡಿನಲ್ಲೊ ಬಿದ್ದರೆ? ಸಾವುನೋವಿನ ಸಂಖ್ಯೆ ಕಡಿಮೆ ಇರುತ್ತದೆ > ನಿಜ. ಆದರೆ ಯಾರೂ ಅತ್ತ ತುರ್ತು ನೆರವಿಗೆ ಹೆಲಿಕಾಪ್ಟರ್ಗಳಲ್ಲೂ ಹೋಗದ ಹಾಗೆ ವಿಕಿರಣ > ಮತ್ತು ದಟ್ಟ ಹೊಗೆ ಕವಿದಿರುತ್ತದೆ. > > ರಸ್ತೆ, ಸೇತುವೆ, ವಿದ್ಯುತ್ ಕಂಬಗಳ ರಿಪೇರಿಯೂ ಸಾಧ್ಯವಾಗುವುದಿಲ್ಲ. ವರ್ಷಗಟ್ಟಲೆ ಅತ್ತ > ಯಾರೂ (ಲೂಟಿಕೋರರೂ) ಕಾಲಿಡದಂತೆ ದಿಗ್ಬಂಧನ ಹಾಕಬೇಕಾಗುತ್ತದೆ.ಭೂಮಿಯ ತಳದಲ್ಲಿದ್ದ > ತೈಲದ್ರವ್ಯಗಳನ್ನು ಮೇಲೆತ್ತುತ್ತ ನಾವು ಕಳೆದ 150 ವರ್ಷಗಳಲ್ಲಿ ಎಲ್ಲೆಡೆ ಪೆಟ್ರೊಲ್ ಮತ್ತು > ಪ್ಲಾಸ್ಟಿಕ್ಗಳ ದಹನಶೀಲ ನಾಗರಿಕತೆಯನ್ನು ಕಟ್ಟಿ ಬೆಳೆಸಿದ್ದೇವೆ. > > ಬಾಂಬ್ಗಳು ಎಲ್ಲೇ ಬಿದ್ದರೂ ಅಗ್ನಿಜ್ವಾಲೆ ಮತ್ತು ದಟ್ಟ ಹೊಗೆಮಸಿಯಿಂದಾಗಿ ಸೂರ್ಯನೇ > ಮರೆಯಾಗುತ್ತಾನೆ. ಬೆಂಕಿ ಇದ್ದಲ್ಲಿ ಸೂರ್ಯನಿಗೇನು ಕೆಲಸ? ‘ಅಣು ಚಳಿಗಾಲ’ ಜಗತ್ತಿಗೆಲ್ಲ > ಆವರಿಸುತ್ತದೆ. ಅನಿರೀಕ್ಷಿತ ಕರೀಮಳೆ, ಕರಾಳಚಳಿ, ಹಿಮಪಾತದಿಂದಾಗಿ ಋತುಗಳೇ ಅಳಿಸಿ > ಹೋಗುತ್ತವೆ. ನಾಗರಿಕ ವ್ಯವಸ್ಥೆಗಳೆಲ್ಲ ಅಸ್ತವ್ಯಸ್ತ ಆಗುತ್ತವೆ. > > ಬದುಕುಳಿದವರಿಗೆ ಬದುಕೇ ಅಸಹನೀಯವಾಗುತ್ತದೆ. ಬಾರಾಮುಲ್ಲಾದ ಬಳಿಯ ‘ಉರಿ’ ಎಂದು ನಾವು > ಕರೆಯುವ ಚಳಿಪ್ರದೇಶವನ್ನು ಅಲ್ಲಿನವರು ‘ಉಡಿ’ ಎನ್ನುತ್ತಾರೆ. ಉಡಿಯಲ್ಲಿದ್ದ ಕಿಡಿಯನ್ನು > ಅಲ್ಲೇ ಆರಿಸಬೇಕೆ ಅಥವಾ ತಿದಿಯೂದಿ ಇಡೀ ಜಗತ್ತನ್ನು ಹಿಮಯುಗಕ್ಕೆ ತಳ್ಳಬೇಕೆ? > > Hareeshkumar K > GHS HUSKURU > MALAVALLI TQ > MANDYA DT > MOB 9880328224 > > -- > 1. If a teacher wants to join STF, visit http://karnatakaeducation.org. > in/KOER/en/index.php/Become_a_STF_groups_member > 2. For STF training, visit KOER - http://karnatakaeducation.org. > in/KOER/en/index.php > 4. For Ubuntu 14.04 installation, visit http://karnatakaeducation.org. > in/KOER/en/index.php/Kalpavriksha > 4. For doubts on Ubuntu, public software, visit > http://karnatakaeducation.org.in/KOER/en/index.php/ > Frequently_Asked_Questions > 5. Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Why_public_software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/mathssciencestf. > For more options, visit https://groups.google.com/d/optout. > -- 1. If a teacher wants to join STF, visit http://karnatakaeducation.org.in/KOER/en/index.php/Become_a_STF_groups_member 2. For STF training, visit KOER - http://karnatakaeducation.org.in/KOER/en/index.php 4. For Ubuntu 14.04 installation, visit http://karnatakaeducation.org.in/KOER/en/index.php/Kalpavriksha 4. For doubts on Ubuntu, public software, visit http://karnatakaeducation.org.in/KOER/en/index.php/Frequently_Asked_Questions 5. Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Why_public_software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/mathssciencestf. For more options, visit https://groups.google.com/d/optout.
