ಮೀಸಲಾತಿ ನೀಡಿದರೆ ನಮ್ಮ ಸಂವಿಧಾನದ ಉಲ್ಲಂಘನೆ ಅಲ್ವಾ ಸರ್... ಸಂವಿಧಾನದಲ್ಲೆ ಹೇಳಿದ್ದಾರೆ ಎಲ್ಲರೂ ಸಮಾನರು ಉದ್ಯೋಗ ಪಡೆಯಲು ಸಮಾನ ಅವಕಾಶ ಇದೆ ಅಂತೆಲ್ಲಾ ಆದರೆ ಇಗ ಆಗ್ತಾ ಇರುವುದು ಏನು ಈ ಮೀಸಲಾತಿ ಇಂದ On 2 Jul 2016 06:16, "Siddaramappa s m Sri" <[email protected]> wrote:
> ಮೀಸಲಾತಿ: ಅಸಹನೆ,ಆತ್ಮವಂಚನೆ > 30 Jun, 2016ಎಚ್.ಕೆ.ಶರತ್ > > ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬೋಧಿಸುವ ಅಧ್ಯಾಪಕರಿಗೆಂದೇ ಇತ್ತೀಚೆಗೆ > ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ, ಪ್ರತಿಯೊಬ್ಬರೂ ಯಾವುದಾದರೂ ಸಾಮಾಜಿಕ ವಿಷಯದ > ಕುರಿತು ಐದು ನಿಮಿಷ ಮಾತನಾಡಬೇಕೆಂದು ಸೂಚಿಸಲಾಯಿತು. ಬಡತನ, ಖಾಸಗೀಕರಣ, ನಿರುದ್ಯೋಗ ಹೀಗೆ > ತಮಗೆ ಸೂಕ್ತವೆನಿಸಿದ ವಿಷಯ ಆಯ್ದುಕೊಂಡು ಎಲ್ಲರೂ ಮಾತನಾಡಿದರು. > > ನಿರುದ್ಯೋಗ ಸಮಸ್ಯೆ ಬಗ್ಗೆ ಮಾತನಾಡಿದ ಅಧ್ಯಾಪಕರೊಬ್ಬರು, ‘ನಿರುದ್ಯೋಗ ಸಮಸ್ಯೆಗೆ > ಮೀಸಲಾತಿಯೇ ಮುಖ್ಯ ಕಾರಣ. ಮೀಸಲಾತಿಯಿಂದಾಗಿ ಅರ್ಹರಿಗೆ ಉದ್ಯೋಗ ಸಿಗುತ್ತಿಲ್ಲ. > ಉದ್ಯೋಗದಲ್ಲಿ ಮೀಸಲಾತಿ ಕಿತ್ತೊಗೆಯಬೇಕು’ ಎಂದು ಗುಡುಗಿದರು. ಅವರ ಮಾತಿಗೆ ಅಲ್ಲಿ > ನೆರೆದಿದ್ದ ಬಹುತೇಕ ಅಧ್ಯಾಪಕರು ತಲೆದೂಗುವ ಮೂಲಕ ತಮ್ಮ ಸಹಮತ ವ್ಯಕ್ತಪಡಿಸಿದರು. > ಅಧ್ಯಾಪಕರು ವಿಚಾರ ಮಂಡಿಸುವ ಶೈಲಿಯನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದ ಸಂಪನ್ಮೂಲ > ವ್ಯಕ್ತಿ, ‘ಮೀಸಲಾತಿಯಂತಹ ಸೂಕ್ಷ್ಮ ವಿಚಾರಗಳ ಕುರಿತು ಸಾರ್ವಜನಿಕವಾಗಿ ಮಾತನಾಡುವಾಗ ತುಂಬಾ > ಎಚ್ಚರದಿಂದಿರಬೇಕು. ಇಲ್ಲೇನೊ ನಾವು ನಾವೇ ಇದ್ದೀವಿ ಪರವಾಗಿಲ್ಲ. ಆದ್ರೆ ಬೇರೆ ಕಡೆ ಈ ರೀತಿ > ಮಾತಾಡಿದ್ರೆ ನೀವು ಸಮಸ್ಯೆಗೆ ಸಿಲುಕಿಕೊಳ್ತೀರಿ’ ಎಂದು ಹೇಳಿ, ಎಚ್ಚರಿಕೆ ರೂಪದ ಸಲಹೆ > ನೀಡಿದರು. ಕೊನೆಗೆ ‘enough is enough ಅಲ್ವಾ... ಇದುವರೆಗೂ ಕೊಟ್ಟಾಗಿದೆ. ಇನ್ನು > ಮುಂದೆನೂ ಕೊಡ್ಬೇಕಾ?’ ಎಂದು ಸೇರಿಸಿದರು. > > ಅಸ್ಪೃಶ್ಯತೆ, ಸಾಮಾಜಿಕ ಬಹಿಷ್ಕಾರದಂತಹ ವಿದ್ಯಮಾನಗಳಿಂದ ಹಿಡಿದು ನಿರುದ್ಯೋಗ, ಬಡತನಕ್ಕೂ > ಮೀಸಲಾತಿಯೇ ಕಾರಣವೆಂದು ದೂಷಿಸುತ್ತ, ಇಂದಿಗೂ ನಾನಾ ನಮೂನೆಯಲ್ಲಿ ಜೀವಂತವಾಗಿರುವ ಜಾತಿ > ಆಧಾರಿತ ಸಾಮಾಜಿಕ ತಾರತಮ್ಯದ ಪರ ಹಲವರು ವಕಾಲತ್ತು ವಹಿಸುವುದನ್ನು ಕಾಣಬಹುದು. > > ಮೀಸಲಾತಿಯ ಉದ್ದೇಶ ಬಡತನ ನಿರ್ಮೂಲನೆ ಎಂದೇ ಭಾವಿಸಿರುವ ಕೆಲವರು ಸಾಮಾನ್ಯ ವರ್ಗದಡಿ ಬರುವ > ಜಾತಿಗಳಲ್ಲೂ ಬಡವರಿಲ್ಲವೇ ಎಂದು ಆಗಾಗ ಪ್ರಶ್ನಿಸುತ್ತಿರುತ್ತಾರೆ. ಹಿಂದೆ ನಮ್ಮ ಹಿರಿಯರು > ಮಾಡಿದ ತಪ್ಪಿಗೆ ನಾವಿನ್ನೂ ಎಷ್ಟು ಕಾಲ ಶಿಕ್ಷೆ ಅನುಭವಿಸಬೇಕು ಎನ್ನುವ ಧಾಟಿಯಲ್ಲಿ ಅಳಲು > ತೋಡಿಕೊಳ್ಳುವವರ ಸಂಖ್ಯೆ ಸಹ ಕಡಿಮೆ ಏನಿಲ್ಲ. ಮೀಸಲಾತಿ ಇರುವವರೆಗೂ ಜಾತಿ > ವಿನಾಶವಾಗುವುದಿಲ್ಲ, ಕೆಳ ಜಾತಿಯವರ ಬಗೆಗಿನ ತಮ್ಮ ಅಸಹನೆಗೆ ಮೀಸಲಾತಿಯೇ ಪ್ರಮುಖ ಕಾರಣಎಂಬ > ವಾದವನ್ನು ಕೆಲವರು ಮಂಡಿಸುತ್ತಿರುತ್ತಾರೆ. > > ಕಣ್ಣೆದುರಿನ ವಾಸ್ತವಗಳಿಗೆ ಬೆನ್ನು ತೋರಿದವರಷ್ಟೇ ಹೀಗೆಲ್ಲ ಮಾತನಾಡಲು ಸಾಧ್ಯವೇನೊ? ಬಾಳ > ಸಂಗಾತಿ ಆರಿಸಿಕೊಳ್ಳಲು, ಬಾಡಿಗೆಗೆ ಮನೆ ನೀಡಲು ಯಾವುದೇ ಮೀಸಲಾತಿಯ ಒತ್ತಡವಿಲ್ಲದಿದ್ದರೂ > ಏಕೆ ಬಹುತೇಕ ಮಂದಿ ತಮ್ಮ ಜಾತಿಯವರಿಗಷ್ಟೇ ಆದ್ಯತೆ ನೀಡುತ್ತಾರೆಂಬ ಸರಳ ಪ್ರಶ್ನೆ > ಎದುರಿಟ್ಟುಕೊಂಡು ಪರಿಶೀಲಿಸಿದರೂ ಸಾಕು, ಜಾತಿಯ ವಿಷ ವರ್ತುಲ ಎಷ್ಟು ಪ್ರಬಲವಾಗಿದೆ ಎಂಬುದು > ಮನದಟ್ಟಾಗುತ್ತದೆ. > ಪದವಿಗೆ ಪ್ರವೇಶ ಪಡೆಯುವ ಕಾಲಘಟ್ಟದಲ್ಲಿ ಮೀಸಲಾತಿಯಿಂದ ತಾವು ಅವಕಾಶ > ವಂಚಿತರಾಗುತ್ತಿದ್ದೇವೆ ಎನ್ನುವ ಅನಿಸಿಕೆ ಮೇಲ್ವರ್ಗದ ವಿದ್ಯಾರ್ಥಿಗಳಲ್ಲಿ ಅನಾಯಾಸವಾಗಿ > ಬೇರೂರಲಾರಂಭಿಸಿರುವುದನ್ನು ನಾವೆಲ್ಲ ಗಮನಿಸಬಹುದು. ಉದಾಹರಣೆಗೆ, ಸಿಇಟಿ ಮೂಲಕ > ಎಂಜಿನಿಯರಿಂಗ್, ಮೆಡಿಕಲ್ ಸೀಟುಗಳನ್ನು ಹಂಚುವ ಪ್ರಕ್ರಿಯೆಯನ್ನು ಪರಿಗಣಿಸಬಹುದು. > ‘ನಲ್ವತ್ತು ಐವತ್ತು ಸಾವಿರ ರ್ಯಾಂಕ್ ಗಳಿಸಿದ್ರೂ ಅವ್ರಿಗೆ ಒಳ್ಳೆ ಕಾಲೇಜ್ನಲ್ಲಿ ಸೀಟು > ಸಿಗುತ್ತೆ. ನಮ್ಮ ರ್ಯಾಂಕ್ ಹತ್ತು ಸಾವಿರದೊಳಗಿದ್ರೂ ಬೇಕಾದ ಕಡೆ ಸೀಟು ದಕ್ಕುವುದಿಲ್ಲ. > ನಮ್ಮ ಪ್ರತಿಭೆಗೆ ಬೆಲೆ ಇಲ್ವಾ?’ ಎಂದು ವಿದ್ಯಾರ್ಥಿಗಳು ಪ್ರಶ್ನಿಸುವುದನ್ನು > ಗಮನಿಸಿದ್ದೇನೆ. ಉತ್ತಮ ರ್ಯಾಂಕ್ ಗಳಿಸಿಯೂ ಬಯಸಿದ ಸೀಟು ಸಿಗದಿರುವುದಕ್ಕೆ ಮೀಸಲಾತಿಯೇ > ಕಾರಣವೆಂದು ದೂಷಿಸುವವರು, ಹಣವುಳ್ಳವರಿಗೆಂದೇ ಮೀಸಲಾಗುವ ಮ್ಯಾನೇಜ್ಮೆಂಟ್ ಕೋಟಾದೆಡೆಗೆ > ಅದೇಕೊ ಅಸಹನೆ ತೋರುವುದಿಲ್ಲ. ತೋರಿದರೂ ಅದರ ತೀವ್ರತೆ ಮೀಸಲಾತಿಯೆಡೆಗಿನ ಅಸಹನೆಯಷ್ಟು > ತೀವ್ರವಾಗಿರುವುದಿಲ್ಲ. > > ಪ್ರತಿ ಬಾರಿ ಪಿಯುಸಿ ಮತ್ತು ಸಿಇಟಿ ಫಲಿತಾಂಶ ಹೊರಬಿದ್ದ ನಂತರ ನಡೆಯುವ ಸರ್ಕಾರ ಮತ್ತು > ಖಾಸಗಿ ಕಾಲೇಜುಗಳ ಒಕ್ಕೂಟದ ನಡುವಿನ ಮಾತುಕತೆ ಅಂತಿಮವಾಗಿ ಶುಲ್ಕ ಹೆಚ್ಚಳ, ಸರ್ಕಾರಿ > ಕೋಟಾದಡಿಯ ಸೀಟುಗಳ ಕಡಿತದೊಂದಿಗೆ ಮುಗಿಯುವುದಿಲ್ಲವೇ? ತಮ್ಮ ಪ್ರತಿಭೆಗೆ ಮನ್ನಣೆ > ದೊರೆಯದಿರುವುದಕ್ಕೆ ಜಾತಿ ಆಧಾರಿತ ಮೀಸಲಾತಿಯ ಬದಲಾಗಿ ಹಣವಂತರಿಗೆ ಸೀಟುಗಳು > ಮೀಸಲಾಗುತ್ತಿರುವುದೇ ಮುಖ್ಯ ಕಾರಣವೆಂಬುದು ಸರ್ಕಾರ ಮತ್ತು ಖಾಸಗಿ ಕಾಲೇಜುಗಳ ಒಕ್ಕೂಟದ > ನಡುವೆ ನಡೆದುಕೊಂಡು ಬರುತ್ತಿರುವ ಒಪ್ಪಂದವನ್ನು ಪರಿಶೀಲಿಸಿದರೆ ತಿಳಿಯುತ್ತದೆ. ಆದರೂ > ಮೇಲ್ವರ್ಗದವರ ಅಸಹನೆ ಮತ್ತೆ ಜಾತಿ ಆಧಾರಿತ ಮೀಸಲಾತಿಯತ್ತಲೇ ಕೇಂದ್ರೀಕೃತವಾಗುವುದು ಏನನ್ನು > ಸೂಚಿಸುತ್ತದೆ? ನಮ್ಮೊಳಗಿನ್ನೂ ಬೇರೂರಿರುವ ಜಾತಿ ಪ್ರಜ್ಞೆಯೇ > ಈ ಜಾಣಕುರುಡುತನಕ್ಕೆ ಕಾರಣವಲ್ಲವೇ? > > ಮೀಸಲಾತಿಯಿಂದ ತಮಗೆ ಆಗುತ್ತಿರುವ ಅನ್ಯಾಯ ಕೊನೆಗಾಣಿಸಲು ಮೀಸಲಾತಿ ಕಿತ್ತೊಗೆಯಬೇಕು ಅಥವಾ > ಖಾಸಗೀಕರಣಕ್ಕೆ ಆದ್ಯತೆ ನೀಡಬೇಕೆಂಬ ನಿಲುವನ್ನು ಹಲವರು ಹೊಂದಿದ್ದಾರೆ. ಮೀಸಲಾತಿ > ಜಾರಿಯಲ್ಲಿರದ ಖಾಸಗಿ ವಲಯದಲ್ಲಿ ಪ್ರತಿಭೆಗಷ್ಟೇ ಮೊದಲ ಮನ್ನಣೆ ಎಂಬ ಗ್ರಹಿಕೆ ಪ್ರಬಲವಾಗಿಯೇ > ಬೇರೂರಿದೆ. ಉದ್ಯೋಗ ದಕ್ಕಿಸಿಕೊಳ್ಳಲು ಬೇಕಾದ ‘ರೆಫರೆನ್ಸ್’ ಕೂಡ ಒಂದು ರೀತಿಯ ಮೀಸಲಾತಿಯೇ > ಎಂಬುದನ್ನು ಒಪ್ಪಲು ನಾವು ಸಿದ್ಧರಿದ್ದೇವೆಯೇ? ಮಿಕ್ಕೆಲ್ಲ ಅರ್ಹತೆಗಳಿಗಿಂತಲೂ ಉದ್ಯೋಗ > ಪಡೆಯಲು ‘ರೆಫರೆನ್ಸ್’ ಮುಖ್ಯವಾಗುವುದು ನಮ್ಮ ಅರಿವಿಗೆ ಬಂದಿಲ್ಲವೇ? ಈ ‘ರೆಫರೆನ್ಸ್’ > ದಕ್ಕಿಸಿಕೊಳ್ಳಲು ಯಾರಿಗೆ ಸಾಧ್ಯವೆಂಬ ಸರಳ ಅಂಶ ಮುಂದಿಟ್ಟುಕೊಂಡು ನೋಡಿದರೂ ಖಾಸಗಿ > ವಲಯದಲ್ಲಿ ಜಾತಿ ಆಧಾರಿತ ಮೀಸಲಾತಿ ಜಾರಿಗೆ ಬರಬೇಕೆಂಬ ಕೂಗು ಏಕೆ ಪ್ರಬಲವಾಗುತ್ತಿದೆ > ಎಂಬುದು ಅರಿವಾಗುತ್ತದೆ. > > ಮೀಸಲಾತಿಯ ದುರ್ಬಳಕೆಯಾಗುತ್ತಿದೆ, ಎಲ್ಲಾ ಜಾತಿಯ ಬಡವರಿಗೂ ಮೀಸಲಾತಿ ದೊರೆಯಲಿ ಎಂಬುದು > ಕೆಲವರ ನಿಲುವು. ಆದರೆ ಈ ದುರ್ಬಳಕೆ ಕೆಳ ಜಾತಿಯಲ್ಲಷ್ಟೇ ಇರುವುದೇ? ಮೀಸಲಾತಿ ದೊರೆತರೂ ಅದು > ಯಾವುದಕ್ಕೂ ಸಾಲದೆಂಬ ಕಾರಣಕ್ಕಾಗಿಯೇ ಅದರ ವಿರುದ್ಧ ದನಿ ಎತ್ತುವ ಕೆಲ ಪ್ರಬಲ ಜಾತಿಯವರು > ಕೂಡ ಅತ್ಯಲ್ಪ ಆದಾಯ ತೋರುವ ಪ್ರಮಾಣಪತ್ರಗಳನ್ನು ಮಾಡಿಸಿಕೊಂಡು ತಮ್ಮದೇ ಸಮುದಾಯದ ಅರ್ಹರಿಗೆ > ದೊರೆಯಬೇಕಾದ ಸೌಲಭ್ಯಗಳನ್ನು ಕಬಳಿಸುವುದಿಲ್ಲವೇ? > > ಮೀಸಲಾತಿ ಕುರಿತು ಅಪಸ್ವರ ಎತ್ತಲು ಸಿಗುವ ಸಣ್ಣ ಅವಕಾಶವನ್ನೂ ಬಿಡಬಾರದೆಂಬ ಮನೋಭಾವ > ಮೈಗೂಡಿಸಿಕೊಂಡವರಿಗೆ, ಕಣ್ಣೆದುರಿನ ವಾಸ್ತವವೇ ಭ್ರಮೆಯಂತೆ ತೋರುತ್ತಿರುವುದು ವಿಪರ್ಯಾಸ. > ಆತ್ಮವಿಮರ್ಶೆಯ ಸ್ಥಾನದಲ್ಲಿ ಆತ್ಮವಂಚನೆ ಆಸೀನವಾಗಿರುವಾಗ ಅಸಹನೆ ಹೊರಹೊಮ್ಮದೆ ಇರುವುದೇ? > > [email protected] > ಸಿದ್ದರಾಮಪ್ಪ. ಎಸ್.ಎಂ > ಸಶಿ ಕಲಾ > ಸರ್ಕಾರಿ ಪ್ರೌಢ ಶಾಲೆ > ಗಂಜಿಗೆರೆ. ಕೆ ಆರ್ ಪೇಟೆ ತಾ|| > ಮಂಡ್ಯ ಜಿಲ್ಲೆ > > -- > *For doubts on Ubuntu and other public software, visit > http://karnatakaeducation.org.in/KOER/en/index.php/Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read > http://karnatakaeducation.org.in/KOER/en/index.php/Become_a_STF_groups_member > --- > You received this message because you are subscribed to the Google Groups > "SocialScience STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/socialsciencestf. > To view this discussion on the web visit > https://groups.google.com/d/msgid/socialsciencestf/CAJCvfyW51WcVDwgzRs2FGOejNfXpvOkad_XUzWROJuTqs9OAOQ%40mail.gmail.com > <https://groups.google.com/d/msgid/socialsciencestf/CAJCvfyW51WcVDwgzRs2FGOejNfXpvOkad_XUzWROJuTqs9OAOQ%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/CALWUL%3D4AT_isv9cj%2BVsLa4cbGS19hFFUqOovNpOF6SfFwWYDqA%40mail.gmail.com. For more options, visit https://groups.google.com/d/optout.
