ಉತ್ತಮ ಮಾಹಿತಿ ಹರೀಶ್ ರವರೆ. On 5 May 2017 8:31 pm, "SIDDARAJU S B" <[email protected]> wrote:
> ಹರೀಶ್ ಕುಮಾರ್ ಸರ್, ಸರಳವಾದ, ಸಾಮಾನ್ಯ ಪರಿಜ್ಞಾನ ನಮ್ಮನ್ನು ಆಳುವವರಲ್ಲಿ ಮೂಡಿದರೆ > ಮುಂದಿನ ಪೀಳಿಗೆ ಉಳಿದೀತು.ಇಲ್ಲ ವಾದಲ್ಲಿ? > > > On 05-May-2017 06:40, "Tirupathi. R" <[email protected]> wrote: > >> ITS WONDERFULL STOREY WHICH IS REALY REQUIRED THIS TIME >> >> >> 2017-05-04 22:34 GMT+05:30 savitri navada <[email protected]>: >> >>> ಉತ್ತಮ ಮಾಹಿತಿ. ಧನ್ಯವಾದಗಳು. >>> >>> On 4 May 2017 06:12, "HAREESHKUMAR K Agasanapura" <[email protected]> >>> wrote: >>> >>> http://m.prajavani.net/article/2017_05_04/488866 >>> >>> *ಪಾತಾಳಗಂಗೆಯ ಕೂಲಂಕಲ್ಮಷ ಕಥನಗಳು* >>> >>> 4 May, 2017 >>> >>> ನಾಗೇಶ್ ಹೆಗಡೆ >>> >>> >>> <https://www.facebook.com/sharer/sharer.php?u=https%3A%2F%2Fgoo.gl%2FbKBtTc> >>> <https://twitter.com/intent/tweet?text=%E0%B2%AA%E0%B2%BE%E0%B2%A4%E0%B2%BE%E0%B2%B3%E0%B2%97%E0%B2%82%E0%B2%97%E0%B3%86%E0%B2%AF+%E0%B2%95%E0%B3%82%E0%B2%B2%E0%B2%82%E0%B2%95%E0%B2%B2%E0%B3%8D%E0%B2%AE%E0%B2%B7+%E0%B2%95%E0%B2%A5%E0%B2%A8%E0%B2%97%E0%B2%B3%E0%B3%81++https%3A%2F%2Fgoo.gl%2FbKBtTc> >>> <https://plus.google.com/share?url=https%3A%2F%2Fgoo.gl%2FbKBtTc> >>> <http://www.pinterest.com/pin/find/?url=https%3A%2F%2Fgoo.gl%2FbKBtTc> >>> <http://www.linkedin.com/shareArticle?mini=true&title=%E0%B2%AA%E0%B2%BE%E0%B2%A4%E0%B2%BE%E0%B2%B3%E0%B2%97%E0%B2%82%E0%B2%97%E0%B3%86%E0%B2%AF+%E0%B2%95%E0%B3%82%E0%B2%B2%E0%B2%82%E0%B2%95%E0%B2%B2%E0%B3%8D%E0%B2%AE%E0%B2%B7+%E0%B2%95%E0%B2%A5%E0%B2%A8%E0%B2%97%E0%B2%B3%E0%B3%81++&url=https%3A%2F%2Fgoo.gl%2FbKBtTc> >>> >>> ಗೂಗಲ್ ಉಪಗ್ರಹ ನಕಾಶೆಯಲ್ಲಿ ಸೌದಿ ಅರೇಬಿಯಾದ ತೂಬರ್ಜಲ್ (Tubarjal) ಎಂಬ ಪಟ್ಟಣದ >>> ಮೇಲೆ ಒಮ್ಮೆ ಸುತ್ತಾಡಿ. ಅದು ಜೋರ್ಡನ್ ದೇಶದ ಗಡಿಯ ಸಮೀಪ ಇದೆ. ಪಟ್ಟಣದ ಸುತ್ತೆಲ್ಲ >>> ಹಪ್ಪಳಗಳನ್ನು ಒಣಗಿಸಿದಂತೆ ಅಥವಾ ಸಿಡಿ ತಟ್ಟೆಗಳನ್ನು ಹರಡಿದಂತೆ ನೂರಾರು ವೃತ್ತಾಕಾರದ >>> ಬಿಂಬಗಳು ಕಾಣುತ್ತವೆ. ಹೆಚ್ಚಿನವೆಲ್ಲ ಕಂದು ಬಣ್ಣದ ಒಣ ಹಪ್ಪಳಗಳಂತೆ ಇದ್ದು, ಅಪರೂಪಕ್ಕೆ >>> ಒಂದೋ ಎರಡೊ ಅರೆಹಸುರು ಬಣ್ಣದ ತಟ್ಟೆಗಳಿವೆ. ಅವುಗಳ ಹಿಂದೆ ಒಂದು ದುರಂತ ಕತೆಯಿದೆ. >>> >>> >>> ಈ ತಟ್ಟೆಗಳೆಲ್ಲ ಒಂದೊಂದೂ ಅರ್ಧ ಕಿಲೊಮೀಟರ್ ವ್ಯಾಸದ ಸಪಾಟು ವೃತ್ತಗಳಾಗಿದ್ದು >>> ಪ್ರತಿಯೊಂದರ ನಟ್ಟ ನಡುವೆ ಕೊಳವೆ ಬಾವಿ ಇದೆ. ಅಲ್ಲಿಂದ ಒಂದೂವರೆ, ಎರಡು ಕಿಲೊಮೀಟರ್ >>> (ಐದಾರು ಸಾವಿರ ಅಡಿ) ಆಳಕ್ಕೆ ಬೋರ್ ಕೊರೆದು ಅಲ್ಲಿದ್ದ ‘ಪಾತಾಳ ಗಂಗೆ’ಯನ್ನು ಮೇಲೆತ್ತಿ >>> ಹಸುರು ಕ್ರಾಂತಿ ಮಾಡಲೆಂದು 1980ರ ದಶಕದಲ್ಲಿ ಸೌದಿ ಅರೇಬಿಯಾ ಸರ್ಕಾರ ದೊಡ್ಡ ಯೋಜನೆ >>> ಆರಂಭಿಸಿತು. >>> >>> >>> >>> ಬಿಸಿಬಿಸಿ ನೀರೇನೊ ಭರ್ಜರಿ ಬಂತು. ಅದನ್ನು ಅರ್ಧ ಕಿಲೊಮೀಟರ್ ಮೇಲಕ್ಕೆತ್ತಿ >>> ನೆಲದಾಳದಲ್ಲೇ ತಂಪು ಮಾಡಿ, ಮತ್ತೆ ಒಂದು-ಒಂದೂವರೆ ಕಿಮೀ ಮೇಲಕ್ಕೆತ್ತಬೇಕು. ಆ ನೀರಲ್ಲಿ >>> ಅತಿಯಾದ ಲವಣಾಂಶ ಇರುತ್ತದೆ. ಸೋಸುಯಂತ್ರದಲ್ಲಿ ಲವಣಗಳನ್ನು ಪ್ರತ್ಯೇಕಿಸಿ ಶುದ್ಧ ನೀರನ್ನು >>> ಬೋರ್ವೆಲ್ ಸುತ್ತ ಗಾಣದಂತೆ ತಿರುಗುವ ಪೈಪ್ಗಳ ಮೂಲಕ ಚಿಮುಕಿಸುತ್ತಾರೆ. >>> >>> >>> >>> ಗೋಧಿ ಬಿತ್ತನೆ ಮಾಡಿ, ಹೂಡಿಕೆದಾರರು ನೀರಿನ ಪೈಪಿಗೇ ರಸಗೊಬ್ಬರ ಸೇರಿಸಿ ಭರ್ಜರಿ ಬೆಳೆ >>> ತೆಗೆದರು. ಸುಮಾರು 15–20 ವರ್ಷ ಸೌದಿ ಅರೇಬಿಯಾ ಗೋಧಿಯನ್ನು ರಫ್ತು ಮಾಡಿತು. ಆಮೇಲೆ >>> ಒಂದೊಂದಾಗಿ ಕೊಳವೆ ಬಾವಿಗಳು ಖಾಲಿಯಾದವು. ಹೂಡಿಕೆದಾರರೆಲ್ಲ ಒಬ್ಬೊಬ್ಬರಾಗಿ ಕಾಲ್ತೆಗೆದರು. >>> >>> >>> >>> ಇಂದು ತೂಬರ್ಜಲ್ ಸುತ್ತಮುತ್ತ ಸಾವಿರಾರು ಒಣವೃತ್ತಗಳನ್ನು, ಜಲವಿಲ್ಲದ ಖಾಲಿ >>> ತೂಬುಗಳನ್ನು ನೋಡುತ್ತೀರಿ. ತುಕ್ಕು ಹಿಡಿದ ಯಂತ್ರೋಪಕರಣಗಳು ಅಲ್ಲಲ್ಲೇ ಬಿದ್ದಿವೆ. >>> ವಿಷಕಾರಿ ಲವಣದ ರಾಶಿ ಸುತ್ತೆಲ್ಲ ಚದುರಿದೆ. ಊರಿಗೆ ಊರೇ ಬಿಕೋ ಎನ್ನುತ್ತಿದೆ. >>> >>> >>> >>> ಗೋಧಿಯ ರಫ್ತಿನಲ್ಲಿ ಒಂದು ಕಾಲಕ್ಕೆ ಜಗತ್ತಿನ ಆರನೇ ಶ್ರೇಯಾಂಕದಲ್ಲಿದ್ದ ಸೌದಿ ಅರೇಬಿಯಾ >>> ಈಗ ಪಾತಾಳಕ್ಕೇ ಕುಸಿದಂತಾಗಿದೆ. ಗೋಧಿಯನ್ನು ಆಮದು ಮಾಡಿಕೊಳ್ಳುವ ಹಂತಕ್ಕೆ ಬಂದಿದೆ. >>> >>> >>> >>> ಗೋಧಿಯಿಂದ ಧನಿಕರಾದ ಹೂಡಿಕೆದಾರರೆಲ್ಲ ಬೇರೆ ಬೇರೆ ಖಂಡಗಳಲ್ಲಿ, (ಉತ್ತರ ಅಮೆರಿಕಾ, >>> ಆಫ್ರಿಕಾ, ಲ್ಯಾಟಿನ್ ಅಮೆರಿಕಾ) ಬೇರೆ ಬೇರೆ ದೇಶಗಳಲ್ಲಿ (ಥಾಯ್ಲೆಂಡ್, ಇಂಡೊನೇಶ್ಯ) >>> ಕೃಷಿಗಾಗಿ ಭೂಮಿಯನ್ನು ಖರೀದಿಸುತ್ತ, ಅಂತರ್ಜಲವನ್ನೂ ತಾತ್ಕಾಲಿಕ ಲಾಭವನ್ನೂ ಎತ್ತುತ್ತ >>> ಸುತ್ತುತ್ತಿದ್ದಾರೆ. >>> >>> >>> >>> ನಮ್ಮ ಕರ್ನಾಟಕ ಸರಕಾರವೂ ಅಂಥದ್ದೇ ಘನಂದಾರಿ ಕೆಲಸಕ್ಕೆ ಕೈಹಾಕಲು ಹೊರಟಿದೆ. ದಕ್ಷಿಣ >>> ಭಾರತದ ಶಿಲಾರಚನೆಯೇ ಗೊತ್ತಿಲ್ಲದ ಕಂಪನಿಯೊಂದಕ್ಕೆ ಅದು ‘ಪಾತಾಳ ಗಂಗೆ’ಯನ್ನು ಮೇಲೆತ್ತುವ >>> ಗುತ್ತಿಗೆ ಕೊಡುತ್ತಿದೆ. ಬೇರೆ ಕೆಲವು ಭೂಖಂಡಗಳಲ್ಲಿ ಹೀಗೆ ಅಲ್ಲಲ್ಲಿ ‘ಪಳೆಯುಳಿಕೆ ನೀರು’ >>> ಸಿಗುತ್ತದೆ ನಿಜ. ಅದಕ್ಕೆ ‘ಫಾಸಿಲ್ ವಾಟರ್’ ಅಥವಾ ‘ಪೇಲಿಯೊ ವಾಟರ್’ (ಪುರಾತನ ಜಲ) >>> ಎನ್ನುತ್ತಾರೆ. >>> >>> >>> >>> ಲಕ್ಷಾಂತರ ವರ್ಷಗಳ ಹಿಂದೆ, ಭೂಮಿಯ ಬಹುಭಾಗ ಹಿಮಯುಗದಲ್ಲಿದ್ದಾಗ ಕೆಲವೆಡೆ ನೆಲದಾಳದಲ್ಲಿ >>> ನೀರು ಜಿನುಗಿ ಅಲ್ಲಲ್ಲಿ ಸ್ಪಂಜಿನಂತೆ ನೀರಿನ ಭಾರೀ ಖಜಾನೆ ಶೇಖರವಾಗಿದ್ದು ಹೌದು. >>> ಅವೆಲ್ಲವೂ ಭೂಮಿಯ ಆಳದಲ್ಲಿರುವ ಮರಳುಶಿಲೆ ಅಥವಾ ಕಣಶಿಲೆಗಳಲ್ಲಿ ಸಂಚಯವಾಗಿರುತ್ತವೆ. ಉತ್ತರ >>> ಭಾರತದಲ್ಲಿ ಗಂಗಾ-ಸಿಂಧೂ ಬಯಲಿನಲ್ಲಿ ಕಿಲೊಮೀಟರ್ ಆಳದಲ್ಲೂ ಅಂಥ ಶಿಲೆಗಳಿವೆ. >>> >>> >>> >>> ಆದರೆ ದಕ್ಷಿಣ ಭಾರತದಲ್ಲಿ ಅಂಥ ಹಳೇಕಾಲದ ಕಣಶಿಲೆಗಳು ಇಲ್ಲ. ಇಲ್ಲಿ ಹೆಚ್ಚೆಂದರೆ >>> ಗ್ರಾನೈಟ್ನ ಬಿರುಕುಗಳಲ್ಲಿ, ಭಗ್ನಶಿಲೆಗಳ ಸೀಳುಗಳಲ್ಲಿ ಪುರಾತನ ನೀರು ಸಂಚಯವಾಗಿರುತ್ತದೆ. >>> ಅದು ನದಿಯಂತೆ ಹರಿಯುವುದೂ ಇಲ್ಲ. >>> >>> >>> >>> ಸರ್ಕಾರಕ್ಕೆ ‘ಪಾತಾಳ ಗಂಗೆ’ಯ ಹುಚ್ಚು ಹಿಡಿಸಿದ ‘ವಾಟರ್ಕ್ವೆಸ್ಟ್’ ಕಂಪನಿಗೆ >>> ಭೂವಿಜ್ಞಾನದ ಪರಿಜ್ಞಾನವೇ ಇಲ್ಲವೆಂಬುದಕ್ಕೆ ಅದರ ಜಾಲತಾಣದಲ್ಲೇ ಸಾಕಷ್ಟು ಸಾಕ್ಷ್ಯಗಳು >>> ಸಿಗುತ್ತವೆ. ಯಾರೋ ಹೈಸ್ಕೂಲ್ ಹುಡುಗರು ಬರೆದಂತೆ ಕಾಣುವ ಪಾತಾಳದ ಭೂಚಿತ್ರಣ ಇದೆ. >>> ಸಮುದ್ರದಿಂದ ಉಪ್ಪುನೀರು ನೆಲದ ಕಡೆಗಿನ ಪಾತಾಳದಲ್ಲಿ ಇಳಿದು ಅಲ್ಲಿನ ಶಾಖಕ್ಕೆ >>> ಕುದಿಯುತ್ತದಂತೆ. ಅದು ಆವಿಯಾಗಿ ಉಪ್ಪಿನಂಶವನ್ನೆಲ್ಲ ಅಲ್ಲೇ ಬಿಟ್ಟು, ಬಿರುಕುಗಳ >>> ಮೇಲೇಳುತ್ತ ಶುದ್ಧ ನೀರಾಗುತ್ತದಂತೆ. ತುಸು ಮೇಲೆ ಬಂದು (ನೆಲದಿಂದ ಸಾವಿರ ಮೀಟರ್ ಆಳದಲ್ಲಿ) >>> ಮಡುಗಟ್ಟಿ ಹರಿಯುತ್ತದಂತೆ. ಎಲ್ಲವೂ ಶುದ್ಧ ಬೊಗಳೆ. >>> >>> >>> >>> ವಿಜ್ಞಾನದ ನಿಯಮಗಳ ಪ್ರಕಾರ, ಪಾತಾಳದಲ್ಲಿ ಅದೆಷ್ಟೇ ಶಾಖವಿದ್ದರೂ ನೀರು ಕುದಿಯಲಾರದು; >>> ಅದು ವಾತಾವರಣಕ್ಕೆ ತೆರೆದುಕೊಂಡರೆ ಮಾತ್ರ ಆವಿಯಾಗುತ್ತದೆ. ಇಲ್ಲಾಂದರೆ ಅತಿಶಾಖದ ದ್ರವವಾಗಿ >>> ಅಲ್ಲೇ ಇರುತ್ತದೆ. ಅದು ಪ್ರವಾಹವಾಗಿ ಹರಿಯುವುದಿಲ್ಲ. ಸಮುದ್ರದ ನೀರೇ ಆಗಿದ್ದರೆ ಅದರ ಮಟ್ಟ >>> ಸಮುದ್ರ ಪಾತಳಿಗಿಂತ ಕೆಳಕ್ಕೆ ಇಳಿಯುವುದೂ ಇಲ್ಲ, ಅದಕ್ಕಿಂತ ತೀರ ಮೇಲಕ್ಕೆ ಏರುವುದೂ ಇಲ್ಲ. >>> >>> >>> >>> ಇನ್ನು ಈ ಕಂಪನಿಯ ಸಂಶೋಧನೆಗೆ ಕೊರಿಯಾದಲ್ಲಿ ನಡೆದ ‘ಇಂಟರ್ನ್ಯಾಶನಲ್ ಇನ್ವೆನ್ಶನ್ >>> ಮೇಳ’ದಲ್ಲಿ ಗೋಲ್ಡ್ ಪ್ರೈಝ್ ಸಿಕ್ಕಿದೆಯೆಂಬ ಸರ್ಟಿಫಿಕೇಟ್ ಇದೆ. ಮೇಳ ನಡೆದಲ್ಲೇ >>> ಪಾತಾಳಕ್ಕೆ ಬೋರ್ ಕೊರೆದು ನೀರನ್ನಂತೂ ಉಕ್ಕಿಸಿರಲಿಕ್ಕಿಲ್ಲ. ಹೆಚ್ಚೆಂದರೆ ಒಂದಿಷ್ಟು >>> ಭಿತ್ತಿಚಿತ್ರಗಳು, ವಿಡಿಯೊ ಪ್ರದರ್ಶನ, ನಕಾಶೆಗಳ ಪ್ರದರ್ಶನ ಮಾಡಿರಬಹುದು. ಅದನ್ನು ಯಾರೂ >>> ಕೂತಲ್ಲೇ ಜೋಡಿಸಬಹುದು. ಭಾರತದ ನಕಾಶೆಯ ಮೇಲೆ ಅವರು ತೋರಿಸಿದ ಭೂಜಲದ ರೇಖೆಗಳಂತೂ >>> ನಗೆಪಾಟಲಿನದು. ಕಂಡಕಂಡಲ್ಲಿ ಉದ್ದ ಅಡ್ಡ ನೀಲಿ ರೇಖೆ ಎಳೆದಿದ್ದಾರೆ ಅಷ್ಟೆ. >>> >>> >>> >>> ಈ ಕಂಪನಿಯದೆಂದು ಹೇಳಲಾದ ‘ವಾಟರ್ಕ್ವೆಸ್ಟ್ ರಿಸೋರ್ಸಸ್’ ಮತ್ತು ‘ಸ್ಕೈಕ್ವೆಸ್ಟ್’ >>> ಜಾಲತಾಣಗಳಲ್ಲಿ ಮಾಹಿತಿಗಳೂ ಅಸ್ಪಷ್ಟವಾಗಿವೆ. ಯುರೋಪ್ ಮತ್ತು ಅರಬ್ ಎಮಿರೇಟ್ಸ್ನಲ್ಲಿ ಈ >>> ಕಂಪನಿಯದೆಂಬಂತೆ ಕೆಲವು ಕೊಳವೆ ಬಾವಿಗಳ ಚಿತ್ರಗಳನ್ನು ಕೂರಿಸಲಾಗಿದೆ. >>> >>> >>> >>> ಆಳವಾದ ಬೋರ್ ಕೊರೆಯಬಲ್ಲ ವಿಶೇಷ ಡ್ರಿಲ್ಲಿಂಗ್ ಸಲಕರಣೆಗಳ ಚಿತ್ರ ಕೂಡ ಇದೆ. ವಿವರಗಳೇನೂ >>> ಇಲ್ಲ. ಅಲ್ಲಿ ಕೆಲವೆಡೆ ಪೆಟ್ರೋಲಿಗೆಂದು ಬಾವಿ ಕೊರೆಯುವಾಗ ನೀರು ಉಕ್ಕುವುದು ಸಹಜ. >>> ನೀರಿಗೆಂದೇ ಕಿಲೊಮೀಟರ್ಗಟ್ಟಲೆ ಕೊರೆದಿದ್ದೂ ಇರಬಹುದು. ಅರ್ಜೆಂಟಿನಾದಲ್ಲಿ ತೋರಿಸಿದ >>> ಹನ್ನೊಂದು ಬಾವಿಗಳ ಪೈಕಿ ಒಂಭತ್ತರಲ್ಲಿ ‘ಥರ್ಮಲ್ ವಾಟರ್’ (ಬಿಸಿ ನೀರು) ಎಂದು >>> ಗುರುತಿಸಲಾಗಿದೆ. >>> >>> >>> >>> ‘ನೀರು ಸಿಗದಿದ್ದರೆ ಹಣವೂ ಇಲ್ಲ’ ಎಂಬ ಕರಾರಿನೊಂದಿಗೆ ಕರ್ನಾಟಕ ಸರ್ಕಾರದ ಜಲಸಂಪನ್ಮೂಲ >>> ಇಲಾಖೆ ಈ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾಗಿ ಹೇಳಿಕೊಂಡಿದೆ. ನೀರು ಸಿಕ್ಕರೆ ಸಾಕೆ? >>> ದಕ್ಷಿಣ ಭಾರತದಲ್ಲಿ ಎಲ್ಲೇ ಒಂದು ಕಿಲೊಮೀಟರ್ ಆಳಕ್ಕೆ ಕೊರೆದರೂ ನೀರು ಸಿಕ್ಕೇ ಸಿಕ್ಕೀತು. >>> ಎಷ್ಟು ವರ್ಷ ಅಥವಾ ಎಷ್ಟು ದಿನದವರೆಗೆ ನೀರು ಸಿಗಲಿದೆ ಎಂಬುದನ್ನು ಯಾರೂ ಹೇಳಲಾರರು. >>> >>> >>> >>> ಇನ್ನು ನೀರಿನ ಗುಣಮಟ್ಟ? ಈಜಿಪ್ತ್, ಇಸ್ರೇಲ್, ಜೋರ್ಡನ್, ಸೌದಿ ಅರೇಬಿಯಾ, ಲಿಬಿಯಾ ಈ >>> ಎಲ್ಲ ದೇಶಗಳಲ್ಲಿ ಪಾತಾಳದಿಂದ ವಿಕಿರಣಯುಕ್ತ ನೀರು ಬಂದಿದೆ. ಅದರಲ್ಲಿನ ವಿಕಿರಣ >>> ದ್ರವ್ಯಗಳನ್ನು ಸೋಸುವುದು ತೀರಾ ದುಬಾರಿ ಅಷ್ಟೇ ಅಲ್ಲ, ಸೋಸಿದಾಗ ಉಳಿಯುವ ಗಸಿಯನ್ನು >>> ಬಿಸಾಕುವುದೇ ದೊಡ್ಡ ಸಮಸ್ಯೆಯಾಗಿದೆ. ಅಲ್ಲಲ್ಲೇ ಬಿಟ್ಟರೆ ಗಾಳಿಯಲ್ಲೂ ಚದುರಿ ಗಂಭೀರ >>> ಕಾಯಿಲೆಗಳಿಗೆ ಕಾರಣವಾಗುವ ಸಂಭವ ಇದೆ. ನಮ್ಮ ಚಳ್ಳಕೆರೆಯಲ್ಲಿ ಈ ಕಂಪನಿಗೆ ತೋರಿಸಲಾದ ತಾಣದ >>> ಆಸು ಪಾಸಿನಲ್ಲಂತೂ ವಿಕಿರಣಶೀಲ ಯುರೇನಿಯಂ ಅದುರಿನ ಶಿಲಾಸ್ತರಗಳೇ ಇವೆ. >>> >>> >>> >>> ಕರ್ನಾಟಕದ ಇತರ ತಾಣಗಳಲ್ಲೂ ಅತಿ ಆಳಕ್ಕೆ ರಂಧ್ರ ಕೊರೆದರೆ ಬೇರೆ ಲವಣಗಳು ಏನೇನು, >>> ಎಷ್ಟೆಷ್ಟು ಬರಲಿಕ್ಕಿವೆ ಗೊತ್ತಿಲ್ಲ. ಲಕ್ಷಾಂತರ ವರ್ಷಗಳಿಂದ ಶಿಲಾಬಿರುಕುಗಳಲ್ಲಿ >>> ಸಂಚಯಗೊಂಡಿರುವ ನೀರು ನಿರಭ್ರವಾಗಿರಲಂತೂ ಸಾಧ್ಯವಿಲ್ಲ. ನಿರಂತರವೂ ಆಗಿರಲು ಸಾಧ್ಯವಿಲ್ಲ. >>> ಇನ್ನು ಅದಕ್ಕಾಗಿ ಸುಡುವ ಡೀಸೆಲ್ಲು, ಕರೆಂಟು... >>> >>> >>> >>> ಬರದ ಪರಿಸ್ಥಿತಿ ತೀರಾ ತೀರಾ ಗಂಭೀರವಾಗಿದೆ ನಿಜ. ಅಮೆರಿಕದ ವಾಸ್ತುವಿನ್ಯಾಸ >>> ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಯುವಕ ಕಿರಣ್ ರಾಮಾರೆಡ್ಡಿ ಆರು ತಿಂಗಳ ರಜೆ ಹಾಕಿ >>> ತನ್ನೂರಿನ ನೀರಿನ ಬರ ನೀಗಿಸಲೆಂದೇ ಗೌರಿಬಿದನೂರಿಗೆ ಬಂದಿದ್ದಾರೆ. ಶ್ರೀಶ್ರೀ ರವಿಶಂಕರ್ >>> ಗುರೂಜಿಯ ಅನುಯಾಯಿಗಳ ಜೊತೆ ಸೇರಿ ಉತ್ತರ ಪಿನಾಕಿನಿ ನದಿಯನ್ನು ಮತ್ತೆ ಬದುಕಿಸಲು >>> ಯತ್ನಿಸುತ್ತಿದ್ದಾರೆ. ಅವರು ಮೊಬೈಲ್ ಆಪ್ ಮೂಲಕ ಕೊಳವೆ ಬಾವಿಗಳ ಸಮೀಕ್ಷೆ >>> ನಡೆಸುತ್ತಿದ್ದಾರೆ. >>> >>> >>> >>> ಅರ್ಕುಂದ ಎಂಬ ಒಂದೇ ಹಳ್ಳಿಯಲ್ಲಿ 260 ಬೋರ್ವೆಲ್ ಕೊರೆಸಿದ್ದು ಅವುಗಳಲ್ಲಿ 56 ಮಾತ್ರ >>> ಅತಿ ಆಳದಿಂದ ನೀರು ಕೊಡುತ್ತಿವೆ. >>> >>> ಉಳಿದವೆಲ್ಲ ಡೆಡ್. ಕಿರಣ್ ಪ್ರಕಾರ ಆರು ಕೋಟಿ ರೂಪಾಯಿಗಳನ್ನು ಊರಿನ ಜನರು ಬೋರ್ವೆಲ್ >>> ಕಂಪನಿಗಳಿಗೆ ಸುರಿದಿದ್ದಾರೆ. ಸಮೀಕ್ಷೆಗೆ ಹೋದವರನ್ನು ಕಂಡು, ಕೆಲವರಂತೂ ಸಾಲ ವಸೂಲಿಗೆ >>> ಬಂದರೆಂದೇ ಭಾವಿಸಿ ಓಡಿ ಅವಿತುಕೊಂಡಿದ್ದೂ ಇದೆ ಎಂದು ಅವರು ಹೇಳುತ್ತಾರೆ. ‘ಬಾಗೇಪಲ್ಲಿಯ >>> ಹಳ್ಳಿಗಳ ಜನರು ಕೊಳವೆ ಬಾವಿಯ ಫ್ಲೋರೈಡ್ಯುಕ್ತ ನೀರು ಕುಡಿದು ಕುಡಿದು, ನಿಂತಲ್ಲಿ ಹತ್ತು >>> ನಿಮಿಷ ನಿಲ್ಲಲೂ ತ್ರಾಣವಿಲ್ಲದವರಾಗಿದ್ದಾರೆ. ನಮ್ಮ ದೇಶದ ರೈತರಿಗೆ ಎಂಥಾ ಸ್ಥಿತಿ ಬಂತು!’ >>> ಎಂದು ಕಿರಣ್ ಮರುಗುತ್ತಾರೆ. >>> >>> >>> >>> ಚಿತ್ರದುರ್ಗದ ದೊಡ್ಡ ಸಿದ್ದವನಳ್ಳಿಯಂಥ ಹಳ್ಳಿಯಲ್ಲೂ ಜನರು ಕುಡಿಯುವ ನೀರಿನ ಲವಣಾಂಶ >>> ನಿವಾರಣೆಗೆ ದುಬಾರಿ ಆರ್ಓ ಸಾಧನಗಳನ್ನು ಹಾಕಿಸಿಕೊಂಡಿದ್ದಾರೆ. ‘ಅದರಿಂದ ಹೊರಬರುವ >>> ನೀರಿನಲ್ಲಿ ಶೇಕಡಾ 70ರಷ್ಟು ನೀರು ವೇಸ್ಟ್ ಆಗುತ್ತಿದೆ’ ಎನ್ನುತ್ತಾರೆ ಜಲತಜ್ಞ ಡಾ. >>> ದೇವರಾಜ್ ರೆಡ್ಡಿ. ವೇಸ್ಟ್ ಆಗುವುದಷ್ಟೇ ಅಲ್ಲ, ಅದು ಮೊದಲಿಗಿಂತ ಹೆಚ್ಚು ಲವಣಗಳನ್ನು >>> ಸೇರಿಸಿಕೊಂಡು ಭೂಮಿಯೊಳಕ್ಕೆ ಇಂಗುತ್ತದೆ; ಮುಂದಿನ ಪೀಳಿಗೆಗೆ ಹೆಚ್ಚಿನ ಸಂಕಷ್ಟ >>> ಒಡ್ಡುತ್ತದೆ. >>> >>> >>> >>> ಪಾತಾಳವಲ್ಲ, ಆಕಾಶವೇ ನಮಗಿರುವ ಏಕೈಕ ಆಸರೆ ಎಂಬುದು ಅಧಿಕಾರಸ್ಥರಿಗೆ ಏಕೆ >>> ಗೊತ್ತಾಗುತ್ತಿಲ್ಲ? ಮಳೆನೀರನ್ನು ಸಂಗ್ರಹಿಸಲು, ಕೆರೆಗಳ ಹೂಳೆತ್ತಲು ಸರ್ಕಾರ ತೋರುತ್ತಿರುವ >>> ಎಲ್ಲ ನಿರಾಸಕ್ತಿಯ ನಡುವೆ ಜನರೇ ಪಿಕಾಸಿ, ಸನಿಕೆಗಳನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. >>> >>> >>> >>> ಹಿಂದೆ, 1962ರಲ್ಲಿ ಚೀನಾದೊಂದಿಗೆ ಯುದ್ಧ ನಡೆದಾಗ, ಪ್ರಧಾನಿ ಶಾಸ್ತ್ರಿಯವರ ಕರೆಯ >>> ಮೇರೆಗೆ ಊರೂರಿನ ಜನರು ಚಿನ್ನಾಭರಣಗಳನ್ನು ದಾನ ಕೊಟ್ಟ ಹಾಗೆ ಈಗ ಕೆರೆ ಹೂಳೆತ್ತಲು ಕೊಡುಗೈ >>> ದಾನ ನೀಡುತ್ತಿದ್ದಾರೆ. ಇದು ಶತ್ರುವಿಲ್ಲದ ಸಮರ. ಶಿರಸಿ, ಕುಷ್ಟಗಿ, ಸಾಗರ, ಹಾಸನಗಳಲ್ಲಿ >>> ಜನರು ಕೆರೆ ಹೂಳೆತ್ತಲು ನೆರವಾಗುತ್ತಿದ್ದಾರೆ. ನೀರಿನ ಪಸೆ ಕಂಡರೆ ಹಬ್ಬದೋಪಾದಿ >>> ಸಂಭ್ರಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಜನರೊಂದಿಗೆ ಸರ್ಕಾರ ನಿಲ್ಲಬೇಕಿತ್ತು. ಆದರೆ ಅದು >>> ವಿರುದ್ಧ ದಿಕ್ಕಿನಲ್ಲಿ ಹೊರಟಂತಿದೆ. >>> >>> >>> >>> ಪಾತಾಳದತ್ತ ಏನೋ ಆಸೆ ತೋರಿಸಿ, ‘ನೀವು ನಿಶ್ಚಿಂತರಾಗಿರಿ, ನಾವೆಲ್ಲ ವ್ಯವಸ್ಥೆ >>> ಮಾಡುತ್ತೇವೆ’ ಎಂಬಂತೆ, ವಿಷದ ಬಟ್ಟಲಿಗೇ ಕೊಳವೆಕಡ್ಡಿ ಹಾಕಿ ಸೀಪಲು ಕೊಡುವಂತಿದೆ. ಮಳೆ >>> ನೀರಿಂಗಿಸುವ ಮಹತ್ವದ ಕುರಿತಾಗಲೀ ಅದರ ಸರಳ ತಂತ್ರಗಳ ಕುರಿತಾಗಲೀ ಒಂದೇ ಒಂದು ಸರ್ಕಾರಿ >>> ಕಿರುಪುಸ್ತಕ, ಕರಪತ್ರ, ಭಿತ್ತಿಚಿತ್ರ, ವಿಡಿಯೊ? ಹೋಗಲಿ, ಹತ್ತನೇ ಕ್ಲಾಸಿನವರೆಗೆ ಒಂದಾದರೂ >>> ಪಾಠ ಇದೆಯೆ? ಯಶಸ್ಸಿನ ಒಂದಾದರೂ ಉದಾಹರಣೆ ಇದೆಯೆ ಸರ್ಕಾರದ ಬಳಿ? ಪ್ರತಿಪಕ್ಷಗಳು ಒಂದಾದರೂ >>> ಸೊಲ್ಲೆತ್ತಿವೆಯೆ? >>> >>> >>> >>> ಮೊನ್ನೆ ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ಅದ್ದೂರಿಯ ‘ಭಗೀರಥ ಜಯಂತಿ’ಯನ್ನು ಸರ್ಕಾರ >>> ಆಚರಿಸಿತು. ಅಲ್ಲಿನ ಬಾಜಾಬಜಂತ್ರಿಗೆ ವ್ಯಯಿಸಿದ ಹಣದಲ್ಲಿ ಒಂದು ಚಿಕ್ಕ ಪಾಲನ್ನಾದರೂ >>> ಮಳೆನೀರಿನ ಕೈಪಿಡಿಯ ಮುದ್ರಿಸಿ ಹಂಚಲು ಬಳಸಿದ್ದಿದ್ದರೆ ಮೂವತ್ತೂ ಜಿಲ್ಲೆಗಳಲ್ಲಿ ವರುಣದೇವ >>> ಕೈಹಿಡಿಯುತ್ತಿದ್ದ. ಸಿಂಗಪುರ ಮಾದರಿಯಲ್ಲಿ ಚರಂಡಿ ನೀರನ್ನು ಶುದ್ಧೀಕರಿಸಿ ಒಬ್ಬ >>> ಸಚಿವನಾದರೂ ಕುಡಿದು ತೋರಿಸಿದ್ದಿದ್ದರೆ ಕನ್ನಡಮ್ಮನ ಒಣಗಿದ ಗಂಟಲಿಂದಲೂ ಜೈಕಾರ >>> ಹೊಮ್ಮಬಹುದಿತ್ತು. >>> >>> Hareeshkumar K >>> GHS Huskuru >>> Malavalli TQ >>> Mandya Dt >>> 9880328224 >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "Maths & Science STF" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "Maths & Science STF" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "Maths & Science STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
