ತುಂಬಾ ಚೆನ್ನಾಗಿದೆ ಸರ್ ಲೇಖನ On 21-Feb-2016 8:30 pm, "Harishchandra Prabhu" <[email protected]> wrote:
> ಬಹಳ ಚಿಂತನಾತ್ಮಕ ಲೇಖನ . > > > *ಹರಿಶ್ಚಂದ್ರ . ಪಿ.* > ಸಮಾಜ ವಿಜ್ಞಾನ ಶಿಕ್ಷಕರು > ಸರಕಾರಿ ಪದವಿ ಪೂವF ಕಾಲೇಜು ಬೆಳ್ಳಾರೆ , ಸುಳ್ಯ ,ದ.ಕ 574212 > e-mail: [email protected] > blog:NammaBellare.blogspot.com > school blog:* gpucbellare.blogspot.com <http://gpucbellare.blogspot.com>* > mobile: 9449592475 > > 2016-02-21 16:35 GMT+05:30 Siddaramappa s m Sri <[email protected]>: > >> ಜನಪದರ ದೈವ ಕಲ್ಪನೆ >> ಇಂದಿನ ಸಮಾಜದಲ್ಲಿ ದೇವರ ಸಂಬಂಧದ ವಿಷಯಗಳು ಅನೇಕ ಸಮಸ್ಯೆಗಳನ್ನು >> ಸೃಷ್ಟಿಸುತ್ತಿವೆ. ಆದಿಮಾನವನ ದೇವರ ಸೃಷ್ಟಿಯ ಹಿಂದಿರುವ ಮಾನವಪರವಾದ ಆಲೋಚನೆಗಳಲ್ಲಿ >> ಗಂಭೀರವಾದ ಪಲ್ಲಟಗಳಾಗಿರುವುದು. ಇದಕ್ಕೆ ಪ್ರಮುಖ ಕಾರಣವಾಗಿದೆ. ದೇವರು ಮನುಷ್ಯನನ್ನು >> ಕಾಪಾಡುವ ಮುಖ್ಯ ಉದ್ದೇಶದಿಂದ ಹುಟಿದ್ದು. ಆದರೆ ಕಾಲಾನಂತರ ಮನುಷ್ಯರೇ ದೇವರನ್ನು >> ರಕ್ಷಿಸಬೇಕಾದ ದುರಂತ ಒದಗಿದೆ. ಇಂಥ ಸಂದರ್ಭದಲ್ಲಿ ದೇವರ ಸೃಷ್ಟಿಯ ಆರಂಭಿಕ ಉದ್ದೇಶ ಹಾಗೂ >> ಸ್ವರೂಪಗಳನ್ನು ತಿಳಿಯುವ ಅಗತ್ಯತೆ ಇಂದು ಅನಿವಾರ್ಯವಾಗಿದೆ. ಈ ಉದ್ದೇಶದಿಂದ ದೇವರ ಆರಂಭಿಕ >> ಸ್ಥಿತಿಯನ್ನು ತಿಳಿಯುವ ಪ್ರಯತ್ನವನ್ನು ಈ ಲೇಖನದಲ್ಲಿ ಮಾಡಲಾಗಿದೆ. ಜನಪದ ಸಮಾಜಗಳು >> ಪ್ರಧಾನವಾಗಿ ನಂಬಿದ್ದು ಮನುಷ್ಯಪರವಾದ ದೇವರು-ಧರ್ಮವನ್ನು; ಇವರ ಧರ್ಮಕ್ಕೆ ಒಬ್ಬ >> ಸಂಸ್ಥಾಪಕನಾಗಲಿ, ಒಂದು ಧರ್ಮಗ್ರಂಥವಾಗಲಿ ಇಲ್ಲ. ಬದಲಿಗೆ ಇಲ್ಲಿ ಎಲ್ಲರೂ ಸಂಸ್ಥಾಪಕ >> ವಾರಸುದಾರರೆ ಆಗಿರುತ್ತಾರೆ. ಹಾಗೂ ಬದುಕಿನ ಅನುಭವಗಳ ಮೂಲಕ ರೂಪುಗೊಂಡ ನಂಬಿಕೆ, ಸಂಪ್ರದಾಯ >> ಆಚರಣೆ ಮತ್ತು ಕಲ್ಪನೆಗಳೇ ಇವರ ಧರ್ಮ ಗ್ರಂಥಗಳು. ಇವು ಶಿಷ್ಟಧಾರೆಯ ಧರ್ಮಗ್ರಂಥಗಳಂತೆ >> ಜಡವಾದವುಗಳಲ್ಲ. ಬದಲಿಗೆ ಅಲಿಖಿತವೂ ಪರಿವರ್ತನಾ ಶೀಲವೂ ಆಗಿರುತ್ತವೆ. ಜನಪದ ಲೋಕದಲ್ಲಿ >> ಪ್ರಕೃತಿಯೇ ಪ್ರಧಾನ ದೈವ . ಹಾಗೇಯೇ ತಮ್ಮ ಸಮಾಜ - ಸಂಸ್ಕೃತಿ ಉದ್ಧಾರಕ್ಕೆ ದುಡಿದ ನಾಯಕರೇ >> ನಿಜವಾದ ದೇವರುಗಳು. ಇನ್ನೂ ಕೂತೂಹಲದ ಸಂಗತಿಯೆಂದರೆ ತಮ್ಮ ಬದುಕಿಗೆ ಸಹಾಯವಾಗಿ ಬಂದ ಎಲ್ಲಾ >> ವಸ್ತು ವಿಷಯಗಳೂ ದೇವರುಗಳೇ. ಈ ಕಾರಣಕ್ಕಾಗಿ ಜನಪದರ ದೈವ ಸಮೂಹ ಅಗಣಿತವಾದದು. ಇಷ್ಟೆಲ್ಲ >> ದೊಡ್ಡ ಸಮೂಹವಿದ್ದರೂ ಯಾವ ದೇವರು ತನ್ನ ಭಕ್ತರಲ್ಲಿ ಪರಸ್ಪರ ಸಂಘರ್ಷಗಳನ್ನು ಉಂಟುಮಾಡಿಲ್ಲ. >> ಭಕ್ತರಿಗೆ ಯಾವುದೇ ಆಮಿಷವೊಡ್ಡಿಲ್ಲ. ಅತ್ಯಂತ ಮಾನವೀಯ ವಾತವರಣದೊಂದಿಗೆ ಬದುಕುವ >> ಸಂದರ್ಭಗಳನ್ನು ಸೃಷ್ಟಿಸಿವೆ. >> >> ನಮ್ಮ ಸಮಕಾಲೀನ ಸಂದರ್ಭದಲ್ಲಿ ಪ್ರಚಲಿತವಿರುವ ದೈವ ಕಲ್ಪನೆಗಳನ್ನು ಕಂಡರೆ >> ಯಾರಿಗಾದರೂ ಬೇಸರವೆನಿಸುತ್ತದೆ. ವೈದಿಕ ಪರಂಪರೆಯ ದೈವಗಳು ಪಾರಂಪರಿಕ ದೈವಗಳ ಮೇಲೆ >> ನಿರಂತರವಾಗಿ ನಡೆಸುತ್ತಾ ಬಂದಿರುವ ದಾಳಿಗಳ ಕಾರಣದಿಂದ ಇಂದು ದೇವರ ಹೆಸರಲ್ಲಿ >> ಹೊಟ್ಟೆಹೊರೆಯುವವರ ಸಂಖ್ಯೆ ಜಾಸ್ತಿಯಾಗಿದೆ. ಇಂಥವರಿಂದ ಭಕ್ತರ ಶೋಷಣೆ ಹೆಚ್ಚು ಹೆಚ್ಚು >> ನಡೆದಿದೆ. ಆಧುನಿಕ ಸಮಾಜದ ವಿಜ್ಞಾನದ ವಿಚಾರಗಳು ದೈವ ಕಲ್ಪನೆಯನ್ನು ಸಡಿಲಗೊಳಿಸಿದರ ಪರಿಣಾಮ >> ಇದರ ಫಲ ಪಡೆದ ಜನ ದೈವಗಳನ್ನೆ ಶೋಷಿಸುವ ಮಟ್ಟಕ್ಕಿಳಿದ್ದಿದ್ದಾರೆ. ದೇವರ ಹಿನ್ನೆಲೆಯಲ್ಲಿ >> ಹುಟ್ಟಿಕೊಂಡ ದೇವಾಲಯ ಹಾಗೂ ಮಠಗಳು ಕೂಡ ಹಣ-ಆಸ್ತಿ ಗಳಿಕೆಯಲ್ಲಿ ಪೈಪೋಟಿ ನಡೆಸುತ್ತಿರುವುದು >> ನಮ್ಮ ಕಾಲದ ದುರಂತ. ಇಂಥ ಸಂದರ್ಭದೊಳಗೆ ನಿಜವಾದ ಭಕ್ತಿಯುಳ್ಳ ಯಾರನ್ನು ಹಿಂಸಿಸದ, ನಿಜವಾದ >> ಮಾನವ ಪ್ರೇಮವನ್ನು ಕಾಪಿಡುವ ಜನಪದರ ದೈವ ವ್ಯವಸ್ಥೆ ಇಂದು ನಮ್ಮೆಲ್ಲರ ಅಗತ್ಯವಾಗಿದೆ. >> ಪ್ರಸ್ತುತ ಸಮಾಜದ ಹಲವಾರು ಆತಂಕ ಹಾಗೂ ಸಮಸ್ಯೆಗಳಿಗೆ ಧರ್ಮಗಳು >> ಬಹುಮುಖ್ಯ ಕಾರಣವಾಗಿವೆ. ಬರಹ ಹಾಗೂ ಉನ್ನತ ವರ್ಗಗಳಿಗೆ ಸೇರಿದ ಪ್ರಧಾನ ಧಾರೆಯ ಧರ್ಮಗಳು >> ಪಾರಂಪರಿಕವಾಗಿ ಬೆಳೆದು ಬಂದ ದುಡಿಮೆಯ ಆಧರಿತ ಸೇವಾ ವೃತ್ತಿಗಳನ್ನು ಮೂಲೆ ಗುಂಪಾಗಿಸಿವೆ. >> ಅಷ್ಟೇ ಅಲ್ಲದೆ ಸಮಾಜದ ಶ್ರೇಣೀಕರಣ ವ್ಯವಸ್ಥೆಯನ್ನು ಸಮರ್ಥಿಸುವ ಮೂಲಕ ಸಮಾಜದ >> ಸಮುದಾಯಗಳಲ್ಲಿ ಮತೀಯ ಮತ್ಸರಗಳನ್ನು ಹೆಚ್ಚಿಸಿವೆ. ಹೀಗಾಗಿಯೇ ಹಿಂದೆಂದೂ ಕಾಣದಂತಹ >> ಕೋಮುಗಲಭೆಗಳು ಮತ್ತು ಹಿಂಸಾಚಾರಗಳು ತಲೆ ಎತ್ತಿ ನಿಂತಿವೆ. ಚಲನಶೀಲತೆಯಿಲ್ಲದ ಈ ಕರ್ಮಠ >> ಧರ್ಮಗಳಲ್ಲಿ ಯಾವುದೇ ರೀತಿಯ ಪರಿವರ್ತನೆಯ ಮನಸ್ಸಿಲ್ಲ. ಇಂಥ ಸ್ಥಿರ ಮನೋಭಾವ ತನ್ನ >> ಶಕ್ತಿ-ಸಾಮರ್ಥ್ಯ ಹಾಗೂ ಅನುಯಾಯಿಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ದಿಕ್ಕಿನತ್ತ ಹೆಚ್ಚು >> ಒಲವು ತೋರುತ್ತಿದೆ. ಆ ಮೂಲಕ ಸಮಾಜದ ಶಾಂತಿಗಾಗಿ ದುಡಿಯಬೇಕಿದ್ದ ಧರ್ಮಗಳು ಅಶಾಂತಿಯನ್ನು >> ಸೃಷ್ಟಿಸುವ ಶಕ್ತಿಗಳಾಗಿ ಕಾರ್ಯನಿರ್ವಹಿಸುತ್ತಿವೆ. ಇಂಥ ಸಂದರ್ಭದಲ್ಲಿ ಮಾನವ ಸಮಾಜ >> ಶಾಂತಿಗಾಗಿ ಆತೊರೆಯುತ್ತಿದೆ. ಇವರಿಗೆ ಶಾಂತಿ ಸಿಗುವುದಾದರೂ ಎಲ್ಲಿಂದ? ಅದು ನಮ್ಮ >> ಪಾರಂಪರಿಕವಾದ ಚಲನಶೀಲ ಜನಪದ ಸಂಸ್ಕೃತಿಯೊಳಗಿನ ಧರ್ಮಗಳಿಂದ ಮಾತ್ರ ಸಾಧ್ಯವೆಂಬುದರಲ್ಲಿ >> ಯಾವುದೇ ಅನುಮಾನಗಳು ಉಳಿದಿಲ್ಲ. >> ಜನಪದ ಧರ್ಮ ಮತ್ತು ದೇವರು >> ಜನಪದ ಸಮಾಜಗಳು ಪ್ರಧಾನವಾಗಿ ನಂಬಿದ್ದು ಮನುಷ್ಯಪರವಾದ ದೇವರು-ಧರ್ಮವನ್ನು; >> ದೇಹ ಪ್ರಧಾನ ಕಾಯಕ ಮೌಲ್ಯವನ್ನು; ಸಮಷ್ಟಿಯ ಹಿತಾಸಕ್ತಿಯನ್ನು; ಭೌತಿಕ ಸಂಪತ್ತಿನ >> ನಿರಾಕರಣೆಯ ಭಾವನೆಯನ್ನು; ಮನುಷ್ಯನಿಗಿಂತ ಹೆಚ್ಚಾಗಿ ಪ್ರಕೃತಿ ಕೇಂದ್ರಿತ ಮನೋಭಾವನೆಯನ್ನು; >> ದ್ವೇಷರಹಿತ ಅಪ್ಪಟ ಮಾನವೀಯ ಅಂತಃಕರಣವನ್ನು; ವ್ಯವಹಾರಿಕವಲ್ಲದ ನಿಜವಾದ ಮಾನವೀಯ ಸಂಬಂಧದ >> ಬಂಧುತ್ವವನ್ನು. ಇವೆಲ್ಲ ಭಾವನೆಗಳ ಮೂಸೆಯಲ್ಲಿ ಮೂಡಿ ಅನೇಕ ತಿರುವುಗಳಲ್ಲಿ ಬೆಳೆದ ಜನಪದ >> ಸಂಸ್ಕೃತಿಯಲ್ಲಿ ಕಂಡು ಬರುವ ದೇವರು-ಧರ್ಮದ ಸ್ವರೂಪವನ್ನು ತಿಳಿಯುವುದು ಅತ್ಯಂತ ಕೂತೂಹಲಕರ >> ಸಂಗತಿಯಾಗಿದೆ. ಸಂಸ್ಕೃತಿಗೂ ಧರ್ಮಕ್ಕೂ ನಿಕಟ ಸಂಬಂಧವಿದೆ. ಸಂಸ್ಕೃತಿಯನ್ನು ರೂಪಿಸುವಲ್ಲಿ >> ಧರ್ಮದ ಪಾತ್ರ ದೊಡ್ಡದು. ಜನಪದರ ಧರ್ಮಕ್ಕೆ ಒಬ್ಬ ಸಂಸ್ಥಾಪಕನಾಗಲಿ, ಒಂದು >> ಧರ್ಮಗ್ರಂಥವಾಗಲಿ ಇಲ್ಲ. ಬದಲಿಗೆ ಇಲ್ಲಿ ಎಲ್ಲರೂ ಸಂಸ್ಥಾಪಕ ವಾರಸುದಾರರೆ ಆಗಿರುತ್ತಾರೆ. >> ಹಾಗೂ ಬದುಕಿನ ಅನುಭವಗಳ ಮೂಲಕ ರೂಪುಗೊಂಡ ನಂಬಿಕೆ, ಸಂಪ್ರದಾಯ ಆಚರಣೆ ಮತ್ತು ಕಲ್ಪನೆಗಳೇ >> ಇವರ ಧರ್ಮ ಗ್ರಂಥಗಳು. ಇವು ಶಿಷ್ಟಧಾರೆಯ ಧರ್ಮಗ್ರಂಥಗಳಂತೆ ಜಡವಾದವುಗಳಲ್ಲ. ಬದಲಿಗೆ >> ಅಲಿಖಿತವೂ ಪರಿವರ್ತನಾ ಶೀಲವೂ ಆಗಿರುತ್ತವೆ. ಈ ಹಿನ್ನೆಲೆಯೊಳಗೆ ಕನ್ನಡ ಜನಪದ ಲೋಕದಲ್ಲಿ >> ಕಂಡು ಬರುವ ದೇವರ ಕಲ್ಪನೆಗಳನ್ನು ಈ ಮುಂದಿನಂತೆ ವಿವರಿಸಬಹುದು. >> ’ಜನಪದ ಧರ್ಮವು ಲಿಖಿತ ಪಠ್ಯ, ಆ ಮೂಲಕ ಏರ್ಪಟ್ಟ ತಾತ್ವಿಕ ಚಿಂತನೆಯ ಮೂಲಕ >> ಆಕಾರ ಪಡೆದುದ್ದಲ್ಲ. ಅದು ಬಹುಮಟ್ಟಿಗೆ ಅನುಕರಣೆ ಮತ್ತು ಆಚರಣೆಗಳಿಂದ ಹರಿದು ಬಂದಿದ್ದು, >> ಅತಿಮಾನುಷ ಕಲ್ಪನೆ, ಅಲೌಕಿಕ ಜೀವಿಗಳ ಆರಾಧನೆ ಹಾಗೂ ಅನೇಕ ಬಗೆಯ ಧಾರ್ಮಿಕ ನಂಬಿಕೆಗಳಿಂದ >> ಕೂಡಿದೆ’. ಇದರಲ್ಲಿ ಕಂಡು ಬರುವ ಆಚಾರ - ವಿಚಾರಗಳು, ನಡಾವಳಿಗಳು, ನಂಬಿಕೆಗಳು ಕಲೆಗಳು >> ಮತ್ತು ಹುಟ್ಟು-ಸಾವುಗಳ ಮಧ್ಯೆ ಅನುಸರಿಸಲೇ ಬೇಕಾದ ಸಂಪ್ರದಾಯಗಳು, ಜನರ ಜೀವನ ವಿಧಾನ ಮತ್ತು >> ಅದರ ಮನೋ ದೃಷ್ಟಿಯನ್ನು ಪ್ರತಿನಿಧಿಸುತ್ತವೆ. ತಾವು ಪರಿಪಾಲಿಸುವ ಧರ್ಮಗಳ ಧೇಯೋದ್ದೇಶಗಳ >> ಅರಿವಿಲ್ಲವಾದರೂ ತಮ್ಮ ಸುತ್ತ ನಮ್ಮನ್ನು ಕಾಪಾಡುವ ಒಂದು ಶಕ್ತಿಯಿದೆ ಎಂಬುದನ್ನು ಜನಪದರು >> ನಂಬುತ್ತಾರೆ. ಹೀಗಾಗಿ ಅವರು ಸೂರ್ಯ,ಚಂದ್ರ,ನೀರು,ಬೆಟ್ಟ-ಗುಡ್ಡಗಳು, ದಟ್ಟವಾದ ಕಾಡು >> ಎಲ್ಲವುಗಳಲ್ಲೂ ದೈವತ್ವವನ್ನು ಅರಸುತ್ತಾರೆ. ಇವುಗಳ ಒಡೆಯನೇ ಆ ಪ್ರದೇಶದಲ್ಲಿ >> ವಾಸವಾಗಿದ್ದು, ಕಾಯಿಲೆ ಮತ್ತು ಅನಿಷ್ಟಗಳಿಗೆ ಆತನೇ ಕಾರಣನೆಂದು ನಂಬಿ ಅವುಗಳನ್ನು >> ಪೂಜಿಸುತ್ತಾರೆ. ಇಂಥ ’ಸರ್ವಚೇತನವಾದ’ ವಾಸ್ತವವಾಗಿ ಜನಪದ ಧರ್ಮದ ಅಡಿಗಲ್ಲಾಗಿದೆ ಎಂದು >> ಹೇಳಬಹುದು. ಗಮನಿಸಬೇಕಾದ ಸಂಗತಿ ಎಂದರೆ ಜನಪದ ಸಂಸ್ಕೃತಿಯ ಧಾರ್ಮಿಕ ಸ್ತೊತ್ರ, ಸ್ತುತಿ, >> ಪ್ರಾರ್ಥನೆಗಳಿಲ್ಲ. ಬದಲಿಗೆ ಒತ್ತಾಯದ, ಒತ್ತಡದ, ಬಲತ್ಕಾರದ ಗೇಲಿಯ ನಿಲುವಿದೆ. ಜನಪದರ >> ಬದುಕು ರಾಜಶಕ್ತಿಗಿಂತ ಹೆಚ್ಚಾಗಿ ಧರ್ಮ ಶಕ್ತಿಯನ್ನು ಆಧರಿಸಿದೆ. ತಮ್ಮ ಜಾಯಮಾನಕ್ಕೆ >> ಒಗ್ಗುವ ರೀತಿಯಲ್ಲಿ ಮಾನವೀಯ ಮೌಲ್ಯಗಳಿಂದ ಕೂಡಿದ ಧರ್ಮವೊಂದನ್ನು ರೂಪಿಸಿಕೊಂಡ ಜನಪದರ >> ಕಲ್ಪನೆಯ ದೇವರು ಪ್ರತಿಷ್ಟಿತ ಶಕ್ತಿಗಿಂತಲೂ ತೀರಾ ಭಿನ್ನವಾದುದು. >> ಪ್ರಕೃತಿ : ಆರಾಧನೆ ಮತ್ತು ಅನುಸಂಧಾನ >> ’ಪ್ರಕೃತಿ ಪೂಜೆ ಜನಪದ ಧರ್ಮದ ಪ್ರಧಾನ ಲಕ್ಷಣ. ತಾವು ವಾಸಿಸುವ ಭೂಮಿ, >> ಸಮೀಪದ ಕಡಲು, ಶಾಖ ಮತ್ತು ಬೆಳಕನ್ನು ನೀಡುವ ಸೂರ್ಯ-ಚಂದ್ರ, ವಿವಿಧ ಉಪಯೋಗಗಳಿಗೆ ಬರುವ >> ಮರ-ಗಿಡ-ಬಳ್ಳಿಗಳು ಜನಪದರ ಆರಾಧ್ಯ ದೈವಗಳು. ಜನಪದರ ಪ್ರಕೃತಿಯ ಪೂಜೆಯ ಹಿಂದೆ ಕೃತಜ್ಞತೆಯ >> ಭಾವನೆಯಿದೆ. ಪ್ರಕೃತಿಯನ್ನು ಅವಲಂಬಿಸಿ ಬದುಕಿದ ಮನುಷ್ಯನಿಗೆ ಅದರ ಒಡನಾಟದಲ್ಲಿ ಆದ ನೋವು >> -ನಲಿವು ದೈವ ಸ್ವರೂಪವನ್ನು ಕಂಡಿವೆ. ಮುಖ್ಯವಾಗಿ ಪ್ರಕೃತಿಯಲ್ಲಿನ ಭಯ ಹುಟ್ಟಿಸುವ >> ವಸ್ತು-ವಿಷಯಗಳನ್ನು; ವಿಸ್ಮಯ ಮೂಡಿಸಿದ ಘಟನೆಗಳನ್ನೂ ದೇವರೆಂದು ಆರಾಧಿಸಿದ ಪರಿಕ್ರಮ >> ಇಲ್ಲಿದೆ. ಜನಪದ ದೈವ ಕಲ್ಪನೆಯ ಚರಿತ್ರೆಯಲ್ಲಿ ಮೊದಲ ಹೆಜ್ಜೆ ಎಂದರೆ ಪ್ರಕೃತಿಯ >> ಭಯ-ವಿಸ್ಮಯಗಳನ್ನು ಅನುಸಂಧಾನಗೊಳಿಸಿದ ಕ್ರಮ. ಮುಖ್ಯವಾಗಿ ಪ್ರಕೃತಿಯ ಜೊತೆ ನಡೆಸಿದ - >> ಬೆಳೆಸಿದ ಸಂಬಂಧಗಳ ಸ್ವರೂಪದಲ್ಲಿ ಜನಪದರ ದೈವ ಕಲ್ಪನೆ ಒಡಮೂಡಿದೆ. ಪ್ರಕೃತಿಯ ಭಾಗವಾದ >> ಸೂರ್ಯ-ಚಂದ್ರ-ಭೂಮಿ-ಆಕಾಶ, ನೀರು-ಗಾಳಿ, ಮಳೆ-ಬೆಳೆ ಇವುಗಳನ್ನು ಜನಪದರು ದೇವರೆಂದು >> ಪೂಜಿಸಿದ್ದಾರೆ. ಅದರಲ್ಲೂ ’ಭೂಮಿ’ ಮಣ್ಣಿಗೆ ಹತ್ತಿರವಾಗಿ ಬದುಕಿದ ಜನಪದ ಸಮುದಾಯಗಳಿಗೆ >> ಶ್ರೇಷ್ಟ ದೈವ. ಹಾಗಾಗಿ ಜನಪದ ತ್ರಿಪದಿಯೊಂದು ಭೂಮಿ ತಾಯಿಗೆ ಎಂಥ ಸ್ಥಾನವಿದೆ ಎಂಬುದನ್ನು >> ಹೀಗೆ ಸ್ಪಷ್ಟಪಡಿಸುತ್ತದೆ. >> ಬೆಳಗಾಗಿ ನಾನೆದ್ದು ಯಾರ್ಯಾರ ನೆನೆಯಲಿ| >> ಎಳ್ಳು ಜೀರಿಗೆ ಬೆಳೆವಂಥ| ಭೂಮಿ ತಾಯಿನ| >> ಎದ್ದೊಂದು ಗಳಿಗೆ ನೆನೆದೇನ|| >> ಈ ಸಾಲುಗಳು, ಇರುವ ಅನಂತ ದೈವಗಳ ನಡುವೆ ಭೂಮಿ ತಾಯಿ ದೊಡ್ಡವಳು; ಹಾಗಾಗಿಯೇ ಅವಳಿಗೆ ಮೊದಲ >> ಸ್ಥಾನ ಎಂಬುದನ್ನು ಸ್ಪಷ್ಟಪಡಿಸುತ್ತವೆ. ಹೀಗೆ ಭೂಮಿಯನ್ನು ತಾಯಿಯೆಂದು ತಿಳಿದ. ಸಮುದಾಯಗಳ >> ಪ್ರಜ್ಞೆ ಅನುಭವಜನ್ಯವಾದುದು. ಹುಟ್ಟಿನಿಂದ ಸಾವಿನವರೆಗೂ ಮನುಷ್ಯ ಭೂಮಿಯಿಂದ ಪಡೆಯುವ >> ಸಹಾಯವೆಷ್ಟು? ಆದರೆ ಇತ್ತೀಚಿನ ದಿನಮಾನದಲ್ಲಿ ಭೂಮಿಯ ಗರ್ಭವನ್ನು ಬಸಿದ ಆಧುನಿಕರ ಜ್ಞಾನ >> ಯಾಕಾಗಿ ಈ ಪರಂಪರೆಯನ್ನು ನಿಲಕ್ಷಿಸಿತು ಎಂಬುದರ ಬಗ್ಗೆ ಆಲೋಚಿಸಬೇಕಿದೆ. ಭೂಮಿಯಂತೆ >> ಸೂರ್ಯ, ಚಂದ್ರ, ನೀರು, ಗಾಳಿ ಮಳೆ ಮೊದಲಾದವು ಮನುಷ್ಯನ ಬದುಕಿಗೆ ಅನಿವಾರ್ಯ ಎಂಬುದಾಗಿ >> ನಂಬುವ ಅವು ನೀಡಿದ ಸಹಕಾರಕ್ಕೆ ಪ್ರತಿಯಾಗಿ ಗೌರವಿಸುವ ಮನೋಭಾವದಿಂದಾಗಿ ಇವೆಲ್ಲವೂ ದೈವ >> ಸ್ವರೂಪಿಯಾಗಿವೆ. ಜನಪದರ ಬದುಕುಗಳಲ್ಲಿ ದೊರೆಯುವ ಪ್ರಕೃತಿ ಆರಾಧನೆಯ ಮತ್ತೊಂದು ರೂಪ >> ಗಿಡ-ಮರ-ಬಳ್ಳಿಗಳ ಹಾಗೂ ಪ್ರಾಣಿ ಪಕ್ಷಿಗಳ ಆರಾಧನೆ. ಇದನ್ನು ಕುಲದೇವತಾರಾಧನೆ ಪದ್ಧತಿ ಎಂದು >> ಕರೆಯಲಾಗಿದೆ. ಈ ಪದ್ಧತಿಯ ಅನ್ವಯ ’ಒಂದು ಸಮುದಾಯದ ಜನ ತಮ್ಮ ಕುಲದ ಮೂಲವನ್ನು ಒಂದು ಸಸ್ಯ >> ಅಥವಾ ಪ್ರಾಣಿಗಳಲ್ಲಿ ಆರೋಪಿಸಿಕೊಂಡು ಅವುಗಳನ್ನೇ ತಮ್ಮ ಕುಲದೇವರು ಎಂದು ಆರಾಧಿಸಿಕೊಂಡು >> ಬರುತ್ತಾರೆ. ತಮ್ಮ ಕುಲದೇವತೆಯ ಲಾಂಛನವಾದ ಮರ/ಸಸ್ಯವನ್ನು ಅವರು ಕಡಿಯುವುದಿಲ್ಲ ಮತ್ತು >> ಸುಡುವುದಿಲ್ಲ. ಪ್ರಾಣಿಯನ್ನು ಬೇಟೆಯಾಡುವುದಿಲ್ಲ ಹಾಗೂ ಆಹಾರವಾಗಿ ಸೇವಿಸುವುದಿಲ್ಲ. ಈ >> ಸಮುದಾಯಗಳು ಪೂಜಿಸುವ ಬನ್ನಿ, ಬೇವು, ಆಲ, ಎಕ್ಕೆ ಮೊದಲಾದವು ಕೇವಲ ಹಸಿರಲ್ಲ. >> ಅವುಗಳಲ್ಲಿರುವ ಔಷಧೀಯ ಗುಣವೇ ಅವುಗಳನ್ನು ಪೂಜೆಗೊಳ್ಳುವಂತೆ ಮಾಡಿದೆ. ಇಂಥಲ್ಲಿ ಮನುಷ್ಯನ >> ಆರೋಗ್ಯಕ್ಕೆ ಸಹಕರಿಸಿದಕ್ಕೆ ಪ್ರತಿಯಾಗಿ ಮೂಡಿದ ಕೃತಜ್ಞತಾ ಭಾವವೇ ಅವುಗಳ ಆರಾಧನೆಗೆ >> ಪ್ರಮುಖ ಕಾರಣವಾಗಿದೆ. ಈ ರೀತಿಯಲ್ಲಿ ಪ್ರಕೃತಿಯಲ್ಲಿ ಮನುಷ್ಯನ ಬದುಕಿಗೆ ಅನುಕೂಲವಾಗಿ >> ಒದಗಿಬಂದ ವಸ್ತು-ವಿಷಯಗಳನ್ನು ಗೌರವ ಮತ್ತು ಕೃತಜ್ಞತೆ ಸೂಚಿಸುವ ಸಲುವಾಗಿ ಪೂಜಿಸಿದರೆ; ಇದೇ >> ಮನುಷ್ಯ ಮತ್ತೊಂದು ಕಡೆ ಪ್ರಕೃತಿಯ ವಿನಾಶಿ ರೂಪಗಳನ್ನು ಪೂಜಿಸಿದ್ದಾನೆ. ಉದಾ: >> ಪ್ರಕೃತಿಯಲ್ಲಿರುವ ಕ್ರೂರ ಪ್ರಾಣಿಗಳು, ವಿಷಜಂತುಗಳು; ಗುಡುಗು-ಸಿಡಿಲು ಮೊದಲಾದ >> ಭಯವನ್ನುಂಟು ಮಾಡುವ ಪ್ರಕೃತಿಯ ವೈಚಿತ್ರಗಳು. ಗಮನಿಸಬೇಕಾದ ಸಂಗತಿ ಎಂದರೆ ಕೃತಜ್ಞತಾ >> ಭಾವನೆಯ ಪೂಜಾಕ್ರಮಗಳಿಗಿಂತ ಭಯದ ಭಾವನೆಯಲ್ಲಿ ಪೂಜಿಸುವ ಪೂಜಾಮಾದರಿಗಳು >> ಭಿನ್ನವಾಗಿರುತ್ತವೆ. ಕೃತಜ್ಞತೆಗೆ ಎಡೆ ಮಾತ್ರ ಪ್ರಧಾನವಾದರೆ ಭಯಕ್ಕೆ ಬಲಿ >> ಮುಖ್ಯವಾಗುತ್ತದೆ. >> ಹಿರಿಯರ ಆರಾಧನೆ : ಕುಟುಂಬ ಮತ್ತು ಕುಲ >> ಜನಪದರ ದೈವ ಕಲ್ಪನೆಯಲ್ಲಿ ಹಿರಿಯರ ಆರಾಧನೆ ಮತ್ತೊಂದು ಪ್ರಮುಖ ಮಜಲು. ಕುಟುಂಬದ, ಜಾತಿಯ >> ಹಾಗೂ ಸಮುದಾಯದ ಉದ್ದಾರಕ್ಕೆ ದುಡಿದ ಹಿರಿಯರೇ ಇಲ್ಲಿನ ದೇವರು. ಸಾಂಸ್ಕೃತಿಕ ವೀರರು ಎನ್ನುವ >> ಹೆಸರಿನಲ್ಲಿ ಕರೆಯಲ್ಪಡುವ ಈ ವ್ಯಕ್ತಿಗಳು ಸಮೂಹದ ಪರವಾದ ಕೆಲಸ-ಕಾರ್ಯಗಳ ಮೂಲಕ ಗಮನ >> ಸೆಳೆದು ಪೂಜನೀಯರಾಗಿರುತ್ತಾರೆ. ಕನ್ನಡ ನಾಡಿನಲ್ಲಿ ಇಂಥ ಸಾವಿರಾರು ಜನ ಸಾಂಸ್ಕೃತಿಕ ವೀರರು >> ಬಾಳಿ ಬದುಕಿದ್ದನ್ನು ಕಾಣಬಹುದು. ಅದರಲ್ಲಿ ಮುಖ್ಯವಾಗಿ ಮಲೆಯಮಾದೇಶ್ವರ, ಮಂಟೇಸ್ವಾಮಿ, >> ಜುಂಜಪ್ಪ, ಮೈಲಾರಲಿಂಗ, ಗಾದ್ರಿ ಪಾಲನಾಯಕ, ಕುಮಾರರಾಮ, ಸೇವಾಲಾಲ, ಎಲ್ಲಮ್ಮ, ಸಿರಿ, >> ಕೋಟಿಚನ್ನಯ್ಯ ಇಂಥ ಕೆಲವೇ ಕೆಲವರು ಮಾತ್ರ ನಮ್ಮ ಲಕ್ಷ್ಯದಲ್ಲಿದ್ದಾರೆ. ಇವರಲ್ಲದೆ ಇನ್ನು >> ನೂರಾರು ಜನ ಸಾಂಸ್ಕೃತಿಕ ವೀರರ ಕಥನಗಳು ಮತ್ತು ಆಚರಣೆಗಳು ನಮ್ಮ ಸಾಂಸ್ಕೃತಿಕ ಪರಂಪರೆಯೊಳಗೆ >> ಪ್ರಚಲಿತದಲ್ಲಿವೆ. ಈ ಮಟ್ಟದ ನಾಯಕರಲ್ಲದೆ ಪ್ರತೀ ಬಳಿ, ಕುಟುಂಬಕ್ಕೂ ಹಿರಿಯರ ಪರಂಪರೆ >> ಇದ್ದು ಅವರು ತಾತ, ತಂದೆ, ಮೊದಲಾದ ನೆಲೆಗಳಲ್ಲಿ ದುಡಿದು ಶ್ರೇಷ್ಠರಾದ ಪೂಜನೀಯರಾಗಿದ್ದಾರೆ. >> ಇಲ್ಲಿ ಗಮನಿಸಬೇಕಾದ ಸಂಗತಿ ಎಂದರೆ. ಕುಟುಂಬ ಹಾಗೂ ಸಮುದಾಯಗಳ ಹಿರಿಯನ್ನು ಪೂಜೆ ಮಾಡುವ >> ಕ್ರಮಗಳು ವಿಭಿನ್ನ. ಉದಾ: ಹಿರಿಯರ ಪ್ರತಿನಿಧಿಯಾಗಿ ಕಲ್ಲು, ಕೋಲು, ಮಗೆ ಮೊದಲಾದ >> ವಸ್ತುಗಳನ್ನು ವ್ಯಕ್ತಿಗಳೆಂದು ಪರಿಭಾವಿಸಿ ಪೂಜಿಸಲಾಗುತ್ತದೆ. ಇತ್ತೀಚೆಗೆ ಛಾಯಾಚಿತ್ರಗಳ >> ರೂಪದಲ್ಲಿ ಪೂಜಿಸುವ ಪದ್ಧತಿಗಳು ಚಾಲ್ತಿಗೆ ಬರುತ್ತಿವೆ. >> ಸಹಾಯಕ್ಕೆ ಬಂದ ವಸ್ತು ಪರಿಕರಗಳು >> ಜನಪದ ಧರ್ಮದ ಆರಾಧನೆಯ ಭಾಗವಾಗಿ ಗಮನಿಸಬೇಕಾದ ಮತ್ತೊಂದು ಸಂಗತಿ ಎಂದರೆ ತನ್ನ ಬದುಕಿಗೆ >> ಸಹಕರಿಸಿದ ಸೂರ್ಯ-ಚಂದ್ರ-ಭೂಮಿ; ಭಯವನ್ನುಂಟು ಮಾಡಿದ ಹಲವಾರು ಪ್ರಕೃತಿ ವಿಕೋಪಗಳು ಇಂಥ >> ಮಹಾನ್ ಸಂಗತಿಗಳಲ್ಲದೆ ಕೃಷಿ ಮೊದಲಾದ ವಿವಿಧ ವೃತ್ತಿಯ ಜನ ಬಳಸುವ ಸಣ್ಣ ಸಣ್ಣ ಸಲಕರಣೆಗಳು >> ಕೂಡ ಪೂಜನೀಯವಾಗಿವೆ. ನೇಗಿಲು, ರಂಟೆ, ಕುಂಟೆ, ಕುಡ ಮೊದಲಾದ ವಸ್ತುಗಳಿಲ್ಲದ ರೈತ; ಕೋಲು, >> ಮಗೆಗಳಿಲ್ಲದ ಪುಶುಪಾಲಕ; ಉಳಿ, ಬೈರಿಗೆ, ಬಾಚಿ ಇಲ್ಲದ ಬಡಗಿ; ತಿಡಿ, ಬೆಂಕಿ, ಚಮ್ಮಟಿಗೆ >> ಇಲ್ಲದ ಕಮ್ಮಾರ; ಮೊರ ಕಸಬರಿಗೆ ಹೊಂದಿಲ್ಲದ ಕುಟುಂಬದ ಮಹಿಳೆಯರ ಕಾಯಕ ಅದೆಷ್ಟು ಕಷ್ಟಕರ >> ಎಂಬುದನ್ನು ಅರಿತರೆ ಇಲ್ಲಿನ ದೈವಾರಾಧನೆಯ ಸ್ವರೂಪದ ಹಿನ್ನೆಲೆ ಅರ್ಥವಾಗುತ್ತದೆ. ಹಾಗಾಗಿಯೇ >> ಪ್ರತೀಯೊಮದು ವೃತ್ತಿ ಪರಿಕರಗಳನ್ನು ದೈವ ಸ್ವರೂಪಿಯೆಂದು ಭಾವಿಸಿ ಪೂಜಿಸಿದ್ದಾನೆ. ಆ ಮೂಲಕ >> ಗೌರವಿಸಿದ್ದಾನೆ. >> ಜನಪದ ದೇವರ ವಿಶಿಷ್ಟ ಲಕ್ಷಣಗಳು >> ಕನ್ನಡ ಜನಪದ ಜೀವನದೊಳಗೆ ರೂಪುಗೊಂಡ ದೈವಗಳಲ್ಲಿ ಕಂಡು ಬರುವ ಗುಣಲಕ್ಷಣಗಳು ಹಲವಾರು. >> ಅವುಗಳಲ್ಲಿ ಪ್ರಮುಖವಾದವುಗಳೆಂದರೆ: >> ದೇವರೂ ಮನುಷ್ಯರಂತೆ ಲೌಕಿಕ ಪ್ರಾಣಿ ! : ದೇವರುಗಳು ಕೂಡ ಮನುಷ್ಯನಂತೆ ಲೌಕಿಕ >> ಭಾವನೆಗಳನ್ನು ಹೊಂದಿವೆ. ಜನಸಮುದಾಯಗಳು ದೇವರಲ್ಲಿ ಮಾಡಿಕೊಳ್ಳುವ ಹರಕೆಯ ಸ್ವರೂಪಗಳು, >> ನಡೆಸುವ ಪೂಜಾವಿಧಾನಗಳು, ಬಳಸುವ ಪೂಜಾ ಸಾಮಗ್ರಿಗಳು ಇವೇ ಮೊದಲಾದ ಸಂಗತಿಗಳನ್ನು ಗಮನಿಸಿದರೆ >> ಮೇಲಿನ ಸಂಗತಿ ಸ್ಪಷ್ಟವಾಗುತ್ತದೆ. ಮನುಷ್ಯನ ಹಸಿವು,ಆಸೆ,ಆಮಿಷೆಗಳು ದೇವರಲ್ಲ್ಲಿಯೂ >> ಇರುತ್ತದೆ ಎಂಬ ತಿಳುವಳಿಕೆಯಿಂದ ಎರಡು ಬೇಟೆ ಕಡಿತೀನಿ, ೧೦೧ ಕಾಯಿ ಹೊಡಿತೀನಿ, ಸೀರೆ >> ಉಡುಸ್ತೀನಿ, ಆಭರಣ ಮಾಡುಸ್ತೀನಿ ಇವೇ ಮೊದಲಾದ ಹರಕೆಗಳನ್ನು ಈ ಹಿನ್ನೆಲೆಯಲ್ಲಿ >> ಗಮನಿಸಬೇಕಾಗುತ್ತದೆ. ಅಷ್ಟೆ ಅಲ್ಲದೆ ಮನುಷ್ಯರಂತೆಯೇ ದೇವರುಗಳ ನಡುವೆ ಮಾನವೀಯ >> ಸಂಬಂಧಗಳು, ರಕ್ತ ಸಂಬಂಧದ ನೆಲೆಗಳು ಇರುತ್ತವೆ. ಸಾಮಾನ್ಯವಾಗಿ ದೇವರುಗಳ ಮಧ್ಯೆ >> ಗಂಡ-ಹೆಂಡತಿ, ಅಣ್ಣ-ತಮ್ಮ, ಅಣ್ಣ-ತಂಗಿ, ಅಕ್ಕ-ತಮ್ಮ ಸಂಬಂಧಗಳನ್ನು ಕಲ್ಪಿಸಿರುವುದು >> ಕಂಡುಬರುತ್ತದೆ. >> ಮುಖವಿಲ್ಲದ ದೇವರು : ಪ್ರಸ್ತುತ ಸಂದರ್ಭದಲ್ಲಿ ಶಿಷ್ಟ ಪರಂಪರೆಯ ಯಾವುದೇ ದೇವರನ್ನು >> ನೋಡಿದರೂ ಅವುಗಳಿಗೆ ಮನುಷ್ಯನ ಇಲ್ಲವೇ ಪ್ರಾಣಿಯ ಮುಖಗಳಿರುವುದನ್ನು ನೋಡಬಹುದು. >> ವಿಶೇಷವೆಂದರೆ ಮನುಷ್ಯರ ಮುಖಗಳಿರುವ ದೇವರು ಎಷ್ಟು ಶಕ್ತಿಶಾಲಿಯೆಂದು ಭಕ್ತರು >> ಭಾವಿಸುತ್ತಾರೋ ಅಷ್ಟು ಮುಖಗಳು ಅಷ್ಟು ಕೈಗಳು ಜಾಸ್ತಿಯಾಗುತ್ತವೆ. ಪ್ರಾಣಿಮುಖವಾದರೆ ಇಡೀ >> ದೇಹದ ಗಾತ್ರ ಮತ್ತು ಹಲ್ಲುಗಳು,ಉಗುರುಗಳು ಮೊದಲಾದ ಭಾಗಗಳು ಅಸಾಮಾನ್ಯ >> ಸ್ಥಿತಿಯಲ್ಲಿರುತ್ತವೆ. ಜನಪದ ಲೋಕದ ದೇವರುಗಳಿಗೆ ಈ ರೀತಿಯ ಯಾವುದೇ ಮುಖವಿರುವುದಿಲ್ಲ. >> ಮೇಲೆ ವಿವರಿಸಿದಂತೆ ಜನಪದರ ದೈವಗಳು ಒಂದು ರೀತಿಯ ಸಾಂಕೇತಿಕ ಗುರುತುಗಳು. ಉದಾಹರಣೆಗೆ ಕುಲದ >> ಹಾಗೂ ಕುಟುಂಬದ ಹಿರಿಯರನ್ನು ಪೂಜಿಸುವ ಕ್ರಮದಲ್ಲಿ ಆ ಹಿರಿಯರು ಬಳಸಿದ ಕೋಲು, ಆಭರಣ ಮತ್ತು >> ಆಯುಧ ಮತ್ಯಾವುದೋ ವಸ್ತುವಿನಲ್ಲಿ ಅವರ ರೂಪವನ್ನು ಕಂಡು ಅವುಗಳನ್ನೇ ಪೂಜಿಸುತ್ತಾರೆ. >> ಹಾಗೆಯೇ ಕುಟುಂಬದ ಹಿರಿಯರನ್ನು ಕೇವಲ ಒಂದು ಚಿಕ್ಕ ಕಲ್ಲಿನಲ್ಲಿ ಕಾಣುತ್ತಾರೆ. ಇನ್ನೂ >> ಪ್ರಕೃತಿ ಹಾಗೂ ವೃತ್ತಿಮೂಲದ ವಸ್ತುವಿಷಯಗಳು ನೇರ ಕಾಣುವ ರೂಪಗಳು. >> ಪೂಜಾರಿಗೆ ಜಾಗವಿಲ್ಲ : ಈ ವ್ಯವಸ್ಥೆಯಲ್ಲಿ ದೈವ ಮತ್ತು ಭಕ್ತರ ನಡುವೆ ಸ್ತೊತ್ರ, >> ಸ್ತುತಿ, ಪ್ರಾರ್ಥನೆಗಳ ನಿಲುವಿನ ಸಂಬಂಧವಿಲ್ಲ. ಹಾಗಾಗಿಯೇ ಜನಪದರ ದೇವರುಗಳಿಗೆ >> ಪ್ರತಿಯೊಬ್ಬ ಭಕ್ತನೂ ಕೂಡ ಒಂದರ್ಥದಲ್ಲಿ ಪೂಜಾರಿಯೇ. ವಿಶೇಷವೆಂದರೆ ಈ ವ್ಯವಸ್ಥೆಯಲ್ಲಿ ದೈವ >> ಮತ್ತು ಭಕ್ತರ ನಡುವೆ ಅರಸ-ಆಳು ರೀತಿಯ ಸಂಬಂಧಗಳಿರುವುದಿಲ್ಲ. ಅದರ ಹೊರತಾಗಿ ಇಲ್ಲಿ >> ಬಂಧುತ್ವ, ಸ್ನೇಹ ರೀತಿಯ ನಂಟು ಕಂಡುಬರುತ್ತದೆ. ಹಾಗಾಗಿಯೇ ಜನಪದರು ದೇವರಲ್ಲಿ ವರವನ್ನು >> ಬೇಡಿ ಪಡೆಯುವುದಕ್ಕಿಂತ ಒತ್ತಾಯಮಾಡಿ ಇಲ್ಲವೇ ಬೈದು ವರಪಡೆಯುವ ಕ್ರಮಗಳೇ ಹೆಚ್ಚು. ಈ ದೈವ >> ವ್ಯವಸ್ಥೆಯಲ್ಲಿ ಪುರೋಹಿತಶಾಹಿಯ ಪ್ರವೇಶವಿಲ್ಲ. ದೇವರು ಮತ್ತು ಭಕ್ತರ ನಡುವೆ ಪೂಜಾರಿಯ >> ಕೆಲಸವೇನು? ಎಂಬುದನ್ನು ಜನಪದ ಗರತಿಯೊಬ್ಬಳು ಹೀಗೆ ಪ್ರಶ್ನಿಸುತ್ತಾಳೆ : >> ದೇವರಿಗೆ ಬಂದೀನಿ ದಾರಿ ಬಿಡು ಪೂಜಾರಿ| >> ದೇವರಿಗೆ ನನಗೆ ಒಳಮಾತ | ಮೈಲಾರ ಲಿಂಗನ| >> ಠಾವಿಗೋಗಿ ಕೈಯ ಮುಗಿದೇನ|| >> ಜಂಗಮ ಸ್ವರೂಪಿ ದೇವರು ಮತ್ತು ಗುಡಿಗಳು : ಜನಪದ ದೇವರುಗಳಲ್ಲಿ ಹಲವು ದೇವರಿಗೆ ಗುಡಿಗಳೇ >> ಇಲ್ಲ. ಕೆಲವು ದೇವರಿಗೆ ಗುಡಿಗಳಿವೆ ಆದರೆ ಆ ಗುಡಿಗಳು ನಮ್ಮ ಶಿಷ್ಟ ಪರಂಪರೆಯ ದೇವರುಗಳ >> ಗುಡಿಗಳಂತೆ ನಿಂತ ಕಟ್ಟಡದ ಸ್ಮಾರಕಗಳಲ್ಲ. ಗುಡಿಗಳನ್ನು ಹೊಂದಿರದ ದೇವರುಗಳಿಗೆ ಸ್ವತಃ >> ಅಸ್ತಿತ್ವವಿಲ್ಲ. ಮನೆಯಲ್ಲಿರುವ ಮಗೆ ಮತ್ತು ಕೋಲು ಸಮಯ ಬಂದಾಗ ದೇವರಾಗಿ ನಂತರ ದಿನನಿತ್ಯದ >> ಉಪಯೋಗಕ್ಕೆ ಬಳಕೆಯಾಗುತ್ತವೆ. ಇನ್ನು ಸಗಣಿ ಸೂಕ್ತ ಸಂದರ್ಭಕ್ಕೆ ಗಣಪನಾಗಿ ನಂತರ ಒಲೆಗಿಡುವ >> ಬೆರಣಿಯಾಗುತ್ತದೆ. ಹಾಗೆಯೇ ಹೊನ್ನಾರು ಹೂಡುವ ರೈತನಿಗೆ ಅಲ್ಲೇ ಇರುವ ಕಲ್ಲು ಇದಕ್ಕಿದ್ದಂತೆ >> ದೇವರಾಗಿ ಪೂಜೆ ಮುಗಿದ ನಂತರ ಮತ್ತೆ ಅಲ್ಲೇ ಮಣ್ಣಲ್ಲಿ ಬೆರತು ಹೋಗುತ್ತದೆ. >> ಗುಡಿಗಳನ್ನು ಹೊಂದಿರುವ ಕೆಲವಾರು ದೇವರ ಗುಡಿಗಳು ದೇವರಿಗೆ ಇಲ್ಲಿ ನಿರ್ಮಾಣವಾಗಿರುವ >> ಗುಡಿಗಳು ಇದ್ದರೂ ಇವು ಚಲಿಸುವ ಜಂಗಮ ಸ್ವರೂಪಿಯಾದವು. ಬಹುತೇಕ ಜನಪದ ದೈವಗಳ ನೆಲೆಗಳು ಮರದ >> ನೆರಳು, ಮೂರು ಬಂಡೆಗಲ್ಲುಗಳಿಂದ ಕಟ್ಟಿದ ಗುಡಿಯಲ್ಲಿ, ಬಹಳವೆಂದರೆ ಸಮಯ ಸಂದರ್ಭಕ್ಕೆ >> ಅನುಗುಣವಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಬಹುದಾದ ಮರ ಮತ್ತು >> ಹುಲ್ಲಿನಿಂದ ಸೃಷ್ಟಿಸಿದ ಸುತ್ತು ಗುಡಿಸಲುಗಳಿರುತ್ತವೆ. >> ಜನಪದ ದೇವರ ಮಿತಿಗಳು >> ಈ ಸ್ವರೂಪದ ಜನಪದ ದೈವ ವ್ಯವಸ್ಥೆಯಲ್ಲಿ ದೋಷಗಳೇನು ಇಲ್ಲ ಎಂದರೆ ಒಂದು ಮುಖದ ಸತ್ಯವನ್ನು >> ಮಾತ್ರ ಹೇಳಿದಂತಾಗುತ್ತದೆ. ಹಾಗಾಗಿ ಇಲ್ಲಿರುವ ದೋಷಗಳನ್ನು ಗುರುತಿಸಿಕೊಳ್ಳುವ ಪ್ರಯತ್ನಗಳು >> ನಡೆಯಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ನೋಡಿದಾಗ ಜನಪದರ ದೈವ ಕಲ್ಪನೆಯಲ್ಲಿ ಕಂಡು ಬರುವ >> ಕೆಲವು ಮಿತಿಗಳನ್ನು ಹೀಗೆ ಗುರುತಿಸಬಹುದು >> ೧. ಎಲ್ಲ ಸಮಸ್ಯೆಗಳಿಗೂ ದೇವರೇ ಕಾರಣವೆಂಬ ದೃಢವಾದ ನಂಬಿಕೆಯಿಂದ ಜನಪದ ಸಮುದಾಯಗಳು >> ಮೂಢನಂಬಿಕೆಯ ಕಡೆಗೆ ನಡೆದದ್ದು, ತಮ್ಮ ಪೂರ್ವಿಕರ ಮೂಲ ಉದ್ದೇಶಗಳನ್ನು ಮರೆತು ಕುರುಡು >> ಆಚರಣೆಗಾರರಾಗಿ ರೂಪುಗೊಂಡಿದ್ದು( ಕಾರ್ಯಾಕಾರಣ ಸಂಬಂಧಗಳ ತಿಳಿವಿಲ್ಲದೆ ನಡೆಸಿದ ಆಚರಣೆಗಳು) >> ಉದಾ: ಉಪಯೋಗಕ್ಕಿಲ್ಲದ ವಸ್ತುಗಳನ್ನು ಪುಜಿಸಿದ್ದು- ಮೊರದ ಪೂಜೆ, >> ೨. ಜನಪದರ ದೇವರ ಬಗೆಗಿನ ದೃಢವಾದ ನಂಬಿಕೆಗಳು ಸಮಾಜದ ಪಟ್ಟಭದ್ರ ಹಿತಾಸಕ್ತಿಗಳು ತಮ್ಮ >> ಸ್ವ ಇಚ್ಛೆಗಳನ್ನು ಪೂರೈಸಿಕೊಳ್ಳಲು ಅನವುಮಡಿಕೊಟ್ಟದ್ದು ( ದೇವದಾಸಿ ಪದ್ಧತಿ, >> ಬೆತ್ತಲೆಸೇವೆ ಇತ್ಯಾದಿ) >> ೩. ದೈವ ಸಂಬಂಧೀ ಆಚರಣೆಗಳು ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಲು ಅಡ್ಡಿಯಾಗಿದ್ದು >> ಇಂಥ ಮಿತಿಗಳನ್ನು ದಾಟುವುದಾದರೆ ನಮ್ಮ ಪಾರಂಪರಿಕ ದೈವ ಕಲ್ಪನೆ ಅನುಕರಣಾ ಯೋಗ್ಯವಾದುದು. >> ಹಾಗೂ ಈಗಿನ ಸಂಕಷ್ಟದ ಕಾಲಕ್ಕೆ ಸಮರ್ಥವಾದ ಪರ್ಯಾಯ ವ್ಯವಸ್ಥೆಯೂ ಆಗುವುದರಲ್ಲಿ >> ಅನುಮಾನವಿಲ್ಲ >> >> -- >> *For doubts on Ubuntu and other public software, visit >> http://karnatakaeducation.org.in/KOER/en/index.php/Frequently_Asked_Questions >> >> **Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Public_Software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> ***If a teacher wants to join STF-read >> http://karnatakaeducation.org.in/KOER/en/index.php/Become_a_STF_groups_member >> --- >> You received this message because you are subscribed to the Google Groups >> "SocialScience STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/socialsciencestf. >> To view this discussion on the web visit >> https://groups.google.com/d/msgid/socialsciencestf/CAJCvfyXcASuX-jRLNKK6P2xFd4AMUpuTOLKj4DGw2Yky%3D_NkRQ%40mail.gmail.com >> <https://groups.google.com/d/msgid/socialsciencestf/CAJCvfyXcASuX-jRLNKK6P2xFd4AMUpuTOLKj4DGw2Yky%3D_NkRQ%40mail.gmail.com?utm_medium=email&utm_source=footer> >> . >> For more options, visit https://groups.google.com/d/optout. >> > > -- > *For doubts on Ubuntu and other public software, visit > http://karnatakaeducation.org.in/KOER/en/index.php/Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read > http://karnatakaeducation.org.in/KOER/en/index.php/Become_a_STF_groups_member > --- > You received this message because you are subscribed to the Google Groups > "SocialScience STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/socialsciencestf. > To view this discussion on the web visit > https://groups.google.com/d/msgid/socialsciencestf/CABtYOUV5VMwvu41TuLCuA62mBg9hNQx0LYg-W6DqZW2EjbR8OQ%40mail.gmail.com > <https://groups.google.com/d/msgid/socialsciencestf/CABtYOUV5VMwvu41TuLCuA62mBg9hNQx0LYg-W6DqZW2EjbR8OQ%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/CACwGsz4VLJSi9fjk%3DLggfx9cob-J9%3DMHBsp%3Dp%3DTo%3DFPtMAzC5g%40mail.gmail.com. For more options, visit https://groups.google.com/d/optout.
