*nice story*

2017-02-24 5:58 GMT+05:30 Chakra Pani <[email protected]>:

> ದಯವಿಟ್ಟು ನನ್ನ ಮಾತನ್ನು ತಪ್ಪಾಗಿ ಅರ್ಥೈಸದಿರಿ , ಇಂತಹ ಕಥೆಗಳನ್ನು ಮಕ್ಕಳ ಮುಂದೆ
> ಹೇಳದಿರಿ ,ಇವುಗಳು ಕಣ್ಣು ತೆರೆಸುವ ಬದಲು ಮುಚ್ಚಿಸುವ ಸಾಧ್ಯತೆ ಇದೆ .ತನ್ನ ಕನಸುಗಳನ್ನು
> ಬೆನ್ನು ಹತ್ತದೆ  ಕೇವಲ ಆರೋಗ್ಯ ನೆಮ್ಮದಿ ಎಂದು ಕುಳಿತವನ ಬದುಕೂ ಒಂದು ಬದುಕೇ ?
> ಪ್ರಾಣಿಗಳು ಮತ್ತು ಮನುಷ್ಯರಲ್ಲಿ ವ್ಯತ್ಯಾಸ ಇರುವುದೇ ಅಲ್ಲಿ . ಬಡತನದಲ್ಲೇ ಸಂತೋಷ ದಿಂದ
> ಇರುತ್ತೇನೆ ಎಂದುಕೊಂಡರೆ ಅಭ್ಯಂತರವೇನೂ ಇಲ್ಲ , ಎಲ್ಲವನ್ನೂ ಗಳಿಸಬೇಕು ಆದರೆ ಏನನ್ನೂ
> ಕಳೆದುಕೊಳ್ಳಬಾರದು ಎಂದರೆ ಹೇಗೆ ?" to get something you have to loose something"
> thats the rule of the nature. ಹಾಂ....ಸಾಧನೆ ಮತ್ತು ಆರೋಗ್ಯದ ನಡುವೆ ಸಮನ್ವಯ
> ಸಾಧಿಸುವುದು ಬಹಳ ಮುಖ್ಯ ಅದೇ ಇ ಕಥೆಯ ಸ್ವಾರಸ್ಯ ಎಂದು ಬೇಕಾದರೆ ಹೇಳಬಹುದು .
>
> 2017-02-23 22:00 GMT+05:30 M Prakasha <[email protected]>:
>
>> ಎಷ್ಟು ಅದ್ಭುತವಾದ ಪೋಸ್ಟಿಂಗ್ ಇದು ಎಲ್ಲರೂ ತಪ್ಪದೇ ಓದಿರಿ….. ಈ ಕಥೆಯನ್ನು ಓದಿದ
>> ಕೆಲವರಲ್ಲಾದರೂ ಬದಲಾವಣೆ ಯಾಗುತ್ತದೆ….
>>
>> ನಿಜವಾಗಿಯೂ ಇದೊಂದು ಕಣ್ಣು ತೆರೆಸುವಂತಹ ಅದ್ಭುತವಾದ ನೀತಿಕಥೆ. ಒಂದಾನೊಂದು ನಗರದಲ್ಲಿ
>> ಲಕ್ಷ್ಮೀಪತಿ ಎಂಬ ವ್ಯಕ್ತಿ ಇದ್ದನು. ಆತನಿಗೆ ಒಂದು ಸಂಕಲ್ಪವಿದೆ. ಅವರ ಮನೆಯ ಹತ್ತಿರದಲ್ಲಿ
>> ಒಂದು ಸುಂದರವಾದ ಭವನವಿದೆ. ಯಾರದು ಆ ಮನೆ ಎಂದು ಕೇಳಿದರೆ ಯಾರೋ ಕೋಟ್ಯಾಧಿಪತಿಯ ಮನೆ ಎಂಬ
>> ಉತ್ತರ ಬರುತ್ತದೆ. ಆಗ ಅಂದು ಕೊಳ್ಳುತ್ತಾನೆ ಈ ನಗರದಲ್ಲಿರುವ ಕೋಟ್ಯಾಧಿಪತಿಗಳ ಸಾಲಿನಲ್ಲಿ
>> ತಾನೂ ಸೇರಬೇಕು ಎಂದು. ಅದಕ್ಕಾಗಿ ಆತನು ಯುವಕನಾಗಿದ್ದಾಗಿನಿಂದಲೂ ತುಂಬಾ
>> ಕಷ್ಟಪಡುತ್ತಿದ್ದನು. ಹಗಲು ರಾತ್ರಿ ದುಡಿಯುತ್ತಿದ್ದನು. ಸಂಪಾದನೆ ಮಾಡುವುದೇ
>> ಸರ್ವಸ್ವವೆಂದು ಭಾವಿಸಿ ದುಡಿಯುತ್ತಿದ್ದನು.
>>
>> 40 ವರ್ಷದೊಳಗೆ ಕೋಟ್ಯಾಧಿಪತಿಯಾದನು. ಒಂದು ಕೋಟಿಯ ನಂತರ ಇನ್ನೊಂದು ಕೋಟಿ ಹೀಗೆ 50
>> ವರ್ಷದೊಳಗೆ ಎಷ್ಟೋ ಕೋಟಿಗಳ ಹಣ ಸಂಪಾದನೆ ಮಾಡಿದ. ಹಿಂದೆ ತಾನು ನೋಡಿದ ಬಂಗಲೆಯಂತಹ 2-3
>> ಬಂಗಲೆಗಳನ್ನು ಕಟ್ಟಿಸಿದನು. ಆದರೂ ತೃಪ್ತಿಯಾಗಲಿಲ್ಲ. ಈಗಿರುವ ಮನೆಗಳಲ್ಲದೆ, ನಗರದ
>> ಮಧ್ಯಭಾಗದಲ್ಲಿ ತನ್ನ ಶ್ರೀಮಂತಿಕೆಯನ್ನು ಜನರಿಗೆ ತಿಳಿಯುವಂತೆ ಮಾಡಲು ಇಂದ್ರ ಭವನದಂತಹ
>> ಒಂದು ಮನೆಯನ್ನು ಕಟ್ಟಿಸಬೇಕೆಂದು ಅದಕ್ಕಾಗಿ ಮತ್ತಷ್ಟು ಕಷ್ಟಪಟ್ಟು ದುಡಿದನು.
>>
>> ಅಂದುಕೊಂಡದ್ದನ್ನು ಸಾಧಿಸಿದನು ಲಕ್ಷ್ಮೀಪತಿ. ನಗರದ ಮಧ್ಯದಭಾಗದಲ್ಲಿ ವಿಶಾಲವಾದ
>> ಸ್ಥಳದಲ್ಲಿ ಅತ್ಯಾಧುನಿಕ ಸೌಲಭ್ಯಗಳಿಂದ ಕೂಡಿದ ಅದ್ಭುತವಾದ ಭವನವನ್ನು ಕಟ್ಟಿಸಿದನು.  ಅದರ
>> ಗೃಹಪ್ರವೇಶದ ದಿನದಂದು ನಗರದ ಪ್ರಮುಖ ವ್ಯಕ್ತಿಗಳೆಲ್ಲರನ್ನು ಆಹ್ವಾನಿಸಿದನು. ಒಂದೊಂದು
>> ದೇಶಕ್ಕೆ ಸಂಬಂದಿಸಿದ ಒಂದೊಂದು ವೈಶಿಷ್ಠತೆಗಳೆಲ್ಲವನ್ನು ಒಂದೇ ಕಡೇ ಹೊಂದಿಸಿದಂತೆ ಆ ಮನೆ
>> ಇರುವುದರಿಂದ ಎಲ್ಲರೂ ಅಬ್ಬಾ! ಎಂದು ಆಶ್ಚರ್ಯಪಟ್ಟರು. ಶಭಾಷ್ ಎಂದು ಲಕ್ಷ್ಮೀಪತಿಯನ್ನು
>> ಅಭಿನಂದಿಸಿದರು.
>>
>> ಬಂದಿದ್ದ ಅತಿಥಿಗಳೆಲ್ಲರೂ ಹೋದ ಮೇಲೆ, ಲಕ್ಷ್ಮೀಪತಿ ಮಲಗುವ ಕೋಣೆಗೆ ಹೋಗಿ ಹಾಸಿಗೆ ಮೇಲೆ
>> ಹಾಗೆಯೇ ಮಲಗಿದನು. ಹೆಂಡತಿ ಮಕ್ಕಳು ಇನ್ನೂ ಪೋನ್ ನಲ್ಲಿ ಎಲ್ಲರೊಂದಿಗೆ ಮಾತಾಡುತ್ತಿದ್ದರು.
>> ಮನೆಯ ವೈಭೋಗದ ಬಗ್ಗೆ, ಅಥಿತಿಗಳ ಕಾಮೆಂಟಗ’ಗಳ ಬಗ್ಗೆ, ಮನೆಗೆ ಆದ ಖರ್ಚಿನ ಬಗ್ಗೆ ಅವರು
>> ತಮ್ಮ ಸ್ನೇಹಿತರ ಜೊತೆ ಮಾತನಾಡುತ್ತಿದ್ದರು. ಲಕ್ಷ್ಮೀಪತಿಗೆ ಯಾಕೋ ಇಂದು ಕಣ್ತುಂಬ ನಿದ್ದೆ
>> ಹೋಗಬೇಕೆನ್ನಿಸಿತು.
>>
>> ನಿಧಾನವಾಗಿ ಕಣ್ಣು ಮುಚ್ಚುತ್ತಿರುವಾಗ “ನಾನು ಹೋಗುತ್ತೇನೆ” ಎಂದು ಯಾರೋ ಕಿವಿಯಲ್ಲಿ
>> ಹೇಳಿದಂತಾಯಿತು. ಕಣ್ಣು ತೆರೆದು ನೋಡಿದರೆ ಏನೂ ಕಾಣಿಸಲಿಲ್ಲ. ಎಲ್ಲಾ ಕತ್ತಲೆಯಂತಿದೆ.
>> ಯಾರು? ಎಂದನು…. ಲಕ್ಷ್ಮೀಪತಿ. ಆದರೂ ತನ್ನ ಧ್ವನಿಗೆ ಪ್ರತಿಧ್ವನಿ ನೀಡಿದಂತೆ ಆಯಿತು. ನಾನು
>> ನಿನ್ನ ಆತ್ಮ , ನಾನು ಹೋಗುತ್ತಿದ್ದೇನೆ ಎಂದು  ಕೇಳಿ ಬಂದಿತು.
>>
>> ಅದೇನು, ನೀನು ಹೋದರೆ ನಾನು ಸತ್ತು ಹೋಗ್ತೀನಿ ಅಲ್ವಾ! ಎಂದು ಗಾಬರಿಯಾದನು ಲಕ್ಷ್ಮೀಪತಿ.
>> ಹೌದು ಎಂದು ಪ್ರತಿಧ್ವನಿಸಿತು. ಆಗ ಆತ್ಮ ಬೇಡ ಹೋಗಬೇಡ! ನೋಡು ಎಷ್ಟು ಸುಂದರವಾದ ಮನೆಯನ್ನು
>> ಕಟ್ಟಿಸಿದ್ದೇನೆ. ಎಷ್ಟು ಹಣ ಸಂಪಾಧನೆ ಮಾಡಿದ್ದೆನೆ. ನೋಡು ಇವೆಲ್ಲಾ ನಿನಗೋಸ್ಕರನೇ ಅಲ್ವಾ!
>> ನಿನ್ನನ್ನು ಸುಖಪಡಿಸುವುದಕ್ಕೆ ಅಲ್ವಾ, ನಿನ್ನ ತೃಪ್ತಿಗಾಗಿಯೇ ಅಲ್ವಾ. ಇರು ನನ್ನಲ್ಲಿದ್ದು
>> ಇವೆಲ್ಲವನ್ನು ಅನುಭವಿಸು ಎಂದನು ಲಕ್ಷ್ಮೀಪತಿ. ಅನುಭವಿಸಬೇಕಾ….? ಹೇಗೆ ಅನಿಭವಿಸಲಿ….?
>> ನಿನ್ನ ಶರೀರಕ್ಕೆ ಡಯಾಬೀಟಿಸ್ ಇರುವುದರಿಂದ ಸಿಹಿ ತಿನ್ನಲು ಆಗುವುದಿಲ್ಲ, ನಿನ್ನ ಶರೀರಕ್ಕೆ
>> BP ಇರುವುದರಿಂದ ಉಪ್ಪು ಕಾರವನ್ನು ತಿನ್ನುವುದಕ್ಕೆ ಆಗುವುದಿಲ್ಲ, ಅದರ ಮೇಲೆ ಇಷ್ಟುವೂ
>> ಇಲ್ಲ. ಇನ್ನೂ ಇಷ್ಟವಾದದ್ದೂ ಏನೂ ತಿನ್ನಲಾರೆ ಏಕೆಂದರೆ ನಿನ್ನ ಶರೀರಕ್ಕೆ
>> ಜೀರ್ಣಮಾಡಿಕೊಳ್ಳಲು ಆಗುವುದಿಲ್ಲ. ನಿನ್ನ ಶರೀರವು ಒಟ್ಟಾರೆಯಾಗಿ ಕಣ್ಣಿನಿಂದ ಕಾಲಿನ ಏರೆಗೂ
>> ಒಂದು ರೀತಿಯ ರೋಗಗಳ ಹುತ್ತವಾಗಿದೆ.
>>
>> ಆ ಹೊಟ್ಟೆ ನೋಡು ಹೇಗೆ ಮುಂದಕ್ಕೆ ಬಂದಿದೆ. ಹೆಜ್ಜೆ ತೆಗೆದು ಮರು ಹೆಜ್ಜೆಹಾಕುವುದಕ್ಕೆ
>> ನೀನು ಎಷ್ಟು ಆಯಾಸ ಪಡುತ್ತೀಯಾ ಎಂಬುದು ನಮ್ಮಿಬ್ಬರಿಗೂ ಗೊತ್ತು. ನೀನೇ ಹೇಳು ನಿನ್ನ
>> ಶರೀರದಲ್ಲಿ ಹೇಗಿರಲಿ…? ಅಲ್ಲಲ್ಲಿ ಶಿಥಿಲವಾಗಿರುವ ಮನೆಯಲ್ಲಿ ಯಾರಾದ್ರು ಇರ್ತಾರಾ…? ನೀನು
>> ಕಟ್ಟಿಸಿದ ಸುಂಧರವಾದ ಮನೆಯಿಂದ ನನಗೇನು ಸಂಬಂಧ…? ನಾನಿರುವುದು ನಿನ್ನ ಶರೀರದಲ್ಲಿ, ಅದೇ
>> ನನ್ನ ನಿವಾಸಸ್ಥಳ. ನನ್ನ ಮನೆಗೆ ಇರುವ ಒಂಭತ್ತು ದ್ವಾರಗಳಿಗೂ ಸಮಸ್ಯೆಗಳೇ, ನನಗೆ ರಕ್ಷಣೆ
>> ಇಲ್ಲ, ಸುಖವಿಲ್ಲ, ಎಲ್ಲಕ್ಕಿಂತ ಮಿಗಿಲಾಗಿ, ನಿನಗೆ ಮೊದಲಿಗೆ ಬಂದತಹ ಖಾಯಿಲೆ, ಹಣದ ಖಾಯಿಲೆ
>> ‌.
>>
>> ಹಣದ ಖಾಯಿಲೆ ನಿನಗೆ ಬಂದಂದಿನಿಂದ, ನನ್ನನು ಒಮ್ಮೆಯಾದರೂ ನಿದ್ದೆ ಮಾಡಲು
>> ಬಿಟ್ಟಿದ್ದೀಯಾ…? ನಾನಿರುವ ಶರೀರಕ್ಕೆ ಸ್ವಲ್ಪವಾದರೂ ವಿಶ್ರಾಂತಿ ನೀಡಿದ್ದೀಯಾ….?
>> ಪ್ರತೀಕ್ಷಣವೂ ಇನ್ನೊಬ್ಬನಿಗೆ ಪೈಪೋಟಿಯಾಗಿ ನನ್ನಲ್ಲಿ ಅಸೂಯೆಯನ್ನು ತುಂಬಿದ್ದೀಯಾ…?
>> ಇನ್ನೊಬ್ಬನನ್ನು ಹಿಂದೆ ತಳ್ಳಲು ನನ್ನಿಂದ ಕುತಂತ್ರಗಳನ್ನು ಮಾಡಿಸಿದೆ. ಎಷ್ಟೋ ಸಾರಿ
>> ನನ್ನನ್ನು ಹಗೆಯಿಂದ, ಹೊಟ್ಟೆಕಿಚ್ಚಿನಿಂದ, ಎಷ್ಟು ನೋಯಿಸಿದೆಯೋ ಒಂದುಸಾರಿ ನೆನಪುಮಾಡಿಕೋ…
>> ರೋಗಗಳು ಆವರಿಸಿದರೂ, ಎಂದಾದರೂ ಗಮನ ಹರಿಸಿದೆಯಾ? ಯೋಚನೆ ಮಾಡಿ ನೋಡು. ಇನ್ನೂ ಒಂದು ಕ್ಷಣವೂ
>> ನಾನು ನಿನ್ನ ಶರೀರದಲ್ಲಿ ಇರುವುದಿಲ್ಲ. ನಾನು ಹೋಗುತ್ತಿದ್ದೇನೆ…!” ಎಂದು ಆ ರಾತ್ರಿ ತಾನು
>> ಸಂಪಾದನೆ ಮಾಡಿರುವ ಲಕ್ಷ್ಮೀಯನ್ನು ಇಲ್ಲಿಯೇ ಬಿಟ್ಟು ಲಕ್ಷ್ಮೀಪತಿ ಸ್ವರ್ಗಕ್ಕೋ ನರಕಕ್ಕೋ
>> ಯಾವುದೋ ಒಂದು ಲೋಕಕ್ಕೆ ಕಾಣದಂತಹ ಲೋಕಕ್ಕೆ ಹೋಗಿಬಿಟ್ಟನು.
>>
>> ಇಂದು ಪ್ರತಿ ಮನುಷ್ಯನಿಗೂ ನಾಳೆಯ ಬಗ್ಗೆ ಆಲೋಚನೆ ಅಧಿಕವಾಗಿದೆ. ಆದ್ದರಿಂದ ಈ ದಿನ, ಈ
>> ಕ್ಷಣವನ್ನು ಆನಂದದಿಂದ ಅನಿಭವಿಸುವುದನ್ನು ಮರೆತಿದ್ದಾನೆ. ದೇವರು ಕೊಟ್ಟ ಆರೋಗ್ಯವೇ
>> ಮಹಾಭಾಗ್ಯ ಎಂಬ ವಿಷಯವನ್ನು ಮರೆತು, ಮನುಷ್ಯ ಸೃಷ್ಠಿಸಿಕೊಂಡ ಹಣವನ್ನೇ
>> ಭಾಗ್ಯವೆಂದುಕೊಳ್ಳುತ್ತಿದ್ದಾನೆ. ಒಂದು ಮಾತಿನಲ್ಲಿ ಹೇಳುವುದಾದರೆ, ರೋಗಗಳನ್ನು ಬರಲೆಂದು
>> ಆಹ್ವಾನ ನೀಡಿ,  ಅವು ಬಂದಾಗ ಖರ್ಚು ಮಾಡಲು ಕಷ್ಟಪಟ್ಟು ಹಣಸಂಪಾದನೆ ಮಾಡುತ್ತಿದ್ದಾನೆ.
>> ನಮ್ಮ ಅವಶ್ಯಕತೆಗಳನ್ನು ನೀಗಿಸಿಕೊಳ್ಳಲು ಕಷ್ಟಪಡಬೇಕು. ಆನಂದಿಸಲು ಕಷ್ಟಪಡಬೇಕು. ನಾವು
>> ಇರುವ ಜೀವನಕ್ಕಾಗಿ ಕಷ್ಟಪಡಬೇಕು. ಅಷ್ಟೇ ಆಗಲಿ ನಾವು ಹೋದ ನಂತರದ ಜೀವನಕ್ಕಾಗಿ ಕಷ್ಟ
>> ಪಡುವುದರಲ್ಲಿ ಏನಾದರೂ ಅರ್ಥವಿದೆಯೇ….?
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> - https://docs.google.com/formsd1Iv5fotalJsERorsuN5v5yHGuKrmpF
>> XStxBwQSYXNbzI/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "Maths & Science STF" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> For more options, visit https://groups.google.com/d/optout.
>>
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> - https://docs.google.com/formsd1Iv5fotalJsERorsuN5v5yHG
> uKrmpFXStxBwQSYXNbzI/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 - 
https://docs.google.com/formsd1Iv5fotalJsERorsuN5v5yHGuKrmpFXStxBwQSYXNbzI/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to