*ಸಿದ್ರಾಮಪ್ಪ ಸರ್ * *ತುಂಬಾ ಒಳ್ಳೆಯ ವಿಮರ್ಶಾತ್ಮಕ ಲೇಖನ ಸರ್*
*ನಿಮ್ಮ ಕೊನೆಯ ಮಾತು* * " ಮೀಸಲಾತಿ ಕುರಿತು ಅಪಸ್ವರ ಎತ್ತಲು ಸಿಗುವ ಸಣ್ಣ ಅವಕಾಶವನ್ನೂ ಬಿಡಬಾರದೆಂಬ ಮನೋಭಾವ ಮೈಗೂಡಿಸಿಕೊಂಡವರಿಗೆ, ಕಣ್ಣೆದುರಿನ ವಾಸ್ತವವೇ ಭ್ರಮೆಯಂತೆ ತೋರುತ್ತಿರುವುದು ವಿಪರ್ಯಾಸ. ಆತ್ಮವಿಮರ್ಶೆಯ ಸ್ಥಾನದ*ಲ್ಲಿ *ಆತ್ಮವಂಚನೆ ಆಸೀನವಾಗಿರುವಾಗ ಅಸಹನೆ ಹೊರಹೊಮ್ಮದೆ ಇರುವುದೇ?* " *ಅಸಹಿಷ್ಣತೆ ಎಲ್ಲಿದೆ ಎಂದು ತುಂಬಾ ಜನ ಪ್ರಶ್ನಿಸಿದ್ದರು "???????"* *ಸಂವಿದಾನದ ರಾಜ್ಯ ನಿರ್ದೇಶಕ ತತ್ವಗಳಲ್ಲಿ ಸರ್ಕಾರದ ಜವಾಬ್ದಾರಿ ಏನು ಎಂದು ಹೇಳಿದೆ ಮೀಸಲಾತಿ ವಿರೋಧಿಸುಸುವವರು ಅದನ್ನು ಓದಬೇಕು?* * ಸಿದ್ದರಾಮಪ್ಪ ಸರ್ * *ಎರಡು ವರ್ಗದ ಜನ ಇದ್ದಾರೆ* *1. ಮೂಲಭೂತವಾದಿಗಳು - ಇವರು ಏನೇ ಸಿಗುವಂತಿದ್ದರೂ ಅದು ಅವರಿಗೆ ಸಿಗಬೇಕು , ಬೇರೆಯವರಿಗೆ ಸಿಕ್ಕರೆ ಅದಕ್ಕೆ ವಿರೋಧ, ಅವರೇ ಮೀಸಲಾತಿಯ ಸವಲತ್ತು ಪಡೆದಿರುತ್ತಾರೆ. ಬೇರೆಯವರಿಗೆ ನೀಡಬಾರದೆಂದು ವಿರೋಧಿಸುತ್ತಾರೆ* * ಉ.ದಾ. ಎಲ್ಲಾ ವರ್ಗದವರಿಗೂ ವಿದ್ಯಾರ್ಥಿ ವೇತನದ ಅವಕಾಶ ವಿದೆ ಆದರೆ, SC,ST, ವಿದ್ಯಾರ್ಥಿವೇತನಕ್ಕೆ ವಿರೋಧಿಸುವುದು. * *2. ವಿಚಾರವಾದಿಗಳು - ಎಲ್ಲರಿಗೂ ಎಲ್ಲವೂ ಸಿಗಲಿ ಎಂದು ಹೋರಾಡುವವರು. ಉ.ದಾ. ಶಾಲೆಯ ಎಲ್ಲಾವಿದ್ಯಾರ್ಥಿಗಳಿಗೆ * 2016-07-02 13:31 GMT+05:30 Druva H <[email protected]>: > druvah111 > On 2 Jul 2016 06:16, "Siddaramappa s m Sri" <[email protected]> wrote: > >> ಮೀಸಲಾತಿ: ಅಸಹನೆ,ಆತ್ಮವಂಚನೆ >> 30 Jun, 2016ಎಚ್.ಕೆ.ಶರತ್ >> >> ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬೋಧಿಸುವ ಅಧ್ಯಾಪಕರಿಗೆಂದೇ ಇತ್ತೀಚೆಗೆ >> ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ, ಪ್ರತಿಯೊಬ್ಬರೂ ಯಾವುದಾದರೂ ಸಾಮಾಜಿಕ ವಿಷಯದ >> ಕುರಿತು ಐದು ನಿಮಿಷ ಮಾತನಾಡಬೇಕೆಂದು ಸೂಚಿಸಲಾಯಿತು. ಬಡತನ, ಖಾಸಗೀಕರಣ, ನಿರುದ್ಯೋಗ ಹೀಗೆ >> ತಮಗೆ ಸೂಕ್ತವೆನಿಸಿದ ವಿಷಯ ಆಯ್ದುಕೊಂಡು ಎಲ್ಲರೂ ಮಾತನಾಡಿದರು. >> >> ನಿರುದ್ಯೋಗ ಸಮಸ್ಯೆ ಬಗ್ಗೆ ಮಾತನಾಡಿದ ಅಧ್ಯಾಪಕರೊಬ್ಬರು, ‘ನಿರುದ್ಯೋಗ ಸಮಸ್ಯೆಗೆ >> ಮೀಸಲಾತಿಯೇ ಮುಖ್ಯ ಕಾರಣ. ಮೀಸಲಾತಿಯಿಂದಾಗಿ ಅರ್ಹರಿಗೆ ಉದ್ಯೋಗ ಸಿಗುತ್ತಿಲ್ಲ. >> ಉದ್ಯೋಗದಲ್ಲಿ ಮೀಸಲಾತಿ ಕಿತ್ತೊಗೆಯಬೇಕು’ ಎಂದು ಗುಡುಗಿದರು. ಅವರ ಮಾತಿಗೆ ಅಲ್ಲಿ >> ನೆರೆದಿದ್ದ ಬಹುತೇಕ ಅಧ್ಯಾಪಕರು ತಲೆದೂಗುವ ಮೂಲಕ ತಮ್ಮ ಸಹಮತ ವ್ಯಕ್ತಪಡಿಸಿದರು. >> ಅಧ್ಯಾಪಕರು ವಿಚಾರ ಮಂಡಿಸುವ ಶೈಲಿಯನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದ ಸಂಪನ್ಮೂಲ >> ವ್ಯಕ್ತಿ, ‘ಮೀಸಲಾತಿಯಂತಹ ಸೂಕ್ಷ್ಮ ವಿಚಾರಗಳ ಕುರಿತು ಸಾರ್ವಜನಿಕವಾಗಿ ಮಾತನಾಡುವಾಗ ತುಂಬಾ >> ಎಚ್ಚರದಿಂದಿರಬೇಕು. ಇಲ್ಲೇನೊ ನಾವು ನಾವೇ ಇದ್ದೀವಿ ಪರವಾಗಿಲ್ಲ. ಆದ್ರೆ ಬೇರೆ ಕಡೆ ಈ ರೀತಿ >> ಮಾತಾಡಿದ್ರೆ ನೀವು ಸಮಸ್ಯೆಗೆ ಸಿಲುಕಿಕೊಳ್ತೀರಿ’ ಎಂದು ಹೇಳಿ, ಎಚ್ಚರಿಕೆ ರೂಪದ ಸಲಹೆ >> ನೀಡಿದರು. ಕೊನೆಗೆ ‘enough is enough ಅಲ್ವಾ... ಇದುವರೆಗೂ ಕೊಟ್ಟಾಗಿದೆ. ಇನ್ನು >> ಮುಂದೆನೂ ಕೊಡ್ಬೇಕಾ?’ ಎಂದು ಸೇರಿಸಿದರು. >> >> ಅಸ್ಪೃಶ್ಯತೆ, ಸಾಮಾಜಿಕ ಬಹಿಷ್ಕಾರದಂತಹ ವಿದ್ಯಮಾನಗಳಿಂದ ಹಿಡಿದು ನಿರುದ್ಯೋಗ, ಬಡತನಕ್ಕೂ >> ಮೀಸಲಾತಿಯೇ ಕಾರಣವೆಂದು ದೂಷಿಸುತ್ತ, ಇಂದಿಗೂ ನಾನಾ ನಮೂನೆಯಲ್ಲಿ ಜೀವಂತವಾಗಿರುವ ಜಾತಿ >> ಆಧಾರಿತ ಸಾಮಾಜಿಕ ತಾರತಮ್ಯದ ಪರ ಹಲವರು ವಕಾಲತ್ತು ವಹಿಸುವುದನ್ನು ಕಾಣಬಹುದು. >> >> ಮೀಸಲಾತಿಯ ಉದ್ದೇಶ ಬಡತನ ನಿರ್ಮೂಲನೆ ಎಂದೇ ಭಾವಿಸಿರುವ ಕೆಲವರು ಸಾಮಾನ್ಯ ವರ್ಗದಡಿ ಬರುವ >> ಜಾತಿಗಳಲ್ಲೂ ಬಡವರಿಲ್ಲವೇ ಎಂದು ಆಗಾಗ ಪ್ರಶ್ನಿಸುತ್ತಿರುತ್ತಾರೆ. ಹಿಂದೆ ನಮ್ಮ ಹಿರಿಯರು >> ಮಾಡಿದ ತಪ್ಪಿಗೆ ನಾವಿನ್ನೂ ಎಷ್ಟು ಕಾಲ ಶಿಕ್ಷೆ ಅನುಭವಿಸಬೇಕು ಎನ್ನುವ ಧಾಟಿಯಲ್ಲಿ ಅಳಲು >> ತೋಡಿಕೊಳ್ಳುವವರ ಸಂಖ್ಯೆ ಸಹ ಕಡಿಮೆ ಏನಿಲ್ಲ. ಮೀಸಲಾತಿ ಇರುವವರೆಗೂ ಜಾತಿ >> ವಿನಾಶವಾಗುವುದಿಲ್ಲ, ಕೆಳ ಜಾತಿಯವರ ಬಗೆಗಿನ ತಮ್ಮ ಅಸಹನೆಗೆ ಮೀಸಲಾತಿಯೇ ಪ್ರಮುಖ ಕಾರಣಎಂಬ >> ವಾದವನ್ನು ಕೆಲವರು ಮಂಡಿಸುತ್ತಿರುತ್ತಾರೆ. >> >> ಕಣ್ಣೆದುರಿನ ವಾಸ್ತವಗಳಿಗೆ ಬೆನ್ನು ತೋರಿದವರಷ್ಟೇ ಹೀಗೆಲ್ಲ ಮಾತನಾಡಲು ಸಾಧ್ಯವೇನೊ? ಬಾಳ >> ಸಂಗಾತಿ ಆರಿಸಿಕೊಳ್ಳಲು, ಬಾಡಿಗೆಗೆ ಮನೆ ನೀಡಲು ಯಾವುದೇ ಮೀಸಲಾತಿಯ ಒತ್ತಡವಿಲ್ಲದಿದ್ದರೂ >> ಏಕೆ ಬಹುತೇಕ ಮಂದಿ ತಮ್ಮ ಜಾತಿಯವರಿಗಷ್ಟೇ ಆದ್ಯತೆ ನೀಡುತ್ತಾರೆಂಬ ಸರಳ ಪ್ರಶ್ನೆ >> ಎದುರಿಟ್ಟುಕೊಂಡು ಪರಿಶೀಲಿಸಿದರೂ ಸಾಕು, ಜಾತಿಯ ವಿಷ ವರ್ತುಲ ಎಷ್ಟು ಪ್ರಬಲವಾಗಿದೆ ಎಂಬುದು >> ಮನದಟ್ಟಾಗುತ್ತದೆ. >> ಪದವಿಗೆ ಪ್ರವೇಶ ಪಡೆಯುವ ಕಾಲಘಟ್ಟದಲ್ಲಿ ಮೀಸಲಾತಿಯಿಂದ ತಾವು ಅವಕಾಶ >> ವಂಚಿತರಾಗುತ್ತಿದ್ದೇವೆ ಎನ್ನುವ ಅನಿಸಿಕೆ ಮೇಲ್ವರ್ಗದ ವಿದ್ಯಾರ್ಥಿಗಳಲ್ಲಿ ಅನಾಯಾಸವಾಗಿ >> ಬೇರೂರಲಾರಂಭಿಸಿರುವುದನ್ನು ನಾವೆಲ್ಲ ಗಮನಿಸಬಹುದು. ಉದಾಹರಣೆಗೆ, ಸಿಇಟಿ ಮೂಲಕ >> ಎಂಜಿನಿಯರಿಂಗ್, ಮೆಡಿಕಲ್ ಸೀಟುಗಳನ್ನು ಹಂಚುವ ಪ್ರಕ್ರಿಯೆಯನ್ನು ಪರಿಗಣಿಸಬಹುದು. >> ‘ನಲ್ವತ್ತು ಐವತ್ತು ಸಾವಿರ ರ್ಯಾಂಕ್ ಗಳಿಸಿದ್ರೂ ಅವ್ರಿಗೆ ಒಳ್ಳೆ ಕಾಲೇಜ್ನಲ್ಲಿ ಸೀಟು >> ಸಿಗುತ್ತೆ. ನಮ್ಮ ರ್ಯಾಂಕ್ ಹತ್ತು ಸಾವಿರದೊಳಗಿದ್ರೂ ಬೇಕಾದ ಕಡೆ ಸೀಟು ದಕ್ಕುವುದಿಲ್ಲ. >> ನಮ್ಮ ಪ್ರತಿಭೆಗೆ ಬೆಲೆ ಇಲ್ವಾ?’ ಎಂದು ವಿದ್ಯಾರ್ಥಿಗಳು ಪ್ರಶ್ನಿಸುವುದನ್ನು >> ಗಮನಿಸಿದ್ದೇನೆ. ಉತ್ತಮ ರ್ಯಾಂಕ್ ಗಳಿಸಿಯೂ ಬಯಸಿದ ಸೀಟು ಸಿಗದಿರುವುದಕ್ಕೆ ಮೀಸಲಾತಿಯೇ >> ಕಾರಣವೆಂದು ದೂಷಿಸುವವರು, ಹಣವುಳ್ಳವರಿಗೆಂದೇ ಮೀಸಲಾಗುವ ಮ್ಯಾನೇಜ್ಮೆಂಟ್ ಕೋಟಾದೆಡೆಗೆ >> ಅದೇಕೊ ಅಸಹನೆ ತೋರುವುದಿಲ್ಲ. ತೋರಿದರೂ ಅದರ ತೀವ್ರತೆ ಮೀಸಲಾತಿಯೆಡೆಗಿನ ಅಸಹನೆಯಷ್ಟು >> ತೀವ್ರವಾಗಿರುವುದಿಲ್ಲ. >> >> ಪ್ರತಿ ಬಾರಿ ಪಿಯುಸಿ ಮತ್ತು ಸಿಇಟಿ ಫಲಿತಾಂಶ ಹೊರಬಿದ್ದ ನಂತರ ನಡೆಯುವ ಸರ್ಕಾರ ಮತ್ತು >> ಖಾಸಗಿ ಕಾಲೇಜುಗಳ ಒಕ್ಕೂಟದ ನಡುವಿನ ಮಾತುಕತೆ ಅಂತಿಮವಾಗಿ ಶುಲ್ಕ ಹೆಚ್ಚಳ, ಸರ್ಕಾರಿ >> ಕೋಟಾದಡಿಯ ಸೀಟುಗಳ ಕಡಿತದೊಂದಿಗೆ ಮುಗಿಯುವುದಿಲ್ಲವೇ? ತಮ್ಮ ಪ್ರತಿಭೆಗೆ ಮನ್ನಣೆ >> ದೊರೆಯದಿರುವುದಕ್ಕೆ ಜಾತಿ ಆಧಾರಿತ ಮೀಸಲಾತಿಯ ಬದಲಾಗಿ ಹಣವಂತರಿಗೆ ಸೀಟುಗಳು >> ಮೀಸಲಾಗುತ್ತಿರುವುದೇ ಮುಖ್ಯ ಕಾರಣವೆಂಬುದು ಸರ್ಕಾರ ಮತ್ತು ಖಾಸಗಿ ಕಾಲೇಜುಗಳ ಒಕ್ಕೂಟದ >> ನಡುವೆ ನಡೆದುಕೊಂಡು ಬರುತ್ತಿರುವ ಒಪ್ಪಂದವನ್ನು ಪರಿಶೀಲಿಸಿದರೆ ತಿಳಿಯುತ್ತದೆ. ಆದರೂ >> ಮೇಲ್ವರ್ಗದವರ ಅಸಹನೆ ಮತ್ತೆ ಜಾತಿ ಆಧಾರಿತ ಮೀಸಲಾತಿಯತ್ತಲೇ ಕೇಂದ್ರೀಕೃತವಾಗುವುದು ಏನನ್ನು >> ಸೂಚಿಸುತ್ತದೆ? ನಮ್ಮೊಳಗಿನ್ನೂ ಬೇರೂರಿರುವ ಜಾತಿ ಪ್ರಜ್ಞೆಯೇ >> ಈ ಜಾಣಕುರುಡುತನಕ್ಕೆ ಕಾರಣವಲ್ಲವೇ? >> >> ಮೀಸಲಾತಿಯಿಂದ ತಮಗೆ ಆಗುತ್ತಿರುವ ಅನ್ಯಾಯ ಕೊನೆಗಾಣಿಸಲು ಮೀಸಲಾತಿ ಕಿತ್ತೊಗೆಯಬೇಕು ಅಥವಾ >> ಖಾಸಗೀಕರಣಕ್ಕೆ ಆದ್ಯತೆ ನೀಡಬೇಕೆಂಬ ನಿಲುವನ್ನು ಹಲವರು ಹೊಂದಿದ್ದಾರೆ. ಮೀಸಲಾತಿ >> ಜಾರಿಯಲ್ಲಿರದ ಖಾಸಗಿ ವಲಯದಲ್ಲಿ ಪ್ರತಿಭೆಗಷ್ಟೇ ಮೊದಲ ಮನ್ನಣೆ ಎಂಬ ಗ್ರಹಿಕೆ ಪ್ರಬಲವಾಗಿಯೇ >> ಬೇರೂರಿದೆ. ಉದ್ಯೋಗ ದಕ್ಕಿಸಿಕೊಳ್ಳಲು ಬೇಕಾದ ‘ರೆಫರೆನ್ಸ್’ ಕೂಡ ಒಂದು ರೀತಿಯ ಮೀಸಲಾತಿಯೇ >> ಎಂಬುದನ್ನು ಒಪ್ಪಲು ನಾವು ಸಿದ್ಧರಿದ್ದೇವೆಯೇ? ಮಿಕ್ಕೆಲ್ಲ ಅರ್ಹತೆಗಳಿಗಿಂತಲೂ ಉದ್ಯೋಗ >> ಪಡೆಯಲು ‘ರೆಫರೆನ್ಸ್’ ಮುಖ್ಯವಾಗುವುದು ನಮ್ಮ ಅರಿವಿಗೆ ಬಂದಿಲ್ಲವೇ? ಈ ‘ರೆಫರೆನ್ಸ್’ >> ದಕ್ಕಿಸಿಕೊಳ್ಳಲು ಯಾರಿಗೆ ಸಾಧ್ಯವೆಂಬ ಸರಳ ಅಂಶ ಮುಂದಿಟ್ಟುಕೊಂಡು ನೋಡಿದರೂ ಖಾಸಗಿ >> ವಲಯದಲ್ಲಿ ಜಾತಿ ಆಧಾರಿತ ಮೀಸಲಾತಿ ಜಾರಿಗೆ ಬರಬೇಕೆಂಬ ಕೂಗು ಏಕೆ ಪ್ರಬಲವಾಗುತ್ತಿದೆ >> ಎಂಬುದು ಅರಿವಾಗುತ್ತದೆ. >> >> ಮೀಸಲಾತಿಯ ದುರ್ಬಳಕೆಯಾಗುತ್ತಿದೆ, ಎಲ್ಲಾ ಜಾತಿಯ ಬಡವರಿಗೂ ಮೀಸಲಾತಿ ದೊರೆಯಲಿ ಎಂಬುದು >> ಕೆಲವರ ನಿಲುವು. ಆದರೆ ಈ ದುರ್ಬಳಕೆ ಕೆಳ ಜಾತಿಯಲ್ಲಷ್ಟೇ ಇರುವುದೇ? ಮೀಸಲಾತಿ ದೊರೆತರೂ ಅದು >> ಯಾವುದಕ್ಕೂ ಸಾಲದೆಂಬ ಕಾರಣಕ್ಕಾಗಿಯೇ ಅದರ ವಿರುದ್ಧ ದನಿ ಎತ್ತುವ ಕೆಲ ಪ್ರಬಲ ಜಾತಿಯವರು >> ಕೂಡ ಅತ್ಯಲ್ಪ ಆದಾಯ ತೋರುವ ಪ್ರಮಾಣಪತ್ರಗಳನ್ನು ಮಾಡಿಸಿಕೊಂಡು ತಮ್ಮದೇ ಸಮುದಾಯದ ಅರ್ಹರಿಗೆ >> ದೊರೆಯಬೇಕಾದ ಸೌಲಭ್ಯಗಳನ್ನು ಕಬಳಿಸುವುದಿಲ್ಲವೇ? >> >> ಮೀಸಲಾತಿ ಕುರಿತು ಅಪಸ್ವರ ಎತ್ತಲು ಸಿಗುವ ಸಣ್ಣ ಅವಕಾಶವನ್ನೂ ಬಿಡಬಾರದೆಂಬ ಮನೋಭಾವ >> ಮೈಗೂಡಿಸಿಕೊಂಡವರಿಗೆ, ಕಣ್ಣೆದುರಿನ ವಾಸ್ತವವೇ ಭ್ರಮೆಯಂತೆ ತೋರುತ್ತಿರುವುದು ವಿಪರ್ಯಾಸ. >> ಆತ್ಮವಿಮರ್ಶೆಯ ಸ್ಥಾನದಲ್ಲಿ ಆತ್ಮವಂಚನೆ ಆಸೀನವಾಗಿರುವಾಗ ಅಸಹನೆ ಹೊರಹೊಮ್ಮದೆ ಇರುವುದೇ? >> >> [email protected] >> ಸಿದ್ದರಾಮಪ್ಪ. ಎಸ್.ಎಂ >> ಸಶಿ ಕಲಾ >> ಸರ್ಕಾರಿ ಪ್ರೌಢ ಶಾಲೆ >> ಗಂಜಿಗೆರೆ. ಕೆ ಆರ್ ಪೇಟೆ ತಾ|| >> ಮಂಡ್ಯ ಜಿಲ್ಲೆ >> >> -- >> *For doubts on Ubuntu and other public software, visit >> http://karnatakaeducation.org.in/KOER/en/index.php/Frequently_Asked_Questions >> >> **Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Public_Software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> ***If a teacher wants to join STF-read >> http://karnatakaeducation.org.in/KOER/en/index.php/Become_a_STF_groups_member >> --- >> You received this message because you are subscribed to the Google Groups >> "SocialScience STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/socialsciencestf. >> To view this discussion on the web visit >> https://groups.google.com/d/msgid/socialsciencestf/CAJCvfyW51WcVDwgzRs2FGOejNfXpvOkad_XUzWROJuTqs9OAOQ%40mail.gmail.com >> <https://groups.google.com/d/msgid/socialsciencestf/CAJCvfyW51WcVDwgzRs2FGOejNfXpvOkad_XUzWROJuTqs9OAOQ%40mail.gmail.com?utm_medium=email&utm_source=footer> >> . >> For more options, visit https://groups.google.com/d/optout. >> > -- > *For doubts on Ubuntu and other public software, visit > http://karnatakaeducation.org.in/KOER/en/index.php/Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read > http://karnatakaeducation.org.in/KOER/en/index.php/Become_a_STF_groups_member > --- > You received this message because you are subscribed to the Google Groups > "SocialScience STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/socialsciencestf. > To view this discussion on the web visit > https://groups.google.com/d/msgid/socialsciencestf/CAFbcX9dCXpxD_Qo9rmFVjc4bj8fJER2Wi6Hk_rpom5NV2nR1%3Dg%40mail.gmail.com > <https://groups.google.com/d/msgid/socialsciencestf/CAFbcX9dCXpxD_Qo9rmFVjc4bj8fJER2Wi6Hk_rpom5NV2nR1%3Dg%40mail.gmail.com?utm_medium=email&utm_source=footer> > . > > For more options, visit https://groups.google.com/d/optout. > -- Basavaraj Naika H D Asst Teacher G H S Baggavalli Tarikere Tq Chickmagalur Dist -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/CACwGsz5XmfRmPQGVSg%2B9NvOurL_UbYvS5Bi5SY1WH%2BFKgagCzQ%40mail.gmail.com. For more options, visit https://groups.google.com/d/optout.
